AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggery Water: ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲದ ನೀರು ಸೇವಿಸುವುದರಿಂದ ಲಭಿಸುತ್ತೆ ಹಲವು ಪ್ರಯೋಜನಗಳು

ಬೆಲ್ಲವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದನ್ನು ನೀರಿನೊಂದಿಗೆ ಬೆರೆಸಿ ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ, ಬೆಲ್ಲದ ನೀರು ಕುಡಿಯುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ.

Jaggery Water: ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲದ ನೀರು ಸೇವಿಸುವುದರಿಂದ ಲಭಿಸುತ್ತೆ ಹಲವು ಪ್ರಯೋಜನಗಳು
Drinking jaggery waterImage Credit source: Pinterest
ಮಾಲಾಶ್ರೀ ಅಂಚನ್​
| Edited By: |

Updated on:Sep 07, 2023 | 4:25 PM

Share

ಬೆಲ್ಲ ನೈಸರ್ಗಿಕ ಸಿಹಿಕಾರಕವಾಗಿದ್ದು, ಇದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಬೆಲ್ಲದಿಂದ ಚಹಾ ಮತ್ತು ಹಲವು ಖಾದ್ಯಗಳನ್ನು ತಯಾರಿಸಲಾಗುತ್ತದೆ. ಬೆಲ್ಲವು ಪೊಟ್ಯಾಸಿಯಂ, ಕ್ಯಾಲ್ಸಿಯಂ, ಸತು, ರಂಜಕ ಮತ್ತು ತಾಮ್ರದಂತಹ ಜೀವಸತ್ವಗಳು ಮತ್ತು ಖನಿಜಗಳಿಂದ ಕೂಡಿದೆ. ಆದ್ದರಿಂದ ಬೆಲ್ಲದ ಸೇವನೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಆಯುರ್ವೇದದ ಪ್ರಕಾರ ಬಿಸಿನೀರಿಗೆ ಬೆಲ್ಲವನ್ನು ಬೆರೆಸಿ ಕುಡಿಯುವುದರಿಂದ, ಅದು ನೈಸರ್ಗಿಕ ಜೀರ್ಣಕಾರಿ ಕಿಣ್ವಗಳನ್ನು ಹೆಚ್ಚಿಸುತ್ತದೆ, ಜೀರ್ಣಕ್ರಿಯೆಯನ್ನು ವೇಗಗೊಳಿಸುತ್ತದೆ ಹಾಗೂ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಹಾಗಾದರೆ ಬೆಳಗ್ಗೆ ಬೆಲ್ಲದ ನೀರನ್ನು ಕುಡಿಯುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ದೊರೆಯುತ್ತದೆ ಮತ್ತು ಅದನ್ನು ಹೇಗೆ ತಯಾರಿಸುವುದು ಎಂಬುದನ್ನು ತಿಳಿಯೋಣ.

ಬೆಲ್ಲದ ನೀರನ್ನು ಹೇಗೆ ತಯಾರಿಸುವುದು:

ರಾತ್ರಿ ಒಂದು ಲೋಟ ನೀರಿನಲ್ಲಿ ಬೆಲ್ಲದ ತುಂಡು ಹಾಕಿ ಮತ್ತು ಅದರಲ್ಲಿ ಸ್ವಲ್ಪ ಪುದೀನ ಮತ್ತು ಕೊತ್ತಂಬರಿ ಸೊಪ್ಪನ್ನು ಹಾಕಿ. ಮರುದಿನ ಬೆಳಗ್ಗೆ ಈ ಎಲ್ಲಾ ಪದಾರ್ಥಗಳನ್ನು ಚೆನ್ನಾಗಿ ಬೆರೆಸಿ ಮತ್ತು ಅದಕ್ಕೆ ನಿಂಬೆ ರಸವನ್ನು ಸೇರಿಸಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.

ಬೆಲ್ಲದ ನೀರು ಕುಡಿಯುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳು:

ಮೂಳೆಗಳು ಬಲಗೊಳ್ಳುತ್ತವೆ:

ಸಾಮಾನ್ಯವಾಗಿ ಹೆಚ್ಚಿನ ಜನರಲ್ಲಿ ಸಂಧಿವಾತ ಮತ್ತು ಅಸ್ಟಿಯೊಪೊರೋಸಿಸ್ ನಂತಹ ಮೂಳೆ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ನಿತ್ಯವೂ ಬೆಲ್ಲವನ್ನು ಸೇವಿಸಿದರೆ ಮೂಳೆಗಳು ಬಲಗೊಳ್ಳುತ್ತವೆ. ಬೆಲ್ಲವು ಉರಿಯೂತ ವಿರೋಧಿ ಗುಣಲಕ್ಷಣಣವನ್ನು ಹೊಂದಿದ್ದು, ಇದು ನೋವು ಕಡಿಮೆ ಮಾಡಲು ಸಹಕಾರಿಯಾಗಿದೆ. ಆದ್ದರಿಂದ ಮೂಳೆ ಸಂಬಂಧಿ ರೋಗಗಳನ್ನು ತಡೆಗಟ್ಟಲು ಬೆಲ್ಲದ ನೀರನ್ನು ತೆಗೆದುಕೊಳ್ಳುವಂತೆ ಆಯುರ್ವೇದ ತಜ್ಞರು ಶಿಫಾರಸು ಮಾಡುತ್ತಾರೆ.

ಚರ್ಮಕ್ಕೆ ತುಂಬಾ ಪ್ರಯೋಜನಕಾರಿ:

ಪ್ರತಿದಿನ ಬೆಲ್ಲದ ನೀರನ್ನು ಸೇವನೆ ಮಾಡುವುದರಿಂದ ತ್ವಚೆಗೆ ಹಲವಾರು ಪ್ರಯೋಜನಗಳು ದೊರೆಯುತ್ತದೆ. ಇದು ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತ ವಿರೋಧಿ ಗುಣಲಕ್ಷಣಗಳನ್ನು ಹೊಂದಿದ್ದು, ಇದು ಚರ್ಮದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರೊಂದಿಗೆ ತ್ವಚೆಯನ್ನು ಹೊಳೆಯುವಂತೆ ಮಾಡಲು ಇದು ಸಹಕಾರಿಯಾಗಿದೆ.

ಇದನ್ನೂ ಓದಿ: ಡ್ರ್ಯಾಗನ್ ಫ್ರೂಟ್​​​ನ ಯಾಕೆ ಸೂಪರ್​​​​​ಪುಡ್​​​​​ ಎನ್ನುತ್ತಾರೆ? ಕಾರಣಗಳು ಇಲ್ಲಿವೆ

ದೇಹದಿಂದ ವಿಷವನ್ನು ಹೊರಹಾಕಲು ಸಹಕಾರಿ:

ಬೆಲ್ಲವು ದೇಹವನ್ನು ಶುದ್ಧೀಕರಿಸುವಲ್ಲಿ ಸಹಾಯ ಮಾಡುವ ಗುಣಗಳನ್ನು ಹೊಂದಿದೆ. ಇದು ನೈಸರ್ಗಿಕವಾಗಿ ದೇಹದಿಂದ ವಿಷವನ್ನು ಹೊರಹಾಕುತ್ತದೆ. ರಕ್ತವನ್ನು ಶುದ್ಧೀಕರಿಸುತ್ತದೆ, ಯಕೃತ್ತನ್ನು ಶುದ್ಧಗೊಳಿಸುತ್ತದೆ. ಅದಕ್ಕಾಗಿಯೇ ಆಯುರ್ವೇದ ತಜ್ಞರು ದೇಹವನ್ನು ನಿರ್ವಿಷಗೊಳಿಸಲು ಬೆಲ್ಲದ ನೀರಿನ ಸಹಾಯವನ್ನು ತೆಗೆದುಕೊಳ್ಳುವಂತೆ ಶಿಫಾರಸು ಮಾಡುತ್ತಾರೆ. ಪ್ರತಿದಿನ ಬೆಳಗ್ಗೆ ಈ ನೀರನ್ನು ಕುಡಿದರೆ ದೇಹದಿಂದ ಹಾನಿಕಾರಕ ಅಂಶಗಳು ಹೊರಹೋಗುತ್ತವೆ.

ಚಯಾಪಚಯ ಮತ್ತು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ:

ಬೆಲ್ಲವು ಮೆಗ್ನೇಸಿಯಂ, ವಿಟಮಿನ್ ಬಿ1, ವಿಟಮಿನ್ ಬಿ6 ಮತ್ತು ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದೆ. ಹಾಗೂ ಉತ್ಕರ್ಷಣ ನಿರೋಧಕಗಳು, ಸತು, ಸೆಲೆನಿಯಂ ನಂತಹ ಖನಿಜಗಳಿಂದ ಇದು ಸಮೃದ್ಧವಾಗಿದೆ. ಆದ್ದರಿಂದ ನೀವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲದ ನೀರನ್ನು ಸೇವಿಸಿದರೆ ಅದು ನಿಮ್ಮ ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ರಕ್ತಹೀನತೆಗೆ ಚಿಕಿತ್ಸೆ ನೀಡುತ್ತದೆ:

ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟ ಕಡಿಮೆಯಿದ್ದರೆ, ಬೆಲ್ಲದ ನೀರನ್ನು ಸೇವನೆ ಮಾಡುವುದು ಉತ್ತಮ. ಏಕೆಂದರೆ ಇದು ಕಬ್ಬಿಣ ಮತ್ತು ಫೋಲೇಟ್ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದು ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಗಿದೆ.

ದೇಹದ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಹಕಾರಿ:

ಬೆಲ್ಲದ ನೀರನ್ನು ಸೇವಿಸುವುದರಿಂದ ದೇಹದಲ್ಲಿ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದನ್ನು ಸೇವಿಸುವುದರಿಂದ ನೀವು ಹೆಚ್ಚು ಕ್ರೀಯಾಶೀಲರಾಗಿ ಮತ್ತು ಉಲ್ಲಾಸದಿಂದಿರುವಿರಿ. ಅದಕ್ಕಾಗಿಯೇ ಇದರ ಸೇವನೆಯು ಪ್ರಯೋಜನಕಾರಿಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 4:24 pm, Thu, 7 September 23

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!