AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Winter Tips: ಬಿರುಕು ಬಿಟ್ಟ ಹಿಮ್ಮಡಿಯನ್ನು ಗುಣಪಡಿಸಲು ಸಹಕಾರಿ ಈ ಮನೆಮದ್ದುಗಳು

ಚಳಿಗಾಲದಲ್ಲಿ ವಾತಾವರಣ ಕೂಲ್‌ ಆಗಿರುವುದರೊಂದಿಗೆ ಶೀತ, ಕೆಮ್ಮಿನಂತಹ ಆರೋಗ್ಯ ಸಮಸ್ಯೆಗಳು, ಚರ್ಮ ಒಣಗುವುದು, ತುಟಿ ಒಡೆಯುವುದು ಸೇರಿದಂತೆ ತ್ವಚೆಗೆ ಸಂಬಂಧಿಸಿದ ಸಮಸ್ಯೆಗಳೂ ಕಾಣಿಸಿಕೊಳ್ಳುತ್ತವೆ. ಜೊತೆಗೆ ಈ ಚಳಿಗಾಲದಲ್ಲಿ ಅನೇಕರ ಹಿಮ್ಮಡಿಯೂ ಬಿರುಕು ಬಿಡುತ್ತದೆ. ಈ ಸಮಸ್ಯೆಯನ್ನು ಕೆಲವೊಂದು ಮನೆಮದ್ದುಗಳ ಮೂಲಕ ಪರಿಣಾಮಕಾರಿಯಾಗಿ ನಿವಾರಿಸಬಹುದು. ಆ ಮನೆಮದ್ದುಗಳ್ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

Winter Tips: ಬಿರುಕು ಬಿಟ್ಟ ಹಿಮ್ಮಡಿಯನ್ನು ಗುಣಪಡಿಸಲು ಸಹಕಾರಿ ಈ ಮನೆಮದ್ದುಗಳು
ಸಾಂದರ್ಭಿಕ ಚಿತ್ರ Image Credit source: vecteezy
ಮಾಲಾಶ್ರೀ ಅಂಚನ್​
|

Updated on: Nov 20, 2025 | 6:20 PM

Share

ಚಳಿಗಾಲ ಈಗಾಗಲೇ ಆರಂಭವಾಗಿಬಿಟ್ಟಿದೆ. ಈ ಚಳಿಗಾಲದಲ್ಲಿ ಅನಾರೋಗ್ಯ, ತ್ವಚೆ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹಾಗಾಗಿ ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು. ಅದೇ ರೀತಿ ಪಾದದ ಆರೈಕೆಯ ಬಗ್ಗೆಯೂ ಗಮನ ವಹಿಸಬೇಕು. ಏಕೆಂದರೆ ಚಳಿಗೆ ಅನೇಕರ ಹಿಮ್ಮಡಿ ಬಿರುಕು (cracked heels) ಬಿಡುತ್ತದೆ. ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ ಇದಾಗಿದ್ದು, ಇದರಿಂದ ಇಡೀ ಪಾದದ ಸೌಂದರ್ಯವೇ ಕೆಡುತ್ತದೆ. ಬಿರು ಬಿಟ್ಟ ಈ ಹಿಮ್ಮಡಿಯನ್ನು ಸರಿಪಡಿಸಲು, ಪಾದಗಳ ಸೌಂದರ್ಯವನ್ನು ಕಾಪಾಡಲು ಅನೇಕರು ದುಬಾರಿ ಉತ್ಪನ್ನಗಳ ಮೊರೆ ಹೋಗುತ್ತಾರೆ. ಹೀಗೆ ನಿಮ್ಮ ಹಿಮ್ಮಡಿಯೂ ಬಿರುಕು ಬಿಟ್ಟಿದ್ಯಾ, ಇದಕ್ಕೆ ದುಬಾರಿ ಚಿಕಿತ್ಸೆಯ ಅವಶ್ಯಕತೆಯಿಲ್ಲ, ಈ ಕೆಲವು ಮನೆಮದ್ದುಗಳ ಸಹಾಯದಿಂದ ಸಲಭವಾಗಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಈ ಕುರಿತ ಸಂಪೂರ ಮಾಹಿತಿ ಇಲ್ಲಿದೆ ನೋಡಿ.

ಬಿರುಕು ಬಿಟ್ಟ ಹಿಮ್ಮಡಿಯನ್ನು ಗುಣಪಡಿಸಲು ಸರಳ ಮನೆಮದ್ದುಗಳು:

ನಿಂಬೆ, ಗ್ಲಿಸರಿನ್ ಮತ್ತು ರೋಸ್ ವಾಟರ್:  ಅರ್ಧ ಬಕೆಟ್‌ ಬಿಸಿ ನೀರು ತುಂಬಿಸಿ, ಅದಕ್ಕೆ ನಿಂಬೆ ರಸ, ಒಂದು ಚಮಚ ಗ್ಲಿಸರಿನ್ ಮತ್ತು ಒಂದು ಚಮಚ ರೋಸ್ ವಾಟರ್ ಸೇರಿಸಿ ಬಳಿಕ ನಿಮ್ಮ ಪಾದಗಳನ್ನು ಅದರಲ್ಲಿ 15-20 ನಿಮಿಷಗಳ ಕಾಲ ಇಟ್ಟು,  ನಂತರ ಹೀಲ್‌ ಸ್ಕ್ರಬ್ಬರ್‌ನಿಂದ ಹಿಮ್ಮಡಿಗಳನ್ನು ಸ್ಕ್ರಬ್ ಮಾಡಿ. ನಂತರ ಒಂದು ಚಮಚ ಗ್ಲಿಸರಿನ್, ಒಂದು ಚಮಚ ರೋಸ್ ವಾಟರ್ ಮತ್ತು ಒಂದು ಚಮಚ ನಿಂಬೆ ರಸವನ್ನು ಒಟ್ಟಿಗೆ ಬೆರೆಸಿ ನಿಮ್ಮ ಪಾದಗಳಿಗೆ ಹಚ್ಚಿ ಸಾಕ್ಸ್ ಧರಿಸಿ. ಬೆಳಗ್ಗೆ ಪಾದಗಳನ್ನು ತೊಳೆಯಿರಿ. ಇದು ಪರಿಣಾಮಕಾರಿಯಾಗಿದೆ.

ಜೇನುತುಪ್ಪ: ಒಂದು ಬಕೆಟ್ ನೀರಿನಲ್ಲಿ ಒಂದು ಕಪ್ ಜೇನುತುಪ್ಪ ಬೆರೆಸಿ. ನಿಮ್ಮ ಪಾದಗಳನ್ನು ಅದರಲ್ಲಿ 15-20 ನಿಮಿಷಗಳ ಕಾಲ ನೆನೆಯಲು ಬಿಡಿ. ನಂತರ ನಿಮ್ಮ ಹಿಮ್ಮಡಿಗಳನ್ನು ಸ್ಕ್ರಬ್ ಮಾಡಿ. ಸ್ಕ್ರಬ್ ಮಾಡಿದ ನಂತರ, ನಿಮ್ಮ ಪಾದಗಳನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ಇದು ಕೂಡ ಪರಿಣಾಮಕಾರಿ ಮನೆಮದ್ದಾಗಿದೆ.

ತೆಂಗಿನ ಎಣ್ಣೆ: ರಾತ್ರಿ ಮಲಗುವ ಮುನ್ನ ಬಿರುಕು ಬಿಟ್ಟ ಹಿಮ್ಮಡಿಗಳನ್ನು ತೆಂಗಿನ ಎಣ್ಣೆಯಿಂದ ಮಸಾಜ್ ಮಾಡಿ. ನಂತರ, ಸಾಕ್ಸ್ ಧರಿಸಿ. ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿದ್ದು, ಇದು ಒಡೆದ ಹಿಮ್ಮಡಿಯನ್ನು ಸರಿಪಡಿಸಲು ಅತ್ಯಂತ ಸುಲಭ ಮತ್ತು ಪರಿಣಾಮಕಾರಿ ಚಿಕಿತ್ಸೆಯಾಗಿದೆ.

ಅಲೋವೆರಾ: ಅಲೋವೆರಾ ಜೆಲ್ ಚರ್ಮಕ್ಕೆ ತುಂಬಾ ಪ್ರಯೋಜನಕಾರಿ. ಬಿರುಕು ಬಿಟ್ಟ ಹಿಮ್ಮಡಿಗಳನ್ನು ಗುಣಪಡಿಸಲು ನೀವು ಇದನ್ನು ಬಳಸಬಹುದು. ಮಲಗುವ ಮುನ್ನ ನಿಮ್ಮ ಪಾದಗಳನ್ನು ಚೆನ್ನಾಗಿ ಸ್ವಚ್ಛಗೊಳಿಸಿ ಮತ್ತು ಅಲೋವೆರಾ ಜೆಲ್  ಹಚ್ಚಿ. ಇದು ಬಿರುಕು ಬಿಟ್ಟ ಹಿಮ್ಮಡಿಯನ್ನು ವೇಗವಾಗಿ ಗುಣಪಡಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲಿ ಸಿಂಪಲ್ ಅಭ್ಯಾಸಗಳನ್ನು ರೂಢಿಸಿಕೊಂಡರೆ ಎಷ್ಟೆಲ್ಲಾ ಲಾಭವಿದೆ ನೋಡಿ

ಬಾಳೆಹಣ್ಣು: ಒಡೆದ ಹಿಮ್ಮಡಿಯನ್ನು ಗುಣಪಡಿಸಲು ಮಾಗಿದ ಬಾಳೆಹಣ್ಣನ್ನು ಸಹ ಬಳಸಬಹುದು. ಮಾಗಿದ ಬಾಳೆಹಣ್ಣನ್ನು ಮ್ಯಾಶ್ ಮಾಡಿ  ಬಿರುಕು ಬಿಟ್ಟ ಹಿಮ್ಮಡಿಗಳಿಗೆ ಹಚ್ಚಿ. 15 ನಿಮಿಷಗಳ ಕಾಲ ಹಾಗೆಯೇ ಬಿಡಿ. ಒಣಗಿದ ನಂತರ, ನಿಮ್ಮ ಪಾದಗಳನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ ಮತ್ತು ಮಾಯಿಶ್ಚರೈಸರ್ ಹಚ್ಚಿ.

ಇದರ ಜೊತೆಗೆ ಹಿಮ್ಮಡಿ ಬಿರುಕು ಬಿಡುವುದನ್ನು ತಡೆಗಟ್ಟಲು, ಸತು, ವಿಟಮಿನ್ ಇ, ವಿಟಮಿನ್ ಸಿ, ಒಮೆಗಾ -3 ಮತ್ತು ವಿಟಮಿನ್ ಬಿ 3 ಸಮೃದ್ಧವಾಗಿರುವ ಆಹಾರವನ್ನು ಸೇವಿಸಿ. ನಿಮ್ಮ ಆಹಾರದಲ್ಲಿ ನಟ್ಸ್‌ ಮತ್ತು ಸೀಡ್ಸ್‌ಗಳನ್ನು ಸೇರಿಸಿ. ಇದು ಚರ್ಮದ ಶುಷ್ಕತೆಯನ್ನು ಕಡಿಮೆ ಮಾಡಿ ಅಗತ್ಯ ಪೋಷಣೆ ನೀಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ