AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips : ಮಹಿಳೆಯರೇ ಮುಟ್ಟಿನ ಸಮಯದಲ್ಲಿ ಹುಣಸೆಯ ಚಿಗುರೆಲೆ ಸೇವಿಸಿ, ಇಲ್ಲಿದೆ ಕಾರಣ

ಹುಣಸೆ ಹಣ್ಣಿನ ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರು ಬರುತ್ತದೆ. ಸ್ವಲ್ಪ ಉಪ್ಪು ಬೆರೆಸಿ ಹದ ಹಣ್ಣಾಗಿರುವ ಈ ಹುಣಸೆ ಹಣ್ಣನ್ನು ಸವಿದರೆ ಸ್ವರ್ಗಕ್ಕೆ ಮೂರೇ ಗೇಣು. ಈ ಹುಳಿ ಹಾಗೂ ಸಿಹಿ ಮಿಶ್ರಿತ ಈ ಹಣ್ಣನ್ನು ಅಡುಗೆಯ ರುಚಿ ಹೆಚ್ಚಿಸಲು ಬಳಸಲಾಗುತ್ತದೆ. ಆದರೆ ಈ ಹುಣಸೆ ಹಣ್ಣು ಮಾತ್ರವಲ್ಲದೇ, ಇದರ ಚಿಗುರೆಲೆಗಳ ಸೇವಿಸುವುದರಿಂದ ಆರೋಗ್ಯ ಪ್ರಯೋಜನಗಳು ಹಲವಾರಿದೆ.

Health Care Tips : ಮಹಿಳೆಯರೇ ಮುಟ್ಟಿನ ಸಮಯದಲ್ಲಿ ಹುಣಸೆಯ ಚಿಗುರೆಲೆ ಸೇವಿಸಿ, ಇಲ್ಲಿದೆ ಕಾರಣ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Apr 11, 2024 | 1:59 PM

Share

ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಾಡಿದಾಗ ನಮ್ಮ ಸುತ್ತಮುತ್ತಲಿನ ಗಿಡಮೂಲಿಕೆ ಸಸ್ಯಗಳಿಂದ ಪರಿಹಾರ ಕಂಡುಕೊಳ್ಳುವುದು ಕಷ್ಟವಲ್ಲ. ರೋಗವನ್ನು ಗುಣಪಡಿಸುವುದರಲ್ಲಿ ಈ ಹುಣಸೆ ಗಿಡದ ಚಿಗುರೆಲೆಗಳು ಬಹುಮುಖ್ಯ ಪಾತ್ರವಹಿಸುತ್ತದೆ. ಈ ಎಲೆಗಳನ್ನು ಜಗಿದು ತಿನ್ನುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿದೆ.

  • ಮುಟ್ಟಿನ ಸಮಯದಲ್ಲಿ ಮಹಿಳೆಯರಲ್ಲಿ ಕಾಡುವ ನೋವು, ಸೆಳೆತವನ್ನು ಕಡಿಮೆ ಮಾಡಿಕೊಳ್ಳಲು ಹುಣಸೆ ಎಲೆಗಳನ್ನು ಸೇವಿಸುವುದು ಉತ್ತಮ. ಇಲ್ಲವಾದರೆ ಈ ಚಿಗುರೆಲೆಗಳನ್ನು ನೀರಿನಲ್ಲಿ ಕುದಿಸಿ ಸೇವಿಸಿದರೆ ಪರಿಣಾಮಕಾರಿ.
  • ಈ ಹುಣಸೆ ಎಲೆಗಳನ್ನು ತಿನ್ನುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
  • ಕೀಲು ನೋವು ಹಾಗೂ ಮಂಡಿ ನೋವಿನಂತಹ ಸಮಸ್ಯೆಯಿದ್ದರೆ ಹುಣಸೆ ಎಲೆಗಳನ್ನು ನಿಯಮಿತವಾಗಿ ಸೇವಿಸಿದರೆ ನೋವು ಮಾಯಾವಾಗುತ್ತದೆ
  • ಜಂತು ಹುಳು ಸಮಸ್ಯೆಯಿರುವವರು ನಿಯಮಿತವಾಗಿ ಹುಣಸೆ ಚಿಗುರೆಲೆ ಸೇವಿಸುತ್ತ ಬಂದರೆ ಈ ಸಮಸ್ಯೆಯು ದೂರವಾಗುತ್ತದೆ.
  • ಎದೆ ಹಾಲು ಕಡಿಮೆಯಿದ್ದರೆ, ಹುಣಸೆ ಮರದ ಚಿಗುರೆಲೆಯಿಂದ ಕಷಾಯ ಮಾಡಿ ನಿಯಮಿತವಾಗಿ ಸೇವಿಸಿದರೆ ತಾಯಿಯ ಎದೆ ಹಾಲು ಉತ್ಪತ್ತಿಯಾಗುತ್ತದೆ.
  • ದಿನನಿತ್ಯ ಈ ಹುಣಸೆಯ ಚಿಗುರೆಲೆಯನ್ನು ಸೇವಿಸುತ್ತಿದ್ದರೆ ಕೆಟ್ಟ ಕೊಲೆಸ್ಟ್ರಾಲ್ ಗಳನ್ನು ಕಡಿಮೆಯಾಗುತ್ತದೆ.
  • ಮಲೇರಿಯಾಗೆ ಈ ಹುಣಸೆಯ ಚಿರುಗೆಲೆಯು ಉತ್ತಮವಾದ ಮನೆ ಮದ್ದಾಗಿದೆ.
  • ಮೂತ್ರ ವಿಸರ್ಜನೆ ಮತ್ತು ಮಲಬದ್ಧತೆಯ ಸಮಸ್ಯೆಯಿರುವವರು ಈ ಎಲೆಯಿಂದ ಮಾಡಿದ ಕಷಾಯವನ್ನು ಸೇವಿಸಬಹುದು.
  • ಹುಣಸೆ ಎಲೆ ಚಿಗುರನ್ನು ಒಣಗಿಸಿ ಪುಡಿಮಾಡಿ ನಿಂಬೆರಸದೊಂದಿಗೆ ನೋವು ಇದಲ್ಲಿ ಹಚ್ಚಿದರೆ ನೋವು ಕಡಿಮೆಯಾಗುತ್ತದೆ.

ಈ ಮನೆ ಮದ್ದನ್ನೊಮ್ಮೆ ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆಗಳನ್ನು ಪಡೆಯುವುದು ಉತ್ತಮ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್