AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಒಂದೇ ಕಡೆ ಬರೋಬ್ಬರಿ 28 ತರಹದ ಟೀಗಳು ಸಿಗುತ್ತೆ: ಯಾವುವು? ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

ನೀವು ಟೀ ಪ್ರಿಯರಾಗಿದ್ದರೆ ದೇಸಿ, ಪಾನ್, ರೋಸ್, ವೆನಿಲಾ, ಮಸಾಲ ಹೀಗೆ ವಿಭಿನ್ನ ಫ್ಲೇವರ್​​ಗಳ ಟೀಗಳನ್ನು ಸವಿಯಬಹುದಾಗಿದೆ.

ಬೆಂಗಳೂರಿನಲ್ಲಿ ಒಂದೇ ಕಡೆ   ಬರೋಬ್ಬರಿ 28 ತರಹದ ಟೀಗಳು ಸಿಗುತ್ತೆ: ಯಾವುವು? ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ
ಟೀ ಫ್ಯೊಷನ್​ ಬೆಂಗಳೂರು
ಅಕ್ಷತಾ ವರ್ಕಾಡಿ
|

Updated on:Feb 18, 2023 | 6:03 PM

Share

ಸಾಮಾನ್ಯ ಟೀ ಎಂದಾಕ್ಷಣ 5ರಿಂದ 6 ಬಗೆಯ ಟೀ ನೀವು ಕುಡಿದಿರುತ್ತೀರಿ. ಆದ್ರೇ 28 ಬಗೆಯ ಟೀ ಸಿಗ್ತಾ ಇದೆ ಒಂದೇ ಕಡೆ. ಟೀ ಮಾತ್ರವಲ್ಲದೇ ಇಲ್ಲಿನ ಕಾಫಿ ಹಾಗೂ ಸ್ನ್ಯಾಕ್ ಕೂಡ ಸಕ್ಕತ್ತ್ ಫೇಮಸ್. ಬೆಂಗಳೂರಿನಲ್ಲಿ ಒಂದೇ ಸೂರಿನಡಿ 28 ಬಗೆಯ ಟೀ ಸಿಕ್ತಾ ಇರೋದು ಟೀ ಪ್ರಿಯರಿಗಂತೂ ಖುಷಿಯ ವಿಚಾರ. ಬೆಂಗಳೂರಿನ ಮಲ್ಲೇಶ್ವರಂ 14th ಕ್ರಾಸ್​​ನಲ್ಲಿ ಇತ್ತೀಚೆಗಷ್ಟೇ ಪ್ರಾರಂಭವಾದ ಟೀ ಫ್ಯೊಷನ್​ ವಿಭಿನ್ನ ಬಗೆಯ ಮಟ್ಕಾ ಟೀ ಯಿಂದಲೇ ಸಕ್ಕತ್ತ್ ಆಗಿ ಫೇಮಸ್ ಆಗಿದೆ.

ನೀವು ಟೀ ಪ್ರಿಯರಾಗಿದ್ದರೆ ದೇಸಿ, ಪಾನ್, ರೋಸ್, ವೆನಿಲಾ, ಮಸಾಲ ಹೀಗೆ ವಿಭಿನ್ನ ಫ್ಲೇವರ್​​ಗಳ ಟೀಗಳನ್ನು ಸವಿಯಬಹುದಾಗಿದೆ. ಜೊತೆಗೆ ಕಾಫಿ ಹಾಗೂ ಸ್ನ್ಯಾಕ್ ಕೂಡ ಲಭ್ಯವಿದೆ. ಸ್ನ್ಯಾಕ್​ ಅಲ್ಲಿಯೂ ಕೂಡ ಪೈನಾಪಲ್ ಬಜ್ಜಿ, ಕ್ಯಾಬ್ಸಿಕಮ್ ಬಜ್ಜಿ, ಮಂಡಕ್ಕಿ ಹೀಗೆ ಸಾಕಷ್ಟು ವೆರೈಟಿಗಳನ್ನು ಕಾಣಬಹುದು. ಇತ್ತೀಚೆಗಷ್ಟೇ ಪ್ರಾರಂಭವಾಗಿದ್ದರೂ ಕೂಡ ಸಕ್ಕತ್ತ್ ಆಗಿ ಫೇಮಸ್ ಆಗಿದೆ. ಇಲ್ಲಿನ ವಿಶಿಷ್ಟ ಶೈಲಿ ಹಾಗೂ ರುಚಿಯಿಂದಾಗಿ ಟೀ ಪ್ರಿಯ ತಮ್ಮ ರಿವ್ಯೂವ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿ ಕೊಂಡಿದ್ದಾರೆ.

ಇತ್ತೀಚಿಗಷ್ಟೇ ಬೆಂಗಳೂರು ಫುಡ್​​​​ ಬಾಂಬ್ ಇನ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋ ಇಲ್ಲಿದೆ.

ಇದನ್ನೂ ಓದಿ: ​​​ಮನೆಯಲ್ಲಿ ಸುಲಭವಾಗಿ ಮಾಡುಬಹುದು ವೈನ್, ಇಲ್ಲಿದೆ ರೆಸಿಪಿ ಟಿಪ್ಸ್

ಮಂಗಳವಾರ ಒಂದು ದಿನ ಹೊರತು ಪಡಿಸಿ ವಾರದ ಉಳಿದೆಲ್ಲಾ ದಿನ ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯ ವರೆಗೆ ತೆರೆದಿರುತ್ತದೆ. 28 ಬಗೆಯ ಟೀಗಳು 15 ರೂಪಾಯಿಂದ 90 ರೂಪಾಯಿಗಳ ವರೆಗಿನ ಟೀಗಳನ್ನು ಕಾಣಬಹುದು. ಜೊತೆಗೆ 8 ಬಗೆಯ ಕಾಫಿ ಹಾಗೂ ಬಜ್ಜಿ ಬೋಂಡಗಳು ಕೈಗೆಟ್ಟಕುವ ದರದಲ್ಲಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 5:45 pm, Sat, 18 February 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!