AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin Care Tips: ಚರ್ಮದ ಆರೈಕೆಯಲ್ಲಿ ಕರ್ಪೂರ ಬಳಸಿ; ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಕರ್ಪೂರವು ಸುಟ್ಟಗಾಯಗಳನ್ನು ಮತ್ತು ಗಾಯದಿಂದ ಉಂಟಾದ ಉರಿಯೂತವನ್ನು ನಿವಾರಿಸುವಲ್ಲಿ ಸಹಾಯಕವಾಗಿದೆ. ಕರ್ಪೂರದ ಪುಡಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ಸುಟ್ಟ ಜಾಗಕ್ಕೆ ಹಚ್ಚುವುದರಿಂದ ಇದು ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ. ಜೊತೆಗೆ ಸುಟ್ಟ ಗಾಯಗಳಿಂದ ಉಂಟಾದ ಕಲೆಗಳನ್ನು ತೆಗೆದುಹಾಕುವಲ್ಲಿ ಸಹಾಯಕವಾಗಿದೆ. ಇನ್ನಷ್ಟು ವಿವರ ಇಲ್ಲಿದೆ.

Skin Care Tips: ಚರ್ಮದ ಆರೈಕೆಯಲ್ಲಿ ಕರ್ಪೂರ ಬಳಸಿ; ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
CamphorImage Credit source: Pinterest
ಅಕ್ಷತಾ ವರ್ಕಾಡಿ
|

Updated on: Nov 15, 2023 | 1:01 PM

Share

ಚರ್ಮದ ಆರೈಕೆಯಲ್ಲಿ ಕರ್ಪೂರ ತುಂಬಾ ಉಪಯುಕ್ತವಾಗಿದೆ. ಕರ್ಪೂರವನ್ನು ವಿಶೇಷವಾಗಿ ಚರ್ಮಕ್ಕೆ ಹಚ್ಚುವುದರಿಂದ ತುರಿಕೆ ಮತ್ತು ದದ್ದುಗಳ ಸಮಸ್ಯೆ ನಿವಾರಣೆಯಾಗುತ್ತದೆ. ಕರ್ಪೂರದ ಆಂಟಿಫಂಗಲ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ತುರಿಕೆ, ಕಿರಿಕಿರಿಯಂತಹ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಲ್ಲದೇ ಕರ್ಪೂರವು ಸುಟ್ಟಗಾಯಗಳನ್ನು ಮತ್ತು ಗಾಯದಿಂದ ಉಂಟಾದ ಉರಿಯೂತವನ್ನು ನಿವಾರಿಸುತ್ತದೆ. ಕರ್ಪೂರದ ಪುಡಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ಸುಟ್ಟ ಜಾಗಕ್ಕೆ ಹಚ್ಚುವುದರಿಂದ ಇದು ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ. ಜೊತೆಗೆ ಸುಟ್ಟ ಗಾಯಗಳಿಂದ ಉಂಟಾದ ಕಲೆಗಳನ್ನು ತೆಗೆದುಹಾಕುವಲ್ಲಿ ಸಹಾಯಕವಾಗಿದೆ.

ಮೊಡವೆ ಸಮಸ್ಯೆ ನಿವಾರಣೆಗೆ ಕರ್ಪೂರ:

ಮೊಡವೆ ಸಮಸ್ಯೆಗಳನ್ನು ಕಡಿಮೆ ಮಾಡಲು ಕರ್ಪೂರ ಸಹಾಯ ಮಾಡುತ್ತದೆ. ಕರ್ಪೂರವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಇದು ಮೊಡವೆ ನೋವು ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ. ಮೊಡವೆಗಳಿಗೆ ಚಿಕಿತ್ಸೆ ನೀಡಲು ನೀವು ಕರ್ಪೂರವನ್ನು ಬಳಸಬಹುದು.

ಒಡೆದ ಹಿಮ್ಮಡಿ ಸಮಸ್ಯೆಗೆ ಕರ್ಪೂರ :

ಚಳಿಗಾಲದಲ್ಲಿ ಕಣಕಾಲುಗಳು ಬಿರುಕು ಬಿಡುವ ಸಾಧ್ಯತೆ ಹೆಚ್ಚು. ಕರ್ಪೂರವು ಬಿರುಕುಗಳನ್ನು ತಡೆಯಲು ಸಹಾಯ ಮಾಡುತ್ತದೆ. ಕರ್ಪೂರವನ್ನು ಜಾಕಿ ನೆನೆಸಿದ ನೀರಿನಲ್ಲಿ ಪಾದಗಳನ್ನು ಸ್ವಲ್ಪ ಹೊತ್ತು ಇಡಿ. ಆ ನಂತರ ಪೆಟ್ರೋಲಿಯಂ ಜೆಲ್ಲಿ ಅಥವಾ ಮಾಯಿಶ್ಚರೈಸರ್ ಅನ್ನು ಪಾದಗಳಿಗೆ ಹಚ್ಚಿದರೆ ಬಿರುಕುಗಳು ಮಾಯವಾಗುತ್ತವೆ.

ಇದನ್ನೂ ಓದಿ: ಒಂದು ವಾರದಲ್ಲೇ ಮೊಡವೆ ಸಮಸ್ಯೆ ಹೋಗಲಾಡಿಸಲು ಪುದೀನಾ ಫೇಸ್ ಪ್ಯಾಕ್

ಉಗುರಿನ ಸೋಂಕು:

ಉಗುರುಗಳ ಮೂಲೆಯಲ್ಲಿ ಸೋಂಕು ಮತ್ತು ನೋವು ಇದ್ದರೆ ಕರ್ಪೂರವನ್ನು ಬಳಸಬಹುದು. ಕರ್ಪೂರದ ಎಣ್ಣೆಯು ಉಗುರುಗಳ ಸೋಂಕನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಏಕೆಂದರೆ ಇದು ನಂಜುನಿರೋಧಕ ಮತ್ತು ಆಂಟಿಫಂಗಲ್ ಪದಾರ್ಥಗಳನ್ನು ಹೊಂದಿರುತ್ತದೆ. ಆದ್ದರಿಂದ ಉಗುರಿನಲ್ಲಿ ನೋವು ಕಾಣಿಸಿಕೊಂಡರೆ ಕರ್ಪೂರದ ಎಣ್ಣೆ ಬಳಸಿ.

ಕೂದಲಿನ ಸಮಸ್ಯೆ:

ಕರ್ಪೂರ ಕೂದಲಿನ ಸಮಸ್ಯೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಕರ್ಪೂರದ ಎಣ್ಣೆಯನ್ನು ತೆಂಗಿನೆಣ್ಣೆಯೊಂದಿಗೆ ಬೆರೆಸಿ ಹಚ್ಚಿದರೆ ಚಳಿಗಾಲದಲ್ಲಿ ತಲೆಹೊಟ್ಟು ಮತ್ತು ತುರಿಕೆಯಂತಹ ಸಮಸ್ಯೆಗಳು ನಿವಾರಣೆಯಾಗುತ್ತವೆ. ಇದನ್ನು ನಿಯಮಿತವಾಗಿ ಮಾಡುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ