AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಟ್​​ನೆಸ್​​ ಕಾಪಾಡಿಕೊಳ್ಳಲು ಯಾವಾಗ ವ್ಯಾಯಾಮ ಮಾಡಬೇಕು? ಬೆಳಿಗ್ಗೆ ಅಥವಾ ಸಂಜೆ?

ಒತ್ತಡದ ಜೀವನದ ಮಧ್ಯೆ ಪ್ರತೀ ದಿನ ಕನಿಷ್ಟ 30 ನಿಮಿಷವಾದರೂ ವ್ಯಾಯಾಮಗಳಿಗೆ ಸಮಯ ಮೀಸಲಿಡಿ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಕೆಲವರು ಹಗಲಿನಲ್ಲಿ ವ್ಯಾಯಾಮ ಮಾಡಲು ಇಷ್ಟಪಡುತ್ತಾರೆ, ಇನ್ನು ಕೆಲವರು ಸಂಜೆಯ ಹೊತ್ತು ವ್ಯಾಯಾಮ ಮಾಡಲು ಸಮಯ ಮೀಸಲಿಡುತ್ತಾರೆ. ಆದ್ದರಿಂದ ಬೆಳಿಗ್ಗೆ ಅಥವಾ ಸಂಜೆ ಯಾವ ಸಮಯದಲ್ಲಿ ವ್ಯಾಯಾಮ ಮಾಡುವುದು ಹೆಚ್ಚು ಪ್ರಯೋಜನಕಾರಿ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಫಿಟ್​​ನೆಸ್​​ ಕಾಪಾಡಿಕೊಳ್ಳಲು ಯಾವಾಗ ವ್ಯಾಯಾಮ ಮಾಡಬೇಕು? ಬೆಳಿಗ್ಗೆ ಅಥವಾ ಸಂಜೆ?
ಅಕ್ಷತಾ ವರ್ಕಾಡಿ
|

Updated on: Nov 02, 2023 | 4:38 PM

Share

ವ್ಯಾಯಾಮವು ನಿಮ್ಮನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿರಿಸುತ್ತದೆ. ಹೆಚ್ಚಿನ ಜನರಿಗೆ ವ್ಯಾಯಾಮ ಮಾಡಲು ಸಾಕಷ್ಟು ಸಮಯ ಇರುವುದಿಲ್ಲ ಮತ್ತು ಆದ್ದರಿಂದ ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ವ್ಯಾಯಾಮ ಮಾಡುತ್ತಾರೆ. ಕೆಲವರು ಹಗಲಿನಲ್ಲಿ ವ್ಯಾಯಾಮ ಮಾಡಲು ಇಷ್ಟಪಡುತ್ತಾರೆ, ಇನ್ನು ಕೆಲವರು ಸಂಜೆಯ ಹೊತ್ತು ವ್ಯಾಯಾಮ ಮಾಡಲು ಸಮಯ ಮೀಸಲಿಡುತ್ತಾರೆ. ಆದ್ದರಿಂದ ಬೆಳಿಗ್ಗೆ ಅಥವಾ ಸಂಜೆ ಯಾವ ಸಮಯದಲ್ಲಿ ವ್ಯಾಯಾಮ ಮಾಡುವುದು ಹೆಚ್ಚು ಪ್ರಯೋಜನಕಾರಿ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಯಾವ ಸಮಯದಲ್ಲಿ ವ್ಯಾಯಾಮ ಮಾಡುವುದು ಹೆಚ್ಚು ಪ್ರಯೋಜನಕಾರಿ ಎಂಬ ಪ್ರಶ್ನೆಗೆ ಯೋಗ ತಜ್ಞರಾದ ಮಹಾಕ್ ದೀಪ್ ಅವರು ಕೆಲವು ಸಲಹೆ ನೀಡಿದ್ದಾರೆ.

ಬೆಳಿಗ್ಗೆ ವ್ಯಾಯಾಮ ಮಾಡುವುದು:

ಬೆಳಗಿನ ವ್ಯಾಯಾಮವು ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ಮನಸ್ಥಿತಿಯನ್ನು ಸುಧಾರಿಸುತ್ತದೆ. ಇದರೊಂದಿಗೆ ನಿದ್ರೆಯ ಗುಣಮಟ್ಟವೂ ಸುಧಾರಿಸುತ್ತದೆ. ಆದ್ದರಿಂದ ಬೆಳಗಿನ ವ್ಯಾಯಾಮವು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸುಧಾರಿಸುವಲ್ಲಿ ಪ್ರಯೋಜನಕಾರಿಯಾಗಿದೆ.

ಸಂಜೆ ವ್ಯಾಯಾಮ ಮಾಡುವುದು:

ಸಂಜೆಯ ವ್ಯಾಯಾಮವು ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ ಮತ್ತು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಸಂಜೆ ವ್ಯಾಯಾಮ ಮಾಡುವುದರಿಂದ, ವ್ಯಕ್ತಿಯು ಒತ್ತಡದಿಂದ ಮುಕ್ತನಾಗುತ್ತಾನೆ ಮತ್ತು ದಿನದ ಸವಾಲುಗಳಿಂದ ಪರಿಹಾರವನ್ನು ಪಡೆಯುವ ಅವಕಾಶವನ್ನು ಪಡೆಯುತ್ತಾನೆ. ಶಕ್ತಿ ಮತ್ತು ನಮ್ಯತೆಯ ಮೇಲೆ ಹೆಚ್ಚು ಗಮನಹರಿಸುವವರಿಗೆ ಸಂಜೆಯ ವ್ಯಾಯಾಮ ಹೆಚ್ಚು ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ: ಸಂತೋಷದ ಹಾರ್ಮೋನು ಹೆಚ್ಚಿಸಲು, ನೈಸರ್ಗಿಕ ಒತ್ತಡ ನಿವಾರಿಸಲು ಇಲ್ಲಿದೆ ಸುಲಭ ಮಾರ್ಗ 

ಆದ್ದರಿಂದ ಒತ್ತಡದ ಜೀವನದಲ್ಲಿ ಪ್ರತೀ ದಿನ ಕನಿಷ್ಟ 30 ನಿಮಿಷವಾದರೂ ವ್ಯಾಯಾಮಗಳಿಗೆ ಸಮಯ ಮೀಸಲಿಡಿ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಬೆಳಿಗ್ಗೆ 6ರಿಂದ 7 ಗಂಟೆಯ ನಡುವೆ ಹಾಗೂ ಸಂಜೆಯ ಹೊತ್ತು 5.30ರಿಂದ 6.30ರ ಒಳಗಡೆ ವ್ಯಾಯಾಮದಲ್ಲಿ ತೊಡಗಿಸಿಕೊಳ್ಳುವುದು ಉತ್ತಮ. ಇದು ನಿಮ್ಮ ಮಾನಸಿಕ ಆರೋಗ್ಯದ ಜೊತೆಗೆ ದೈಹಿಕ ಆರೋಗ್ಯವನ್ನು ಕಾಪಾಡುವಲ್ಲಿ ಸಹಕಾರಿಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..