AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಈ ಅಭ್ಯಾಸಗಳು ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ

ಮಕ್ಕಳ ಬೆಳವಣಿಗೆಯಲ್ಲಿ ತಂದೆ ತಾಯಿಯ ಪಾತ್ರ ಬಹುಮುಖ್ಯವಾದದ್ದು. ಅದರಲ್ಲೂ ತಂದೆಯ ನಡವಳಿಕೆಗಳು ಮಕ್ಕಳನ್ನು ಸುಸಂಸ್ಕೃತರನ್ನಾಗಿಸುವಲ್ಲಿ, ಸಮಾದಲ್ಲಿ ಉತ್ತಮ ವ್ಯಕ್ತಿಗಳನ್ನಾಗಿಸುವಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ಹಾಗಿದ್ರೆ ತಂದೆಯ ಯಾವ ಅಭ್ಯಾಸಗಳು ಮಕ್ಕಳನ್ನು ಬೆಳೆಸುವಲ್ಲಿ ಸಕಾರಾತ್ಮಕ ಪರಿಣಾಮಗಳನ್ನು ಬೀರುತ್ತವೆ ಎಂಬುದನ್ನು ನೋಡೋಣ ಬನ್ನಿ.

ತಂದೆಯ ಈ ಅಭ್ಯಾಸಗಳು ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on:May 14, 2026 | 7:06 PM

Share

ಮಕ್ಕಳ (children’s) ಬೆಳವಣಿಗೆಯಲ್ಲಿ ತಾಯಿಯಷ್ಟೆ ತಂದೆಗೂ ಜವಾಬ್ದಾರಿಗಳಿವೆ. ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗುವಲ್ಲಿ ತಂದೆ-ತಾಯಿ ಇಬ್ಬರ ಪಾತ್ರ ಕೂಡ ಮುಖ್ಯವಾಗಿರುತ್ತದೆ. ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಶಿಕ್ಷಣ ಮಾತ್ರವಲ್ಲ ಪೋಷಕರು ಸಹ ಮುಖ್ಯ ಪಾತ್ರವನ್ನು ವಹಿಸುತ್ತಾರೆ. ಅದರಲ್ಲೂ ಮಕ್ಕಳನ್ನು ಗೌರವಾನ್ವಿತ ವ್ಯಕ್ತಿಗಳನ್ನಾಗಿ, ಉತ್ತಮ ನಾಗರಿಕರನ್ನಾಗಿ ಮಾಡುವಲ್ಲಿ ತಂದೆ ಮುಖ್ಯ ಪಾತ್ರವನ್ನು ವಹಿಸುತ್ತಾರೆ. ಹಾಗಾಗಿ ತಂದೆಯಂದಿರು  ಈ ಕೆಲವು ಅಭ್ಯಾಸಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ, ಅವರ ಮಕ್ಕಳನ್ನು ಸಹ ಸುಸಂಸ್ಕೃತರನ್ನಾಗಿ, ಆದರ್ಶ ನಾಗರಿಕನನ್ನು ರೂಪಿಸಬಹುದು. ಹಾಗಿದ್ದರೆ ತಂದೆಯ ಯಾವ ಅಭ್ಯಾಸಗಳು ಮಕ್ಕಳನ್ನು ಸುಸಂಸ್ಕೃತರನ್ನಾಗಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.

ತಂದೆಯ ಯಾವ ಅಭ್ಯಾಸಗಳು ಮಕ್ಕಳನ್ನು ಸುಸಂಸ್ಕೃತರನ್ನಾಗಿಸುತ್ತವೆ?

ಪ್ರಾಮಾಣಿಕತೆ ಮತ್ತು ಸತ್ಯದ ಹಾದಿ: ಮಕ್ಕಳು ನಾವು ಹೇಳುವುದನ್ನು ಕೆಲವೊಂದು ಬಾರಿ ಕೇಳುವುದಿಲ್ಲ ಆದರೆ ನಾವು  ಏನು ಮಾಡುತ್ತೆವೆಯೋ ಅದನ್ನೇ ನೋಡಿ ಅವರು ಕಲಿಯುತ್ತಾರೆ. ಹಾಗಿರುವಾಗ ಒಬ್ಬ ತಂದೆ ತನ್ನ ಕೆಲಸ, ಸಂಬಂಧ ಮತ್ತು ಸಮಾಜದಲ್ಲಿ ಪ್ರಾಮಾಣಿಕರಾಗಿದ್ದರೆ, ಮಕ್ಕಳು ಸ್ವಾಭಾವಿಕವಾಗಿ ಪ್ರಾಮಾಣಿಕತೆಯ ಮಹತ್ವವನ್ನು ಕಲಿಯುತ್ತಾರೆ.  ತಂದೆಯ ಈ ಅಭ್ಯಾಸವು ಮಕ್ಕಳಲ್ಲಿ ಪ್ರಾಮಾಣಿಕತೆಯನ್ನು ಗುಣವನ್ನು ಬೆಳೆಸುತ್ತದೆ. ಭವಿಷ್ಯದಲ್ಲಿ ಅವರನ್ನು ವಿಶ್ವಾಸಾರ್ಹ ವ್ಯಕ್ತಿಗಳನ್ನಾಗಿ ಮಾಡುತ್ತದೆ.

ಶಿಸ್ತು ಮತ್ತು ಸಮಯಪಾಲನೆ: ಬೆಳಗ್ಗೆ ಬೇಗನೆ ಏಳುವುದು, ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಪೂರ್ಣಗೊಳಿಸುವುದು, ಸಮಯಕ್ಕೆ ಸರಿಯಾಗಿ ಊಟ ಮಾಡುವುದು, ವ್ಯಾಯಾಮ ಮಾಡುವುದು ಇವೆಲ್ಲವನ್ನು ಶಿಸ್ತು ಬದ್ಧವಾಗಿ ಪಾಲಿಸಿದರೆ, ಸಮಯವನ್ನು ಸರಿಯಾಗಿ ಪಾಲಿಸಿದರೆ ಮಕ್ಕಳು ಸಹ ಇದನ್ನೇ ಕಲಿಯುತ್ತಾರೆ. ಮಕ್ಕಳು ಸಹ ಈ ಶಿಸ್ತನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೆ.

ಮಹಿಳೆಯರಿಗೆ ಗೌರವ ನೀಡುವುದು: ಮಕ್ಕಳು ತಮ್ಮ ತಂದೆ ತಮ್ಮ ತಾಯಿ ಮತ್ತು ಇತರ ಮಹಿಳೆಯರೊಂದಿಗೆ ಹೇಗೆ ವರ್ತಿಸುತ್ತಾರೆ ಎಂಬುದನ್ನು ಗಮನಿಸುವ ಮೂಲಕ ಸಂಬಂಧಗಳಿಗೆ ಗೌರವವನ್ನು ನೀಡುವುದನ್ನು, ಮಹಿಳೆಯರ ಜೊತೆ ಹೇಗೆ ವರ್ತಿಸಬೇಕು ಎಂಬುದನ್ನು ಕಲಿಯುತ್ತಾರೆ. ತಂದೆ ಮನೆಯಲ್ಲಿ ಗೌರವಯುತ ಭಾಷೆ ಮತ್ತು ನಡವಳಿಕೆಯನ್ನು ಬಳಸಿದರೆ, ಮಕ್ಕಳು ಸಹ ಸಭ್ಯ ರೀತಿಯಲ್ಲಿ ಇರುತ್ತಾರೆ.

ಇದನ್ನೂ ಓದಿ: ಪೋಷಕರು ತಮ್ಮ ಮಕ್ಕಳ ಮುಂದೆ ವಿಷಯಗಳನ್ನು ಎಂದಿಗೂ ಚರ್ಚಿಸಬಾರದು

ತಾಳ್ಮೆ ಮತ್ತು ಸಂಯಮ: ಜೀವನದಲ್ಲಿ ಏರಿಳಿತಗಳು ಇದ್ದೇ ಇರುತ್ತವೆ. ಕಷ್ಟದ ಸಮಯದಲ್ಲಿ ತಾಳ್ಮೆಯನ್ನು ಕಳೆದುಕೊಳ್ಳದೆ ಸಂಯಮದಿಂದ ತಂದೆ ವರ್ತಿಸಿದರೆ, ತಂದೆಯ ಈ ತಾಳ್ಮೆ ಮಕ್ಕಳನ್ನು ಮಾನಸಿಕವಾಗಿ ಬಲಪಡಿಸುತ್ತದೆ. ಈ ಗುಣವು ಅವರನ್ನು ಸುಸಂಸ್ಕೃತರು ಮತ್ತು ಉತ್ತಮ ನಾಯಕರನ್ನಾಗಿ ರೂಪಿಸುತ್ತವೆ ಮತ್ತು ಮುಖ್ಯವಾಗಿ ಕಷ್ಟಗಳನ್ನು ಸಂಯಮದಿಂದ ಹೇಗೆ ಎದುರಿಸಿ ನಿಲ್ಲಬೇಕು ಎಂಬುದನ್ನು ಕಲಿಯುತ್ತಾರೆ.

ಇತರರಿಗೆ ಸಹಾಯ ಮಾಡುವ ಪ್ರವೃತ್ತಿ: ಮಕ್ಕಳು ತಮ್ಮ ತಂದೆ ಇತರರಿಗೆ ಸಹಾಯ ಮಾಡುವುದನ್ನು ನೋಡಿದಾಗ ಅವರು ಸಹ ಪರಹಿತಚಿಂತನೆ ಮತ್ತು ದಯೆಯ ಮೌಲ್ಯಗಳನ್ನು ಬೆಳೆಸಿಕೊಳ್ಳುತ್ತಾರೆ. ಅಗತ್ಯವಿರುವವರಿಗೆ ಆರ್ಥಿಕ ಸಹಾಯ ಮಾಡುವುದಾಗಲಿ ಅಥವಾ ಸಾಮಾಜಿಕ ಸೇವೆ ಮಾಡುವುದಾಗಲಿ ಈ ಎಲ್ಲಾ ಸದ್ಗುಣಗಳು ಮಕ್ಕಳಲ್ಲಿ ಸಹಾನುಭೂತಿಯನ್ನು ತುಂಬುತ್ತವೆ, ಮಕ್ಕಳನ್ನು ದಯಾಳು ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:05 pm, Thu, 14 May 26

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು