Sweet Potato Rabdi: ಚಳಿಗಾಲದಲ್ಲಿ ಸಿಹಿಗೆಣಸಿನ ಈ ಸೂಪರ್ ರೆಸಿಪಿ ತಯಾರಿಸಿ

ನಿಮ್ಮ ದೇಹಕ್ಕೆ ಇಷ್ಟೆಲ್ಲಾ ಪ್ರಯೋಜನವನ್ನು ನೀಡುವ ಸಿಹಿಗೆಣಸಿನಿಂದ ಮಾಡಬಹುದಾದ ರಾಬ್ಡಿ ರೆಸಿಪಿಯ ಬಗ್ಗೆ ಸಂಪೂರ್ಣ ಪಾಕ ವಿಧಾನ ಇಲ್ಲಿದೆ. ಸಿಹಿಗೆಣಸಿನ ರಾಬ್ಡಿಯನ್ನು ನೀವು ಕೇವಲ ಹತ್ತು ನಿಮಿಷಗಳಲ್ಲಿ ತಯಾರಿಸಬಹುದಾಗಿದೆ.

Sweet Potato Rabdi: ಚಳಿಗಾಲದಲ್ಲಿ ಸಿಹಿಗೆಣಸಿನ  ಈ ಸೂಪರ್ ರೆಸಿಪಿ ತಯಾರಿಸಿ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷತಾ ವರ್ಕಾಡಿ

Updated on: Jan 10, 2023 | 3:09 PM

ಚಳಿಗಾಲ(Winter Season)ದಲ್ಲಿ ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗುವ ಸೂಪರ್ ಫುಡ್​​​ಗಳಲ್ಲಿ ಸಿಹಿಗೆಣಸು ಕೂಡ ಒಂದಾಗಿದೆ. ಇದು ನಿಮ್ಮನ್ನು ಚಳಿಗಾಲದಲ್ಲಿ ಹರಡುವ ಸೋಂಕುಗಳಿಂದ ರಕ್ಷಿಸುತ್ತದೆ. ಇದರಲ್ಲಿ ಬೀಟಾ-ಕ್ಯಾರೋಟಿನ್, ವಿಟಮಿನ್ ಬಿ6, ವಿಟಮಿನ್ ಸಿ, ಪೊಟ್ಯಾಸಿಯಮ್, ಫೈಬರ್, ಕಬ್ಬಿಣ, ಕ್ಯಾಲ್ಸಿಯಂ, ಸೆಲೆನಿಯಂ ಮತ್ತು ಉತ್ಕರ್ಷಣ ನಿರೋಧಕಗಳಂತಹ ಖನಿಜಗಳು ಹೇರಳವಾಗಿದೆ. ಆದ್ದರಿಂದ ಇದು ನಿಮ್ಮನ್ನು ಚಳಿಯ ಶೀತ ವಾತಾವರಣದಲ್ಲಿ ಬೆಚ್ಚಗಿಡುವಂತೆ ಮಾಡುತ್ತದೆ.

ನಿಮ್ಮ ದೇಹಕ್ಕೆ ಇಷ್ಟೆಲ್ಲಾ ಪ್ರಯೋಜನವನ್ನು ನೀಡುವ ಸಿಹಿಗೆಣಸಿನಿಂದ ಮಾಡಬಹುದಾದ ರಾಬ್ಡಿ ರೆಸಿಪಿಯ ಬಗ್ಗೆ ಸಂಪೂರ್ಣ ಪಾಕ ವಿಧಾನ ಇಲ್ಲಿದೆ. ಸಿಹಿಗೆಣಸಿನ ರಾಬ್ಡಿಯನ್ನು ನೀವು ಕೇವಲ ಹತ್ತು ನಿಮಿಷಗಳಲ್ಲಿ ತಯಾರಿಸಬಹುದಾಗಿದೆ. ಸಿಹಿಗೆಣಸಿನ ಜೊತೆಗೆ ಬಳಸುವ ಹಾಲು ನಿಮ್ಮ ದೇಹಕ್ಕೆ ಪ್ರೋಟೀನ್ ಅಂಶವನ್ನು ನೀಡುತ್ತದೆ. ಜೊತೆಗೆ ಕೇಸರಿಯನ್ನು ಬಳಸುವುದರಿಂದ ದೇಹದ ಆರೋಗ್ಯದಲ್ಲಿ ಸಾಕಷ್ಟು ಪ್ರಯೋಜನಗಳನ್ನು ಕಾಣಬಹುದು.

ಸಿಹಿಗೆಣಸಿನ ರಾಬ್ಡಿಗೆ ಬೇಕಾಗುವ ಸಾಮಾಗ್ರಿಗಳು:

ಹಾಲು – 150 ಮೀ ಲೀಟರ್ ಬೇಯಿಸಿದ ಹಿಸುಕಿದ ಸಿಹಿ ಗೆಣಸು -1/2 ಕಪ್ ಸಕ್ಕರೆ- 1 ಚಮಚ ನೀರು- 1/2 ಕಪ್ ಎಲಕ್ಕಿ ಪುಡಿ- 1/2 ಚಮಚ ಕೇಸರಿ- ಕೆಲವು ಎಳೆಗಳು ಡ್ರೈ ಫೂಟ್ಸ್ – 2 ಚಮಚ

ಇದನ್ನೂ ಓದಿ: ಇಡಿಯಪ್ಪಂ ಮತ್ತು ಟೊಮೆಟೊ ಚಟ್ನಿ ರೆಸಿಪಿ ಇಲ್ಲಿದೆ

ಸಿಹಿ ಗೆಣಸು ರಾಬ್ಡಿ ಮಾಡುವ ವಿಧಾನ:

ಮೊದಲಿಗೆ ಒಂದು ಪಾತ್ರೆಯಲ್ಲಿ ಹಾಲನ್ನು ಚೆನ್ನಾಗಿ ಕುದಿಸಿ ನಂತರ ಅದಕ್ಕೆ ಹಿಸುಕಿದ ಸಿಹಿ ಗೆಣಸು ಸೇರಿಸಿ. ಹಾಲು ದಪ್ಪವಾಗುವವರೆಗೆ ಚೆನ್ನಾಗಿ ಬೇಯಿಸಿ. ಈಗ ಒಂದು ಕಪ್ ಬೆಚ್ಚಗಿನ ನೀರಿಗೆ ಕೇಸರಿ ಎಳೆಗಳನ್ನು ಸೇರಿಸಿ ಮತ್ತು ಅವು ಸಂಪೂರ್ಣವಾಗಿ ಕರಗುವವರೆಗೆ ಕಾಯಿರಿ. ಇದನ್ನು ಹಾಲಿನ ಮಿಶ್ರಣಕ್ಕೆ ಸೇರಿಸಿ ಮತ್ತು ಚೆನ್ನಾಗಿ ಬೆರೆಸಿ. ಎಲಕ್ಕಿ ಪುಡಿಯನ್ನು ಬೆರೆಸಿ 3-4 ನಿಮಿಷ ಬೇಯಿಸಿ. ಕೊನೆಯಲ್ಲಿ, ಸಂಪೂರ್ಣ ರಬ್ದಿಯನ್ನು ಒಂದು ಬಟ್ಟಲಿನಲ್ಲಿ ಹಾಕಿ ಮತ್ತು ಅದರ ಮೇಲೆ ಡ್ರೈ ಫೂಟ್ಸ್​​​​ಗಳನ್ನು ಸೇರಿಸಿ. ಇದನ್ನು 1 ಗಂಟೆಗಳ ಕಾಲ ತಣ್ಣಗಾಗಲು ಬಿಡಿ. ಈಗ ಆರೋಗ್ಯಕರವಾದ ಸಿಹಿ ಗೆಣಸು ರಾಬ್ಡಿ ಸಿದ್ದವಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ