AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toothache: ಹಲ್ಲುನೋವಿನಿಂದ ತಕ್ಷಣ ಪರಿಹಾರ ಬೇಕೆ? ಈ 3 ವಿಧಾನಗಳನ್ನು ಅನುಸರಿಸಿ

ಹಲ್ಲು ನೋವು ಯಾವ ಸಂದರ್ಭದಲ್ಲಿ ಬೇಕಾದರೂ ನಿಮ್ಮನ್ನು ಕಾಡಬಹುದು, ಹುಳುಕು ಹಲ್ಲು, ಗಟ್ಟಿ ಆಹಾರ ಸೇವನೆ, ಹಲ್ಲುಗಳನ್ನು ಸ್ವಚ್ಛವಾಗಿಟ್ಟುಕೊಳ್ಳದಿರುವುದು, ಕ್ಯಾಲ್ಸಿಯಂ ಕೊರತೆ, ಬ್ಯಾಕ್ಟೀರಿಯಾದ ಸೋಂಕು, ದುರ್ಬಲ ಹಲ್ಲುಗಳಂತಹ ಹಲವು ಕಾರಣಗಳಿಂದ ಹಲ್ಲುನೋವು ಉಂಟಾಗುತ್ತದೆ.

Toothache: ಹಲ್ಲುನೋವಿನಿಂದ ತಕ್ಷಣ ಪರಿಹಾರ ಬೇಕೆ? ಈ 3 ವಿಧಾನಗಳನ್ನು ಅನುಸರಿಸಿ
Toothache
TV9 Web
| Edited By: |

Updated on: Aug 24, 2022 | 11:09 AM

Share

ಹಲ್ಲು ನೋವು ಯಾವ ಸಂದರ್ಭದಲ್ಲಿ ಬೇಕಾದರೂ ನಿಮ್ಮನ್ನು ಕಾಡಬಹುದು, ಹುಳುಕು ಹಲ್ಲು, ಗಟ್ಟಿ ಆಹಾರ ಸೇವನೆ, ಹಲ್ಲುಗಳನ್ನು ಸ್ವಚ್ಛವಾಗಿಟ್ಟುಕೊಳ್ಳದಿರುವುದು, ಕ್ಯಾಲ್ಸಿಯಂ ಕೊರತೆ, ಬ್ಯಾಕ್ಟೀರಿಯಾದ ಸೋಂಕು, ದುರ್ಬಲ ಹಲ್ಲುಗಳಂತಹ ಹಲವು ಕಾರಣಗಳಿಂದ ಹಲ್ಲುನೋವು ಉಂಟಾಗುತ್ತದೆ.

ಯಾವುದೇ ಹಲ್ಲಿನ ಸಮಸ್ಯೆಯ ಚಿಕಿತ್ಸೆಗಾಗಿ ನಾವು ದಂತವೈದ್ಯರ ಬಳಿಗೆ ಹೋಗುತ್ತೇವೆ. ಕೆಲವೊಮ್ಮೆ ಹಲ್ಲು ನೋವು ರಾತ್ರಿ ಶುರುವಾಗುತ್ತದೆ, ಆ ಸಮಯದಲ್ಲಿ ವೈದ್ಯರನ್ನು ಸಂಪರ್ಕಿಸಲು ಸಾಧ್ಯವಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ನಾವು ನೋವಿನಿಂದ ನರಳುತ್ತೇವೆ. ನಿಮಗೂ ಹಠಾತ್ ಹಲ್ಲು ನೋವು ಕಾಣಿಸಿಕೊಂಡು ವೈದ್ಯರ ಬಳಿ ಹೋಗಲಾಗದಿದ್ದರೆ.. ಕೆಲವು ಮನೆಮದ್ದು ಸಲಹೆಗಳನ್ನು ಅನುಸರಿಸಬಹುದು.

ಕೆಲವು ವಿಧಾನಗಳನ್ನು ಅನುಸರಿಸುವ ಮೂಲಕ ನಿಮ್ಮ ಹಲ್ಲುನೋವಿನಿಂದ ಶೀಘ್ರ ಪರಿಹಾರವನ್ನು ಪಡೆಯಬಹುದು. ಹಲ್ಲುನೋವು ಮತ್ತು ಸೋಂಕನ್ನು ಪರಿಣಾಮಕಾರಿಯಾಗಿ ಗುಣಪಡಿಸುವ ಕೆಲವು ಮನೆಮದ್ದುಗಳಿವೆ ತಿಳಿಯೋಣ.

ಬೆಚ್ಚಗಿನ ನೀರಿನಿಂದ ತೊಳೆಯಿರಿ ಹಲ್ಲುನೋವು ನಿವಾರಿಸಲು ಬೆಚ್ಚಗಿನ ನೀರಿನಿಂದ ಗಾರ್ಗ್ಲ್ ಮಾಡಿ. ಬೆಚ್ಚಗಿನ ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ಬಾಯಿಯಲ್ಲಿ ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡಬಹುದು. ಇದು ನೋವನ್ನು ಸಹ ನಿವಾರಿಸುತ್ತದೆ.

ನೀವು ಕೆಲವು ಸೆಕೆಂಡುಗಳ ಕಾಲ ನಿಮ್ಮ ಬಾಯಿಯಲ್ಲಿ ಬೆಚ್ಚಗಿನ ನೀರನ್ನು ಹಿಡಿದಿಟ್ಟುಕೊಳ್ಳಿ ಮತ್ತು ನಂತರ ಅದನ್ನು ಉಗುಳಿ, ಬೆಚ್ಚಗಿನ ನೀರಿನಿಂದ ಗಾರ್ಗ್ಲಿಂಗ್ ಮಾಡಿ ಒಸಡುಗಳಲ್ಲಿನ ನೋವನ್ನು ಕಡಿಮೆ ಮಾಡಿ.

ಪುದೀನಾ ಟೀ ಯಾವುದೇ ಚಹಾವನ್ನು ಕುಡಿಯುವುದರಿಂದ ಹಲ್ಲುನೋವು ನಿವಾರಿಸಲು ಸಹಾಯ ಮಾಡುತ್ತದೆ. ಪುದೀನಾ ಚಹಾವು ನೋವನ್ನು ಶಮನಗೊಳಿಸಲು ಸಹಾಯ ಮಾಡುವ ಗುಣಗಳನ್ನು ಹೊಂದಿದೆ. ಹಲ್ಲುನೋವು ಕಡಿಮೆ ಮಾಡಲು ಪುದೀನಾ ಚಹಾ ತುಂಬಾ ಪರಿಣಾಮಕಾರಿಯಾಗಿದೆ.

ಲವಂಗದ ಎಣ್ಣೆ ಹಲ್ಲುನೋವು ಕಡಿಮೆ ಮಾಡುವಲ್ಲಿ ಲವಂಗದ ಎಣ್ಣೆ ತುಂಬಾ ಪರಿಣಾಮಕಾರಿ. ತಜ್ಞರ ಪ್ರಕಾರ, ಲವಂಗದ ಎಣ್ಣೆಯ ಕೆಲವು ಹನಿಗಳನ್ನು ನೋಯುತ್ತಿರುವ ಹಲ್ಲಿನ ಮೇಲೆ ಹಚ್ಚುವುದರಿಂದ ಹಲ್ಲುನೋವು ಮತ್ತು ಉರಿಯೂತವನ್ನು ತುಂಬಾ ಸಮಯದವರೆಗೆ ಕಡಿಮೆ ಮಾಡಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್