AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಕಾಂತಿಯುತ ತ್ವಚೆ ಪಡೆಯಲು ಯಾವ ಯಾವ ಹಣ್ಣು ಮತ್ತು ತರಕಾರಿಗಳನ್ನು ಸೇವಿಸಬೇಕು ಗೊತ್ತೇ?

ನೀವು ಸೇವಿಸುವ ಆಹಾರ ನಿಮ್ಮ ಆರೋಗ್ಯವನ್ನು ಸುರಕ್ಷಿತವಾಗಿರಿಸುವುದರ ಜತೆಗೆ ಚರ್ಮದ ಆರೋಗ್ಯವನ್ನೂ ಸುಧಾರಿಸುತ್ತದೆ. ಹೀಗಿರುವಾಗ ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸುವ ಮೂಲಕ ನಿಮ್ಮ ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಬಹುದು.

ನೀವು ಕಾಂತಿಯುತ ತ್ವಚೆ ಪಡೆಯಲು ಯಾವ ಯಾವ ಹಣ್ಣು ಮತ್ತು ತರಕಾರಿಗಳನ್ನು ಸೇವಿಸಬೇಕು ಗೊತ್ತೇ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 25, 2021 | 7:02 AM

Share

ಧೂಳು, ಹವಾಮಾನ ಏರು ಪೇರಿನಿಂದಾಗಿ ಚರ್ಮಕ್ಕೆ ಹಾನಿಯುಂಟಾಗಿರಬಹುದು. ಚರ್ಮದ ಅಲರ್ಜಿ, ತುರಿಕೆಯಂತಹ ಲಕ್ಷಣಗಳು ಕಂಡು ಬರುತ್ತಿರಬಹುದು. ನಿಮ್ಮ ಚರ್ಮದ ಆರೋಗ್ಯ ಸುರಕ್ಷತೆ ಜತೆಗೆ ಕಾಂತಿಯನ್ನು ಹೆಚ್ಚಿಸಿಕೊಳ್ಳಲು ಆಹಾರ ಪದ್ದತಿಯೂ ಸಹ ಮುಖ್ಯ. ನೀವು ಸೇವಿಸುವ ಆಹಾರ ನಿಮ್ಮ ಆರೋಗ್ಯವನ್ನು ಸುರಕ್ಷಿತವಾಗಿರಿಸುವುದರ ಜತೆಗೆ ಚರ್ಮದ ಆರೋಗ್ಯವನ್ನೂ ಸುಧಾರಿಸುತ್ತದೆ. ಹೀಗಿರುವಾಗ ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸುವ ಮೂಲಕ ನಿಮ್ಮ ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಬಹುದು. ನಿಮ್ಮ ಚರ್ಮದ ಹೊಳಪಿಗೆ ಯಾವ ಹಣ್ಣುಗಳು ಮತ್ತು ತರಕಾರಿಗಳು ಸೂಕ್ತ ಎಂಬುದನ್ನು ತಿಳಿಯೋಣ.

ಕಿತ್ತಳೆ ಹಣ್ಣು ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಅಂಶವಿರುತ್ತದೆ. ನೀವು ಕಿತ್ತಳೆ ಹಣ್ಣನ್ನು ಸೇವಿಸಬಹುದು ಅಥವಾ ಕಿತ್ತಳೆಯನ್ನು ಉಪಯೋಗಿಸಿ ಫೇಸ್ ಪ್ಯಾಕ್ ತಯಾರಿಸಿಯೂ ಮುಖಕ್ಕೆ ಬಳಸಬಹುದು. ಇದು ನಿಮ್ಮ ಚರ್ಮದ ಹೊಳಪಿಗೆ ಮತ್ತು ಕಾಂತಿ ಹೆಚ್ಚಿಸಿಕೊಳ್ಳಲು ಸಹಾಯಕವಾಗಿದೆ.

ಸ್ಟ್ರಾಬೆರಿ ಸ್ಟ್ರಾಬೆರಿಯಲ್ಲಿ ಆಲ್ಪಾ ಹೈಡ್ರಾಕ್ಸಿಲ್ ಆಸಿಡ್ ತುಂಬಿರುತ್ತದೆ. ಇದು ಸತ್ತ ಚರ್ಮದ ಕೋಶಗಳನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ. ಇದು ಕಾಲಜನ್ ಉತ್ಪಾದನೆಯನ್ನೂ ಹೆಚ್ಚಿಸುತ್ತದೆ. ಜತೆಗೆ ನಿಮ್ಮ ಆರೋಗ್ಯದ ದೃಷ್ಟಿಯಿಂದ ಇದು ಹೆಚ್ಚು ಪ್ರಯೋಜನಕಾರಿ.

ಕುಂಬಳಕಾಯಿ ಕುಂಬಳಕಾಯಿಯಲ್ಲಿ ಉತ್ಕರ್ಷಣ ನಿರೋಧಕಗಳು ಹೆಚ್ಚು ಕಂಡು ಬರುತ್ತದೆ. ವಿಟಮಿನ್ ಎ ಮತ್ತು ಮಿಟಮಿನ್ ಸಿ ಅಂಶ ಕಂಡು ಬರುತ್ತದೆ. ಇದು ಚರ್ಮದ ಟೋನ್ ಸುಧಾರಿಸಲು ಸಹಾಯಕವಾಗಿದೆ.

ಬಿಟ್ರೂಟ್ ನೀವು ಬಿಟ್ರೂಟ್ ಜ್ಯೂಸ್ ಮಾಡಿಯೂ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಇದು ನಿಮ್ಮ ದೇಹಕ್ಕೆ ಪೌಷ್ಟಿಕಾಂಶಗಳನ್ನು ನೀಡುತ್ತದೆ. ಜತೆಗೆ ರಕ್ತವನ್ನು ಶುದ್ಧೀಕರಿಸಲು ಸಹಾಯಕವಾಗಿದೆ.

ಟೊಮ್ಯಾಟೊ ಟೊಮ್ಯಾಟೊದಲ್ಲಿ ಎ, ಬಿ1, ಕೆ, ಬಿ3, ಬಿ5, ಬಿ6, ಬಿ7 ಮತ್ತು ವಿಟಮಿನ್ ಸಿ ಅಂಶ ಕಂಡು ಬರುತ್ತದೆ. ಇದು ತ್ವಚೆಯ ಸೌಂದರ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ನಿಮ್ಮ ಮುಖದ ಮೇಲೆ ಟೊಮ್ಯಾಟೊ ರಸವನ್ನು ಹಚ್ಚುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಿ.

ಇದನ್ನೂ ಓದಿ:

Health Tips: ಜೀರ್ಣಕ್ರಿಯೆ ಚೆನ್ನಾಗಿರಲು 9 ಆಯುರ್ವೇದ ಸಲಹೆಗಳು ಇಲ್ಲಿವೆ

Health Tips: ಸಾತ್ವಿಕ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?