AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fruits For Under Eye Dark Circles: ಕಣ್ಣಿನ ಸುತ್ತಲಿನ ಕಪ್ಪು ಕಲೆ ಸಮಸ್ಯೆ ನಿವಾರಿಸಲು ಈ ಹಣ್ಣುಗಳು ಸಹಕಾರಿ

ಕಳಪೆಮಟ್ಟದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯ ಪಾಲನೆಯು ಆರೋಗ್ಯಕ್ಕೆ ಮಾತ್ರವಲ್ಲದೆ ಚರ್ಮದ ಮೇಲೂ ಪರಿಣಾಮ ಬೀರುತ್ತದೆ. ಈ ಸಮಸ್ಯೆಗಳಲ್ಲಿ ಡಾರ್ಕ್ ಸರ್ಕಲ್ ಸಮಸ್ಯೆ ಕೂಡಾ ಒಂದು. ದೇಹದಲ್ಲಿ ನೀರು ಮತ್ತು ವಿಟಮಿನ್ಗಳ ಕೊರೆತೆಯಿಂದ, ಕಪ್ಪು ವರ್ತುಲಗಳ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದಲ್ಲದೆ ನಿದ್ರೆಯ ಕೊರತೆಯಿಂದಲೂ ಈ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಈ ಸಮಸ್ಯೆಯಿಂದ ಪರಿಹಾರ ಪಡೆಯಲು ಅನೇಕ ಜನರು ದುಬಾರಿ ಉತ್ಪನ್ನಗಳನ್ನು ಬಳಸುತ್ತಾರ. ಆದರೆ ನಿಮ್ಮ ಆಹಾರ ಕ್ರಮದಲ್ಲಿ ಕೆಲವು ಹಣ್ಣುಗಳನ್ನು ಸೇರಿಸುವ ಮೂಲಕ ಈ ಸಮಸ್ಯೆಯಿಂದ ಸುಲಭ ಪರಿಹಾರವನ್ನು ಪಡೆಯಬಹುದು.

Fruits For Under Eye Dark Circles: ಕಣ್ಣಿನ ಸುತ್ತಲಿನ ಕಪ್ಪು ಕಲೆ ಸಮಸ್ಯೆ ನಿವಾರಿಸಲು ಈ ಹಣ್ಣುಗಳು ಸಹಕಾರಿ
Fruits For Under Eye Dark CirclesImage Credit source: Pinterest
ಮಾಲಾಶ್ರೀ ಅಂಚನ್​
| Edited By: |

Updated on: Sep 21, 2023 | 5:42 AM

Share

ಕಣ್ಣಿನ ಸುತ್ತಲೂ ಕಾಣಿಸಿಕೊಳ್ಳುವ ಕಪ್ಪು ಕಲೆಗಳು ಅನೇಕರನ್ನು ಕಾಡುವ ಒಂದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಹಲವು ಕಾರಣಗಳಿರಬಹುದು. ಅತಿಯಾದ ಒತ್ತಡ, ನಿದ್ರೆಯ ಕೊರತೆ, ಹಾರ್ಮೋನುಗಳ ಬದಲಾವಣೆ, ಮಿಟಮಿನ್ಗಳು ಮತ್ತು ಪೋಷಕಾಂಶಗಳ ಕೊರತೆ ಈ ಎಲ್ಲಾ ಕಾರಣಗಳಿಂದ ಕಣ್ಣಿನ ಸುತ್ತಲೂ ಕಪ್ಪು ವರ್ತುಲಗಳು ಕಾಣಿಸಿಕೊಳ್ಳುತ್ತವೆ. ಮಾತ್ರವಲ್ಲದೆ ಇದು ಮುಖದ ಸೌಂದರ್ಯವನ್ನು ಹಾಳು ಮಾಡುತ್ತದೆ. ಹಾಗಾಗಿ ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ಹೆಚ್ಚಿನವರು ಮಾರುಕಟ್ಟೆಯಲ್ಲಿ ಸಿಗುವ ದುಬಾರಿ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಈ ಉತ್ಪನ್ನಗಳಿಂದ ಪರಿಹಾರ ಸಿಗದಿದ್ದರೆ, ಆಂತರಿಕವಾಗಿ ನಿಮ್ಮ ದೇಹವನ್ನು ಪೋಷಿಸುವುದು ಅತ್ಯಗತ್ಯ. ಅದಕ್ಕಾಗಿ ವಿಟಮಿನ್ ಕೆ, ವಿಟಮಿನ್ ಸಿ ಮತ್ತು ವಿಟಮಿನ್ ಇ ಜೀವಸತ್ವಗಳನ್ನು ಒಳಗೊಂಡಿರುವ ಆಹಾರವನ್ನು ಸೇವನ ಮಾಡಬೇಕು. ಜೊತೆಗೆ ಪ್ರತಿನಿತ್ಯ ಕೆಲವೊಂದು ಹಣ್ಣುಗಳನ್ನು ಸೇವನೆ ಮಾಡಬೇಕು. ಇದು ದೇಹವನ್ನು ಪೋಷಣೆ ಮಾಡುವುದರೊಂದಿಗೆ ಕಣ್ಣಿನ ಸುತ್ತಲೂ ಕಾಣಿಸಿಕೊಳ್ಳುವ ಕಪ್ಪು ವರ್ತುಲ ಸಮಸ್ಯೆಗೆ ಪರಿಹಾರವನ್ನು ನೀಡುತ್ತದೆ.

ಕಣ್ಣಿನ ಸುತ್ತಲೂ ಕಾಣಿಸಿಕೊಳ್ಳುವ ಕಪ್ಪು ಕಲೆಗಳನ್ನು ತೊಡೆದು ಹಾಕಲು ಈ ಕೆಲವು ಹಣ್ಣುಗಳನ್ನು ಸೇವಿಸಿ:

ಕಿತ್ತಳೆ:

ಕಿತ್ತಳೆ ವಿಟಮಿನ್ ಸಿ ಯ ಸಮೃದ್ದ ಮೂಲವಾಗಿದೆ. ಡಾರ್ಕ್ ಸರ್ಕಲ್ ಸಮಸ್ಯೆಯನ್ನು ಕಡಿಮೆ ಮಾಡುವಲ್ಲಿ ಈ ಹಣ್ಣು ಸಹಕಾರಿಯಾಗಿದೆ. ಮತ್ತು ದೇಹದ ಕಾಲಜನ್ ಮಟ್ಟವನ್ನು ಹೆಚ್ಚಿಸಲು ಕೂಡಾ ಇದು ಸಹಕಾರಿ. ಚರ್ಮದಲ್ಲಿನ ಕಾಲಜನ್ ಕೊರತೆಯಿಂದಲೂ ಡಾರ್ಕ್ ಸರ್ಕಲ್ ಸಮಸ್ಯೆ ಹೆಚ್ಚುತ್ತದೆ. ಹಾಗಾಗಿ ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಕಿತ್ತಳೆ ಹಣ್ಣನ್ನು ಸೇರಿಸಿಕೊಳ್ಳಬೇಕು.

ಸೀಬೆ ಹಣ್ಣು:

ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಈ ಹಣ್ಣು ಚರ್ಮಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಪೇರಳೆ ಹಣ್ಣನ್ನು ತಿನ್ನುವುದರಿಂದ ಕಣ್ಣಿನ ಸುತ್ತಲಿನ ಕಪ್ಪು ವರ್ತುಲಗಳ ಸಮಸ್ಯೆಯನ್ನು ಕಡಿಮೆ ಮಾಡಬಹುದು. ವಿಟಮಿನ್ ಸಿ ಪೋಷಕಾಂಶವು ಈ ಹಣ್ಣಿನಲ್ಲಿ ಹೇರಳವಾಗಿ ಕಂಡುಬರುತ್ತದೆ. ಇದು ಚರ್ಮವನ್ನು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ.

ಅವಕಾಡೊ:

ಅವಕಾಡೊ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದು ಹೆಚ್ಚಿನ ಪ್ರಮಾಣದ ವಿಟಮಿನ್ ಈ ಪೋಷಕಾಂಶವನ್ನು ಹೊಂದಿರುತ್ತದೆ. ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೀವು ಪ್ರತಿದಿನ ನಿಮ್ಮ ಆಹಾರದಲ್ಲಿ ಅವಕಾಡೊವನ್ನು ಸೇರಿಸಿಸುವ ಮೂಲಕ ಡಾರ್ಕ್ ಸರ್ಕಲ್ ಸಮಸ್ಯೆಯಿಂದ ಪರಿಹಾರವನ್ನು ಪಡೆಯಬಹುದು.

ಇದನ್ನೂ ಓದಿ: ಕರಿಬೇವಿನ ಎಲೆಗಳಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ತಿಳಿದಿದೆಯಾ? ಮಾಹಿತಿ ಇಲ್ಲಿದೆ

ಪಪ್ಪಾಯಿ:

ಪೋಷಕಾಂಶಗಳಿಂದ ಸಮೃದ್ಧವಾಗಿರುವ ಈ ಹಣ್ಣು ಡಾರ್ಕ್ ಸರ್ಕಲ್ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ ಪಪ್ಪಾಯಿ ವಯಸ್ಸಾಗುವಿಕೆಯ ವಿರೋಧಿ ಗುಣಲಕ್ಷಣಗಳನ್ನು ಹೊಂದಿದ್ದು, ಇದು ತ್ವಚೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಂದ ಪರಿಹಾರವನ್ನು ಒದಗಿಸುತ್ತದೆ. ಹಾಗಾಗಿ ನೀವು ಪಪ್ಪಾಯಿಯನ್ನು ಹೆಚ್ಚಾಗಿ ಸೇವನೆ ಮಾಡಬೇಕು.

ಸೌತೆಕಾಯಿ:

ಸೌತೆಕಾಯಿಯಲ್ಲಿ ವಿಟಮಿನ್ ಕೆ ಸಮೃದ್ಧವಾಗಿದೆ. ಇದು ನಿಮ್ಮ ದೇಹವನ್ನು ಹೈಡ್ರೇಟ್ ಮಾಡುವುದು ಮಾತ್ರವಲ್ಲದೆ ಡಾರ್ಕ್ ಸರ್ಕಲ್ ಸಮಸ್ಯೆಯಿಂದಲೂ ಪರಿಹಾರವನ್ನು ನೀಡುತ್ತದೆ. ಅಲ್ಲದೆ ಸೌತೆಕಾಯಿಯಲ್ಲಿ ವಿಟಮಿನ್ ಎ, ಸಿ, ಇ ಮತ್ತು ವಿಟಮಿನ್ ಕೆ ಜೀವಸತ್ವಗಳಿದ್ದು, ಇದು ರಕ್ತ ಪರಿಚಲನೆಯನ್ನು ಸುಧಾರಿಸುವುದರೊಂದಿಗೆ ಡಾರ್ಕ್ ಸರ್ಕಲ್ ಸಮಸ್ಯೆಯನ್ನು ನಿವಾರಿಸುತ್ತದೆ.

ಬೆರ್ರಿ ಹಣ್ಣುಗಳು:

ನೀವು ಪ್ರತಿನಿತ್ಯ ಬೆರ್ರಿ ಹಣ್ಣುಗಳನ್ನು ಸೇವನೆ ಮಾಡಬಹುದು. ಏಕೆಂದರೆ ಈ ಹಣ್ಣುಗಳು ವಿಟಮಿನ್ ಸಿ, ಒಮೆಗಾ-3, ವಿಟಮಿನ್ ಕೆ ಮತ್ತು ಮ್ಯಾಂಗನೀಸ್ನ ಉತ್ತಮ ಮೂಲವಾಗಿದ್ದು, ಇದು ಕಣ್ಣಿನ ಸುತ್ತಲೂ ಕಾಣಿಸಿಕೊಳ್ಳುವ ಡಾರ್ಕ್ ಸರ್ಕಲ್ ಸಮಸ್ಯೆಯಿಂದ ಪರಿಹಾರವನ್ನು ಒದಗಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ