AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada :ಬೇಸಿಗೆಯಲ್ಲಿ ಹೆಚ್ಚು ಸಮಯ ಜಿಮ್ ನಲ್ಲಿ ಇರ್ತೀರಾ? ಈ ಟಿಪ್ಸ್ ಪಾಲಿಸಿ!

ಇತ್ತೀಚೆಗಿನ ದಿನಗಳಲ್ಲಿ ಫಿಟ್ ನೆಸ್ ಬಗ್ಗೆ ಗಮನ ಕೊಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೀಗಾಗಿ ಹೆಚ್ಚಿನವರು ಜಿಮ್ ವರ್ಕ್ ಔಟ್ ಎಂದು ಬ್ಯುಸಿಯಾಗುತ್ತಿದ್ದಾರೆ. ಆದರೆ ಈ ಬೇಸಿಗೆಯಲ್ಲಿ ಜಿಮ್ ನಲ್ಲಿ ವರ್ಕ್ ಔಟ್ ಎಂದು ಬ್ಯುಸಿಯಾಗುವವರು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಆರೋಗ್ಯ ದೃಷ್ಟಿಯಿಂದ ತುಂಬಾ ಒಳ್ಳೆಯದು.

Health Care Tips in Kannada :ಬೇಸಿಗೆಯಲ್ಲಿ ಹೆಚ್ಚು ಸಮಯ ಜಿಮ್ ನಲ್ಲಿ ಇರ್ತೀರಾ? ಈ ಟಿಪ್ಸ್ ಪಾಲಿಸಿ!
Summer Workout
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ|

Updated on: Apr 17, 2024 | 5:28 PM

Share

ಕಳೆದ ಕೆಲವು ವರ್ಷಗಳಿಂದ ಹೆಚ್ಚಿನವರಿಗೆ ಆರೋಗ್ಯವು ಕೈಕೊಡುತ್ತಿದೆ. ಹೀಗಾಗಿ ಹೆಚ್ಚಿನವರು ತಮ್ಮ ಜೀವನ ಶೈಲಿ ಹಾಗೂ ಆಹಾರ ಕ್ರಮಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಹಿಂದೆಂದೂ ಜಿಮ್ ನನ್ನು ನೋಡದವರು, ಜಿಮ್ ನಲ್ಲಿ ವರ್ಕ್ ನತ್ತ ಒಲವು ತೋರಿಸುತ್ತಿದ್ದಾರೆ. ಆದರೆ ಬಿಸಿ ವಾತಾವರಣದ ನಡುವೆ ಹೆಚ್ಚು ಹೊತ್ತು ವರ್ಕ್ ಔಟ್ ಮಾಡುವುದು ಒಳ್ಳೆಯದಲ್ಲ. ಆದರೆ ಫಿಟ್ ನೆಸ್ ಕಾಯ್ದುಕೊಳ್ಳಲು ವರ್ಕ್ ಔಟ್ ಮಾಡಬೇಕೆನ್ನುವವರು ಕೆಲವೊಂದು ಸಲಹೆಗಳನ್ನು ಅನುಸರಿಸುವುದು ಒಳ್ಳೆಯದು.

ವರ್ಕ್ ಔಟ್ ಮಾಡುವ ಮುನ್ನ ಈ ವಿಚಾರಗಳ ಬಗ್ಗೆ ಗಮನವಿರಲಿ:

  1. ಬೇಸಿಗೆಯಲ್ಲಿ ಒಂದೇ ಬಾರಿಗೆ ಹೆಚ್ಚು ವರ್ಕೌಟ್ ಮಾಡದಿರುವುದು ಒಳ್ಳೆಯದು. ಈ ವೇಳೆಯಲ್ಲಿ ನಿರ್ಜಲೀಕರಣದಿಂದ ದೇಹವು ನೈಸರ್ಗಿಕವಾಗಿ ದುರ್ಬಲಗೊಳ್ಳುತ್ತದೆ. ಅದಲ್ಲದೇ ಬೇಗನೇ ಆಯಾಸಗೊಳ್ಳುತ್ತೇವೆ ಈ ಕಾರಣದಿಂದ ವರ್ಕೌಟ್‌ಗಳನ್ನು ಸ್ವಲ್ಪ ಕಡಿಮೆ ಮಾಡುವುದು ಉತ್ತಮ.
  2. ದೇಹವು ಹೆಚ್ಚು ನಿರ್ಜಲೀಕರಣವಾಗುವುದರಿಂದ ಜಿಮ್‌ಗೆ ಹೋಗುವ ಮೊದಲು ಮತ್ತು ನಂತರ ದ್ರವರೂಪದ ಆಹಾರವನ್ನು ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.
  3. ಜಿಮ್ ಗೆ ಹೋಗುವಾಗ ತೊಡುವ ಬಟ್ಟೆಯ ಬಗ್ಗೆಯೂ ಎಚ್ಚರಿಕೆ ವಹಿಸಬೇಕು. ಬಿಗಿಯಾದ ಬಟ್ಟೆಗಳನ್ನು ತಪ್ಪಿಸಬೇಕು. ಸಾಧ್ಯವಾದಷ್ಟು ಸಡಿಲವಾದ ಬಟ್ಟೆಗಳನ್ನು ಧರಿಸುವುದು ಉತ್ತಮ.
  4. ಬೇಸಿಗೆಯಲ್ಲಿ ಜಿಮ್‌ಗೆ ಹೋಗುವವರು ತೆಗೆದುಕೊಳ್ಳುವ ಆಹಾರದ ಬಗ್ಗೆಯೂ ಕೆಲವು ನಿಯಮಗಳನ್ನು ಪಾಲಿಸುವುದು ಒಳಿತು. ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ಮತ್ತು ವಿಟಮಿನ್ ಗಳನ್ನು ಒಳಗೊಂಡಿರುವ ಆಹಾರವು ನಿಮ್ಮ ಬ್ಯಾಗ್ ನಲ್ಲಿರಲಿ. ವ್ಯಾಯಾಮದ ನಂತರ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ಸೇವಿಸುವುದನ್ನು ಮರೆಯದಿರಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು