AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ಬಟ್ಟೆ ಮೇಲಿನ ಬೆವರಿನ ಕಲೆ ಹೋಗಲಾಡಿಸುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಬೇಸಿಗೆ ಶುರುವಾಯಿತು ಎಂದರೆ ಕಿರಿಕಿರಿ ಅನುಭವ ಜೊತೆಗೆ ಆರೋಗ್ಯವನ್ನು ಹೇಗೆ ಕಾಪಾಡುವುದು ಎನ್ನುವ ಚಿಂತೆ. ಈ ಸಮಯದಲ್ಲಿ ಯಾವ ತೆರೆನಾದ ಬಟ್ಟೆ ಹಾಕಿದರೂ ಕೂಡ ಮೈಯಿಂದ ಬೆವರು ಇಳಿಯುತ್ತಲೇ ಇರುತ್ತದೆ. ಕೆಟ್ಟ ಬೆವರಿನ ವಾಸನೆಯೊಂದಿಗೆ ಬಟ್ಟೆಯ ತುಂಬಾ ಹಳದಿ ಬಣ್ಣದ ಬೆವರಿನ ಕಲೆಗಳು ತುಂಬಿಕೊಂಡಿರುತ್ತದೆ. ಕುತ್ತಿಗೆ ಹಾಗೂ ಕಂಕುಳಿನ ಭಾಗದಲ್ಲಿ ಕಾಣಿಸಿಕೊಳ್ಳುವ ಈ ಕಲೆಗಳಿಂದ ಬಟ್ಟೆಯ ಅಂದವೇ ಹಾಳಾಗುತ್ತದೆ. ಹಾಗಾದ್ರೆ ಮನೆಯಲ್ಲೇ ಕೆಲವು ಟಿಪ್ಸ್ ಗಳನ್ನು ಪಾಲಿಸಿದರೆ ಸುಲಭವಾಗಿ ಕಲೆಗಳನ್ನು ತೊಡೆದುಹಾಕಬಹುದು.

ಬೇಸಿಗೆಯಲ್ಲಿ ಬಟ್ಟೆ ಮೇಲಿನ ಬೆವರಿನ ಕಲೆ ಹೋಗಲಾಡಿಸುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Edited By: |

Updated on: Apr 23, 2024 | 6:09 PM

Share

ಬೇಸಿಗೆಯೆಂದರೆ ಎಲ್ಲರಿಗೂ ಕಷ್ಟನೇ. ನೆತ್ತಿಯನ್ನು ಸುಡುವ ಸೂರ್ಯನ ಶಾಖದ ನಡುವೆ ಚರ್ಮ ಹಾಗೂ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಹರಸಾಹಸ ಪಡಬೇಕಾಗುತ್ತದೆ. ಈ ಕೆಟ್ಟ ಬೆವರಿನ ವಾಸನೆಯ ಜೊತೆಗೆ ಬಟ್ಟೆಯ ಮೇಲಿನ ಬೆವರಿನ ಕಲೆಯನ್ನು ಹೋಗಿಸುವುದು ಸುಲಭದ ಮಾತಲ್ಲ. ಒತ್ತಡ ಹಾಕಿ ಬಟ್ಟೆಗಳನ್ನು ಉಜ್ಜಿದರೆ ಬಟ್ಟೆಯೇ ಹರಿದುಹೋಗುವ ಸಂಭವವೇ ಹೆಚ್ಚಾಗಿರುತ್ತದೆ. ಆದರೆ ಈ ಕಲೆಗಳನ್ನು ಮನೆಯಲ್ಲೇ ಸುಲಭವಾಗಿ ತೆಗೆದುಹಾಕಬಹುದು.

ಬೆವರಿಗೆ ಕಲೆಯನ್ನು ಹೋಗಲಾಡಿಸಲು ಸರಳ ಮನೆ ಮದ್ದುಗಳು

* ಬಟ್ಟೆಯನ್ನು 10 ನಿಮಿಷ ನಿಂಬೆರಸ ಬೆರೆಸಿದ ನೀರಿನಲ್ಲಿ ನೆನೆಸಿಟ್ಟು ತೊಳೆದರೆ ಬೆವರಿನ ಕಲೆಯು ಇಲ್ಲದಂತಾಗುತ್ತದೆ.

* ಮನೆಯಲ್ಲಿರುವ ಅಡುಗೆ ಸೋಡಾದಿಂದ ಈ ಕಲೆಗಳನ್ನು ಸುಲಭವಾಗಿ ತೆಗೆದುಹಾಕಬಹುದು. ಕಲೆ ಇರುವ ಜಾಗಕ್ಕೆ ಸ್ವಲ್ಪ ಅಡುಗೆ ಸೋಡಾವನ್ನು ಸಿಂಪಡಿಸಿ 30 ನಿಮಿಷಗಳ ಕಾಲ ಹಾಗೆ ಬಿಟ್ಟು ಉಜ್ಜಿ ತೊಳೆದರೆ ಕಲೆಯು ಹೋಗುತ್ತದೆ.

* ಬಟ್ಟೆಗಳು ಬೆವರಿನ ವಾಸನೆ ಕಲೆಯಿಂದ ಕೂಡಿದ್ದರೆ ಬಿಳಿ ವಿನೆಗರ್ ಬಳಸಿದರೆ ಉತ್ತಮ. ಸ್ಪ್ರೇ ಬಾಟಲಿಯಲ್ಲಿ ಅರ್ಧದಷ್ಟು ನೀರಿಗೆ ಬಿಳಿ ವಿನೆಗರ್‌ ಸೇರಿಸಿ, ಕಲೆಯಾದ ಜಾಗಕ್ಕೆ ಸ್ಪ್ರೇ ಮಾಡಿ ಸ್ವಲ್ಪ ಸಮಯದ ನಂತರ ತೊಳೆದರೆ ಬಟ್ಟೆಯು ಹಳದಿ ಕಲೆಯು ಮಾಯವಾಗುತ್ತದೆ.

* ಬಟ್ಟೆಗಳಲ್ಲಿ ಬೆವರಿನಿಂದ ಕಲೆಯಾಗಿದ್ದರೆ ಜೋಳದ ಹಿಟ್ಟನ್ನು ಸಿಂಪಡಿಸಿ, ಸ್ವಲ್ಪ ಸಮಯದ ನಂತರದಲ್ಲಿ ಬ್ರಷ್ ನಿಂದ ಉಜ್ಜಿದರೆ ಕಲೆಯು ಇಲ್ಲದಂತಾಗುತ್ತದೆ.

ಇದನ್ನೂ ಓದಿ: ಬೇಸಿಗೆಯಲ್ಲಿ ಈ ತಪ್ಪುಗಳನ್ನು ಅಪ್ಪಿ ತಪ್ಪಿಯೂ ಮಾಡಬೇಡಿ

* ಐಸ್ ಕ್ಯೂಬ್‌ಗಳು ಕಲೆಗಳನ್ನು ತ್ವರಿತವಾಗಿ ತೆಗೆದುಹಾಕಲು ಸಹಾಯ ಮಾಡುತ್ತದೆ. ಹೀಗಾಗಿ ಕಲೆಯಾದ ಜಾಗವನ್ನು ಐಸ್ ಕ್ಯೂಬ್‌ಗಳೊಂದಿಗೆ ಕಲೆಗಳನ್ನು ಉಜ್ಜಿ ತೊಳೆದರೆ ಕಲೆಗಳು ಬೇಗನೆ ನಿವಾರಣೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ