AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮೆದುಳಿನ ಮೇಲೆ ಕೆಟ್ಟ ಪರಿಣಾಮ ಬೀರುವ ಈ 5 ಅಭ್ಯಾಸಗಳನ್ನು ಬಿಟ್ಟುಬಿಡಿ

ಮನುಷ್ಯನ ಮೆದುಳು ಆತನ ದೇಹದ ಕೇಂದ್ರ ಸ್ಥಾನ. ಮೆದುಳು ನಮ್ಮ ಇಡೀ ದೇಹದ ಚಟುವಟಿಕೆಗಳನ್ನು ನಿಯಂತ್ರಿಸುತ್ತದೆ. ಮೆದುಳಿನ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ನಮ್ಮ ಕೆಲವು ಸಣ್ಣಪುಟ್ಟ ರೂಢಿಗಳು ಮೆದುಳಿನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು.

ನಿಮ್ಮ ಮೆದುಳಿನ ಮೇಲೆ ಕೆಟ್ಟ ಪರಿಣಾಮ ಬೀರುವ ಈ 5 ಅಭ್ಯಾಸಗಳನ್ನು ಬಿಟ್ಟುಬಿಡಿ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jan 24, 2024 | 7:01 PM

Share

ಮೆದುಳು ನಮ್ಮ ನೆನಪುಗಳು, ಭಾವನೆಗಳು ಮತ್ತು ಆಲೋಚನೆಗಳನ್ನು ನಿಯಂತ್ರಿಸುತ್ತದೆ. ಮೆದುಳು ನಮ್ಮ ಎಲ್ಲಾ ಚಲನೆಗಳನ್ನು ನಿಯಂತ್ರಿಸುವುದರಿಂದ ಇದು ಮಾನವನ ದೇಹದಲ್ಲಿನ ಪ್ರಮುಖ ಅಂಗವಾಗಿದೆ. ನಮ್ಮ ಕೆಲವು ರೂಢಿಗಳು ನಮಗರಿವಿಲ್ಲದಂತೆ ನಮ್ಮ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಮೆದುಳಿನಂತಹ ಅಮೂಲ್ಯವಾದ ಅಂಗವನ್ನು ಕೆಲವೊಮ್ಮೆ ನಮಗೆ ತಿಳಿಯದೆ ಅಪಾಯಕ್ಕೆ ಸಿಲುಕಿಸುವ ಅಭ್ಯಾಸಗಳನ್ನು ನಾವು ರೂಢಿಸಿಕೊಳ್ಳುತ್ತೇವೆ. ಅಂತಹ 5 ರೂಢಿಗಳಿವು.

ಒಂದೇ ಕಡೆ ಕುಳಿತು ಕೆಲಸ ಮಾಡುವುದು:

ತಂತ್ರಜ್ಞಾನದಿಂದಾಗಿ ನಾವು ಜಡ ಜೀವನಶೈಲಿಯನ್ನು ರೂಢಿಸಿಕೊಂಡಿದ್ದೇವೆ. ನಮ್ಮ ದೇಹಕ್ಕೆ ವ್ಯಾಯಾಮ ಸಿಗಬೇಕು ಎನ್ನುವುದಕ್ಕಿಂತ ನಮಗೆ ಯಾವುದು ಆರಾಮದಾಯಕವಾಗುತ್ತದೆ ಎಂಬುದರ ಬಗ್ಗೆ ಹೆಚ್ಚು ಗಮನ ಹರಿಸುತ್ತೇವೆ. ಅದು ನಮ್ಮ ಮೆದುಳಿನ ಮೇಲೆ ಯಾವ ರೀತಿಯ ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ ಎಂದು ನಮಗೆ ತಿಳಿದಿರುವುದಿಲ್ಲ. ದೀರ್ಘಕಾಲ ಒಂದೇ ಕಡೆ ಕುಳಿತುಕೊಳ್ಳುವುದರಿಂದ ಮೆದುಳಿಗೆ ರಕ್ತದ ಹರಿವನ್ನು ಕಡಿಮೆ ಮಾಡುತ್ತದೆ. ವಾರಕ್ಕೆ ಕನಿಷ್ಠ 150 ನಿಮಿಷಗಳ ದೈಹಿಕ ಚಟುವಟಿಕೆಯನ್ನು ಮಾಡುವುದು ಬಹಳ ಮುಖ್ಯ. ಕುಳಿತು ಕೆಲಸ ಮಾಡುವಾಗ ಪ್ರತಿ 15ರಿಂದ 30 ನಿಮಿಷಗಳವರೆಗೆ ವಿರಾಮಗಳನ್ನು ತೆಗೆದುಕೊಳ್ಳಬೇಕು.

ನಿದ್ರೆಯ ಕೊರತೆ:

ನಮ್ಮ ಒತ್ತಡದ ಜೀವನದಲ್ಲಿ ನಿದ್ರೆಯ ಮೌಲ್ಯವನ್ನು ನಾವು ಆಗಾಗ ಕಡೆಗಣಿಸುತ್ತೇವೆ. ಹಾರ್ವರ್ಡ್ ಹೆಲ್ತ್ ಅಧ್ಯಯನದ ಪ್ರಕಾರ, ನಿದ್ರೆಯ ಅಭಾವವು ಅರಿವಿನ ಸಾಮರ್ಥ್ಯಗಳನ್ನು ದುರ್ಬಲಗೊಳಿಸುತ್ತದೆ. ಇದು ಮೆಮೊರಿ, ತಾರ್ಕಿಕತೆ ಮತ್ತು ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯಗಳ ಮೇಲೆ ಪರಿಣಾಮ ಬೀರುತ್ತದೆ. ಒಂದು ಗಂಟೆ ಮುಂಚಿತವಾಗಿ ಮಲಗುವುದು, ಮಲಗುವ ಒಂದು ಗಂಟೆ ಮೊದಲು ಆಲ್ಕೋಹಾಲ್ ಮತ್ತು ಕೆಫೀನ್‌ನಿಂದ ದೂರವಿರುವುದು, ಟಿವಿ, ಮೊಬೈಲ್ ಸ್ಕ್ರೀನ್ ನೋಡುವುದನ್ನು ಕಡಿಮೆ ಮಾಡುವುದು ಇವೆಲ್ಲವೂ ಉತ್ತಮ ನಿದ್ರೆಯನ್ನು ಉತ್ತೇಜಿಸುತ್ತವೆ.

ಇದನ್ನೂ ಓದಿ: ನಿಮ್ಮ ಮಗುವಿನ ಮೆದುಳಿನ ಬೆಳವಣಿಗೆ ಹೆಚ್ಚಿಸುವ 7 ಆಹಾರಗಳಿವು

ಅತಿಯಾದ ಗೆಜೆಟ್ ಬಳಕೆ:

ಅತಿಯಾದ ಸ್ಕ್ರೀನಿಂಗ್ ಸಮಯವು ನಮ್ಮ ಸಿರ್ಕಾಡಿಯನ್ ಲಯದ ಸೂಕ್ಷ್ಮ ಸಮತೋಲನವನ್ನು ಹೊರಹಾಕುತ್ತದೆ. ಇದು ಮನಸ್ಥಿತಿಯ ಅಸ್ವಸ್ಥತೆಗಳು, ಬಳಲಿಕೆ ಮತ್ತು ನಿದ್ರಾಹೀನತೆಗೆ ಕಾರಣವಾಗಬಹುದು. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಮಕ್ಕಳು ಹೆಚ್ಚು ಮೊಬೈಲ್, ಲ್ಯಾಪ್​ಟಾಪ್​ಗಳನ್ನು ನೋಡುವುದರಿಂದ ಅವರ ಯೋಚನಾ ಸಾಮರ್ಥ್ಯ, ಭಾಷೆ, ಜನರೊಂದಿಗೆ ಸಂವಹನದಲ್ಲಿ ಸಮಸ್ಯೆ ಉಂಟಾಗುತ್ತದೆ ಎಂದು ಹೇಳಿದೆ.

ನೀರಿನ ಕೊರತೆ:

ನೀರು ಮೆದುಳಿನ ಪ್ರಮುಖ ಅಂಶವಾಗಿದೆ. ಆದರೆ ನಮ್ಮ ದೈನಂದಿನ ಚಟುವಟಿಕೆಗಳಲ್ಲಿ ಇದನ್ನು ಆಗಾಗ ಮರೆತುಬಿಡುತ್ತೇವೆ. ನಿರ್ಜಲೀಕರಣವು ಪ್ರತಿಕ್ರಿಯೆಯ ಸಮಯ, ಜ್ಞಾಪಕಶಕ್ತಿ ಮತ್ತು ಏಕಾಗ್ರತೆಯ ಮೇಲೆ ಪರಿಣಾಮ ಬೀರಬಹುದು. ನಿಮ್ಮ ಮೆದುಳಿನಲ್ಲಿರುವ ಓಯಸಿಸ್ ಅನ್ನು ಪುನಃ ತುಂಬಿಸಲು ನೀವು ದಿನವಿಡೀ ಸಾಕಷ್ಟು ನೀರು ಕುಡಿಯಬೇಕು.

ಇದನ್ನೂ ಓದಿ: ನೆನಪಿನ ಶಕ್ತಿ, ಮೆದುಳಿನ ಆರೋಗ್ಯ ಹೆಚ್ಚಿಸಲು ಏನು ಕುಡಿಯಬೇಕು?

ಜೋರಾದ ಶಬ್ದವಿರುವ ಸಂಗೀತ ಕೇಳುವುದು:

ಸಂಗೀತವು ನಮಗೆ ಸಂತೋಷವನ್ನು ನೀಡಬಹುದಾದರೂ, ಅದು ತುಂಬಾ ನಮ್ಮ ಮೆದುಳಿನ ಆರೋಗ್ಯಕ್ಕೆ ಕೆಲವೊಮ್ಮೆ ಅಪಾಯವನ್ನುಂಟುಮಾಡುತ್ತದೆ. ದೀರ್ಘಾವಧಿಯಲ್ಲಿ ಜೋರಾದ ಶಬ್ದ ಇರುವ ಸಂಗೀತವನ್ನು ಕೇಳುವುದರಿಂದ ಮೆದುಳಿನ ರಚನೆ ಮತ್ತು ಕಾರ್ಯಚಟುವಟಿಕೆಗಳ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ, ಇಂಪಾದ ಸಂಗೀತವನ್ನು ಆಲಿಸಿ. ತುಂಬ ಸಮಯದವರೆಗೆ ಜೋರಾದ ಶಬ್ದವನ್ನು ಕೇಳುತ್ತಿರಬೇಡಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ