AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ಹೆಚ್ಚಾಗಿ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ದರೆ ಈ ಟಿಪ್ಸ್​​ ಫಾಲೋ ಮಾಡಿ

ಬೇಸಿಗೆಯಲ್ಲಿ ಸಾಕಷ್ಟು ಜನರಲ್ಲಿ ಕಂಡುಬರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಮಲಬದ್ಧತೆ. ಇದಕ್ಕೆ ಪ್ರಮುಖ ಕಾರಣ ಕಡಿಮೆ ನೀರು ಕುಡಿಯುವುದು.

ಬೇಸಿಗೆಯಲ್ಲಿ ಹೆಚ್ಚಾಗಿ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ದರೆ ಈ ಟಿಪ್ಸ್​​ ಫಾಲೋ ಮಾಡಿ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Mar 18, 2023 | 3:08 PM

Share

ಹವಾಮಾನ ಬದಲಾಗುತ್ತಿದ್ದಂತೆ  ವಿಶೇಷವಾಗಿ, ಬೇಸಿಗೆಯಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಆರೋಗ್ಯದ ವಿಶೇಷ ಗಮನಹರಿಸುವುದು ಅಗತ್ಯವಾಗಿರುತ್ತದೆ. ನಿರ್ಜಲೀಕರಣಗೊಂಡ ದೇಹವು ಹಲವಾರು ಕಾಯಿಲೆಗಳಿಗೆ ಕಾರಣವಾಗಬಹುದು. ಅವುಗಳಲ್ಲಿ ಹೊಟ್ಟೆಯ ಸಮಸ್ಯೆಯು ಒಂದು. ಬೇಸಿಗೆಯಲ್ಲಿ ಸಾಕಷ್ಟು ಜನರಲ್ಲಿ ಕಂಡುಬರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಮಲಬದ್ಧತೆ. ಇದಕ್ಕೆ ಪ್ರಮುಖ ಕಾರಣ ಕಡಿಮೆ ನೀರು ಕುಡಿಯುವುದು. ಪ್ರತೀ ದಿನ ಕನಿಷ್ಟ 2 ಲೀಟರ್​​ ನೀರು ಕುಡಿಯುವುದರಿಂದ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದಲ್ಲದೇ ಹೊಟ್ಟೆ-ಸಂಬಂಧಿತ ಸಮಸ್ಯೆಗಳಿಂದ ನಿಮ್ಮನ್ನು ಕಾಪಾಡಲು ಸಹಾಯಕವಾಗುವ ಹಣ್ಣುಗಳು ಇಲ್ಲಿವೆ.

ಸಿಟ್ರಸ್ ಹಣ್ಣುಗಳು:

ಕಿತ್ತಳೆ, ದ್ರಾಕ್ಷಿಹಣ್ಣು ಮುಂತಾದ ಸಿಟ್ರಸ್ ಹಣ್ಣುಗಳು ಫೈಬರ್‌ನ ಅತ್ಯುತ್ತಮ ಮೂಲವಾಗಿದೆ. ಈ ಹಣ್ಣುಗಳ ಸಿಪ್ಪೆಗಳಲ್ಲಿ ಹೇರಳವಾಗಿರುವ ಪೆಕ್ಟಿನ್ ಅಂಶವು ಕರುಳಿನ ಸಾಗಣೆಯ ಅವಧಿಯನ್ನು ಕಡಿಮೆ ಮಾಡಿ ಮಲಬದ್ಧತೆಯನ್ನು ಸರಾಗಗೊಳಿಸುತ್ತದೆ.

ಪೇರಳೆ:

ಪೇರಳೆಯಲ್ಲಿ ಕಂಡುಬರುವ ನಾರುಗಳು ಕರುಳಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಇದು ಕರುಳಿನ ಉದ್ದಕ್ಕೂ ಮಲವನ್ನು ತಳ್ಳಲು ಸಹಾಯ ಮಾಡುತ್ತದೆ. ಇದರಿಂದಾಗಿ ನೀವು ಮಲಬದ್ಧತೆ ಸಮಸ್ಯೆಯಿಂದ ನಿಮ್ಮನ್ನು ಕಾಪಾಡಿಕೊಳ್ಳಬಹುದಾಗಿದೆ. ಪೇರಳೆಯಲ್ಲಿರುವ ಸೋರ್ಬಿಟೋಲ್ ಅಂಶವು ಮಲ ಮೃದುವಾಗಿ ಮತ್ತು ಸುಲಭವಾಗಿ ಹಾದುಹೋಗಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಖಾಸಗಿ ಪ್ರದೇಶದ ಶೇವಿಂಗ್ ನಂತರ ಉರಿ ಅನುಭವಿಸುತ್ತೀರಾ? ಹಾಗಿದ್ದರೆ ಬ್ರೆಜಿಲಿಯನ್ ವ್ಯಾಕ್ಸ್ ಮಾಡಿ, ಪ್ರಯೋಜನಗಳು ಹೀಗಿವೆ

ಸೇಬು:

ಪೇರಳೆಗಳಂತೆಯೇ, ಸೇಬು ಕೂಡ ಹೆಚ್ಚಿನ ಪ್ರಮಾಣದ ಕರಗುವ ಮತ್ತು ಕರಗದ ಫೈಬರ್ ಅನ್ನು ಒಳಗೊಂಡಿರುತ್ತವೆ. ಸೇಬಿನಲ್ಲಿ ಪೆಕ್ಟಿನ್ ಅಂಶವು ಹೇರಳವಾಗಿರುವುದರಿಂದ ಇದು ಮಲಬದ್ಧತೆ ಸಮಸ್ಯೆಯಿಂದ ನಿಮ್ಮನ್ನು ಕಾಪಾಡುತ್ತದೆ.

ಒಣಗಿದ ಪ್ಲಮ್​​ ಹಣ್ಣು:

ಒಣಗಿದ ಪ್ಲಮ್ ಹಣ್ಣು ಮಲಬದ್ಧತೆ ಸಮಸ್ಯೆಗೆ ಒಂದು ಉತ್ತಮ ಔಷಧಿಯಾಗಿದೆ. ಜೊತೆಗೆ ನಿಮ್ಮ ಕರುಳಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಮಲಬದ್ಧತೆಯಿಂದಾಗಿ ಜನರಿಗೆ ಆಮ್ಲೀಯತೆ, ಅಜೀರ್ಣ ಮುಂತಾದ ಸಮಸ್ಯೆಗಳು ಸೃಷ್ಟಿಯಾಗುತ್ತದೆ. ಹೀಗಾಗಿ ಪ್ಲಮ್​ ಹಣ್ಣು ಸೇವಿಸುವುದು ಉತ್ತಮ. ಈ ಹಣ್ಣಿನಲ್ಲಿ ಫೈಬರ್ ಅಂಶ ಸಮೃದ್ಧವಾಗಿದೆ ಮತ್ತು ಮಲಬದ್ಧತೆಯ ಸಮಸ್ಯೆಯನ್ನು ತೆಗೆದುಹಾಕಲು ಇದು ಸಹಕಾರಿಯಾಗಿದೆ.

ಬಾಳೆಹಣ್ಣು:

ಸಂಪೂರ್ಣವಾಗಿ ಮಾಗಿದ ಬಾಳೆಹಣ್ಣು ಕರಗುವ ಫೈಬರ್ ಅಂಶವನ್ನು ಹೊಂದಿದ್ದು, ಇದು ಮಲಬದ್ಧತೆ ಸಮಸ್ಯೆಗೆ ಚಿಕಿತ್ಸೆ ನೀಡುವಲ್ಲಿ ಸಹಾಯಕವಾಗಿದೆ. ಇನ್ನೊಂದೆಡೆ ಬಾಳೆಕಾಯಿ ತಿನ್ನುವುದರಿಂದ ಇದು ಮಲಬದ್ಧತೆಗೆ ಕಾರಣವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್