AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಮಲಗುವ ಹಾಸಿಗೆಯು ನಿಮ್ಮ ಆರೋಗ್ಯದ ಮೇಲೆ ಹೇಗೆಲ್ಲಾ ಪರಿಣಾಮ ಬೀರುತ್ತೆ ಗೊತ್ತೇ?

ನೀವು ಬಹಳ ಹೊತ್ತು ಹಾಸಿಗೆಯ ಮೇಲೆ ಮಲಗಿದ್ದರೂ ಕೂಡ ನಿದ್ದೆ ಬಾರದಿರುವುದು ಆಥವಾ ತಡವಾಗಿ ನಿದ್ದೆ ಬರುವುದು, ಬೆನ್ನುನೋವು ಇನ್ನಿತರ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದೀರಾ?

ನೀವು ಮಲಗುವ ಹಾಸಿಗೆಯು ನಿಮ್ಮ ಆರೋಗ್ಯದ ಮೇಲೆ  ಹೇಗೆಲ್ಲಾ ಪರಿಣಾಮ ಬೀರುತ್ತೆ ಗೊತ್ತೇ?
ಸಾಂದರ್ಭಿಕ ಚಿತ್ರ Image Credit source: Google
TV9 Web
| Edited By: |

Updated on:Dec 04, 2022 | 6:15 PM

Share

ನೀವು ಬಹಳ ಹೊತ್ತಿನಿಂದಲೂ ಹಾಸಿಗೆಯ ಮೇಲೆ ನಿದ್ದೆ ಬಾರದಿರುವುದು ಆಥವಾ ತಡವಾಗಿ ನಿದ್ದೆ ಬರುವುದು, ಬೆನ್ನುನೋವು ಇನ್ನಿತರ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರೆ ನಿಮ್ಮ ಹಾಸಿಗೆಯನ್ನು ಬದಲಾಯಿಸುವ ಸಮಯ ಬಂದಿದೆ ಎಂದರ್ಥ.

ನಿಮ್ಮ ಹಾಸಿಗೆ ಎಷ್ಟು ಹಳೆಯದು? ಮೊದಲಿಗೆ, ನಿಮ್ಮ ಹಾಸಿಗೆ ಎಷ್ಟು ಹಳೆಯದು ಎಂಬುದನ್ನು ನೀವೇ ತಿಳಿದುಕೊಳ್ಳವುದು ಅತ್ಯಂತ ಅಗತ್ಯವಾಗಿದೆ. ನೀವು ಹಾಸಿಗೆಯನ್ನು ಖರೀದಿಸಿ ಹತ್ತು ವರ್ಷಗಳು ಕಳೆದಿದ್ದರೆ ಅದು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಕನಿಷ್ಟ ಏಳು ವರ್ಷಗಳ ಕಾಲ ಒಂದೇ ಹಾಸಿಗೆಯನ್ನು ಬಳಸುವುದು ಸೂಕ್ತ.

ವರ್ಷಗಳು ಕಳೆದಂತೆ ನೀವು ಬಳಸುವ ಹಾಸಿಗೆಯ ಗುಣಮಟ್ಟವು ಕಳೆದು ಹೋಗುವುದರಿಂದ ನಿಮ್ಮ ದೇಹದ ಭಾಗಗಳಲ್ಲಿ ತೋಳುಗಳು, ಕಾಲುಗಳು ನೋವು ಬರುವ ಸಾಧ್ಯತೆ ಹೆಚ್ಚಿದೆ. ಇದರಿಂದಾಗಿ ನಿದ್ರಾಹೀನತೆಯು ಉಂಟಾಗುತ್ತದೆ.

ಕಲೆಗಳು ಅಥವಾ ವಾಸನೆ: ನಿಮ್ಮ ಹಾಸಿಗೆ ಕಲೆಗಳು ಅಥವಾ ಅಸಹ್ಯ ವಾಸನೆಯನ್ನು ಹೊಂದಿದೆಯೇ? ಒಂದು ನೀವು ನಿಮ್ಮ ಹಾಸಿಗೆಯನ್ನು ಸ್ವಚ್ಚಗೊಳಿಸಬೇಕು. ಹಾಸಿಗೆ ತುಂಬಾ ಹಳೆಯದಾಗಿದ್ದರೆ ಬದಲಾಯಿಸಿ. ಯಾಕೆಂದರೆ ಬಹಳಷ್ಟು ಬ್ಯಾಕ್ಟೀರಿಯಾ, ಧೂಳು ಮತ್ತು ದೇಹದ ದ್ರವಗಳನ್ನು ಹಾಸಿಗೆ ಹೀರಿಕೊಂಡಿರುತ್ತದೆ. ಇದು ನಿಮ್ಮ ದೇಹದಲ್ಲಿ ಸೋಂಕು ಹರಡಲು ಕಾರಣವಾಗಬಹುದು.

ಬ್ಯಾಕ್ಟೀರಿಯಾ: ಇದಲ್ಲದೆ, ಒದ್ದೆಯಾದ ಕೂದಲಿನೊಂದಿಗೆ ಮಲಗುವುದು ತುಂಬಾ ಅನೈರ್ಮಲ್ಯ. ಯಾಕೆಂದರೆ ನಿಮ್ಮ ಒದ್ದೆ ಕೂದಲಿನ ನೀರನ್ನು ದಿಂಬು ಹಾಗೂ ಹಾಸಿಗೆ ಹೀರಿಕೊಳ್ಳುತ್ತದೆ. ಇದರಿಂದಾಗಿ ಬ್ಯಾಕ್ಟೀರಿಯಾಗಳ ಸಂತಾನೋತ್ಪತ್ತಿಗೆ ಕಾರಣವಾಗಬಹುದು. ಬೆವರು, ಸತ್ತ ಚರ್ಮದ ಕೋಶಗಳು ಮತ್ತು ತೈಲಗಳು ನಿಮ್ಮ ಹಾಸಿಗೆಯಲ್ಲಿ ಉಳಿದುಕೊಳ್ಳುತ್ತದೆ. ಇದರಿಂದಾಗಿ ವಾಸನೆಯ ಜೊತೆಗೆ ಬ್ಯಾಕ್ಟೀರಿಯಾಗಳು ಉಂಟಾಗಲು ಕಾರಣವಾಗುತ್ತದೆ.

ಇದನ್ನು ಓದಿ: ರಾತ್ರಿ ವೇಳೆ ಒದ್ದೆ ಕೂದಲಿನೊಂದಿಗೆ ಎಂದಿಗೂ ಮಲಗಬೇಡಿ

ಬೆನ್ನು ನೋವು: ಮೆತ್ತನೆಯ ಹಾಸಿಗೆಯು ಒಳ್ಳೆಯ ನಿದ್ದೆಯನ್ನು ನೀಡುತ್ತದೆ. ಅದರಿಂದ ಉತ್ತಮ ಗುಣ ಮಟ್ಟದ ಮೆತ್ತನೆಯ ಮೃದುವಾದ ಹಾಸಿಗೆಯನ್ನು ಆಯ್ಕೆ ಮಾಡುವುದು ಅತ್ಯಂತ ಅಗತ್ಯವಾಗಿದೆ. ಇಲ್ಲದಿದ್ದರೆ ಸರಿಯಾಗಿ ನಿದ್ದೆ ಬರದೇ ಇರುವುದು ಹಾಗೂ ಬೆನ್ನು ನೋವಿನಂತಹ ಕಾಯಿಲೆಗೆ ಕಾರಣವಾಗಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 6:11 pm, Sun, 4 December 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ