AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day 2024: ಭಾರತೀಯರ ಪಾಲಿಗೆ ಹೆಮ್ಮೆಯ ದಿನ ಗಣರಾಜ್ಯೋತ್ಸವ, ಈ ದಿನದ ಮಹತ್ವ ಹಾಗೂ ಇತಿಹಾಸ

ಭಾರತೀಯ ಪಾಲಿಗೆ ಜನವರಿ 26 ಹೆಮ್ಮೆಯ ದಿನವಾಗಿದ್ದು, ಸ್ವಾತಂತ್ರ್ಯ ಸಿಕ್ಕ ದಿನವನ್ನು ಎಷ್ಟು ಸಂಭ್ರಮದಿಂದ ಆಚರಿಸುತ್ತೇವೋ ಅಷ್ಟೇ ಸಂಭ್ರಮದಿಂದ ಈ ದಿನವನ್ನು ಆಚರಿಸುತ್ತೇವೆ. ದೇಶದ ಸಂವಿಧಾನ ಅಸ್ತಿತ್ವಕ್ಕೆ ಬಂದ ದಿನವಾಗಿದ್ದು, ಜನವರಿ 26 ರಂದು ಈ ಐತಿಹಾಸಿಕ ಕ್ಷಣವನ್ನು ಆಚರಿಸುವ ಮೂಲಕ ನೆನಪಿಸಿಕೊಳ್ಳುತ್ತೇವೆ. ಈ ವರ್ಷ 75ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸುತ್ತಿದ್ದು, ಈ ದಿನದ ಮಹತ್ವ ಹಾಗೂ ಇತಿಹಾಸದ ಬಗೆಗಿನ ಮಾಹಿತಿ ಇಲ್ಲಿದೆ.

Republic Day 2024: ಭಾರತೀಯರ ಪಾಲಿಗೆ ಹೆಮ್ಮೆಯ ದಿನ ಗಣರಾಜ್ಯೋತ್ಸವ, ಈ ದಿನದ ಮಹತ್ವ ಹಾಗೂ ಇತಿಹಾಸ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jan 24, 2024 | 6:27 PM

Share

ಭಾರತವು ವಿಶ್ವದಲ್ಲೇ ಅತಿದೊಡ್ಡ ಲಿಖಿತ ಸಂವಿಧಾನವನ್ನು ಹೊಂದಿದ್ದು, ಪ್ರಜೆಗಳಿಂದಲೇ, ಪ್ರಜೆಗಳಿಗಾಗಿಯೇ ಪ್ರಜೆಗಳಿಗೊಸ್ಕರವೇ ನಡೆಸುವ ಆಡಳಿತವೇ ಪ್ರಜಾಪ್ರಭುತ್ವವಾಗಿದೆ. ಪ್ರಜೆಗಳನ್ನು ಪ್ರಭುಗಳೆಂದೇ ಭಾವಿಸುವ ದೇಶವು ಭಾರತವಾಗಿದೆ. 1947 ರಲ್ಲಿ ಸ್ವಾತಂತ್ರ್ಯ ಸಿಕ್ಕಿದರೂ ಕೂಡ ನಮ್ಮ ದೇಶವು ಸಂವಿಧಾನವನ್ನು ಹೊಂದಿರಲಿಲ್ಲ. 26 ಜನವರಿ 1950 ರಂದು ಸಂವಿಧಾನವನ್ನು ಸ್ಥಾಪನೆ ಮಾಡಿದ ದಿನವಾಗಿದ್ದು, ಇದರ ಗೌರವಾರ್ಥವಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.

ಗಣರಾಜ್ಯೋತ್ಸವ ದಿನದ ಇತಿಹಾಸ

1950ರ ಜನವರಿ 26ರಂದು ಸಂವಿಧಾನವನ್ನು ಅಂಗೀಕರಿಸುವ ಮೂಲಕ ಗಣರಾಜ್ಯ ಎಂದು ಘೋಷಿಸಲ್ಪಟ್ಟ ದಿನವಾಗಿದೆ. ದೇಶದ ಮೊದಲ ಸಂವಿಧಾನ ಸಭೆ 1946ರ ಡಿಸೆಂಬರ್‌ 9ರಂದು ತನ್ನ ಮೊದಲ ಅಧಿವೇಶನ ನಡೆಸಿತ್ತು. ಕೊನೆಯ ಅಧಿವೇಶನ 1949ರ ನವೆಂಬರ್‌ 26ರಂದು ನಡೆದಿತ್ತು. ಡಾ.ಬಿ.ಆರ್.‌ ಅಂಬೇಡ್ಕರ್‌ ನೇತೃತ್ವದ ಸಂವಿಧಾನ ರಚನಾ ಸಮಿತಿ ರಚಿಸಿದ ಸಂವಿಧಾನವನ್ನು ಒಂದು ವರ್ಷದ ಬಳಿಕ ಅಂಗೀಕರಿಸಲಾಯಿತು. ಹೀಗಾಗಿ 26 ಜನವರಿ 1950 ರಂದು ಸಂವಿಧಾನ ಜಾರಿಗೆ ಬಂದಿತು. ಅಂದಿನ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್​​ ಭಾರತದ ಬಾವುಟವನ್ನು ಹಾರಿಸಿ ಸಂವಿಧಾನ ಜಾರಿಗೆ ಬಂದ ದಿನವನ್ನು ಘೋಷಿಸಿದ್ದರು.

ಇದನ್ನೂ ಓದಿ: ದೆಹಲಿ ಗಣರಾಜ್ಯೋತ್ಸವ ಪರೇಡ್​, 1,500ಕ್ಕೂ ಅಧಿಕ ರೈತರಿಗೆ ಆಹ್ವಾನ

ಗಣರಾಜ್ಯೋತ್ಸವ ದಿನದ ಮಹತ್ವ ಹಾಗೂ ಆಚರಣೆ

ರಾಜಪ್ರಭುತ್ವವು ಅಂತ್ಯವಾಗಿ ಭಾರತದಲ್ಲಿ ಸಂವಿಧಾನವನ್ನು ಸ್ಥಾಪಿಸಿದ ದಿನವಾಗಿದ್ದು, ಪ್ರತಿ ವರ್ಷವು ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಗುತ್ತದೆ. ಗಣರಾಜ್ಯೋತ್ಸವದಂದು ನವದೆಹಲಿಯಲ್ಲಿ, ಇಂಡಿಯಾ ಗೇಟ್‌ನಲ್ಲಿ ಭಾರತದ ರಾಷ್ಟ್ರಪತಿಗಳಿಂದ ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತದೆ. ನವದೆಹಲಿಯ ರಾಜ್‌ಪಥ್‌ನಲ್ಲಿ ನಡೆಯುತ್ತದೆ. ಭಾರತದ ರಾಷ್ಟ್ರೀಯ ಸೇನೆಯನ್ನು ಒಳಗೊಂಡ ಪರೇಡ್, ರಾಜ್ಯಗಳ ಸಂಸ್ಕೃತಿಯನ್ನು ಬಿಂಬಿಸುವ ಟ್ಯಾಬ್ಲೋಗಳು ಈ ಮೆರವಣಿಗೆಯಲ್ಲಿ ಕಣ್ಮನ ಸೆಳೆಯುತ್ತವೆ. ಈ ದಿನ ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಹುತಾತ್ಮರಿಗೆ ಗೌರವ ನೀಡಲಾಗುತ್ತದೆ. ದೇಶದಾದಂತ್ಯ ಶಾಲೆ ಕಾಲೇಜು ಮತ್ತು ಸರ್ಕಾರಿ ಕಚೇರಿಗಳು ಸೇರಿದಂತೆ ಹಲವೆಡೇ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಗುತ್ತದೆ. ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗಾಗಿ ಭಾಷಣ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ