AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ಬಟ್ಟೆ ಮೇಲಿನ ಬೆವರಿನ ಕಲೆ ಹೋಗಲಾಡಿಸುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಬೇಸಿಗೆ ಶುರುವಾಯಿತು ಎಂದರೆ ಕಿರಿಕಿರಿ ಅನುಭವ ಜೊತೆಗೆ ಆರೋಗ್ಯವನ್ನು ಹೇಗೆ ಕಾಪಾಡುವುದು ಎನ್ನುವ ಚಿಂತೆ. ಈ ಸಮಯದಲ್ಲಿ ಯಾವ ತೆರೆನಾದ ಬಟ್ಟೆ ಹಾಕಿದರೂ ಕೂಡ ಮೈಯಿಂದ ಬೆವರು ಇಳಿಯುತ್ತಲೇ ಇರುತ್ತದೆ. ಕೆಟ್ಟ ಬೆವರಿನ ವಾಸನೆಯೊಂದಿಗೆ ಬಟ್ಟೆಯ ತುಂಬಾ ಹಳದಿ ಬಣ್ಣದ ಬೆವರಿನ ಕಲೆಗಳು ತುಂಬಿಕೊಂಡಿರುತ್ತದೆ. ಕುತ್ತಿಗೆ ಹಾಗೂ ಕಂಕುಳಿನ ಭಾಗದಲ್ಲಿ ಕಾಣಿಸಿಕೊಳ್ಳುವ ಈ ಕಲೆಗಳಿಂದ ಬಟ್ಟೆಯ ಅಂದವೇ ಹಾಳಾಗುತ್ತದೆ. ಹಾಗಾದ್ರೆ ಮನೆಯಲ್ಲೇ ಕೆಲವು ಟಿಪ್ಸ್ ಗಳನ್ನು ಪಾಲಿಸಿದರೆ ಸುಲಭವಾಗಿ ಕಲೆಗಳನ್ನು ತೊಡೆದುಹಾಕಬಹುದು.

ಬೇಸಿಗೆಯಲ್ಲಿ ಬಟ್ಟೆ ಮೇಲಿನ ಬೆವರಿನ ಕಲೆ ಹೋಗಲಾಡಿಸುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Edited By: |

Updated on: Apr 23, 2024 | 6:09 PM

Share

ಬೇಸಿಗೆಯೆಂದರೆ ಎಲ್ಲರಿಗೂ ಕಷ್ಟನೇ. ನೆತ್ತಿಯನ್ನು ಸುಡುವ ಸೂರ್ಯನ ಶಾಖದ ನಡುವೆ ಚರ್ಮ ಹಾಗೂ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಹರಸಾಹಸ ಪಡಬೇಕಾಗುತ್ತದೆ. ಈ ಕೆಟ್ಟ ಬೆವರಿನ ವಾಸನೆಯ ಜೊತೆಗೆ ಬಟ್ಟೆಯ ಮೇಲಿನ ಬೆವರಿನ ಕಲೆಯನ್ನು ಹೋಗಿಸುವುದು ಸುಲಭದ ಮಾತಲ್ಲ. ಒತ್ತಡ ಹಾಕಿ ಬಟ್ಟೆಗಳನ್ನು ಉಜ್ಜಿದರೆ ಬಟ್ಟೆಯೇ ಹರಿದುಹೋಗುವ ಸಂಭವವೇ ಹೆಚ್ಚಾಗಿರುತ್ತದೆ. ಆದರೆ ಈ ಕಲೆಗಳನ್ನು ಮನೆಯಲ್ಲೇ ಸುಲಭವಾಗಿ ತೆಗೆದುಹಾಕಬಹುದು.

ಬೆವರಿಗೆ ಕಲೆಯನ್ನು ಹೋಗಲಾಡಿಸಲು ಸರಳ ಮನೆ ಮದ್ದುಗಳು

* ಬಟ್ಟೆಯನ್ನು 10 ನಿಮಿಷ ನಿಂಬೆರಸ ಬೆರೆಸಿದ ನೀರಿನಲ್ಲಿ ನೆನೆಸಿಟ್ಟು ತೊಳೆದರೆ ಬೆವರಿನ ಕಲೆಯು ಇಲ್ಲದಂತಾಗುತ್ತದೆ.

* ಮನೆಯಲ್ಲಿರುವ ಅಡುಗೆ ಸೋಡಾದಿಂದ ಈ ಕಲೆಗಳನ್ನು ಸುಲಭವಾಗಿ ತೆಗೆದುಹಾಕಬಹುದು. ಕಲೆ ಇರುವ ಜಾಗಕ್ಕೆ ಸ್ವಲ್ಪ ಅಡುಗೆ ಸೋಡಾವನ್ನು ಸಿಂಪಡಿಸಿ 30 ನಿಮಿಷಗಳ ಕಾಲ ಹಾಗೆ ಬಿಟ್ಟು ಉಜ್ಜಿ ತೊಳೆದರೆ ಕಲೆಯು ಹೋಗುತ್ತದೆ.

* ಬಟ್ಟೆಗಳು ಬೆವರಿನ ವಾಸನೆ ಕಲೆಯಿಂದ ಕೂಡಿದ್ದರೆ ಬಿಳಿ ವಿನೆಗರ್ ಬಳಸಿದರೆ ಉತ್ತಮ. ಸ್ಪ್ರೇ ಬಾಟಲಿಯಲ್ಲಿ ಅರ್ಧದಷ್ಟು ನೀರಿಗೆ ಬಿಳಿ ವಿನೆಗರ್‌ ಸೇರಿಸಿ, ಕಲೆಯಾದ ಜಾಗಕ್ಕೆ ಸ್ಪ್ರೇ ಮಾಡಿ ಸ್ವಲ್ಪ ಸಮಯದ ನಂತರ ತೊಳೆದರೆ ಬಟ್ಟೆಯು ಹಳದಿ ಕಲೆಯು ಮಾಯವಾಗುತ್ತದೆ.

* ಬಟ್ಟೆಗಳಲ್ಲಿ ಬೆವರಿನಿಂದ ಕಲೆಯಾಗಿದ್ದರೆ ಜೋಳದ ಹಿಟ್ಟನ್ನು ಸಿಂಪಡಿಸಿ, ಸ್ವಲ್ಪ ಸಮಯದ ನಂತರದಲ್ಲಿ ಬ್ರಷ್ ನಿಂದ ಉಜ್ಜಿದರೆ ಕಲೆಯು ಇಲ್ಲದಂತಾಗುತ್ತದೆ.

ಇದನ್ನೂ ಓದಿ: ಬೇಸಿಗೆಯಲ್ಲಿ ಈ ತಪ್ಪುಗಳನ್ನು ಅಪ್ಪಿ ತಪ್ಪಿಯೂ ಮಾಡಬೇಡಿ

* ಐಸ್ ಕ್ಯೂಬ್‌ಗಳು ಕಲೆಗಳನ್ನು ತ್ವರಿತವಾಗಿ ತೆಗೆದುಹಾಕಲು ಸಹಾಯ ಮಾಡುತ್ತದೆ. ಹೀಗಾಗಿ ಕಲೆಯಾದ ಜಾಗವನ್ನು ಐಸ್ ಕ್ಯೂಬ್‌ಗಳೊಂದಿಗೆ ಕಲೆಗಳನ್ನು ಉಜ್ಜಿ ತೊಳೆದರೆ ಕಲೆಗಳು ಬೇಗನೆ ನಿವಾರಣೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು