AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips : ಪ್ರೀತಿಯಲ್ಲಿ ಬಿದ್ದ ಖುಷಿಯಲ್ಲಿ ಈ ವಿಚಾರಗಳನ್ನು ನಿಮ್ಮ ಪ್ರೇಯಸಿಗೆ ಹೇಳ್ಬೇಡಿ

ಈಗಿನ ಕಾಲದಲ್ಲಿ ಪ್ರೀತಿಗೆ ವ್ಯಾಲಿಡಿಟಿ ಖಂಡಿತವಿಲ್ಲ. ಬೆಳಗ್ಗೆ ಲವ್ ಪ್ರಪೋಸ್ ಮಾಡಿದರೆ, ಸಂಜೆ ವೇಳೆಗೆ ಬ್ರೇಕ್ ಕೂಡ ಆಗಬಹುದು. ಹೀಗಾಗಿ ಪ್ರೀತಿಯ ಬಂಧ ಯಾವಾಗ ಮುರಿದು ಹೋಗುತ್ತದೆ ಎಂದು ಹೇಳುವುದೇ ಕಷ್ಟ. ಇಬ್ಬರೂ ತಿಳುವಳಿಕೆ ಹೊಂದಿದ್ದು ಸಂಬಂಧವು ಗಟ್ಟಿಯಾಗಿದ್ದರೆ ಮಾತ್ರ ಕೆಲವೊಂದು ವಿಚಾರಗಳನ್ನು ಪ್ರೇಯಸಿಯೊಂದಿಗೆ ಹಂಚಿಕೊಳ್ಳಿ. ಇಲ್ಲದಿದ್ದರೆ ನಿಮ್ಮ ಬದುಕಿನ ಈ ವಿಷಯಗಳನ್ನು ಪ್ರೀತಿಸುವವಳೊಂದಿಗೆ ಹಂಚಿಕೊಳ್ಳುವುದು ಒಳಿತಲ್ಲ.

Relationship Tips : ಪ್ರೀತಿಯಲ್ಲಿ ಬಿದ್ದ ಖುಷಿಯಲ್ಲಿ ಈ ವಿಚಾರಗಳನ್ನು ನಿಮ್ಮ ಪ್ರೇಯಸಿಗೆ ಹೇಳ್ಬೇಡಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jun 19, 2024 | 12:36 PM

Share

ಪ್ರೀತಿ ಎಂಬುದು ಸುಂದರ ಅನುಭವ. ಆದರೆ ಈ ಪ್ರೀತಿಯನ್ನು ಪ್ರೀತಿಸುವ ವ್ಯಕ್ತಿಯೊಂದಿಗೆ ಹಂಚಿಕೊಳ್ಳುವುದು ಸುಲಭದ ಮಾತಲ್ಲ. ಎಷ್ಟೇ ಧೈರ್ಯವಾಗಿರುವ ವ್ಯಕ್ತಿಯಾಗಿದ್ದರೂ ಪ್ರೀತಿಯನ್ನು ವ್ಯಕ್ತಪಡಿಸುವ ವಿಷಯಕ್ಕೆ ಬಂದಾಗ ಸ್ವಲ್ಪ ಭಯ ಇದ್ದೆ ಇರುತ್ತದೆ. ನನ್ನ ಪ್ರೀತಿಯನ್ನು ತಿರಸ್ಕರಿಸಿದರೆ ಏನು ಮಾಡೋದು ಎನ್ನುವ ಸಣ್ಣ ಭಯವೊಂದು ಕಾಡುತ್ತಿರುತ್ತದೆ. ಪ್ರೇಮ ನಿವೇದನೆಗೆ ಪ್ರೇಯಸಿ ಗ್ರೀನ್ ಸಿಗ್ನಲ್ ಕೊಟ್ಟ ಕೂಡಲೇ ಈ ವಿಚಾರಗಳನ್ನು ಹೇಳಿ ಸಂಬಂಧವನ್ನು ಹಾಳು ಮಾಡಿಕೊಳ್ಳಬೇಡಿ. ಈ ವಿಚಾರಗಳಿಂದ ಪ್ರೇಯಸಿಯೂ ನಿಮ್ಮನ್ನು ಬಿಟ್ಟು ಹೋಗುವ ಸಾಧ್ಯತೆಯೇ ಹೆಚ್ಚು.

* ದೌರ್ಬಲ್ಯಗಳ ಬಗ್ಗೆ ಹೇಳಿಕೊಳ್ಳಬೇಡಿ : ಯಾವುದೇ ವ್ಯಕ್ತಿಯೂ ಪರಿಪೂರ್ಣನಲ್ಲ. ಹೀಗಾಗಿ ಹುಡುಗನಾಗಿರಲಿ ಅಥವಾ ಹುಡುಗಿಯಾಗಿರಲಿ ಅವರಿಗೆ ತನ್ನದೇ ಆದ ದೌರ್ಬಲ್ಯಗಳಿರುತ್ತದೆ. ಸಂಬಂಧವನ್ನು ಬೆಳೆಸಿದ ಪ್ರಾರಂಭದಲ್ಲಿಯೇ ಹುಡುಗಿಯೊಂದಿಗೆ ತನ್ನ ದೌರ್ಬಲ್ಯಗಳನ್ನು ಹೇಳಬೇಡಿ. ಕೆಲವೊಮ್ಮೆ ನಿಮ್ಮ ಸಂಗಾತಿ ಇದರ ಲಾಭ ಪಡೆದುಕೊಳ್ಳುವ ಸಂದರ್ಭಗಳೇ ಹೆಚ್ಚು. ಹೀಗಾಗಿ ಮೊದಲು ನಿಮ್ಮ ಸಂಗಾತಿಯನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ, ಆಕೆ ಗುಣ ನಡವಳಿಕೆಯನ್ನು ನೋಡಿ ಆ ಬಳಿಕ ಈ ಬಗ್ಗೆ ಮನಸ್ಸು ಬಿಚ್ಚಿ ಮಾತನಾಡಿ.

* ಕುಟುಂಬದ ರಹಸ್ಯಗಳನ್ನು ಹಂಚಿಕೊಳ್ಳಬೇಡಿ : ಹೊಸ ಸಂಬಂಧವನ್ನು ಬೆಳೆಸಿದ ವೇಳೆಯಲ್ಲಿ ನಿಮ್ಮ ಗೆಳೆಯ ಅಥವಾ ಗೆಳತಿಯೊಂದಿಗೆ ಕುಟುಂಬದ ರಹಸ್ಯಗಳನ್ನು ಹಂಚಿಕೊಳ್ಳುವುದು ಉತ್ತಮವಲ್ಲ. ನೀವು ಬಹಿರಂಗಪಡಿಸುವ ರಹಸ್ಯಗಳಿಂದಾಗಿ ನಿಮ್ಮವರು ಬ್ಲ್ಯಾಕ್ ಮೇಲ್ ಮಾಡಬಹುದು. ಈ ರಹಸ್ಯಗಳು ನಿಮ್ಮ ಪ್ರೇಯಸಿಯ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರಿ ಪ್ರಾರಂಭದಲ್ಲೇ ಇಬ್ಬರ ನಡುವೆ ಅಂತರ ಮೂಡಬಹುದು.

ಇದನ್ನೂ ಓದಿ: ನಿಮ್ಮ ಸಂಗಾತಿ ಮುಂದೆ ಹೀಗೆ ಮಾಡಿದ್ರೆ ಬ್ರೇಕಪ್ ಗ್ಯಾರಂಟಿ

* ಅವಮಾನವಾದ ಘಟನೆಗಳು ನಿಮ್ಮಲ್ಲಿಯೇ ಇರಲಿ: ಕೆಲವರು ಹುಡುಗರು ಭಾವನಾತ್ಮಕ ಜೀವಿಗಳಾಗಿರುತ್ತಾರೆ. ಹೀಗಾಗಿ ಪ್ರೀತಿಯಲ್ಲಿ ಬಿದ್ದ ಪ್ರಾರಂಭದಲ್ಲಿ ತನ್ನ ಪ್ರೇಯಸಿಯೊಂದಿಗೆ ಎಲ್ಲಾ ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಆದರೆ ತಮ್ಮ ಜೀವನದ ಅವಮಾನವಾಗಿರುವ ಸಂಗತಿಗಳನ್ನು ಹಂಚಿಕೊಳ್ಳುವುದು ಒಳ್ಳೆಯದಲ್ಲ. ಪ್ರಾರಂಭದಲ್ಲಿಯೇ ನಿಮ್ಮ ಸಂಗಾತಿಯೂ ನಿಮ್ಮದೊಂದಿಗೆ ಭಿನ್ನಾಭಿಪ್ರಾಯವನ್ನು ಹೊಂದಿದ್ದರೆ ಅದೇ ವಿಚಾರವನ್ನು ಪದೇ ಪದೇ ಹೇಳುವ ಮೂಲಕ ನಿಮಗೆ ನೋವನ್ನು ಉಂಟು ಮಾಡಬಹುದು. ಹೀಗಾಗಿ ನಿಮ್ಮ ಜೀವನದಲ್ಲಿ ನೀವು ಎದುರಿಸಿದ ಅವಮಾನದಂತಹ ಕಹಿ ವಿಚಾರಗಳನ್ನು ಹೇಳುವುದನ್ನು ಆದಷ್ಟು ತಪ್ಪಿಸಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​