AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Teachers Day 2023: ಶಿಕ್ಷಕರ ದಿನದಂದು ನಿಮ್ಮ ಗುರುಗಳಿಗೆ ಈ ರೀತಿ ಶುಭಾಶಯಗಳನ್ನು ತಿಳಿಸಿ

ಗುರುವನ್ನು ದೇವರಿಗೆ ಹೋಲಿಸಲಾಗುತ್ತದೆ. ಅಜ್ಞಾನದ ಕತ್ತಲೆಯಿಂದ ಜ್ಞಾನವೆಂಬ ಬೆಳಕಿನೆಡೆಗೆ ಕೊಂಡೊಯ್ದು ಬದುಕನ್ನು ಉತ್ತಮವಾಗಿ ರೂಪಿಸುವಲ್ಲಿ ಅವರು ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಯಾವುದೇ ಸ್ವಾರ್ಥವಿಲ್ಲದೆ ವಿದ್ಯಾರ್ಥಿ ಜೀವನವನ್ನು ಸಕರಾತ್ಮಕತೆಯತ್ತ ಕೊಂಡೊಯ್ಯುವಲ್ಲಿ ಪೋಷಕರ ನಂತರ ಶಿಕ್ಷಕರು ಮಾತ್ರ ಸಹಾಯ ಮಾಡಬಲ್ಲರು. ಹೀಗೆ ನಿಮ್ಮ ಭವಿಷ್ಯವನ್ನು ರೂಪಿಸಿದ ಶಿಕ್ಷಕರಿಗೆ ಧನ್ಯವಾದವನ್ನು ತಿಳಿಸುವ ಮೂಲಕ ಈ ರೀತಿಯಾಗಿ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ಕೋರಿ.

Teachers Day 2023: ಶಿಕ್ಷಕರ ದಿನದಂದು ನಿಮ್ಮ ಗುರುಗಳಿಗೆ  ಈ ರೀತಿ ಶುಭಾಶಯಗಳನ್ನು ತಿಳಿಸಿ
ಶಿಕ್ಷಕರ ದಿನಾಚರಣೆImage Credit source: jobstamil
ಮಾಲಾಶ್ರೀ ಅಂಚನ್​
| Edited By: |

Updated on: Sep 05, 2023 | 10:20 AM

Share

ಪ್ರತಿವರ್ಷ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನ (Teachers Day)ವನ್ನು ಆಚರಿಸಲಾಗುತ್ತದೆ. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ. ಶಿಕ್ಷಕರ ದಿನಾಚರಣೆ ಕೇವಲ ಒಂದು ಆಚರಣೆಯಲ್ಲ. ನಮ್ಮ ಜೀವನದಲ್ಲಿ ಶಿಕ್ಷಕರ ಮಹತ್ವವನ್ನು ನೆನೆಪಿಸಿಕೊಳ್ಳುವ ದಿನ. ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವಲ್ಲಿ ಶಿಕ್ಷಕರ ನಿಸ್ವಾರ್ಥ ಸೇವೆ, ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಅವರ ಪಾತ್ರ ಮತ್ತು ಒಟ್ಟಾರೆಯಾಗಿ ವ್ಯಕ್ತಿಗಳು ಮತ್ತು ಸಮಾಜದ ಮೇಲೆ ಶಿಕ್ಷಕರು ಬೀರುವ ಸಕರಾತ್ಮಕ ಪ್ರಭಾವವನ್ನು ಗುರುತಿಸುವ ದಿನವಾಗಿದೆ. ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಶಿಕ್ಷಕರಿಗೆ ಧನ್ಯವಾದವನ್ನು ತಿಳಿಸುವ ಮೂಲಕ ಈ ರೀತಿಯಾಗಿ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ.

ನಿಮ್ಮ ನೆಚ್ಚಿನ ಗುರುಗಳಿಗೆ ಶಿಕ್ಷಕರ ದಿನದಂದು ಹೀಗೆ ಶುಭಾಶಯಗಳನ್ನು ಕೋರಿ:

  1. ಗುರುಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ ಗುರು ಸಾಕ್ಷಾತ್ ಪರ ಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ ನನಗೆ ಜ್ಞಾನ ಮತ್ತ ಜೀವನದ ಮೌಲ್ಯವನ್ನು ಕಲಿಸಿದ ಗುರುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು
  2. ತಾಯಿ ಜೀವ ಕೊಡುತ್ತಾಳೆ, ತಂದೆ ಭದ್ರತೆ ನೀಡುತ್ತಾರೆ,ಆದರೆ ಶಿಕ್ಷಕರು ಈ ಸಮಾಜದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಕಲಿಸುತ್ತಾರೆ. ನನ್ನ ಜೀವನವನ್ನು ರೂಪಿಸಿದ ನನ್ನ ನೆಚ್ಚಿನ ಶಿಕ್ಷಕರಾದ ನಿಮಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.
  3. ನನಗೆ ಜೀವನ ಪಾಠವನ್ನು ಕಲಿಸಿದಂತಹ, ನನ್ನ ಪ್ರತಿಯೊಂದು ಹೆಜ್ಜೆಯಲ್ಲೂ ನನಗೆ ಬೆನ್ನೆಲುಬಾಗಿ ನಿಂತ ನನ್ನ ತಂದೆ ತಾಯಿ, ಗುರುಗಳು ಮತ್ತು ನನ್ನ ಸ್ನೇಹಿತರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.
  4.  ಅಜ್ಞಾನದ ಕತ್ತಲೆಯಿಂದ ಜ್ಞಾನವೆಂಬ ಬೆಳಕನ್ನು ಬೆಳಗಿಸಿದ ನನ್ನೆಲ್ಲಾ ಗುರುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.
  5. ನೀವು ಕೇವಲ ಶಿಕ್ಷಕರಲ್ಲ; ನೀವು ನನ್ನ ಸ್ನೇಹಿತ ನನ್ನ ಮಾರ್ಗದರ್ಶಿ, ಸದಾ ನನ್ನ ಏಳಿಗೆಯನ್ನು ಬಯಸುವ ನನ್ನ ನೆಚ್ಚಿನ ಗುರುಗಳಿಗೆ ಶಿಕ್ಷಕರ ದಿನದ ಶುಭಾಶಯಗಳು
  6. ನನ್ನನ್ನು ತಿದ್ದಿ ತೀಡಿ, ನನ್ನೆಲ್ಲಾ ಸಾಧನೆಗೆ ಸ್ಪೂರ್ತಿಯಾಗಿ ನಿಂತ, ನನ್ನ ಎಲ್ಲಾಗುರುಗಳಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.
  7. ಗುರಿಯನ್ನು ಸಾಧಿಸಲು ನೀವು ನನಗೆ ಬೆಂಬಲ ನೀಡಿದ್ದೀರೀ. ಪ್ರತಿ ಬಾರಿಯೂ ನಾನು ಸೋಲನುಭವಿಸಿದಾಗಲೆಲ್ಲಾ ನೀವು ನನಗೆ ಧೈರ್ಯ ತುಂಬಿದ್ದೀರಿ. ಶಿಕ್ಷಕರ ದಿನಾಚರಣೆಯ ಶುಭಾಶಯಗಳು
  8. ನಮಗೆ ಜ್ಞಾನವನ್ನು ನೀಡಿ, ಉತ್ತಮ ಭವಿಷ್ಯಕ್ಕಾಗಿ ನಮ್ಮನ್ನು ಸಿದ್ಧಗೊಳಿಸಿದ ಎಲ್ಲಾ ಗುರುಗಳಿಗೆ ನನ್ನ ಕೃತಜ್ಞತೆಗಳು, ನನ್ನೆಲ್ಲಾ ನೆಚ್ಚಿನ ಗುರುಗಳಿಗೆ ಶಿಕ್ಷಕರ ದಿನದ ಶುಭಾಶಯಗಳು.
  9.  ಜೀವನದಲ್ಲಿ ಶಿಸ್ತು, ಏನಾದರೂ ಸಾಧಿಸಬೇಕೆಂಬ ಹಠವನ್ನು ಕಲಿಸಿದ ನಿಮಗೆ ಶಿಕ್ಷಕರ ದಿನದ ಶುಭಾಶಯಗಳು

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​  ಮಾಡಿ: 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!