AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamarind Drink: ಹುಣಸೆ ಹಣ್ಣಿನ ಹಿತವಾದ ಪಾನಕ ಮಾಡುವ ವಿಧಾನ ಇಲ್ಲಿದೆ

ರುಚಿಯ ಜೊತೆಗೆ ಹುಣಸೆ ಹಣ್ಣಿನಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಆದ್ದರಿಂದ ಮನೆಯಲ್ಲಿಯೇ ಆರೋಗ್ಯಕರ ಹುಣಸೆ ಹಣ್ಣಿನ ಹಿತವಾದ ಪಾನಕ ತಯಾರಿಸಿ ಸವಿಯಿರಿ.

Tamarind Drink: ಹುಣಸೆ ಹಣ್ಣಿನ ಹಿತವಾದ ಪಾನಕ ಮಾಡುವ ವಿಧಾನ ಇಲ್ಲಿದೆ
ಹುಣಸೆ ಹಣ್ಣಿನ ಪಾನಕ
TV9 Web
| Edited By: |

Updated on:Feb 07, 2023 | 4:19 PM

Share

ಈಗ ಹುಣಸೆ(Tamarind) ಹಣ್ಣಿನ ಹಂಗಾಮು ಶುರುವಾಗಿದೆ. ತಾಜ ಹಣ್ಣಿನಲ್ಲಿ ಹಿತವಾದ ಹುಳಿ ಸಿಹಿ ಮಿಶ್ರಣ ಇರುತ್ತದೆ. ಹಣ್ಣು ಹಳೆಯದಾದಷ್ಟು ಹುಳಿ ಹೆಚ್ಚುತ್ತದೆ. ರುಚಿಯ ಜೊತೆಗೆ ಹುಣಸೆ ಹಣ್ಣಿನಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಆದ್ದರಿಂದ ಮನೆಯಲ್ಲಿಯೇ ಆರೋಗ್ಯಕರ ಹುಣಸೆ ಹಣ್ಣಿನ ಹಿತವಾದ ಪಾನಕ ತಯಾರಿಸಿ ಸವಿಯಿರಿ. ಹೃದಯ, ಕಿಡ್ನಿ, ಯಕೃತ್ ಗಳ ಆರೋಗ್ಯ ರಕ್ಷಣೆಗೆ ನೆರವಾಗುವ ಹುಣಸೆ ಹಣ್ಣು ಶುಚಿಕಾರಕವೂ ಹೌದು. ಪಾನಕ ಕುಡಿದ ಬಳಿಕ ಬೀಜಕ್ಕೆ ಅಂಟಿಕೊಂಡ ತಿರುಳನ್ನು ಬಾಯಲ್ಲಿ ಹಾಕಿಕೊಂಡು ಸವಿಯಬಹುದು. ಬೇರ್ಪಡಿಸಿದ ಬೀಜಗಳನ್ನು ಸುಟ್ಟುಕೊಂಡು ಅಥವಾ ಹುರಿದುಕೊಂಡು ಸಿಪ್ಪೆ ತೆಗೆದು ನೆನಸಿಟ್ಟು ತಿನ್ನುತಿದ್ದರೆ ಮಂಡಿ ನೋವು ಬೇಗ ವಾಸಿ ಆಗುತ್ತದೆ ಎಂದು ಅನುಭವಿಗಳು ಹೇಳುತ್ತಾರೆ. ಹುರಿದ ಬೀಜಗಳು ರುಚಿಯಾಗಿರುತ್ತವೆ.

ಹುಣಸೆ ಹಣ್ಣಿನ ಪಾನಕ ಮಾಡುವ ವಿಧಾನ:

  • ಹಣ್ಣಿನ ಸಿಪ್ಪೆಯನ್ನು ಬಿಡಿಸಿಕೊಂಡು ನೀರಲ್ಲಿ ತುಸು ಹೊತ್ತು ನೆನೆಯಲು ಬಿಡಿ.
  • ಜೀರಿಗೆ, ಶುಂಠಿ, ಕರಿಬೇವು ಸೇರಿಸಿ ಉಪ್ಪಿನೊಂದಿಗೆ ಕುಟ್ಟಿಕೊಂಡು ನೆನೆಸಿಟ್ಟ ಹುಣಸೆ ಹಣ್ಣಿಗೆ ಹಾಕಿಕೊಳ್ಳಿ.
  • ಬಳಿಕ ಬೆಲ್ಲವನ್ನು ಸೇರಿಸಿ ಕಿವುಚಿಕೊಂಡರೆ ಹಣ್ಣಿನ ತಿರುಳಿನ ಸಾರವು ಬಿಟ್ಟುಕೊಳ್ಳುತ್ತದೆ, ಸಿಹಿ ಹಾಗೂ ಸುವಾಸನೆಯೊಂದಿಗೆ ಸೇರಿಕೊಳ್ಳುತ್ತದೆ.
  • ಒಂದು ಲೋಟ ನೀರಿಗೆ 2-4 ಹುಣಸೆ ಹಣ್ಣು ಹಾಕಿ ತಯಾರಿಸಿದ ಪಾನಕ ಒಬ್ಬರಿಗೆ ಸಾಕಾದೀತು. ರುಚಿಕರವಾದ ಈ ಪಾನಕ ಹಿತವಾಗಿರುತ್ತದೆ.

ಇದನ್ನೂ ಓದಿ: ವಿಭಿನ್ನ ಶೈಲಿಯಲ್ಲಿ ಆರೋಗ್ಯಕರ ಹಾಗೂ ರುಚಿಕರ ಸಲಾಡ್​​ ತಯಾರಿಸಿ

ಹುಣಸೆ ಹಣ್ಣಿನ ಆರೋಗ್ಯ ಪ್ರಯೋಜನಗಳು:

  • ಹುಣಸೆ ಹಣ್ಣಿನಲ್ಲಿ ನಾರಿನಾಂಶ ಹೆಚ್ಚಾಗಿರುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಹೊರಹಾಕಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.
  • ಹುಣಸೆ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇದು ಪಾಲಿಫಿನಾಲ್​ ಎಂಬ ಆ್ಯಂಟಿ ಆಕ್ಸಿಡೆಂಟ್​ ಹೊಂದಿದ್ದು, ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ.
  • ಹುಣಸೆ ಹಣ್ಣು ವಿಟಮಿನ್​ ಸಿ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
  • ಹುಣಸೆ ಹಣ್ಣು ಆ್ಯಂಟಿ- ಸಫ್ಟಿಕ್​ ಗುಣಗಳನ್ನು ಹೊಂದಿರುವುದರಿಂದ ಅಸ್ತಮಾ, ಕೆಮ್ಮು ಮತ್ತು ಶೀತ ಸಮಸ್ಯೆಯನ್ನು ತಡೆಯಲು ಸಹಾಯಕವಾಗಿದೆ.

– ಡಾ ವಿಜಯ್ ಅಂಗಡಿ

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Published On - 4:19 pm, Tue, 7 February 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?