AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕೆಲವು ಆಹಾರ ಪದಾರ್ಥಗಳು ನಿಮ್ಮ ನಿದ್ರಾಹೀನತೆ ಮತ್ತು ಒತ್ತಡವನ್ನು ನಿವಾರಿಸಲು ಸಹಾಯಕ

ನಿದ್ರಾಹೀನತೆಗೆ ಕಾರಣವಾಗುತ್ತವೆ. ಉತ್ತಮ ನಿದ್ರೆಗಾಗಿ ನೀವು ಈ ಕೆಲವು ಆಹಾರಗಳನ್ನು ಸೇವಿಸಿ. ಇವು ನಿದ್ರಾ ಹೀನತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಈ ಕೆಲವು ಆಹಾರಗಳು ಯಾವುವು ಎಂಬುದನ್ನು ತಿಳಿದುಕೊಳ್ಳಿ.

ಈ ಕೆಲವು ಆಹಾರ ಪದಾರ್ಥಗಳು ನಿಮ್ಮ ನಿದ್ರಾಹೀನತೆ ಮತ್ತು ಒತ್ತಡವನ್ನು ನಿವಾರಿಸಲು ಸಹಾಯಕ
ಸಂಗ್ರಹ ಚಿತ್ರ
TV9 Web
| Edited By: |

Updated on: Nov 11, 2021 | 8:22 AM

Share

ಆರೋಗ್ಯಕರ ಆಹಾರ ಸೇವನೆ ಎಷ್ಟು ಮುಖ್ಯವೋ ಅದೇ ರೀತಿ ರಾತ್ರಿ ನಿದ್ರೆಯೂ ಅಷ್ಟೇ ಮುಖ್ಯ. ಉತ್ತಮ ಪ್ರಮಾಣದ ನಿದ್ರೆಯು ದೇಹಕ್ಕೆ ವಿಶ್ರಾಂತಿಯನ್ನು ನೀಡುತ್ತದೆ. ಉತ್ತಮ ನಿದ್ರೆ ಮಾನಸಿಕ ಆರೋಗ್ಯಕ್ಕೂ ಒಳ್ಳೆಯದು. ಹಾಗಿರುವಾಗ ನೀವು ಒಳ್ಳೆಯ ನಿದ್ರೆ ಮಾಡುವುದು ಆರೋಗ್ಯಕ್ಕೆ ಅವಶ್ಯಕ. ಅನಾರೋಗ್ಯಕರ ಆಹಾರ ಸೇವನೆಯು ನಿಮ್ಮ ದೇಹದ ಒತ್ತಡ ಮತ್ತು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಇವುಗಳು ನಿದ್ರಾಹೀನತೆಗೆ ಕಾರಣವಾಗುತ್ತವೆ. ಉತ್ತಮ ನಿದ್ರೆಗಾಗಿ ನೀವು ಈ ಕೆಲವು ಆಹಾರಗಳನ್ನು ಸೇವಿಸಿ. ಇವು ನಿದ್ರಾ ಹೀನತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಈ ಕೆಲವು ಆಹಾರಗಳು ಯಾವುವು ಎಂಬುದನ್ನು ತಿಳಿದುಕೊಳ್ಳಿ.

ನಿದ್ರಾಹೀನತೆಯನ್ನು ತಡೆಯಲು ಸಹಾಯ ಮಾಡುವ ಆಹಾರ ಪದಾರ್ಥಗಳು ಬಿಸಿ ಹಾಲು ಮಲಗುವ ಮುನ್ನು ಬೆಚ್ಚಗಿನ ಹಾಲನ್ನು ಕುಡಿಯುವುದು ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ. ಹಾಲು ಮೆಲೊಟೋನಿನ್ ಮತ್ತು ಸಿರೊಟೋನಿನ್ಅನ್ನು ಒಳಗೊಂಡಿರುವ ಟ್ರಿಪ್ಟೊಫಾನ್ಅನ್ನು ಹೊಂದಿರುತ್ತದೆ. ಇವು ಮೆದುಳನ್ನು ಶಾಂತಗೊಳಿಸುತ್ತದೆ. ಇವು ನಿಮ್ಮ ಮನಸ್ಸನ್ನು ಶಾಂತಗೊಳಿಸುತ್ತದೆ. ಇವೆಲ್ಲವೂ ಉತ್ತಮ ನಿದ್ರೆ ಪಡೆಯಲು ಸಹಾಯ ಮಾಡುತ್ತವೆ.

ಬಾಳೆಹಣ್ಣು ಬಾಳೆಹಣ್ಣುಗಳು ನೈಸರ್ಗಿಕ ಕಾರ್ಬೋಹೈಟ್ರೇಟ್​ ಅಂಶವನ್ನು ಹೊಂದಿದ್ದು ಅದು ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ. ಬಾಳೆ ಹಣ್ಣುಗಳು ಪ್ರೋಬಯಾಟಿಕ್​ಗಳನ್ನು ಹೆಚ್ಚಿಸಲು ಸಹಾಯ ಮಾಡುವ ಕಿಣ್ವಗಳನ್ನು ಹೊಂದಿರುತ್ತದೆ. ಪ್ರಿಬಯಾಟಿಕ್​ಗಳನ್ನು ತಿನ್ನುವುದು ಶಾಂತಿಯಿಂದ ನಿದ್ರಿಸಲು ಮತ್ತು ಒತ್ತಡವನ್ನು ದೂರ ಮಾಡಲು ಸಹಾಯ ಮಾಡುತ್ತದೆ.

ಚೆರ್ರಿ ಚೆರ್ರಿಗಳು ಮೆಲಟೀನಿನ್ಅನ್ನು ಹೊಂದಿರುತ್ತದೆ. ಇದು ರಾತ್ರಿಯಲ್ಲಿ ಪೀನಲ್ ಗ್ರಂಥಿಯಿಂದ ಬಿಡುಗಡೆಯಾಗುವ ಹಾರ್ಮೋನ್. ಇದು ನಿಮಗೆ ಉತ್ತಮ ನಿದ್ರೆ ಪಡೆಯಲು ಸಹಾಯ ಮಾಡುತ್ತದೆ. ಇದರೊಂದಿಗೆ ಬೆರ್ರಿಗಳು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು.

ಜೇನು ಉತ್ತಮ ನಿದ್ರೆಗಾಗಿ ರಾತ್ರಿಯಲ್ಲಿ ಆಹಾರದಲ್ಲಿ ಜೇನುತುಪ್ಪ ಸೇರಿಸಿ. ನೈಸರ್ಗಿಕ ಸಕ್ಕರೆಯಿರುವುದರಿಂದ ಜೇನುತುಪ್ಪ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಟ್ರಿಪ್ಟೋಫಾನ್ ಮತ್ತು ಸಿರೊಟೀನಿನ್ಅನ್ನು ಮೆದುಳಿಗೆ ರವಾನಿಸಲು ಸಹಾಯ ಮಾಡುತ್ತದೆ. ಇದರಿಂದ ದೇಹ ವಿಶ್ರಾಂತಿ ಪಡೆಯಲು ಸಹಾಯಕವಾಗಿದೆ.

ಇದನ್ನೂ ಓದಿ:

Health Tips: ಡೈನಿಂಗ್ ಟೇಬಲ್ ಮೇಲೆ ಕೂತು ಊಟ ಮಾಡುತ್ತಿದ್ದೀರಾ? ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ

Health Tips: ಅತಿಯಾಗಿ ಬಿಸ್ಕತ್ ತಿನ್ನುವವರೇ ಎಚ್ಚರ!; 60 ಬ್ರ್ಯಾಂಡ್​ಗಳ ಬಿಸ್ಕತ್​ನಲ್ಲಿವೆ ಕ್ಯಾನ್ಸರ್​ಕಾರಕ ಅಂಶ

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ