AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oral Health : ಹಲ್ಲು ಹುಳುಕು ಆಗಿದ್ರೆ ಟೆನ್ಶನ್ ಬೇಡ, ಆಹಾರ ಕ್ರಮವು ಹೀಗಿರಲಿ

ಇಂದಿನ ಆಹಾರ ಪದ್ಧತಿಯಿಂದಾಗಿ ಹಲ್ಲು ಬೇಗನೇ ಹುಳುಕಾಗುತ್ತಿದೆ. ಹೀಗಾಗಿ ಹಲ್ಲು ನೋವು ಸೇರಿದಂತೆ ಬಾಯಿಯ ಆರೋಗ್ಯವು ಹಾಳಾಗುತ್ತಿದೆ. ಒಂದು ವೇಳೆ ಹಲ್ಲು ಹುಳುಕಾಗಿದ್ರೆ ತಕ್ಷಣವೇ ನೀವು ಸೇವಿಸುವ ಆಹಾರದಲ್ಲಿ ಈ ಆಹಾರಕ್ಕೆ ಹೆಚ್ಚು ಮಹತ್ವ ನೀಡುವುದು ಉತ್ತಮ.

Oral Health : ಹಲ್ಲು ಹುಳುಕು ಆಗಿದ್ರೆ ಟೆನ್ಶನ್ ಬೇಡ, ಆಹಾರ ಕ್ರಮವು ಹೀಗಿರಲಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jun 20, 2024 | 2:28 PM

Share

ಇತ್ತೀಚೆಗಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ದೊಡ್ಡವರಲ್ಲಿ ಹುಳುಕು ಹಲ್ಲಿನ ಸಮಸ್ಯೆಯೂ ಹಾಳಾಗುತ್ತಿದೆ. ಬಾಯಿಯನ್ನು ಸ್ವಚ್ಛವಾಗಿಟ್ಟುಕೊಳ್ಳದೇ ಇರುವುದು, ಹಲ್ಲಿಗೆ ಆಹಾರ ಅಂಟಿಕೊಳ್ಳುವುದು, ಪದೇ ಪದೇ ಆಹಾರ ಸೇವನೆ, ತಿನ್ನುವ ಆಹಾರದಲ್ಲಿ ಸ್ವಲ್ಪ ವ್ಯತ್ಯಾಸವಾದರೆ ಸಾಕು ಹಲ್ಲಿನ ಆರೋಗ್ಯವು ಹಾಳಾಗುತ್ತದೆ. ಹುಳುಕು ಹಲ್ಲುಗಳಿದ್ದರೆ ತಕ್ಷಣವೇ ಚಿಕಿತ್ಸೆ ಪಡೆದುಕೊಳ್ಳದೇ ಹೋದರೆ ಸಮಸ್ಯೆಯೂ ಬಿಗಡಾಯಿಸಬಹುದು. ಅದಲ್ಲದೇ, ಹಲ್ಲು ನೋವಿನ ಸಮಸ್ಯೆಯೂ ಉಂಟಾಗುತ್ತದೆ. ಹೀಗಾಗಿ ಹಲ್ಲು ಹುಳುಕು ಆಗಿದ್ದರೆ, ಈ ಆಹಾರಗಳನ್ನು ಹೆಚ್ಚೆಚ್ಚು ಸೇವಿಸಿ.

  • ಎಷ್ಟು ನೀರು ಕುಡಿಯುತ್ತೇವೆಯೋ ಆರೋಗ್ಯಕ್ಕೆ ಅಷ್ಟು ಒಳ್ಳೆಯದು ಎನ್ನುವುದು ತಿಳಿದಿರುವ ವಿಚಾರ. ನೀರು ಸೇವನೆಯೂ ಚರ್ಮದ ಆರೋಗ್ಯವಂತವಾಗಿರಿಸುವುದಲ್ಲದೆ, ಹಲ್ಲುಗಳನ್ನು ಸ್ವಚ್ಛಗೊಳಿಸುತ್ತದೆ. ನೀರು ಕುಡಿಯುವುದರಿಂದ ಹಲ್ಲುಗಳ ನಡುವೆ ಸಿಲುಕಿರುವ ಆಹಾರದ ಚೂರುಗಳನ್ನು ತೆಗೆದು ಹಾಕಿ ಹಲ್ಲುಗಳ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ.
  • ಹಲ್ಲು ಹುಳುಕಾಗಿದ್ದರೆ ದಿನಕ್ಕೆ ಎರಡು ಬಾರಿ ಬ್ರಷ್ ಮಾಡುವ ಮೂಲಕ ಬಾಯಿಯ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು.
  • ಆಹಾರ ಸೇವಿಸಿದ ಬಳಿಕ ಬಾಯಿ ಮುಕ್ಕಳಿಸುವ ಅಭ್ಯಾಸವು ಒಳ್ಳೆಯದು. ಸೇವಿಸಿದ ಆಹಾರವು ಹಲ್ಲಿನ ನಡುವೆ ಸಿಕ್ಕಿಕೊಂಡು ಹಲ್ಲಿನ ಹುಳುಕು ಸೇರಿದಂತೆ ಇನಿತ್ತರ ಸಮಸ್ಯೆಗೆ ಕಾರಣವಾಗುತ್ತದೆ. ಬಾಯಿ ಮುಕ್ಕಳಿಸುವ ಅಭ್ಯಾಸವು ಹಲ್ಲುಗಳನ್ನು ಸ್ವಚ್ಛಗೊಳಿಸಲು ಸಹಕಾರಿಯಾಗಿದೆ.
  • ಕ್ಯಾಲ್ಸಿಯಂಯುಕ್ತ ಆಹಾರಗಳಾದ ಹಾಲು ಹಾಗೂ ಮೊಟ್ಟೆಯ ಸೇವನೆಯೂ ಹಲ್ಲು ಹುಳುಕಾಗುವುದರಿಂದ ತಡೆಯುತ್ತದೆ.
  • ಹಣ್ಣುಗಳು, ಹಸಿರುವ ತರಕಾರಿಗಳು, ಅಧಿಕ ನಾರಿನಂಶವಿರುವ ತರಕಾರಿಗಳು ಹಾಗೂ ಧಾನ್ಯಗಳ ಸೇವನೆಯೂ ಹಲ್ಲುಗಳ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ.
  •  ನೈಸರ್ಗಿಕವಾಗಿ ಸಿಗುವ ಹಣ್ಣುಗಳನ್ನು ಜಗಿದು ತಿನ್ನುವುದರಿಂದ ಹಲ್ಲುಗಳಿಗೆ ಬೇಕಾದ ಪೋಷಕಾಂಶಗಳು ದೊರೆಯುವುದರೊಂದಿಗೆ ಹಲ್ಲುಗಳ ಆರೋಗ್ಯವು ಚೆನ್ನಾಗಿರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!