AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ 10 ಗಂಟೆ ಬಳಿಕ ಸ್ನಾನ ಮಾಡುವ ಅಭ್ಯಾಸವಿದ್ರೆ ಬಿಟ್ಟುಬಿಡಿ, ಅನಾರೋಗ್ಯಕ್ಕೆ ತುತ್ತಾಗಬಹುದು

ಸ್ನಾನ ಮಾಡಿದರೆ ಕೇವಲ ದೇಹದ ಕೊಳೆ ಮಾತ್ರವಲ್ಲ ಮನಸ್ಸಿನ ಭಾರವೂ ಕಡಿಮೆ ಆಗುವುದು. ನಿಮ್ಮ ದೇಹವನ್ನು ಸ್ವಚ್ಛವಾಗಿಟ್ಟುಕೊಂಡರೆ ಅನೇಕ ರೋಗಗಳು ನಿಮ್ಮ ಬಳಿ ಸುಳಿಯದು.

ರಾತ್ರಿ 10 ಗಂಟೆ ಬಳಿಕ ಸ್ನಾನ ಮಾಡುವ ಅಭ್ಯಾಸವಿದ್ರೆ ಬಿಟ್ಟುಬಿಡಿ, ಅನಾರೋಗ್ಯಕ್ಕೆ ತುತ್ತಾಗಬಹುದು
ಸ್ನಾನ
ನಯನಾ ರಾಜೀವ್
|

Updated on: Apr 29, 2023 | 8:00 AM

Share

ಸ್ನಾನ ಮಾಡಿದರೆ ಕೇವಲ ದೇಹದ ಕೊಳೆ ಮಾತ್ರವಲ್ಲ ಮನಸ್ಸಿನ ಭಾರವೂ ಕಡಿಮೆ ಆಗುವುದು. ನಿಮ್ಮ ದೇಹವನ್ನು ಸ್ವಚ್ಛವಾಗಿಟ್ಟುಕೊಂಡರೆ ಅನೇಕ ರೋಗಗಳು ನಿಮ್ಮ ಬಳಿ ಸುಳಿಯದು. ಜತೆಗೆ ಮಾನಸಿಕ ಆರೋಗ್ಯ(Mental Health)ವನ್ನು ಕಾಪಾಡಿಕೊಳ್ಳಲು ಸಹಾಯವಾಗುವುದು,  ಬೇಸಿಗೆಯಲ್ಲಿ ದೇಹವು ಹೆಚ್ಚು ಬೆವರುವ ಕಾರಣ ಎಲ್ಲರೂ ಸಾಮಾನ್ಯವಾಗಿ ಎರಡು ಹೊತ್ತು ಸ್ನಾನ ಮಾಡುತ್ತಾರೆ. ರಾತ್ರಿ ಹೊತ್ತು ಸ್ನಾನ ಮಾಡುವುದರಿಂದ ಶೀತವಾಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ವೈದ್ಯರು ಹೇಳುತ್ತಾರೆ. ನೀವು ಯಾವಾಗಲೂ ರಾತ್ರಿಯಲ್ಲಿ ಸ್ನಾನ ಮಾಡಿದರೆ, ಶೀತದಿಂದಾಗಿ, ನಿಮಗೆ ಜ್ವರವೂ ಬರಬಹುದು. ರಾತ್ರಿ ಬಿಸಿ ನೀರಿನಿಂದ ಸ್ನಾನ ಮಾಡಿದರೆ ತಾಪಮಾನ ವ್ಯತ್ಯಾಸದಿಂದ ಜ್ವರ ಬರುತ್ತದೆ.

ಮತ್ತಷ್ಟು ಓದಿ: Health Tips : ಬಿಡುವಿನ ವೇಳೆಯಲ್ಲಿ ಪಾದಗಳಿಗೆ ಬಿಸಿ ನೀರಿನ ಸ್ನಾನ ಮಾಡಿಸಿ: ನಿಮ್ಮ ಒತ್ತಡ ನಿವಾರಣೆಗೂ ಒಳಿತು

ಚಯಾಪಚಯ ಕ್ರಿಯೆಯಲ್ಲಿ ವ್ಯತ್ಯಾಸ ರಾತ್ರಿ ಸ್ನಾನ ಮಾಡುವುದರಿಂದ ದೇಹದ ಚಯಾಪಚಯ ಕ್ರಿಯೆಯಲ್ಲಿ ತೊಂದರೆಯಾಗುತ್ತದೆ. ಈ ಕಾರಣದಿಂದಾಗಿ, ನಿಮ್ಮ ಜೀರ್ಣಕ್ರಿಯೆಯ ಪ್ರಕ್ರಿಯೆಯು ಸಹ ಬಹಳಷ್ಟು ಪರಿಣಾಮ ಬೀರಬಹುದು. ಚಯಾಪಚಯ ಕ್ರಿಯೆಯಲ್ಲಿ ಅಡಚಣೆ ಉಂಟಾದರೆ, ದೇಹದಲ್ಲಿ ಹಾರ್ಮೋನುಗಳ ಅಸಮತೋಲನವಾಗುತ್ತದೆ.

ಸ್ನಾಯು ನೋವು ವೈದ್ಯರ ಪ್ರಕಾರ, ರಾತ್ರಿಯಲ್ಲಿ ಸ್ನಾನ ಮಾಡುವುದರಿಂದ ಬಹಳಷ್ಟು ಹಾನಿ ಉಂಟಾಗುತ್ತದೆ. ಎದೆನೋವು ಮತ್ತು ಸ್ನಾಯು ನೋವಿನಂತಹ ಸಮಸ್ಯೆಗಳು ಪ್ರಾರಂಭವಾಗಬಹುದು. ಕೆಲವೊಮ್ಮೆ ರಾತ್ರಿ ಸ್ನಾನ ಮಾಡುವುದರಿಂದ ತಲೆನೋವು ಕೂಡ ಬರಬಹುದು.

ಕೀಲು ನೋವಿನ ಸಮಸ್ಯೆ ರಾತ್ರಿಯಲ್ಲಿ ಸ್ನಾನ ಮಾಡುವುದರಿಂದ ದೇಹದ ಕೀಲುಗಳಲ್ಲಿ ನೋವು ಉಂಟಾಗಬಹುದು, ಇದರಿಂದಾಗಿ ನಿಮಗೆ ಓಡಾಡಲು ಕಷ್ಟವಾಗಬಹುದು. ತಡರಾತ್ರಿಯಲ್ಲಿ ಸ್ನಾನ ಮಾಡುವುದು ಕೂಡ ಸ್ನಾಯು ಸೆಳೆತಕ್ಕೆ ಕಾರಣವಾಗಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ