AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ನಿಮ್ಮನ್ನು ಕೇಳಿಕೊಳ್ಳಬೇಕಾದ ಪ್ರಶ್ನೆಗಳು

ನಾವು ತೆಗೆದುಕೊಳ್ಳುವ ನಿರ್ಧಾರವು ಜೀವನದ ದಿಕ್ಕನ್ನೇ ಬದಲಾಯಿಸುತ್ತದೆ ಎಂದಾದಾಗ ನೀವು ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ನಿಮ್ಮನ್ನು ನೀವು ಒಮ್ಮೆ ಕೇಳಿಕೊಳ್ಳಿ.

ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ನಿಮ್ಮನ್ನು ಕೇಳಿಕೊಳ್ಳಬೇಕಾದ ಪ್ರಶ್ನೆಗಳು
Work
TV9 Web
| Edited By: |

Updated on: Sep 27, 2022 | 6:50 AM

Share

ನಾವು ತೆಗೆದುಕೊಳ್ಳುವ ನಿರ್ಧಾರವು ಜೀವನದ ದಿಕ್ಕನ್ನೇ ಬದಲಾಯಿಸುತ್ತದೆ ಎಂದಾದಾಗ ನೀವು ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ನಿಮ್ಮನ್ನು ನೀವು ಒಮ್ಮೆ ಕೇಳಿಕೊಳ್ಳಿ. ಈ ನನ್ನ ನಿರ್ಧಾರದಿಂದ ಮುಂದೆ ನಾನು ಖುಷಿಯಾಗಿರಲು ಸಾಧ್ಯವೇ?, ನನ್ನ ನಿರ್ಧಾರದಿಂದ ಯಾರಿಗಾದರೂ ತೊಂದರೆಯಾಗುತ್ತಿದೆಯೇ?, ನನ್ನ ನಿರ್ಧಾರದಿಂದ ಮುಂದೊಂದು ದಿನ ನಾನು ಪಶ್ಚಾತಾಪ ಪಡಬೇಕಾಗುತ್ತದೆಯೇ? ಹೀಗೆ ಹತ್ತು ಹಲವಾರು ಪ್ರಶ್ನೆಗಳನ್ನು ನೀವು ನಿಮ್ಮನ್ನೇ ಕೇಳಿಕೊಳ್ಳಬೇಕಿದೆ.

ಕೆಲವು ನಿರ್ಧಾರವನ್ನು ನಾವು ತರಾತುರಿಯಲ್ಲಿ ತೆಗೆದುಕೊಂಡು ಬಳಿಕ ಪಶ್ಚಾತಾಪ ಪಡುತ್ತೇವೆ, ಕೆಲವು ನಿರ್ಧಾರಗಳನ್ನು ಮನಸ್ಸಿನಿಂದ ತೆಗೆದುಕೊಂಡರೆ ಕೆಲವನ್ನು ಹೃದಯದಿಂದ ತೆಗೆದುಕೊಳ್ಳುತ್ತೇವೆ. ಹಾಗಾಗಿ ಸಾಕಷ್ಟು ಯೋಚಿಸಿ ಬಳಿಕ ಉತ್ತಮ ನಿರ್ಧಾರಕ್ಕೆ ಬರುವುದು ಒಳಿತು. ಆದಾಗ್ಯೂ, ನಾವು ಅಂತಹ ಪ್ರಮುಖ ನಿರ್ಧಾರಗಳನ್ನು ಎದುರಿಸುತ್ತಿರುವಾಗ, ಅದನ್ನು ಸರಿಯಾದ ರೀತಿಯಲ್ಲಿ ಹೇಗೆ ನಿಭಾಯಿಸಬೇಕು ಎಂಬುದರ ಕುರಿತು ನಾವು ಹೆಚ್ಚಾಗಿ ಗೊಂದಲಕ್ಕೊಳಗಾಗುತ್ತೇವೆ. ಆತ್ಮಾವಲೋಕನ ಮಾಡಿಕೊಳ್ಳಬೇಕು.

ನಿರ್ಧಾರವೇನು: ನಾವು ತೆಗೆದುಕೊಳ್ಳುವ ನಿರ್ಧಾರ ಮತ್ತು ಅದು ನಮ್ಮ ಮೇಲೆ ಎಷ್ಟು ಪರಿಣಾಮ ಬೀರುತ್ತದೆ ಎಂಬುದರ ಬಗ್ಗೆ ನಮಗೆ ಸ್ಪಷ್ಟತೆ ಇರಬೇಕು.

ಪ್ರತಿಕ್ರಿಯೆ: ಕೆಲವೊಮ್ಮೆ ತಕ್ಷಣ ನಿರ್ಧಾರ ತೆಗೆದುಕೊಳ್ಳುವುದು, ಜೀವನಪೂರ್ತಿ ನಾವು ಕೊರಗುವಂತೆ ಮಾಡುತ್ತದೆ. ಹಾಗಾಗಿ ಯಾವಾಗಲೂ ಯೋಚಿಸಿ ನಿರ್ಧಾರವನ್ನು ತೆಗೆದುಕೊಳ್ಳಬೇಕು.

ಮಾಹಿತಿ: ನೀವು ನಿರ್ಧಾರವನ್ನು ತೆಗೆದುಕೊಳ್ಳಬೇಕಾದ ಆ ವಿಷಯ ಕುರಿತು ಸಂಪೂರ್ಣ ಮಾಹಿತಿ ನಿಮ್ಮ ಬಳಿ ಇರಬೇಕು.

ಭಾವನೆಗಳು: ಪ್ರಸ್ತುತ ಭಾವನೆಗಳು ನಿಮ್ಮ ನಿರ್ಧಾರದ ಮೇಲೆ ಪರಿಣಾಮ ಬೀರಬಹುದು. ಪರಿಣಾಮಗಳ ಬಗ್ಗೆ ತಿಳಿದಿರುವುದು ನಿರ್ಧಾರ ತೆಗೆದುಕೊಳ್ಳಲು ಆರೋಗ್ಯಕರ ಮಾರ್ಗವಾಗಿದೆ.

ಬ್ಲೈಂಡ್ ಸ್ಪಾಟ್‌ಗಳು: ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಯಾವಾಗಲೂ ಸಂಭಾವ್ಯ ಬ್ಲೈಂಡ್ ಸ್ಪಾಟ್‌ಗಳು ಮತ್ತು ಅಡೆತಡೆಗಳು ಇರುತ್ತವೆ. ಅವೆಲ್ಲವುಗಳ ಬಗ್ಗೆ ನೀವು ಆಲೋಚಿಸುವುದು ಒಳಿತು.

ಇತರರ ಪ್ರತಿಕ್ರಿಯೆ: ನಿರ್ಧಾರಕ್ಕೆ ಇತರರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ನಾವು ಮಾಡಿದ ನಿರ್ಧಾರದ ಮೇಲೆ ಪರಿಣಾಮ ಬೀರಬಹುದು.

ಅನುಭವಗಳು: ಇಂತಹ ವಿಚಾರಗಳಲ್ಲಿ ನಾವು ತೆಗೆದುಕೊಂಡಿರುವ ನಿರ್ಧಾರದಿಂದ ಈ ಹಿಂದೆ ಯಾವ್ಯಾವ ರೀತಿಯ ತೊಂದರೆಗಳನ್ನು ನಾವು ಅನುಭವಿಸಿದ್ದೇವೆ ಎಂಬುದರ ಬಗ್ಗೆ ಒಮ್ಮೆ ಆಲೋಚಿಸಿ.

ಫಲಿತಾಂಶಗಳು: ಪ್ರತಿ ನಿರ್ಧಾರವು ಫಲಿತಾಂಶವನ್ನು ಹೊಂದಿರುತ್ತದೆ. ಅಲ್ಪಾವಧಿಯ ಮತ್ತು ದೀರ್ಘಾವಧಿಯ ಫಲಿತಾಂಶಗಳನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?