AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ವಿಪರೀತ ಬೆನ್ನು ನೋವಿನ ಸಮಸ್ಯೆಯೇ? ಪರಿಹಾರಕ್ಕಾಗಿ ಇಲ್ಲಿದೆ ತಜ್ಞರ ಸಲಹೆಗಳು

ವಿಪರೀತ ಬೆನ್ನು ನೋವಿನ ಸಮಸ್ಯೆಗೆ ತಜ್ಞರು ಕೆಲವೊಂದಿಷ್ಟು ಸಲಹೆಗಳನ್ನು ನೀಡಿದ್ದಾರೆ. ಅವಗಳನ್ನು ಪಾಲಿಸುವ ಮೂಲಕ ನಿಮ್ಮ ಬೆನ್ನು ನೋವಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

Health Tips: ವಿಪರೀತ ಬೆನ್ನು ನೋವಿನ ಸಮಸ್ಯೆಯೇ? ಪರಿಹಾರಕ್ಕಾಗಿ ಇಲ್ಲಿದೆ ತಜ್ಞರ ಸಲಹೆಗಳು
ಬೆನ್ನು ನೋವು
TV9 Web
| Edited By: |

Updated on: Nov 12, 2021 | 9:45 AM

Share

ಕೊವಿಡ್ ಸಾಂಕ್ರಾಮಿಕ ಹರಡುತ್ತಿದ್ದಂತೆಯೇ ಎಲ್ಲವೂ ಡಿಜಿಟಲ್ ಆಗಿದೆ. ಶಾಪಿಂಗ್ ಮಾಡಲು, ಅಫೀಸ್ ಕೆಲಸ ಹೀಗೆ ಎಲ್ಲವೂ ಮನೆಯಲ್ಲೇ ಕುಳಿತು ಕಂಪ್ಯೂಟರ್, ಮೊಬೈಲ್​ನಿಂದಲೇ ಆಗುತ್ತಿದೆ. ಹೀಗಿರುವಾಗ ದೈಹಿಕ ವ್ಯಾಯಾಮ ಸಹಜವಾಗಿಯೇ ಕಡಿಮೆ ಆಗಿದೆ. ಇದರಿಂದ ಸೊಂಟ ನೋವು, ಬೆನ್ನು ನೋವಿನಂತಹ ಸಮಸ್ಯೆಗಳು ಜನರಲ್ಲಿ ಕಾಣಿಸಿಕೊಳ್ಳುತ್ತಿದೆ. ಶಾಲೆಗೆ ಹೋಗುವ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರಿಗೂ ಸಾಮಾನ್ಯವಾಗಿ ಬೆನ್ನು ನೋವು ಕಾಣಿಸಿಕೊಳ್ಳುತ್ತದೆ. ಹಾಗಿರುವಾಗ ಈ ಸಮಸ್ಯೆಗೆ ಪರಿಹಾರಗಳೇನು? ಡಾ. ದೀಕ್ಷಾ ಅವರು ತಮ್ಮ ಇನ್​ಸ್ಟಾಗ್ರಾಮ್​  ಖಾತೆಯಲ್ಲಿ ಕೆಲವು ಸಲಹೆಗಳನ್ನು ಹಂಚಿಕೊಂಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಡಾ. ದೀಕ್ಷಾ ಕೆಲವು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ಬೆನ್ನು ನೋವಿಗೆ ಪರಿಹಾರ ಕ್ರಮಗಳೇನು? ಎಂಬುದನ್ನು ತಿಳಿಸಿಕೊಟ್ಟಿದ್ದಾರೆ. ಮನೆಯಲ್ಲಿ ಕುಳಿತಲ್ಲಿಯೇ ಕುಳಿತುಕೊಂಡು ಕೆಲಸ ಮಾಡುತ್ತಿರುವದರಿಂದ ಕೆಲವು ಸಮಸ್ಯೆಗಳು ಜನರಲ್ಲಿ ಕಾಡುತ್ತಿದೆ. ಸ್ಥೂಲಕಾಯತೆ, ಅಜೀರ್ಣ ಮತ್ತು ಮಲಬದ್ಧತೆ ಜೊತೆಗೆ ಇತರ ಸಮಸ್ಯೆಗಳು ಕಾಡುತ್ತಿದೆ ಎಂದು ತಜ್ಞರು ಹಂಚಿಕೊಂಡ ಪೋಸ್ಟ್​ನಲ್ಲಿ ಬರೆದಿದ್ದಾರೆ.

ಶೇ. 90ರಷ್ಟು ವಯಸ್ಕರಲ್ಲಿ ಬೆನ್ನು ನೋವಿನ ಸಮಸ್ಯೆ ಕಾಡುತ್ತದೆ. ಬೆನ್ನು ನೋವು ಕಾಣಿಸಿಕೊಳ್ಳಲು ಪ್ರಮುಖ ಕಾರಣವೆಂದರೆ ಜೀವನಶೈಲಿಯಲ್ಲಿ ಜಡತ್ವ ಎಂದು ತಜ್ಞರು ಹೇಳುತ್ತಾರೆ. ಇದರ ಜೊತೆಗೆ ಬೆನ್ನು ನೋವಿಗೆ ತ್ವರಿತ ಕಾರಣಗಳೇನು ಎಂಬುದನ್ನು ತಜ್ಞರು ತಿಳಿಸಿದ್ದಾರೆ. ಅವುಗಳು ಈ ಕೆಳಗಿನಂತಿದೆ.

*ಮಲಗುವಾಗ ತಲೆಯ ಕೆಳಗೆ ದಿಂಬನ್ನು ಬಳಸಬೇಡಿ *ಪ್ರತಿನಿತ್ಯ ವ್ಯಾಯಾಮ ಮಾಡಿ *2 ಗಂಟೆಗಳಿಗಿಂತ ಹೆಚ್ಚು ಕಾಲ ಒಂದೇ ಭಂಗಿಯಲ್ಲಿ ಕುಳಿತುಕೊಳ್ಳಬೇಡಿ. 5 ನಿಮಿಷಗಳ ವಿರಾಮ ತೆಗೆದುಕೊಳ್ಳಿ. *ಎಣ್ಣೆ ಹಚ್ಚಿ ಮಸಾಜ್ ಮಾಡಿದ ಬಳಿಕ ಸ್ನಾನ ಮಾಡುವ ಅಭ್ಯಾಸ ಮಾಡಿಕೊಳ್ಳಿ.

ಇವು ನಿಮ್ಮ ಬೆನ್ನು ನೋವಿನ ಸಮಸ್ಯೆಯನ್ನು ಕಡಿಮೆ ಮಾಡುತ್ತವೆ. ಈ ರೀತಿಯ ಕೆಲವು ಅಭ್ಯಾಸಗಳಿದ್ದರೆ ಅವುಗಳನ್ನು ಆದಷ್ಟು ತಪ್ಪಿಸಿ. ನೀವು ಸಾಸಿವೆ ಎಣ್ಣೆ ಅಥವಾ ಎಳ್ಳೆಯನ್ನು ಸಹ ಬೆನ್ನು ನೋವಿಗೆ ಹಚ್ಚಬಹುದು ಎಂದು ಡಾ. ದೀಕ್ಷಾ ಸಲಹೆ ನೀಡಿದ್ದಾರೆ.

ಇದನ್ನೂ ಓದಿ:

Health Tips: ಜ್ಞಾಪಕ ಶಕ್ತಿ ಕಡಿಮೆಯಾಗುತ್ತಿದೆಯೇ? ಆಹಾರ ಕ್ರಮದ ಬಗ್ಗೆ ಇರಲಿ ಎಚ್ಚರ

Health Tips: ಗಂಟಲು ನೋವೇ? ಇಲ್ಲಿದೆ ಮನೆಮದ್ದು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ