AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toothache: ಹಲ್ಲುನೋವಿನಿಂದ ತಕ್ಷಣ ಪರಿಹಾರ ಬೇಕೆ? ಈ 3 ವಿಧಾನಗಳನ್ನು ಅನುಸರಿಸಿ

ಹಲ್ಲು ನೋವು ಯಾವ ಸಂದರ್ಭದಲ್ಲಿ ಬೇಕಾದರೂ ನಿಮ್ಮನ್ನು ಕಾಡಬಹುದು, ಹುಳುಕು ಹಲ್ಲು, ಗಟ್ಟಿ ಆಹಾರ ಸೇವನೆ, ಹಲ್ಲುಗಳನ್ನು ಸ್ವಚ್ಛವಾಗಿಟ್ಟುಕೊಳ್ಳದಿರುವುದು, ಕ್ಯಾಲ್ಸಿಯಂ ಕೊರತೆ, ಬ್ಯಾಕ್ಟೀರಿಯಾದ ಸೋಂಕು, ದುರ್ಬಲ ಹಲ್ಲುಗಳಂತಹ ಹಲವು ಕಾರಣಗಳಿಂದ ಹಲ್ಲುನೋವು ಉಂಟಾಗುತ್ತದೆ.

Toothache: ಹಲ್ಲುನೋವಿನಿಂದ ತಕ್ಷಣ ಪರಿಹಾರ ಬೇಕೆ? ಈ 3 ವಿಧಾನಗಳನ್ನು ಅನುಸರಿಸಿ
Toothache
TV9 Web
| Edited By: |

Updated on: Aug 24, 2022 | 11:09 AM

Share

ಹಲ್ಲು ನೋವು ಯಾವ ಸಂದರ್ಭದಲ್ಲಿ ಬೇಕಾದರೂ ನಿಮ್ಮನ್ನು ಕಾಡಬಹುದು, ಹುಳುಕು ಹಲ್ಲು, ಗಟ್ಟಿ ಆಹಾರ ಸೇವನೆ, ಹಲ್ಲುಗಳನ್ನು ಸ್ವಚ್ಛವಾಗಿಟ್ಟುಕೊಳ್ಳದಿರುವುದು, ಕ್ಯಾಲ್ಸಿಯಂ ಕೊರತೆ, ಬ್ಯಾಕ್ಟೀರಿಯಾದ ಸೋಂಕು, ದುರ್ಬಲ ಹಲ್ಲುಗಳಂತಹ ಹಲವು ಕಾರಣಗಳಿಂದ ಹಲ್ಲುನೋವು ಉಂಟಾಗುತ್ತದೆ.

ಯಾವುದೇ ಹಲ್ಲಿನ ಸಮಸ್ಯೆಯ ಚಿಕಿತ್ಸೆಗಾಗಿ ನಾವು ದಂತವೈದ್ಯರ ಬಳಿಗೆ ಹೋಗುತ್ತೇವೆ. ಕೆಲವೊಮ್ಮೆ ಹಲ್ಲು ನೋವು ರಾತ್ರಿ ಶುರುವಾಗುತ್ತದೆ, ಆ ಸಮಯದಲ್ಲಿ ವೈದ್ಯರನ್ನು ಸಂಪರ್ಕಿಸಲು ಸಾಧ್ಯವಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ನಾವು ನೋವಿನಿಂದ ನರಳುತ್ತೇವೆ. ನಿಮಗೂ ಹಠಾತ್ ಹಲ್ಲು ನೋವು ಕಾಣಿಸಿಕೊಂಡು ವೈದ್ಯರ ಬಳಿ ಹೋಗಲಾಗದಿದ್ದರೆ.. ಕೆಲವು ಮನೆಮದ್ದು ಸಲಹೆಗಳನ್ನು ಅನುಸರಿಸಬಹುದು.

ಕೆಲವು ವಿಧಾನಗಳನ್ನು ಅನುಸರಿಸುವ ಮೂಲಕ ನಿಮ್ಮ ಹಲ್ಲುನೋವಿನಿಂದ ಶೀಘ್ರ ಪರಿಹಾರವನ್ನು ಪಡೆಯಬಹುದು. ಹಲ್ಲುನೋವು ಮತ್ತು ಸೋಂಕನ್ನು ಪರಿಣಾಮಕಾರಿಯಾಗಿ ಗುಣಪಡಿಸುವ ಕೆಲವು ಮನೆಮದ್ದುಗಳಿವೆ ತಿಳಿಯೋಣ.

ಬೆಚ್ಚಗಿನ ನೀರಿನಿಂದ ತೊಳೆಯಿರಿ ಹಲ್ಲುನೋವು ನಿವಾರಿಸಲು ಬೆಚ್ಚಗಿನ ನೀರಿನಿಂದ ಗಾರ್ಗ್ಲ್ ಮಾಡಿ. ಬೆಚ್ಚಗಿನ ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ಬಾಯಿಯಲ್ಲಿ ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡಬಹುದು. ಇದು ನೋವನ್ನು ಸಹ ನಿವಾರಿಸುತ್ತದೆ.

ನೀವು ಕೆಲವು ಸೆಕೆಂಡುಗಳ ಕಾಲ ನಿಮ್ಮ ಬಾಯಿಯಲ್ಲಿ ಬೆಚ್ಚಗಿನ ನೀರನ್ನು ಹಿಡಿದಿಟ್ಟುಕೊಳ್ಳಿ ಮತ್ತು ನಂತರ ಅದನ್ನು ಉಗುಳಿ, ಬೆಚ್ಚಗಿನ ನೀರಿನಿಂದ ಗಾರ್ಗ್ಲಿಂಗ್ ಮಾಡಿ ಒಸಡುಗಳಲ್ಲಿನ ನೋವನ್ನು ಕಡಿಮೆ ಮಾಡಿ.

ಪುದೀನಾ ಟೀ ಯಾವುದೇ ಚಹಾವನ್ನು ಕುಡಿಯುವುದರಿಂದ ಹಲ್ಲುನೋವು ನಿವಾರಿಸಲು ಸಹಾಯ ಮಾಡುತ್ತದೆ. ಪುದೀನಾ ಚಹಾವು ನೋವನ್ನು ಶಮನಗೊಳಿಸಲು ಸಹಾಯ ಮಾಡುವ ಗುಣಗಳನ್ನು ಹೊಂದಿದೆ. ಹಲ್ಲುನೋವು ಕಡಿಮೆ ಮಾಡಲು ಪುದೀನಾ ಚಹಾ ತುಂಬಾ ಪರಿಣಾಮಕಾರಿಯಾಗಿದೆ.

ಲವಂಗದ ಎಣ್ಣೆ ಹಲ್ಲುನೋವು ಕಡಿಮೆ ಮಾಡುವಲ್ಲಿ ಲವಂಗದ ಎಣ್ಣೆ ತುಂಬಾ ಪರಿಣಾಮಕಾರಿ. ತಜ್ಞರ ಪ್ರಕಾರ, ಲವಂಗದ ಎಣ್ಣೆಯ ಕೆಲವು ಹನಿಗಳನ್ನು ನೋಯುತ್ತಿರುವ ಹಲ್ಲಿನ ಮೇಲೆ ಹಚ್ಚುವುದರಿಂದ ಹಲ್ಲುನೋವು ಮತ್ತು ಉರಿಯೂತವನ್ನು ತುಂಬಾ ಸಮಯದವರೆಗೆ ಕಡಿಮೆ ಮಾಡಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ