AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತಮ ಆಲೋಚನೆಗಳಿಂದ ಸಂಬಂಧವು ಹೂವಿನಂತೆ ಅರಳುತ್ತೆ, ಹುಳುಕಿದ್ದರೆ ಮುದುಡುತ್ತೆ

ಕುಟುಂಬದಲ್ಲಿ ಎಲ್ಲರ ಮನಸ್ಸು ಒಂದೇ ರೀತಿಯಾಗಿರಬೇಕೆಂದೇನಿಲ್ಲ, ಆದರೆ ಆಲೋಚನೆ ಹೇಗೆ ಇರಲಿ ಕುಟುಂಬದ ಪರವಾಗಿ ಯೋಚಿಸುವ ಮನಸ್ಸಿರಬೇಕು.

ಉತ್ತಮ ಆಲೋಚನೆಗಳಿಂದ ಸಂಬಂಧವು ಹೂವಿನಂತೆ ಅರಳುತ್ತೆ, ಹುಳುಕಿದ್ದರೆ ಮುದುಡುತ್ತೆ
Image Credit source: Healthshots.com
ನಯನಾ ರಾಜೀವ್
|

Updated on: Aug 08, 2023 | 3:00 PM

Share

ಕುಟುಂಬದಲ್ಲಿ ಎಲ್ಲರ ಮನಸ್ಸು ಒಂದೇ ರೀತಿಯಾಗಿರಬೇಕೆಂದೇನಿಲ್ಲ, ಆದರೆ ಆಲೋಚನೆ ಹೇಗೆ ಇರಲಿ ಕುಟುಂಬದ ಪರವಾಗಿ ಯೋಚಿಸುವ ಮನಸ್ಸಿರಬೇಕು. ಅದೇ ವಿಷಯಕಾರಿ ಸಂಬಂಧಗಳು ಮಾನಸಿಕ ಆರೋಗ್ಯವನ್ನು ಕೆಡಿಸುತ್ತದೆ, ನಿಮ್ಮನ್ನು ನೋಯಿಸುತ್ತದೆ. ವಿಷಕಾರಿ ಸಂಬಂಧಗಳು ನಿಮ್ಮ ಮಾನಸಿಕ ಆರೋಗ್ಯಕ್ಕೆ ಹೇಗೆ ಮಾರಕವಾಗಬಹುದು ಎಂಬುದರ ಬಗ್ಗೆ ತಿಳಿಯೋಣ.

ಎಲ್ಲದಕ್ಕೂ ನಿಮ್ಮನ್ನು ದೂಷಿಸುವುದು ಯಾರೇ ತಪ್ಪು ಮಾಡಿದರೂ ನಿಮ್ಮನ್ನೇ ದೂಷಿಸುವುದು, ಏನೇ ಕೆಲಸವಾದರೂ ನೀವೇ ಮಾಡಬೇಕು ಅದರ ಪರಿಣಾಮವನ್ನು ನೀವೇ ಎದುರಿಸಬೇಕಾಗುತ್ತದೆ. ಸಣ್ಣ ಸಣ್ಣ ವಿಚಾರಕ್ಕೂ ಭಯದಿಂದ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಸ್ವಇಚ್ಛೆಯಿಂದ ಏನೂ ಮಾಡಲು ಸಾಧ್ಯವಿಲ್ಲ ನಿಮ್ಮ ಸ್ವಂತ ಇಚ್ಛೆಯಿಂದ ಏನನ್ನೂ ಮಾಡಲು ಸಾಧ್ಯವಿಲ್ಲ, ಎಲ್ಲರೂ ನಿಮ್ಮನ್ನು ನಿಯಂತ್ರಿಸಲು ಪ್ರಯತ್ನಿಸುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ ನಿಮ್ಮ ಮನಸ್ಸಿನಲ್ಲಿ ಭಯ ಕುಳಿತಿರುತ್ತದೆ, ನಿಮ್ಮ ಕನಸುಗಳು ನಾಶವಾಗುತ್ತವೆ, ದುಃಖ ಉಮ್ಮಳಿಸಿ ಬರುತ್ತದೆ, ಹತಾಶೆ ನಿಮ್ಮೊಳಗೆ ಓಡಾಡುತ್ತದೆ.

ಆತಂಕ ವಿಷಕಾರಿ ಸಂಬಂಧಗಳು ನಿಮ್ಮನ್ನು ಮಾನಸಿಕವಾಗಿ ಹಿಂಸಿಸಲು ಯಾವಾಗಲೂ ಸಮಯವನ್ನು ಕಾಯುತ್ತಿರುತ್ತದೆ, ನೀವು ಮಾಡದ ತಪ್ಪಿಗೂ ಶಿಕ್ಷೆ ಅನುಭವಿಸಬೇಕಾಗುತ್ತದೆ, ನಿಮ್ಮ ಆಲೋಚನೆಗಳನ್ನು ಹಿಡಿದಿಡಲು ಪ್ರಯತ್ನಿಸುತ್ತಿರುತ್ತಾರೆ. ಆಗ ನೀವು ಒತ್ತಡ ಮತ್ತು ಆತಂಕಕ್ಕೆ ಬಲಿಯಾಗುತ್ತೀರಿ.

ಮತ್ತಷ್ಟು ಓದಿ: ಸಂತೋಷದ ಪ್ರೇಮ ಜೀವನವನ್ನು ಬಯಸಿದರೆ, ಆಚಾರ್ಯ ಚಾಣಕ್ಯರ ಈ 4 ಸಲಹೆಗಳನ್ನು ನೆನಪಿನಲ್ಲಿಡಿ

ವೈವಾಹಿಕ ಜೀವನದ ಮೇಲೆ ಪರಿಣಾಮ ಕುಟುಂಬದಲ್ಲಿ ಎಲ್ಲರನ್ನೂ ನೋಡಿಕೊಳ್ಳುವ ಭರದಲ್ಲಿ ನಿಮ್ಮ ವೈವಾಹಿಕ ಜೀವನದಲ್ಲಿ ಖುಷಿಯಾಗಿರಲು ಸಾಧ್ಯವಿಲ್ಲ. ಗಂಡ ಮತ್ತು ಹೆಂಡತಿಯ ನಡುವೆ ಭಿನ್ನಾಭಿಪ್ರಾಯ ಶುರುವಾಗುತ್ತದೆ.

ದಿನವಿಡೀ ಮನೆಕೆಲಸಗಳಲ್ಲಿ ನಿರತರಾಗಿರುವ ಕಾರಣ, ನಿಮಗಾಗಿ ಯಾವುದೇ ಸಮಯವನ್ನು ಕಳೆಯಲು ನಿಮಗೆ ಸಾಧ್ಯವಾಗುವುದಿಲ್ಲ. ನಿಮ್ಮ ಸಂಗಾತಿ ಜತೆಗೆ ಹೊರಗೆ ಹೋಗಿ ಸ್ವಲ್ಪ ಸಮಯ ಕಳೆಯಿರಿ ಜತೆ ಊಟವನ್ನು ಮಾಡಿ, ಇದು ನಿಮ್ಮ ಮಾನಸಿಕ ಆರೋಗ್ಯಕ್ಕೆ ಪ್ರಯೋಜನ ನೀಡಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ