AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Special: ಬೇಸಿಗೆಯಲ್ಲಿ ನಿಮ್ಮ ದೇಹವನ್ನು ತಂಪಾಗಿರಿಸುವ ಆಹಾರಗಳು

ಈ ಬೇಸಿಗೆಯ ಶಾಖವು ಹೊಟ್ಟೆಯಲ್ಲಿ ಉರಿಯುತವನ್ನು ಉಂಟುಮಾಡಬಹುದು. ಆದ್ದರಿಂದ ನಿಮ್ಮ ದೈನಂದಿನ ಆಹಾರದಲ್ಲಿ ಹೊಟ್ಟೆಯನ್ನು ತಂಪಾಗಿಸುವ ಆಹಾರವನ್ನು ಸೇವಿಸುವುದು ತುಂಬಾ ಮುಖ್ಯವಾಗಿದೆ.

Summer Special: ಬೇಸಿಗೆಯಲ್ಲಿ ನಿಮ್ಮ ದೇಹವನ್ನು ತಂಪಾಗಿರಿಸುವ ಆಹಾರಗಳು
Image Credit source: NDTV
ಅಕ್ಷತಾ ವರ್ಕಾಡಿ
|

Updated on:Mar 24, 2023 | 6:29 PM

Share

ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದೊಂದಿಗೆ, ನಿಮ್ಮ ದೇಹದ ಶಕ್ತಿಯ ಮಟ್ಟವು ಕುಸಿಯುತ್ತಿದೆ. ನಿಮ್ಮ ದೇಹದಲ್ಲಿನ ನೀರಿನಾಂಶ ಕಡಿಮೆಯಾಗಿ ಆಯಾಸವನ್ನು ಅನುಭವಿಸುತ್ತಿದ್ದೇವೆ. ಅಲ್ಲದೆ ಅತಿಯಾದ ಶಾಖವು ನಿಮ್ಮನ್ನು ನಿರ್ಜಲೀಕರಣವನ್ನಾಗಿ ಮಾಡುತ್ತಿದೆ. ಆದ್ದರಿಂದ ಸಾಕಷ್ಟು ಪ್ರಮಾಣದ ನೀರನ್ನು ಕುಡಿಯುವ ಮೂಲಕ ನಿಮ್ಮನ್ನು ನೀವು ಹೈಡ್ರೀಕರಿಸುವುದು ಬಹಳ ಮುಖ್ಯ. ನೀರಿನ ಜೊತೆಗೆ ಹೊಟ್ಟೆಯನ್ನು ತಂಪು ಮಾಡುವ ಹಣ್ಣು ಮತ್ತು ತರಕಾರಿಗಳ ಪಾನೀಯವನ್ನು ಕುಡಿಯುವುದು ಕುಡಾ ಮುಖ್ಯವಾಗಿದೆ. ದೈನಂದಿನ ಆಹಾರಗಳಲ್ಲಿ ಆ ಪಾನೀಯಗಳನ್ನು ಸೇವನೆ ಮಾಡುವುದು ನಿಮ್ಮ ಕರುಳಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಅದಕ್ಕಾಗಿಯೇ ಋತುಮಾನಕ್ಕೆ ಅನುಗುಣವಾಗಿ ಆಹಾರ ಪದ್ಧತಿಯನ್ನು ಬದಲಿಸುತ್ತಿರಬೇಕು. ಬೇಸಿಗೆಯಲ್ಲಿ ಆದಷ್ಟು ನಮ್ಮ ದೇಹವನ್ನು ತಂಪಾಗಿರಿಸುವಂತಹ ಆಹಾರವನ್ನು ಸೇವಿಸಬೇಕು.

ಬೇಸಿಗೆಯಲ್ಲಿ ಹೊಟ್ಟೆಯನ್ನು ತಂಪಾಗಿರಿಸುವಂತೆ ಮಾಡುವ ಆಹಾರಗಳು:

ಮೊಸರು:

ಮೊಸರು ಕರುಳಿನ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಇದು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮೊಸರು ಮಾತ್ರವಲ್ಲದೆ ಹಾಲು, ಚೀಸ್ ಇತ್ಯಾದಿ ಡೈರಿ ಉತ್ಪನ್ನಗಳು ಪ್ರೋಬಯಾಟಿಕ್ ಅಂಶವನ್ನು ಹೊಂದಿರುತ್ತವೆ. ಬೇಸಿಗೆಯ ದಿನಗಳಲ್ಲಿ ಹೊಟ್ಟೆಯನ್ನು ತಂಪಾಗಿರಿಸಲು ದಿನಕ್ಕೆ ಒಂದು ಬಾರಿಯಾದರೂ ಮೊಸರು ಅಥವಾ ಮಜ್ಜಿಗೆಯನ್ನು ಸೇವಿಸಿ. ಇಲ್ಲವಾದರೆ ಮೊಸರು ಬಜ್ಜಿ ಅಥವಾ ಮೊಸರು ಆಧಾರಿತ ಸ್ಮೂಥಿಗಳನ್ನು ಮಾಡಿ ಕೂಡಾ ಕುಡಿಯಬಹುದು.

ಕಲ್ಲಂಗಡಿ:

ಬೇಸಿಗೆಗಾಲದಲ್ಲಿ ಹಣ್ಣಿನ ಮಾರುಕಟ್ಟೆಗಳಲ್ಲಿ ಹೆಚ್ಚಾಗಿ ಕಲ್ಲಂಗಡಿ ಹಣ್ಣುಗಳು ಕಾಣಸಿಗುತ್ತವೆ. ಈ ರಸಭರಿತ ಹಣ್ಣಿನಲ್ಲಿ ಹೆಚ್ಚಿನ ಮಟ್ಟದ ನೀರಿನಾಂಶವಿದೆ. ಇದು ಬೇಸಿಗೆಯಲ್ಲಿ ಸೇವಿಸಲು ಅತ್ಯುತ್ತಮವಾದ ಹಣ್ಣಾಗಿದೆ. ರೆಫ್ರಿಜರೆಟರ್‌ನಲ್ಲಿ ಇಟ್ಟು ನಂತರ ಈ ಹಣ್ಣನ್ನು ಸೇವಿಸುವುದರಿಂದ ಇದು ಹೆಚ್ಚು ತಂಪಾಗಿರುತ್ತದೆ. ಅಲ್ಲದೆ ನೀವು ಕಲ್ಲಂಗಡಿ ಜ್ಯೂಸ್ ಅಥವಾ ಕಲ್ಲಂಗಡಿ ಸ್ಮೂಥಿಯನ್ನು ಮಾಡಿ ಈ ಸುಡು ಬೇಸಿಗೆಯಲ್ಲಿ ಕುಡಿಯಬಹುದು.

ಇದನ್ನೂ ಓದಿ: ನಿಮ್ಮ ದೈನಂದಿನ ಆಹಾರದಲ್ಲಿ ಗೋಡಂಬಿ ಹಾಲನ್ನು ಸೇರಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ

ಓಟ್ಸ್ ಹೊಟ್ಟು:

ಓಟ್ಸ್ ಹೆಚ್ಚಿನ ಪ್ರಮಾಣದ ಫೈಬರ್ ಅಂಶವನ್ನು ಹೊಂದಿದೆ. ಇದು ನಮ್ಮ ಜೀರ್ಣಕ್ರಿಯೆಗೆ ಪ್ರಯೋಜನಕಾರಿಯಾಗಿದೆ. ಇದು ಕರಗುವ ಮತ್ತು ಕರಗದ ಫೈಬರ್ ಎರಡನ್ನೂ ಒಳಗೊಂಡಿರುವ ಕಾರಣ ಇದು ಕರುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಓಟ್ಸ್ ಹೊಟ್ಟು ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸುವ ಖನಿಜಗಳು ಮತ್ತು ವಿಟಮಿನ್‌ಗಳಿಂದ ತುಂಬಿರುತ್ತದೆ. ಹಾಗಾಗಿ ಓಟ್ಸ್ ಹೊಟ್ಟಿನಿಂದ ತಯಾರಿಸಿದ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡಿ.

ಮೂಲಿಕೆಗಳ ಪಾನೀಯ:

ನಿಮ್ಮನ್ನು ನೀವು ಹೈಡ್ರೇಟ್ ಆಗಿ ಇರಿಸಿಕೊಳ್ಳುವ ಸಲುವಾಗಿ ದಿನವಿಡಿ ಸಾಕಷ್ಟು ನೀರನ್ನು ಕುಡಿದು ಬೇಸತ್ತಿದ್ದೀರಾ? ಚಿಂತಿಸಬೇಡಿ, ನೀರಿನ ಬದಲು ರುಚಿಕರವಾದ ಈ ಮೂಲಿಕೆಗಳ ಪಾನೀಯವನ್ನು ಕುಡಿಯುವ ಮೂಲಕ ದೇಹವನ್ನು ಹೈಡ್ರೇಟ್ ಆಗಿ ಇರಿಸಿಕೊಳ್ಳಿ. ಮುದೀನಾ ಹಾಗೂ ನಿಂಬೆಯಂತಹ ಮೂಲಿಕೆಗಳು ದೇಹವನ್ನು ತಂಪಾಗಿರಿಸುವ ಅಂಶವನ್ನು ಹೊಂದಿದೆ. ಒಂದು ಜಾರ್‌ಗೆ ನೀರನ್ನು ತುಂಬಿಸಿ ಅದಕ್ಕೆ ಪುದೀನಾ ಎಲೆಗಳು ಮತ್ತು ನಿಂಬೆ ರಸವನ್ನು ಸೇರಿಸಿ. ಜೊತೆಗೆ ನಿಮ್ಮ ಆಯ್ಕೆಯ ಹಣ್ಣುಗಳನ್ನು ಕೂಡಾ ಅದಕ್ಕೆ ಸೇರಿಸಬಹುದು. ಇದನ್ನು ಚೆನ್ನಾಗಿ ಮಿಶ್ರಣ ಮಾಡಿಟ್ಟು ಸ್ವಲ್ಪ ಸಮಯದ ನಂತರ ಕುಡಿಯಿರಿ.

ಸೌತೆಕಾಯಿ:

ಬೇಸಿಗೆಯಲ್ಲಿ ನಿಮ್ಮ ದೇಹವನ್ನು ತಂಪಾಗಿರಿಸಲು ಸೌತೆಕಾಯಿಯು ಉತ್ತಮವಾದ ಆಹಾರವಾಗಿದೆ. ಇದನ್ನು ಖಾಲಿ ತಿನ್ನಲು ಇಷ್ಟ ಪಡದವರು ಸೌತೆಕಾಯಿಯ ಸಲಾಡ್ ಮಾಡಿ ಸೇವಿಸಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:29 pm, Fri, 24 March 23

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್