AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parenting Tips : ಪೋಷಕರೇ ಮಕ್ಕಳ ಮುಂದೆ ಯಾವತ್ತೂ ಈ ರೀತಿ ನಡೆದುಕೊಳ್ಳಬೇಡಿ

ನಿಮ್ಮ ಮಕ್ಕಳನ್ನು ನೀವು ಹೇಗೆ ಬೆಳೆಸುತ್ತೀರಿ ಎನ್ನುವುದರ ಮೇಲೆ ಅವರ ನಡವಳಿಕೆ ಹಾಗೂ ಭವಿಷ್ಯವು ನಿರ್ಧಾರವಾಗುತ್ತದೆ. ಒಂದು ವೇಳೆ ಪೋಷಕರಾದ ನೀವುಗಳು ಮಕ್ಕಳನ್ನು ಬೆಳೆಸುವ ವೇಳೆ ಸ್ವಲ್ಪ ಎಚ್ಚರ ತಪ್ಪಿದರೂ ಮಕ್ಕಳು ಹಾದಿ ತಪ್ಪುತ್ತಾರೆ. ಅದಲ್ಲದೇ ಮಕ್ಕಳ ಮುಂದೆ ಫೋಷಕರ ಈ ವರ್ತನೆಗಳು ಅವರ ಮೇಲೆ ನಾನಾ ರೀತಿಯ ಪರಿಣಾಮಗಳು ಬೀರಬಹುದು. ಹೀಗಾಗಿ ತಂದೆ ತಾಯಿಗಳು ತಮ್ಮ ಮಕ್ಕಳಿರುವಾಗ ಈ ತಪ್ಪುಗಳನ್ನು ಮಾಡದೇ ಇರುವುದು ಒಳ್ಳೆಯದು.

Parenting Tips : ಪೋಷಕರೇ ಮಕ್ಕಳ ಮುಂದೆ ಯಾವತ್ತೂ ಈ ರೀತಿ ನಡೆದುಕೊಳ್ಳಬೇಡಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jul 12, 2024 | 4:14 PM

Share

ಮಕ್ಕಳನ್ನು ಬೆಳೆಸುವುದು ಎಂದರೆ ಅಷ್ಟು ಸುಲಭದ ಮಾತಲ್ಲ. ಮಗುವನ್ನು ದೈಹಿಕ, ಮಾನಸಿಕ ಹಾಗೂ ಆರೋಗ್ಯಯುತವಾಗಿ ಬೆಳೆಸುವಲ್ಲಿ ಪೋಷಕರ ಪಾತ್ರ ಬಹುದೊಡ್ಡದು. ಹೀಗಾಗಿ ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಸದ್ಗುಣಗಳೊಂದಿಗೆ ಬೆಳೆಸಿದರೆ ಉತ್ತಮ ವ್ಯಕ್ತಿಯಾಗಲು ಸಾಧ್ಯ. ಅದಲ್ಲದೇ ಮಕ್ಕಳೊಂದಿಗೆ ಈ ರೀತಿ ನಡೆದುಕೊಳ್ಳುವ ಪೋಷಕರು ಸಾವಿರ ಸಲ ಯೋಚಿಸಬೇಕು.

* ಪೋಷಕರು ಮಕ್ಕಳನ್ನು ಆಡಲು ಹೊರಗಡೆ ಬಿಡುವುದಿಲ್ಲ. ನಾಲ್ಕು ಗೋಡೆಗಳಲ್ಲಿ ನಡುವೆ ಮೊಬೈಲ್ ಕೊಟ್ಟು ಬಿಡುತ್ತಾರೆ. ಮಕ್ಕಳು ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದಲ್ಲದೇ ಮಕ್ಕಳು ಮನೆಯಲ್ಲಿರುವಾಗ ಹೆತ್ತವರು ಕೂಡ ಮೊಬೈಲ್ ನಲ್ಲೇ ಮುಳುಗಿರುತ್ತಾರೆ. ಪೋಷಕರ ಈ ಅಭ್ಯಾಸವು ಮಕ್ಕಳು ಮೊಬೈಲ್ ಬಳಸುವುದಕ್ಕೆ ಪ್ರೇರೇಪಿಸುತ್ತದೆ.

* ಮಕ್ಕಳ ವಿಷಯದಲ್ಲಿ ಪೋಷಕರು ಮಾಡುವ ತಪ್ಪೆಂದರೆ ತಮ್ಮ ಮಗುವನ್ನು ಇತರ ಮಕ್ಕಳೊಂದಿಗೆ ಹೋಲಿಕೆ ಮಾಡುವುದು. ಎಲ್ಲಾ ಮಕ್ಕಳ ಮನಸ್ಥಿತಿ ಒಂದೇ ರೀತಿ ಇರುವುದಿಲ್ಲ. ಹೆತ್ತವರ ಈ ನಡವಳಿಕೆಯು ಮಕ್ಕಳ ಮನಸ್ಸಿನ ಮೇಲೆ ಗಾಢವಾದ ಪರಿಣಾಮ ಬೀರಬಹುದು. ಬೇರೆ ಮಕ್ಕಳೊಂದಿಗೆ ಹೋಲಿಕೆ ಮಾಡುವುದರಿಂದ ಮಕ್ಕಳ ಮನಸ್ಸಿಗೆ ನೋವಾಗುವುದೇ ಹೆಚ್ಚು.

* ಮಗು ಸಣ್ಣ ಪುಟ್ಟ ತಪ್ಪು ಮಾಡಿದ ಕೂಡಲೇ ಪೋಷಕರು ಬೈಯಲು ಪ್ರಾರಂಭಿಸುವುದು. ಹೆತ್ತವರು ತಾಳ್ಮೆಯಿಂದಲೇ ತಪ್ಪನ್ನು ತಿದ್ದಿ ಹೇಳುವುದು ಒಳ್ಳೆಯದು. ಮಕ್ಕಳಿಗೆ ಹೀಗೆ ಬೈದರೆ ಮಕ್ಕಳು ಹಾಳಾಗಲು ಹೆತ್ತವರೇ ಕಾರಣವಾಗುತ್ತಾರೆ. ತಂದೆ ತಾಯಿ ಬೈಯುತ್ತಾರೆ ಎನ್ನುವ ಕಾರಣ ಏನಾದರೂ ತಪ್ಪು ಮಾಡಿದರೆ ಮುಚ್ಚಿಡುವ ಸಾಧ್ಯತೆಯಿರುತ್ತದೆ. ಇದು ಮಕ್ಕಳ ಹಾದಿ ತಪ್ಪಲು ಮುಖ್ಯ ಕಾರಣವಾಗುತ್ತದೆ.

ಇದನ್ನೂ ಓದಿ: ಮಲೆನಾಡಿನ ಸಾಂಪ್ರದಾಯಿಕ ಅಡುಗೆ ಕೋಳಿ ಕಜ್ಜಾಯ, ಇಲ್ಲಿದೆ ರೆಸಿಪಿ

* ತಮ್ಮ ಮಕ್ಕಳಿಗೆ ಯಾವುದರಲ್ಲಿ ಕೊರತೆಯಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳು ಏನು ಕೇಳಿದರೂ ಕೊಡಿಸುತ್ತಾರೆ. ಮಕ್ಕಳಿಗೆ ಹಣ ಬೆಲೆ ಹಾಗೂ ಬಡತನದ ಬಗ್ಗೆ ಸ್ವಲ್ಪವಾದರೂ ಅನುಭವಿರಬೇಕು. ಕೇಳಿದ್ದನ್ನೆಲ್ಲ ಕೊಡಿಸುವುದರಿಂದ ಎಲ್ಲಾ ವಸ್ತುಗಳು ಮಕ್ಕಳ ಕೈ ಸೇರುತ್ತದೆ. ಮಕ್ಕಳಿಗೆ ತಮ್ಮ ಭಾವನೆಗಳನ್ನು ನಿಯಂತ್ರಿಸುವುದನ್ನು ಕಲಿಸಿಕೊಡದಿದ್ದರೆ ಮಕ್ಕಳು ಹಾದಿ ತಪ್ಪುವುದರಲ್ಲಿ ಸಂದೇಹವಿಲ್ಲ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ