Benefits Of Soacked Peanuts: ಪ್ರತಿದಿನ ನೆನೆಸಿದ ಶೇಂಗಾ ಬೀಜ ತಿಂದರೆ ಮೆದುಳು ಚುರುಕಾಗುತ್ತೆ

ಅನೇಕರು ನೆನೆಸಿದ ಬಾದಮಿ ಹಾಗೂ ಇತರ ಒಣಹಣ್ಣುಗಳನ್ನು ತಿನ್ನುವ  ಮೂಲಕ ತಮ್ಮ ದಿನವನ್ನು ಆರಂಭಿಸುತ್ತಾರೆ. ಆದರೆ ನೀವು ಎಂದಾದರೂ ನೆನೆಸಿದ ಶೇಂಗಾಬೀಜವನ್ನು ತಿಂದಿದ್ದೀರಾ? ಬಾದಮಿಯಂತೆ ನೆನೆಸಿದ ಶೇಂಗಾ ತಿನ್ನುವ ಮೂಲಕವೂ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. 

Benefits Of Soacked Peanuts: ಪ್ರತಿದಿನ ನೆನೆಸಿದ ಶೇಂಗಾ ಬೀಜ ತಿಂದರೆ ಮೆದುಳು ಚುರುಕಾಗುತ್ತೆ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 29, 2023 | 6:26 PM

ಕಡಲೆಕಾಯಿಯು ಪೌಷ್ಟಿಕಾಂಶ ಮತ್ತು ಅನೇಕ ಆರೋಗ್ಯ ಪ್ರಯೋಜನಗಳಿಂದ ಸಮೃದ್ಧವಾಗಿದೆ. ಶೇಂಗಾ ಬೀಜ ತಿನ್ನಲು  ರುಚಿಕರವಾದುದು ಮಾತ್ರವಲ್ಲದೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಇದು ವಿಟಮಿನ್ ಎ, ವಿಟಮಿ ಬಿ1, ಬಿ3, ಪ್ರೋಟೀನ್, ಕ್ಯಾಲಿಯಂ, ಫೈಬರ್, ಮೆಗ್ನೇಸಿಯಂ, ಪೊಟ್ಯಾಸಿಯಂ,  ಮತ್ತು ಆರೋಗ್ಯಕ ಕೊಬ್ಬುಗಳಲ್ಲಿ  ಸಮೃದ್ಧವಾಗಿದೆ.  ಸಾಮಾನ್ಯವಾಗಿ  ಕಡಲೆಕಾಯಿಯನ್ನು ಹುರಿದು ತಿನ್ನಲಾಗುತ್ತದೆ ಅಥವಾ ಅದರಿಂದ ವಿವಿದ ರೀತಿಯ ಖಾದ್ಯಗಳನ್ನು ತಯಾರಿಸಲಾಗುತ್ತದೆ.  ಆದರೆ ನೀವು ಎಂದಾದರೂ ನೆನೆಸಿದ ಕಡಲೆಕಾಯಿಯನ್ನು ಸೇವಿಸಿದ್ದೀರಾ?  ಬಾದಮಿಯಂತೆ ನೆನೆಸಿದ ಶೇಂಗಾದ ನಿಯಮಿತ ಸೇವನೆಯಿಂದ  ಕೂಡಾ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ನೆನೆಸಿದ ಶೇಂಗಾವನ್ನು ತಿನ್ನುವುದರಿಂದ ಲಭಿಸುವ ಪ್ರಯೋಜನಗಳು

ಮೆದುಳನ್ನು ಚುರುಕುಗೊಳಿಸುತ್ತದೆ:

ಬಾದಮಿಯಂತೆ ನೆನೆಸಿದ ಕಡಲೆಕಾಯಿಯನ್ನು ತಿನ್ನುವುದರಿಂದಲೂ ಮೆದುಳು ಚುರುಕಾಗುತ್ತದೆ. ಪ್ರತಿದಿನ ಬೆಳಗ್ಗೆ ಸ್ವಲ್ಪ ನೆನೆಸಿದ ಶೇಂಗಾವನ್ನು ತಿನ್ನುವ  ಮೂಲಕ  ಸ್ಮರಣಾಶಕ್ತಿಯನ್ನು ಸುಧಾರಿಸಬಹುದು. ಮತ್ತು ಇದು ಮೆದುಳಿನ ಸರಿಯಾದ ಕಾರ್ಯನಿರ್ವಹಣೆಗೆ ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆಯನ್ನು ಬಲಪಡಿಸುತ್ತದೆ:

ಶೇಂಗಾವನ್ನು ನೀರಿನಲ್ಲಿ ನೆನಸುವುದರಿಂದ ಅವುಗಳಲ್ಲಿನ ಫೈಟಿಕ್ ಆಮ್ಲದ ಪ್ರಮಾಣ ಕಡಿಮೆಯಾಗುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಕಾರಿಯಾಗಿದೆ. ಅಲ್ಲದೆ ಪ್ರತಿದಿನ ಬೆಳಗ್ಗೆ ನೆನೆಸಿದ ಶೇಂಗಾವನ್ನು  ಸೇವಿಸುವುದರಿಂದ ಹೊಟ್ಟೆ ಮತ್ತು ಜೀರ್ಣಕ್ರಿಯೆ ಸಂಬಂಧಿ ಕಾಯಿಲೆಗಳು ಕ್ಷಣಾರ್ಧದಲ್ಲಿ ಗುಣವಾಗುತ್ತದೆ. ನೀವು ಗ್ಯಾಸ್, ಅಸಿಡಿಟಿಯಂತಹ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ತೊಂದರೆಗೊಳಗಾಗಿದ್ದರೆ, ಖಂಡಿತವಾಗಿಯೂ ಇದನ್ನು ಪ್ರತಿದಿನ ಸೇವಿಸಿ.

ಬೆನ್ನುನೋವಿಗೆ ಪರಿಹಾರ ಒದಗಿಸುತ್ತದೆ:

ಹೆಚ್ಚು ಸಮಯಗಳ ಕಾಲ ಒಂದೇ ಸ್ಥಳದಲ್ಲಿ ಕುಳಿತು ಕೆಲಸ ಮಾಡುವುದರಿಂದ ಬೆನ್ನುನೋವು ಕಾಣಿಸಿಕೊಳ್ಳುತ್ತದೆ. ಹಾಗಿರುವಾಗ ನೆನೆಸಿದ ಶೇಂಗಾವನ್ನು ಬೆಲ್ಲದ ಜೊತೆಗೆ ತಿಂದರೆ ಬೆನ್ನುನೋವಿನ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಚರ್ಮ ಮತ್ತು ಕೂದಲಿಕೆ ಪ್ರಯೋಜನಕಾರಿ:

ಕಡಲೆಕಾಯಿಯನ್ನು  ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ತುಂಬಾ ಪ್ರಯೋಜಕಾರಿ ಎಂದು ಪರಿಗಣಿಸಲಾಗಿದೆ.  ಪ್ರೋಟೀನ್ ಮತ್ತು ಅನೇಕ ಅಗತ್ಯ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಇದು ಆರೋಗ್ಯಕ ಚರ್ಮ ಮತ್ತು ಕೂದಲನ್ನು ಪಡೆಯಲು ನಿಮಗೆ ಸಹಾಯ ಮಾಡುತ್ತದೆ.

ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ:

ಕಡಲೆಕಾಯಿಯಲ್ಲಿ ಆರೋಗ್ಯಕರ ಕೊಬ್ಬುಗಳಿದ್ದು, ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ ಇದು ರಕ್ತ ಪರಿಚಲನೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರಿಂದಾಗಿ ಹೃದಯವೂ ಆರೋಗ್ಯಕರವಾಗಿರುತ್ತದೆ.

ಇದನ್ನೂ ಓದಿ: ಪೌಷ್ಟಿಕಾಂಶದ ಶಕ್ತಿ ಕೇಂದ್ರ: ಹುರಿದ ಕಡಲೆಕಾಯಿಯ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ

ಸ್ನಾಯುಗಳನ್ನು ಬಲಪಡಿಸುತ್ತದೆ:

ಪ್ರೋಟೀನ್ನಲ್ಲಿ ಸಮೃದ್ಧವಾಗಿರುವ ನೆನೆಸಿದ ಶೇಂಗಾವನ್ನು ತಿನ್ನುವುದರಿಂದ ಸ್ನಾಯುಗಳ ಆರೋಗ್ಯವನ್ನು ಬಲಪಡಿಸಬಹುದು. . 100 ಗ್ರಾಂ ಕಡಲೆಕಾಯಿಯಲ್ಲಿ ಸುಮಾರು 25 ಗ್ರಾಂ ಪ್ರೋಟೀನ್ ಇದೆ. ಇದು ನಮ್ಮ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾಗಿರುವಂತಹ ಪೋಷಕಾಂಶವಾಗಿದೆ.

 ನೆನೆಸಿದ ಕಡಲೆಕಾಯಿಯ ಪೌಷ್ಟಿಕಾಂಶದ ಮೌಲ್ಯ:

ಪೌಷ್ಟಿಕ ತಜ್ಞರ ಪ್ರಕಾರ, ಶೇಂಗಾವನ್ನು ನೆನೆಸುವುದರಿಂದ ಅವು ಹೆಚ್ಚು ಪೌಷ್ಟಿಕಾಂಶವನ್ನು ನೀಡುತ್ತದೆ. ಮತ್ತು ಇದರ ಸೇವನೆಯಿಂದ ನಾವು ಅನೇಕ ಪೋಷಕಾಂಶಗಳನ್ನು ಪಡೆಯಬಹುದು.  ಮುಖ್ಯವಾಗಿ ಶೇಂಗಾ ಬೀಜಗಳು ಉತ್ಕರ್ಷಣ ನಿರೋಧಕಗಳು, ತಾಮ್ರ, ಕಬ್ಬಿಣ, ಪೊಟ್ಯಾಸಿಯಂ, ಸೆಲೆನಿಯಮ್, ಸತು ಮತ್ತು ಕ್ಯಾಲ್ಸಿಯಂ ನಿಂದ ಸಮೃದ್ಧವಾಗಿದ್ದು,  ಅವು ಆರೋಗ್ಯಕರ ಮೂಳೆಗಳು, ಚರ್ಮ ಮತ್ತು ಕೂದಲಿನ ಆರೋಗ್ಯಕ ನಿರ್ವಹಣೆಗೆ ಬೇಕಾಗಿರುವ ಅಗತ್ಯ ಖನಿಜಗಳಾಗಿವೆ.

ನೆನೆಸಿದ ಕಡಲೆಕಾಯಿಯನ್ನು ಸೇವನೆ ಮಾಡಲು ಉತ್ತಮ ಸಮಯ ಯಾವುದು:

ಪೌಷ್ಟಿಕ ತಜ್ಞರ ಪ್ರಕಾರ ನೆನೆಸಿದ ಕಡಲೆಕಾಯಿಯನ್ನು ಬೆಳಗ್ಗೆ ಉಪಹಾರ ಮಾಡುವ ಮೊದಲು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಉತ್ತಮ.  ಹಾಗೂ  ಶೇಂಗಾಬೀಜದಲ್ಲಿ ಕ್ಯಾಲೋರಿ ಅಂಶಗಳು ಕಂಡುಬರುವುದರಿಂದ ಅವುಗಳನ್ನು ಅತಿಯಾಗಿ ತಿನ್ನಬೇಡಿ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?