AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips : ಪ್ರೀತಿಯಲ್ಲಿ ಬಿದ್ದ ಖುಷಿಯಲ್ಲಿ ಈ ವಿಚಾರಗಳನ್ನು ನಿಮ್ಮ ಪ್ರೇಯಸಿಗೆ ಹೇಳ್ಬೇಡಿ

ಈಗಿನ ಕಾಲದಲ್ಲಿ ಪ್ರೀತಿಗೆ ವ್ಯಾಲಿಡಿಟಿ ಖಂಡಿತವಿಲ್ಲ. ಬೆಳಗ್ಗೆ ಲವ್ ಪ್ರಪೋಸ್ ಮಾಡಿದರೆ, ಸಂಜೆ ವೇಳೆಗೆ ಬ್ರೇಕ್ ಕೂಡ ಆಗಬಹುದು. ಹೀಗಾಗಿ ಪ್ರೀತಿಯ ಬಂಧ ಯಾವಾಗ ಮುರಿದು ಹೋಗುತ್ತದೆ ಎಂದು ಹೇಳುವುದೇ ಕಷ್ಟ. ಇಬ್ಬರೂ ತಿಳುವಳಿಕೆ ಹೊಂದಿದ್ದು ಸಂಬಂಧವು ಗಟ್ಟಿಯಾಗಿದ್ದರೆ ಮಾತ್ರ ಕೆಲವೊಂದು ವಿಚಾರಗಳನ್ನು ಪ್ರೇಯಸಿಯೊಂದಿಗೆ ಹಂಚಿಕೊಳ್ಳಿ. ಇಲ್ಲದಿದ್ದರೆ ನಿಮ್ಮ ಬದುಕಿನ ಈ ವಿಷಯಗಳನ್ನು ಪ್ರೀತಿಸುವವಳೊಂದಿಗೆ ಹಂಚಿಕೊಳ್ಳುವುದು ಒಳಿತಲ್ಲ.

Relationship Tips : ಪ್ರೀತಿಯಲ್ಲಿ ಬಿದ್ದ ಖುಷಿಯಲ್ಲಿ ಈ ವಿಚಾರಗಳನ್ನು ನಿಮ್ಮ ಪ್ರೇಯಸಿಗೆ ಹೇಳ್ಬೇಡಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jun 19, 2024 | 12:36 PM

Share

ಪ್ರೀತಿ ಎಂಬುದು ಸುಂದರ ಅನುಭವ. ಆದರೆ ಈ ಪ್ರೀತಿಯನ್ನು ಪ್ರೀತಿಸುವ ವ್ಯಕ್ತಿಯೊಂದಿಗೆ ಹಂಚಿಕೊಳ್ಳುವುದು ಸುಲಭದ ಮಾತಲ್ಲ. ಎಷ್ಟೇ ಧೈರ್ಯವಾಗಿರುವ ವ್ಯಕ್ತಿಯಾಗಿದ್ದರೂ ಪ್ರೀತಿಯನ್ನು ವ್ಯಕ್ತಪಡಿಸುವ ವಿಷಯಕ್ಕೆ ಬಂದಾಗ ಸ್ವಲ್ಪ ಭಯ ಇದ್ದೆ ಇರುತ್ತದೆ. ನನ್ನ ಪ್ರೀತಿಯನ್ನು ತಿರಸ್ಕರಿಸಿದರೆ ಏನು ಮಾಡೋದು ಎನ್ನುವ ಸಣ್ಣ ಭಯವೊಂದು ಕಾಡುತ್ತಿರುತ್ತದೆ. ಪ್ರೇಮ ನಿವೇದನೆಗೆ ಪ್ರೇಯಸಿ ಗ್ರೀನ್ ಸಿಗ್ನಲ್ ಕೊಟ್ಟ ಕೂಡಲೇ ಈ ವಿಚಾರಗಳನ್ನು ಹೇಳಿ ಸಂಬಂಧವನ್ನು ಹಾಳು ಮಾಡಿಕೊಳ್ಳಬೇಡಿ. ಈ ವಿಚಾರಗಳಿಂದ ಪ್ರೇಯಸಿಯೂ ನಿಮ್ಮನ್ನು ಬಿಟ್ಟು ಹೋಗುವ ಸಾಧ್ಯತೆಯೇ ಹೆಚ್ಚು.

* ದೌರ್ಬಲ್ಯಗಳ ಬಗ್ಗೆ ಹೇಳಿಕೊಳ್ಳಬೇಡಿ : ಯಾವುದೇ ವ್ಯಕ್ತಿಯೂ ಪರಿಪೂರ್ಣನಲ್ಲ. ಹೀಗಾಗಿ ಹುಡುಗನಾಗಿರಲಿ ಅಥವಾ ಹುಡುಗಿಯಾಗಿರಲಿ ಅವರಿಗೆ ತನ್ನದೇ ಆದ ದೌರ್ಬಲ್ಯಗಳಿರುತ್ತದೆ. ಸಂಬಂಧವನ್ನು ಬೆಳೆಸಿದ ಪ್ರಾರಂಭದಲ್ಲಿಯೇ ಹುಡುಗಿಯೊಂದಿಗೆ ತನ್ನ ದೌರ್ಬಲ್ಯಗಳನ್ನು ಹೇಳಬೇಡಿ. ಕೆಲವೊಮ್ಮೆ ನಿಮ್ಮ ಸಂಗಾತಿ ಇದರ ಲಾಭ ಪಡೆದುಕೊಳ್ಳುವ ಸಂದರ್ಭಗಳೇ ಹೆಚ್ಚು. ಹೀಗಾಗಿ ಮೊದಲು ನಿಮ್ಮ ಸಂಗಾತಿಯನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ, ಆಕೆ ಗುಣ ನಡವಳಿಕೆಯನ್ನು ನೋಡಿ ಆ ಬಳಿಕ ಈ ಬಗ್ಗೆ ಮನಸ್ಸು ಬಿಚ್ಚಿ ಮಾತನಾಡಿ.

* ಕುಟುಂಬದ ರಹಸ್ಯಗಳನ್ನು ಹಂಚಿಕೊಳ್ಳಬೇಡಿ : ಹೊಸ ಸಂಬಂಧವನ್ನು ಬೆಳೆಸಿದ ವೇಳೆಯಲ್ಲಿ ನಿಮ್ಮ ಗೆಳೆಯ ಅಥವಾ ಗೆಳತಿಯೊಂದಿಗೆ ಕುಟುಂಬದ ರಹಸ್ಯಗಳನ್ನು ಹಂಚಿಕೊಳ್ಳುವುದು ಉತ್ತಮವಲ್ಲ. ನೀವು ಬಹಿರಂಗಪಡಿಸುವ ರಹಸ್ಯಗಳಿಂದಾಗಿ ನಿಮ್ಮವರು ಬ್ಲ್ಯಾಕ್ ಮೇಲ್ ಮಾಡಬಹುದು. ಈ ರಹಸ್ಯಗಳು ನಿಮ್ಮ ಪ್ರೇಯಸಿಯ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರಿ ಪ್ರಾರಂಭದಲ್ಲೇ ಇಬ್ಬರ ನಡುವೆ ಅಂತರ ಮೂಡಬಹುದು.

ಇದನ್ನೂ ಓದಿ: ನಿಮ್ಮ ಸಂಗಾತಿ ಮುಂದೆ ಹೀಗೆ ಮಾಡಿದ್ರೆ ಬ್ರೇಕಪ್ ಗ್ಯಾರಂಟಿ

* ಅವಮಾನವಾದ ಘಟನೆಗಳು ನಿಮ್ಮಲ್ಲಿಯೇ ಇರಲಿ: ಕೆಲವರು ಹುಡುಗರು ಭಾವನಾತ್ಮಕ ಜೀವಿಗಳಾಗಿರುತ್ತಾರೆ. ಹೀಗಾಗಿ ಪ್ರೀತಿಯಲ್ಲಿ ಬಿದ್ದ ಪ್ರಾರಂಭದಲ್ಲಿ ತನ್ನ ಪ್ರೇಯಸಿಯೊಂದಿಗೆ ಎಲ್ಲಾ ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಆದರೆ ತಮ್ಮ ಜೀವನದ ಅವಮಾನವಾಗಿರುವ ಸಂಗತಿಗಳನ್ನು ಹಂಚಿಕೊಳ್ಳುವುದು ಒಳ್ಳೆಯದಲ್ಲ. ಪ್ರಾರಂಭದಲ್ಲಿಯೇ ನಿಮ್ಮ ಸಂಗಾತಿಯೂ ನಿಮ್ಮದೊಂದಿಗೆ ಭಿನ್ನಾಭಿಪ್ರಾಯವನ್ನು ಹೊಂದಿದ್ದರೆ ಅದೇ ವಿಚಾರವನ್ನು ಪದೇ ಪದೇ ಹೇಳುವ ಮೂಲಕ ನಿಮಗೆ ನೋವನ್ನು ಉಂಟು ಮಾಡಬಹುದು. ಹೀಗಾಗಿ ನಿಮ್ಮ ಜೀವನದಲ್ಲಿ ನೀವು ಎದುರಿಸಿದ ಅವಮಾನದಂತಹ ಕಹಿ ವಿಚಾರಗಳನ್ನು ಹೇಳುವುದನ್ನು ಆದಷ್ಟು ತಪ್ಪಿಸಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!