AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರಕ್ಕೆ ಹೋಗಲು ಪ್ಲಾನ್ ಮಾಡುತ್ತಿರುವವರಿಗೆ ಸಿಹಿ ಸುದ್ದಿ; IRCTC ವತಿಯಿಂದ 6 ದಿನದ ಜನ್ನತ್-ಎ-ಕಾಶ್ಮೀರ ಟೂರ್ ಪ್ಯಾಕೇಜ್ ಘೋಷಣೆ

ಕಾಶ್ಮೀರಕ್ಕೆ ಹೋಗಬೇಕು ಎಂದುಕೊಂಡವರಿಗೆ IRCTC ಸಿಹಿ ಸುದ್ದಿ ನೀಡಿದ್ದು 6 ದಿನಗಳ ಕಾಶ್ಮೀರ ಟೂರ್ ಪ್ಯಾಕೇಜ್ ಘೋಷಿಸಿದೆ. ಈ ಪ್ಯಾಕೇಜ್​ನಲ್ಲಿ ಊಟ, ವಸತಿ ಸೇರಿದಂತೆ ಎಲ್ಲಾ ರೀತಿಯ ವೆಚ್ಚ ಒಳಗೊಂಡಿದೆ.

ಕಾಶ್ಮೀರಕ್ಕೆ ಹೋಗಲು ಪ್ಲಾನ್ ಮಾಡುತ್ತಿರುವವರಿಗೆ ಸಿಹಿ ಸುದ್ದಿ; IRCTC ವತಿಯಿಂದ 6 ದಿನದ ಜನ್ನತ್-ಎ-ಕಾಶ್ಮೀರ ಟೂರ್ ಪ್ಯಾಕೇಜ್ ಘೋಷಣೆ
ಕಾಶ್ಮೀರ
ಆಯೇಷಾ ಬಾನು
|

Updated on: Mar 17, 2023 | 8:00 AM

Share

ಭೂಮಿ ಮೇಲಿನ ಸ್ವರ್ಗ ಎಂದೆ ಕರೆಸಿಕೊಳ್ಳುವ ಜಮ್ಮು ಕಾಶ್ಮೀರ(Jammu Kashmir) ನೋಡಬೇಕೆಂಬುವುದು ಅನೇಕ ಜನರ ಆಸೆ. ಸದ್ಯ ಕಾಶ್ಮೀರದಲ್ಲಿ ಬೇಸಿಗೆಯ ರಜೆಯನ್ನು ಕಳೆಯಲು ಇಷ್ಟ ಪಡುವವರಿಗೆ ಐಆರ್​ಸಿಟಿಸಿ(IRCTC )ಶುಭ ಸುದ್ದಿ ನೀಡಿದೆ. ಭಾರತೀಯ ರೈಲ್ವೆ ಕಾಶ್ಮೀರ ಟೂರ್ ಪ್ಯಾಕೇಜ್(Jannat-e-Kashmir Tour Package) ಅನ್ನು ಘೋಷಿಸಿದೆ. 6-ದಿನಗಳ ಈ ಕಾಶ್ಮೀರ ಪ್ರವಾಸದ ಪ್ಯಾಕೇಜ್‌ನಲ್ಲಿ ಊಟ, ವಸತಿ ಮತ್ತು ವಿಮಾನ ದರ ಸೇರಿದಂತೆ ಎಲ್ಲಾ ಪ್ರಯಾಣ ವೆಚ್ಚಗಳು ಒಳಗೊಂಡಿವೆ.

ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಭಾರತೀಯ ರೈಲ್ವೆಯ ಒಂದು ವಿಭಾಗವಾಗಿದ್ದು, ಈ ಕಾಶ್ಮೀರ ಪ್ರವಾಸದ ಪ್ಯಾಕೇಜ್​ಗೆ ಜನ್ನತ್-ಎ-ಕಾಶ್ಮೀರ್ ಎಂಬ ಹೆಸರು ನೀಡಲಾಗಿದೆ. ಈ ಪ್ಯಾಕೇಜ್ ಏಪ್ರಿಲ್ 9 ರಿಂದ ಪ್ರಾರಂಭವಾಗುತ್ತೆ.

ಕಾಶ್ಮೀರ ಟೂರ್ ಪ್ಯಾಕೇಜ್​ನಲ್ಲಿ ಏನೇನು ಸವಲತ್ತುಗಳಿವೆ?

ಈ ಪ್ಯಾಕೇಜ್​ನಲ್ಲಿ ನಿಮ್ಮ ರೌಂಡ್-ಟ್ರಿಪ್ ಎಕಾನಮಿ ಫ್ಲೈಟ್ ಟಿಕೆಟ್‌ಗಳನ್ನು ಕವರ್ ಮಾಡಲಾಗುವುದು. ಮತ್ತು ಶ್ರೀನಗರದಲ್ಲಿ ಬೋಟ್‌ ಹೌಸ್​ನಲ್ಲಿ ಒಂದು ರಾತ್ರಿ ಕಳೆಯಲು ಜೊತೆಗೆ ಹೋಟೆಲ್‌ನಲ್ಲಿ ನಾಲ್ಕು ರಾತ್ರಿ ತಂಗುವ ವೆಚ್ಚ ಭರಿಸಲಾಗುತ್ತೆ. ಅಲ್ಲದೆ, ಎಲ್ಲಾ ಪ್ರೇಕ್ಷಣೀಯ ಸ್ಥಳಗಳನ್ನು ನಾನ್-ಎಸಿ ವಾಹನದಲ್ಲಿ ಕರೆದುಕೊಂಡು ಹೋಗಿ ತೋರಿಸಲಾಗುತ್ತೆ. ಸೋನ್ಮಾರ್ಗ್, ಗುಲ್ಮಾರ್ಗ್, ಪಹಲ್ಗಾಮ್, ದಾಲ್ ಸರೋವರ ಮತ್ತು ಹಲವಾರು ಇತರ ರಮಣೀಯ ಸ್ಥಳಗಳನ್ನು ಈ ಪ್ಯಾಕೇಜ್ ಒಳಗೊಂಡಿದೆ.

ಇದನ್ನೂ ಓದಿ: Bharat Nepal Ashtha Yatra: ಮಾರ್ಚ್​ 31 ರಿಂದ ಭಾರತ ನೇಪಾಳ ಆಸ್ತಾ ಯಾತ್ರೆ ಆರಂಭಿಸಲಿದೆ ಭಾರತೀಯ ರೈಲ್ವೆ, ವಿವರಗಳು ಇಲ್ಲಿವೆ

IRCTC ಕಾಶ್ಮೀರ ಪ್ರವಾಸ ಪ್ಯಾಕೇಜ್ ದರ ಎಷ್ಟು?

ಕಾಶ್ಮೀರ ಪ್ರವಾಸದ ಪ್ಯಾಕೇಜ್‌ನ ವೆಚ್ಚವು 41,300 ರೂ ರಿಂದ ಪ್ರಾರಂಭವಾಗಿ 61,000 ವರೆಗೆ ಇರುತ್ತದೆ. ಒಬ್ಬ ವ್ಯಕ್ತಿಯ ಟಿಕೆಟ್‌ ದರ ಸುಮಾರು 60,100ರೂ ವರೆಗೂ ಹೋಗಬಹುದು. ಆದರೆ ಇಬ್ಬರು ಒಟ್ಟಿಗೆ ಪ್ರಯಾಣಿಸಿದರೆ ವೆಚ್ಚವು ಪ್ರತಿ ವ್ಯಕ್ತಿಗೆ 44,900ರೂಗೆ ಇಳಿಯುತ್ತದೆ. ಮೂರು ಜನರು ಒಟ್ಟಿಗೆ ಪ್ರಯಾಣಿಸುತ್ತಿದ್ದರೆ, ಪ್ರತಿ ವ್ಯಕ್ತಿಗೆ 44,000 ಗೆ ಇಳಿಯುತ್ತದೆ. ಹಾಸಿಗೆ ಇಲ್ಲದ ಮಕ್ಕಳ ಟಿಕೆಟ್ ದರ 41,300ರೂ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ