AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips : ಮಹಿಳೆಯರೇ ಮುಟ್ಟಿನ ಸಮಯದಲ್ಲಿ ಹುಣಸೆಯ ಚಿಗುರೆಲೆ ಸೇವಿಸಿ, ಇಲ್ಲಿದೆ ಕಾರಣ

ಹುಣಸೆ ಹಣ್ಣಿನ ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರು ಬರುತ್ತದೆ. ಸ್ವಲ್ಪ ಉಪ್ಪು ಬೆರೆಸಿ ಹದ ಹಣ್ಣಾಗಿರುವ ಈ ಹುಣಸೆ ಹಣ್ಣನ್ನು ಸವಿದರೆ ಸ್ವರ್ಗಕ್ಕೆ ಮೂರೇ ಗೇಣು. ಈ ಹುಳಿ ಹಾಗೂ ಸಿಹಿ ಮಿಶ್ರಿತ ಈ ಹಣ್ಣನ್ನು ಅಡುಗೆಯ ರುಚಿ ಹೆಚ್ಚಿಸಲು ಬಳಸಲಾಗುತ್ತದೆ. ಆದರೆ ಈ ಹುಣಸೆ ಹಣ್ಣು ಮಾತ್ರವಲ್ಲದೇ, ಇದರ ಚಿಗುರೆಲೆಗಳ ಸೇವಿಸುವುದರಿಂದ ಆರೋಗ್ಯ ಪ್ರಯೋಜನಗಳು ಹಲವಾರಿದೆ.

Health Care Tips : ಮಹಿಳೆಯರೇ ಮುಟ್ಟಿನ ಸಮಯದಲ್ಲಿ ಹುಣಸೆಯ ಚಿಗುರೆಲೆ ಸೇವಿಸಿ, ಇಲ್ಲಿದೆ ಕಾರಣ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 11, 2024 | 1:59 PM

Share

ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಾಡಿದಾಗ ನಮ್ಮ ಸುತ್ತಮುತ್ತಲಿನ ಗಿಡಮೂಲಿಕೆ ಸಸ್ಯಗಳಿಂದ ಪರಿಹಾರ ಕಂಡುಕೊಳ್ಳುವುದು ಕಷ್ಟವಲ್ಲ. ರೋಗವನ್ನು ಗುಣಪಡಿಸುವುದರಲ್ಲಿ ಈ ಹುಣಸೆ ಗಿಡದ ಚಿಗುರೆಲೆಗಳು ಬಹುಮುಖ್ಯ ಪಾತ್ರವಹಿಸುತ್ತದೆ. ಈ ಎಲೆಗಳನ್ನು ಜಗಿದು ತಿನ್ನುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿದೆ.

  • ಮುಟ್ಟಿನ ಸಮಯದಲ್ಲಿ ಮಹಿಳೆಯರಲ್ಲಿ ಕಾಡುವ ನೋವು, ಸೆಳೆತವನ್ನು ಕಡಿಮೆ ಮಾಡಿಕೊಳ್ಳಲು ಹುಣಸೆ ಎಲೆಗಳನ್ನು ಸೇವಿಸುವುದು ಉತ್ತಮ. ಇಲ್ಲವಾದರೆ ಈ ಚಿಗುರೆಲೆಗಳನ್ನು ನೀರಿನಲ್ಲಿ ಕುದಿಸಿ ಸೇವಿಸಿದರೆ ಪರಿಣಾಮಕಾರಿ.
  • ಈ ಹುಣಸೆ ಎಲೆಗಳನ್ನು ತಿನ್ನುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
  • ಕೀಲು ನೋವು ಹಾಗೂ ಮಂಡಿ ನೋವಿನಂತಹ ಸಮಸ್ಯೆಯಿದ್ದರೆ ಹುಣಸೆ ಎಲೆಗಳನ್ನು ನಿಯಮಿತವಾಗಿ ಸೇವಿಸಿದರೆ ನೋವು ಮಾಯಾವಾಗುತ್ತದೆ
  • ಜಂತು ಹುಳು ಸಮಸ್ಯೆಯಿರುವವರು ನಿಯಮಿತವಾಗಿ ಹುಣಸೆ ಚಿಗುರೆಲೆ ಸೇವಿಸುತ್ತ ಬಂದರೆ ಈ ಸಮಸ್ಯೆಯು ದೂರವಾಗುತ್ತದೆ.
  • ಎದೆ ಹಾಲು ಕಡಿಮೆಯಿದ್ದರೆ, ಹುಣಸೆ ಮರದ ಚಿಗುರೆಲೆಯಿಂದ ಕಷಾಯ ಮಾಡಿ ನಿಯಮಿತವಾಗಿ ಸೇವಿಸಿದರೆ ತಾಯಿಯ ಎದೆ ಹಾಲು ಉತ್ಪತ್ತಿಯಾಗುತ್ತದೆ.
  • ದಿನನಿತ್ಯ ಈ ಹುಣಸೆಯ ಚಿಗುರೆಲೆಯನ್ನು ಸೇವಿಸುತ್ತಿದ್ದರೆ ಕೆಟ್ಟ ಕೊಲೆಸ್ಟ್ರಾಲ್ ಗಳನ್ನು ಕಡಿಮೆಯಾಗುತ್ತದೆ.
  • ಮಲೇರಿಯಾಗೆ ಈ ಹುಣಸೆಯ ಚಿರುಗೆಲೆಯು ಉತ್ತಮವಾದ ಮನೆ ಮದ್ದಾಗಿದೆ.
  • ಮೂತ್ರ ವಿಸರ್ಜನೆ ಮತ್ತು ಮಲಬದ್ಧತೆಯ ಸಮಸ್ಯೆಯಿರುವವರು ಈ ಎಲೆಯಿಂದ ಮಾಡಿದ ಕಷಾಯವನ್ನು ಸೇವಿಸಬಹುದು.
  • ಹುಣಸೆ ಎಲೆ ಚಿಗುರನ್ನು ಒಣಗಿಸಿ ಪುಡಿಮಾಡಿ ನಿಂಬೆರಸದೊಂದಿಗೆ ನೋವು ಇದಲ್ಲಿ ಹಚ್ಚಿದರೆ ನೋವು ಕಡಿಮೆಯಾಗುತ್ತದೆ.

ಈ ಮನೆ ಮದ್ದನ್ನೊಮ್ಮೆ ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆಗಳನ್ನು ಪಡೆಯುವುದು ಉತ್ತಮ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ