AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ನಿಮ್ಮನ್ನು ಕೇಳಿಕೊಳ್ಳಬೇಕಾದ ಪ್ರಶ್ನೆಗಳು

ನಾವು ತೆಗೆದುಕೊಳ್ಳುವ ನಿರ್ಧಾರವು ಜೀವನದ ದಿಕ್ಕನ್ನೇ ಬದಲಾಯಿಸುತ್ತದೆ ಎಂದಾದಾಗ ನೀವು ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ನಿಮ್ಮನ್ನು ನೀವು ಒಮ್ಮೆ ಕೇಳಿಕೊಳ್ಳಿ.

ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ನಿಮ್ಮನ್ನು ಕೇಳಿಕೊಳ್ಳಬೇಕಾದ ಪ್ರಶ್ನೆಗಳು
Work
TV9 Web
| Updated By: ನಯನಾ ರಾಜೀವ್|

Updated on: Sep 27, 2022 | 6:50 AM

Share

ನಾವು ತೆಗೆದುಕೊಳ್ಳುವ ನಿರ್ಧಾರವು ಜೀವನದ ದಿಕ್ಕನ್ನೇ ಬದಲಾಯಿಸುತ್ತದೆ ಎಂದಾದಾಗ ನೀವು ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ನಿಮ್ಮನ್ನು ನೀವು ಒಮ್ಮೆ ಕೇಳಿಕೊಳ್ಳಿ. ಈ ನನ್ನ ನಿರ್ಧಾರದಿಂದ ಮುಂದೆ ನಾನು ಖುಷಿಯಾಗಿರಲು ಸಾಧ್ಯವೇ?, ನನ್ನ ನಿರ್ಧಾರದಿಂದ ಯಾರಿಗಾದರೂ ತೊಂದರೆಯಾಗುತ್ತಿದೆಯೇ?, ನನ್ನ ನಿರ್ಧಾರದಿಂದ ಮುಂದೊಂದು ದಿನ ನಾನು ಪಶ್ಚಾತಾಪ ಪಡಬೇಕಾಗುತ್ತದೆಯೇ? ಹೀಗೆ ಹತ್ತು ಹಲವಾರು ಪ್ರಶ್ನೆಗಳನ್ನು ನೀವು ನಿಮ್ಮನ್ನೇ ಕೇಳಿಕೊಳ್ಳಬೇಕಿದೆ.

ಕೆಲವು ನಿರ್ಧಾರವನ್ನು ನಾವು ತರಾತುರಿಯಲ್ಲಿ ತೆಗೆದುಕೊಂಡು ಬಳಿಕ ಪಶ್ಚಾತಾಪ ಪಡುತ್ತೇವೆ, ಕೆಲವು ನಿರ್ಧಾರಗಳನ್ನು ಮನಸ್ಸಿನಿಂದ ತೆಗೆದುಕೊಂಡರೆ ಕೆಲವನ್ನು ಹೃದಯದಿಂದ ತೆಗೆದುಕೊಳ್ಳುತ್ತೇವೆ. ಹಾಗಾಗಿ ಸಾಕಷ್ಟು ಯೋಚಿಸಿ ಬಳಿಕ ಉತ್ತಮ ನಿರ್ಧಾರಕ್ಕೆ ಬರುವುದು ಒಳಿತು. ಆದಾಗ್ಯೂ, ನಾವು ಅಂತಹ ಪ್ರಮುಖ ನಿರ್ಧಾರಗಳನ್ನು ಎದುರಿಸುತ್ತಿರುವಾಗ, ಅದನ್ನು ಸರಿಯಾದ ರೀತಿಯಲ್ಲಿ ಹೇಗೆ ನಿಭಾಯಿಸಬೇಕು ಎಂಬುದರ ಕುರಿತು ನಾವು ಹೆಚ್ಚಾಗಿ ಗೊಂದಲಕ್ಕೊಳಗಾಗುತ್ತೇವೆ. ಆತ್ಮಾವಲೋಕನ ಮಾಡಿಕೊಳ್ಳಬೇಕು.

ನಿರ್ಧಾರವೇನು: ನಾವು ತೆಗೆದುಕೊಳ್ಳುವ ನಿರ್ಧಾರ ಮತ್ತು ಅದು ನಮ್ಮ ಮೇಲೆ ಎಷ್ಟು ಪರಿಣಾಮ ಬೀರುತ್ತದೆ ಎಂಬುದರ ಬಗ್ಗೆ ನಮಗೆ ಸ್ಪಷ್ಟತೆ ಇರಬೇಕು.

ಪ್ರತಿಕ್ರಿಯೆ: ಕೆಲವೊಮ್ಮೆ ತಕ್ಷಣ ನಿರ್ಧಾರ ತೆಗೆದುಕೊಳ್ಳುವುದು, ಜೀವನಪೂರ್ತಿ ನಾವು ಕೊರಗುವಂತೆ ಮಾಡುತ್ತದೆ. ಹಾಗಾಗಿ ಯಾವಾಗಲೂ ಯೋಚಿಸಿ ನಿರ್ಧಾರವನ್ನು ತೆಗೆದುಕೊಳ್ಳಬೇಕು.

ಮಾಹಿತಿ: ನೀವು ನಿರ್ಧಾರವನ್ನು ತೆಗೆದುಕೊಳ್ಳಬೇಕಾದ ಆ ವಿಷಯ ಕುರಿತು ಸಂಪೂರ್ಣ ಮಾಹಿತಿ ನಿಮ್ಮ ಬಳಿ ಇರಬೇಕು.

ಭಾವನೆಗಳು: ಪ್ರಸ್ತುತ ಭಾವನೆಗಳು ನಿಮ್ಮ ನಿರ್ಧಾರದ ಮೇಲೆ ಪರಿಣಾಮ ಬೀರಬಹುದು. ಪರಿಣಾಮಗಳ ಬಗ್ಗೆ ತಿಳಿದಿರುವುದು ನಿರ್ಧಾರ ತೆಗೆದುಕೊಳ್ಳಲು ಆರೋಗ್ಯಕರ ಮಾರ್ಗವಾಗಿದೆ.

ಬ್ಲೈಂಡ್ ಸ್ಪಾಟ್‌ಗಳು: ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಯಾವಾಗಲೂ ಸಂಭಾವ್ಯ ಬ್ಲೈಂಡ್ ಸ್ಪಾಟ್‌ಗಳು ಮತ್ತು ಅಡೆತಡೆಗಳು ಇರುತ್ತವೆ. ಅವೆಲ್ಲವುಗಳ ಬಗ್ಗೆ ನೀವು ಆಲೋಚಿಸುವುದು ಒಳಿತು.

ಇತರರ ಪ್ರತಿಕ್ರಿಯೆ: ನಿರ್ಧಾರಕ್ಕೆ ಇತರರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ನಾವು ಮಾಡಿದ ನಿರ್ಧಾರದ ಮೇಲೆ ಪರಿಣಾಮ ಬೀರಬಹುದು.

ಅನುಭವಗಳು: ಇಂತಹ ವಿಚಾರಗಳಲ್ಲಿ ನಾವು ತೆಗೆದುಕೊಂಡಿರುವ ನಿರ್ಧಾರದಿಂದ ಈ ಹಿಂದೆ ಯಾವ್ಯಾವ ರೀತಿಯ ತೊಂದರೆಗಳನ್ನು ನಾವು ಅನುಭವಿಸಿದ್ದೇವೆ ಎಂಬುದರ ಬಗ್ಗೆ ಒಮ್ಮೆ ಆಲೋಚಿಸಿ.

ಫಲಿತಾಂಶಗಳು: ಪ್ರತಿ ನಿರ್ಧಾರವು ಫಲಿತಾಂಶವನ್ನು ಹೊಂದಿರುತ್ತದೆ. ಅಲ್ಪಾವಧಿಯ ಮತ್ತು ದೀರ್ಘಾವಧಿಯ ಫಲಿತಾಂಶಗಳನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ