AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಪದೇ ಪದೇ ಕಾಡುವ ಜೇಡರ ಬಲೆಗಳ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಮನೆಮದ್ದುಗಳು ಬೆಸ್ಟ್‌

ಮನೆಯ ಸೀಲಿಂಗ್, ಮೂಲೆಗಳು, ಗೋಡೆಗಳಲ್ಲಿ ಜೇಡಗಳು ಬಲೆ ಕಟ್ಟುತ್ತಿರುತ್ತವೆ. ಈ ಜೇಡರ ಬಲೆ ಮನೆಯ ಅಂದವನ್ನೇ ಹಾಳು ಮಾಡಿಬಿಡುತ್ತದೆ. ಅಷ್ಟು ಮಾತ್ರವಲ್ಲದೆ ಎಷ್ಟೇ ಕ್ಲೀನ್‌ ಮಾಡಿದ್ರೂ ಸಹ ಜೇಡರ ಬಲೆಗಳು ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತಿರುತ್ತವೆ. ಹೀಗಿರುವಾಗ ಈ ಕೆಲವೊಂದು ಪವರ್‌ಫುಲ್‌ ಮನೆಮದ್ದುಗಳ ಸಹಾಯದಿಂದ ಜೇಡರಬಲೆಗಳನ್ನು ಬುಡ ಸಮೇತ ನಿರ್ಮೂಲನೆ ಮಾಡಬಹುದು.

ಮನೆಯಲ್ಲಿ ಪದೇ ಪದೇ ಕಾಡುವ ಜೇಡರ ಬಲೆಗಳ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಮನೆಮದ್ದುಗಳು ಬೆಸ್ಟ್‌
ಜೇಡರ ಬಲೆImage Credit source: Pinterest
ಮಾಲಾಶ್ರೀ ಅಂಚನ್​
|

Updated on: Apr 09, 2026 | 4:42 PM

Share

ಇಲಿ, ಹಲ್ಲಿ, ಸೊಳ್ಳೆ, ಜಿರಳೆಗಳ ಕಾಟ ಇರುವಂತೆ ಹೆಚ್ಚಿನ ಮನೆಗಳಲ್ಲಿ ಜೇಡರ ಬಲೆಗಳ  (cobweb) ಸಮಸ್ಯೆಯೂ ಇದ್ದೇ ಇರುತ್ತವೆ. ಮನೆಯ ಸೀಲಿಂಗ್‌, ಮೂಲೆಗಳು, ಗೋಡೆಗಳಲ್ಲಿ ಕಾಣಿಸಿಕೊಳ್ಳುವ ಜೇಡರ ಬಲೆಗಳು ಮನೆಯ ಸೌಂದರ್ಯವನ್ನು ಹಾಳು ಮಾಡುವುದಲ್ಲದೆ, ಈ ಜೇಡರ ಬಲೆಗಳು ಈ ಜೇಡರ ಬಲೆಗಳು ಆಸ್ತಮಾ ಮತ್ತು ಅಲರ್ಜಿಯಂತಹ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಹಾಗಾಗಿ ಇದನ್ನು ತೊಡೆದು ಹಾಕಲು ಅನೇಕರು ರಾಸಾಯನಿಕಯುಕ್ತ ಉತ್ಪನ್ನಗಳನ್ನು ಬಳಸುತ್ತಾರೆ. ಹೆಚ್ಚಿನ ಸಂದರ್ಭಗಳಲ್ಲಿ ಇವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದಿಲ್ಲ ಮತ್ತು ಪದೇ ಪದೇ ಜೇಡಗಳು ಪದೇ ಪದೇ ಬಲೆ ಕಟ್ಟುತ್ತವೆ. ಹೀಗಿರುವಾಗ ಈ ಜೇಡರಬಲೆಗಳನ್ನು ಪರಿಣಾಮಕಾರಿಯಾಗಿ ತೊಡೆದು ಹಾಕಲು ಈ ನೈಸರ್ಗಿಕ ವಿಧಾನವನ್ನು ಅನುಸರಿಸಿ.

ಜೇಡರ ಬಲೆಗಳನ್ನು ತೊಡೆದುಹಾಕಲು ಇಲ್ಲಿವೆ ಪರಿಣಾಮಕಾರಿ ಮಾರ್ಗ:

ವಿನೆಗರ್: ಜೇಡರ ಬಲೆಗಳನ್ನು ನಿವಾರಿಸಲು ವಿನೆಗರ್‌ ಕೂಡ ಪರಿಣಾಮಕಾರಿ. ಎರಡು ಅಥವಾ ಮೂರು ಬೆಳ್ಳುಳ್ಳಿ ಎಸಳುಗಳನ್ನು ಜಜ್ಜಿ ಪುಡಿಮಾಡಿ ಒಂದು ಕಪ್ ವಿನೆಗರ್‌ನಲ್ಲಿ ಚೆನ್ನಾಗಿ ಮಿಶ್ರಣ ಮಾಡಿ. ಈ ವಿನೆಗರ್ ಮತ್ತು ಬೆಳ್ಳುಳ್ಳಿ ದ್ರವವನ್ನು ಸ್ಪ್ರೇ ಬಾಟಲಿಗೆ ಸುರಿದು ಜೇಡಗಳು ಬಲೆ ಕಟ್ಟುವ ಪ್ರದೇಶಗಳಲ್ಲಿ ಸಿಂಪಡಿಸಿ. ಜೇಡಗಳು ಬೆಳ್ಳುಳ್ಳಿ ಮತ್ತು ವಿನೆಗರ್‌ನ ಬಲವಾದ ವಾಸನೆಯನ್ನು ಸಹಿಸುವುದಿಲ್ಲ. ಇದು ಅವುಗಳನ್ನು ಓಡಿಹೋಗುವಂತೆ ಮಾಡುತ್ತದೆ.

ಪುದೀನ ನೀರು: ಪುದೀನಾದ ಕಟುವಾದ ವಾಸನೆಯನ್ನು ಜೇಡಗಳು ಇಷ್ಟಪಡುವುದಿಲ್ಲ. ಆದ್ದರಿಂದ, ಕೆಲವು ಪುದೀನ ಎಲೆಗಳನ್ನು ತೆಗೆದುಕೊಂಡು ಸ್ವಲ್ಪ ನೀರಿನೊಂದಿಗೆ ಬೆರೆಸಿ ಪೇಸ್ಟ್ ಮಾಡಿ. ನಂತರ, ಸ್ಪ್ರೇ ಬಾಟಲಿಯಲ್ಲಿ ಸ್ವಲ್ಪ ನೀರನ್ನು ತೆಗೆದುಕೊಂಡು ಅದಕ್ಕೆ ಈ ಪುದೀನ ಪೇಸ್ಟ್ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಜೇಡ ಗೂಡುಕಟ್ಟುವ ಪ್ರದೇಶಗಳಲ್ಲಿ ಸಿಂಪಡಿಸಿ. ಈ ಮಿಶ್ರಣದ ಬಲವಾದ ವಾಸನೆಯು ಜೇಡಗಳ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ ಮತ್ತು ಅವು ಹೊರಗೆ ಹೋಗುವಂತೆ ಮಾಡುತ್ತದೆ.

ದಾಲ್ಚಿನ್ನಿ ಪುಡಿ: ಜೇಡಗಳಿಗೆ ದಾಲ್ಚಿನ್ನಿ ವಾಸನೆ ಇಷ್ಟವಾಗುವುದಿಲ್ಲ. ಅದರಿಂದ ಹೊರಹೊಮ್ಮುವ ಬಲವಾದ ಸುವಾಸನೆಯು ಜೇಡಗಳು ಮನೆಯಿಂದ ಹೊರಗೆ ಹೋಗುವಂತೆ ಮಾಡುತ್ತದೆ ಎಂದು ಹೇಳಲಾಗುತ್ತದೆ. ಜೇಡಗಳು ಬಲೆ ಕಟ್ಟುವ ಸ್ಥಳಗಳಲ್ಲಿ, ಮನೆಯ ಮೂಲೆಗಳಲ್ಲಿ ಸ್ವಲ್ಪ ದಾಲ್ಚಿನ್ನಿ ಪುಡಿಯನ್ನು ಸಿಂಪಡಿಸಿದರೆ,  ದಾಲ್ಚಿನ್ನಿ ಎಣ್ಣೆಯನ್ನು ಸ್ವಲ್ಪ ನೀರಿನೊಂದಿಗೆ ಬೆರೆಸಿ ಸ್ಪ್ರೇ ಮಾಡುವುದರಿಂದ ಜೇಡ ಬಲೆ ಕಟ್ಟುವುದನ್ನು ಪರಿಣಾಮಕಾರಿಯಾಗಿ ತಡೆಯಬಹುದು.

ಇದನ್ನೂ ಓದಿ: ಬೇಸಿಗೆಯಲ್ಲಿ ತುಳಸಿ ಗಿಡ ಒಣಗಿ ಹೋಗದಂತೆ ನೋಡಿಕೊಳ್ಳಲು ಸಿಂಪಲ್‌ ಸಲಹೆ ಪಾಲಿಸಿ

ನಿಂಬೆ ಸಿಪ್ಪೆ: ಜೇಡರ ಬಲೆಗಳನ್ನು ತೊಡೆದುಹಾಕಲು ನಿಂಬೆ ಸಿಪ್ಪೆ ಕೂಡ ಪರಿಣಾಮಕಾರಿ.  ನಿಂಬೆ ಸಿಪ್ಪೆಗಳನ್ನು ಪುಡಿ ಮಾಡಿ ಒಂದು ಕಪ್ ಬೆಚ್ಚಗಿನ ನೀರಿನಲ್ಲಿ ಮಿಶ್ರಣ ಮಾಡಿ. ಈ ನೀರನ್ನು ಸ್ಪ್ರೇ ಬಾಟಲಿಗೆ ಸುರಿದು ಜೇಡಗಳು ಹೆಚ್ಚಾಗಿ ಗೂಡು ಕಟ್ಟುವ ಸ್ಥಳಗಳಾದ ಮನೆಯ ಮೂಲೆಗಳಲ್ಲಿ, ಬಾಗಿಲು ಮತ್ತು ಕಿಟಕಿಗಳ ಹಿಂದೆ ಸಿಂಪಡಿಸಿ. ಸಿಟ್ರಸ್ ವಾಸನೆಯು ಜೇಡಗಳನ್ನು ಹಿಮ್ಮೆಟ್ಟಿಸುತ್ತದೆ. ಇದಲ್ಲದೆ ಜೇಡರ ಬಲೆಗಳನ್ನು ತೊಡೆದು ಹಾಕಲು ಕರ್ಪೂರವನ್ನು ಸಹ ಬಳಸಬಹುದು.

ಬೇವಿನ ಎಲೆ: ಬೇವಿನ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ ಮತ್ತು ಕೀಟ ನಿವಾರಕ ಗುಣಗಳನ್ನು ಹೊಂದಿವೆ.  ಒಣಗಿದ ಬೇವಿನ ಎಲೆಗಳನ್ನು ಸುಟ್ಟಾಗ ಉತ್ಪತ್ತಿಯಾಗುವ ಹೊಗೆ ಜೇಡಗಳಿಗೆ ಇಷ್ಟವಾಗುವುದಿಲ್ಲ. ಈ ಮೂಲಕ ಜೇಡರ ಬಲೆಗಳನ್ನು ನಿವಾರಿಸಬಹುದು. ಇದಲ್ಲದೆ,  ಸ್ವಲ್ಪ ನೀರಿನೊಂದಿಗೆ ಬೇವಿನ ಎಣ್ಣೆಯನ್ನು ಬೆರೆಸಿ, ಅದರಲ್ಲಿ ಹತ್ತಿಯನ್ನು ಅದ್ದಿ ಮನೆಯ ಮೂಲೆಗಳಲ್ಲಿ ಇಟ್ಟರೆ, ಜೇಡಗಳು ಅಲ್ಲಿಂದ ಓಡಿಹೋಗುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!