AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿನಿತ್ಯ ನಿಯಮಿತವಾಗಿ ವ್ಯಾಯಾಮ ಮಾಡದಿದ್ದರೆ ಏನೆಲ್ಲಾ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಗೊತ್ತಾ?

ನಿಮ್ಮ ಆರೋಗ್ಯದ ಕುರಿತಾಗಿ ಕಾಳಜಿ ಮಾಡಬೇಕಾದರೆ ವ್ಯಾಯಾಮ ಅತ್ಯವಶ್ಯಕ. ನಿಯಮಿತವಾದ ವ್ಯಾಯಾಮ ಮಾಡುವ ಅಭ್ಯಾಸವನ್ನು ಪ್ರತಿನಿತ್ಯ ರೂಢಿಯಲ್ಲಿಕೊಳ್ಳಿ.

ಪ್ರತಿನಿತ್ಯ ನಿಯಮಿತವಾಗಿ ವ್ಯಾಯಾಮ ಮಾಡದಿದ್ದರೆ ಏನೆಲ್ಲಾ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಗೊತ್ತಾ?
ಸಂಗ್ರಹ ಚಿತ್ರ
TV9 Web
| Updated By: preethi shettigar|

Updated on: Oct 23, 2021 | 9:17 AM

Share

ದೈಹಿಕ ವ್ಯಾಯಾಮ ನಿಜವಾಗಿಯೂ ನಿಮ್ಮ ಆರೋಗ್ಯವನ್ನು ಸುಧಾರಿಸುವಲ್ಲಿ ಸಹಾಯಕವಾಗಿದೆ. ನಿಯಮಿತವಾದ ವ್ಯಾಯಾಮವು ನಿಮ್ಮನ್ನು ಸದೃಢಗೊಳಿಸುತ್ತದೆ. ಜತೆಗೆ ಪ್ರತಿನಿತ್ಯ 45 ರಿಂದ 50 ನಿಮಿಷಗಳ ವ್ಯಾಯಾಮ ಮಾಡುವ ಅಭ್ಯಾಸ ರೂಢಿಯಲ್ಲಿರಲಿ. ನೀವು ವ್ಯಾಯಾಮ ಮಾಡದಿದ್ದರೆ, ಏನೆಲ್ಲಾ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂಬುದರ ಕುರಿತಾದ ಕೆಲವು ಮಾಹಿತಿಗಳು ಇಲ್ಲಿದೆ.

ಆರೋಗ್ಯಕರ ಜೀವನ ಶೈಲಿಗೆ ಪೌಷ್ಟಿಕ ಆಹಾರ ಸೇವನೆ ಮಾಡುವುದು ಜತೆಗೆ ದೇಹಕ್ಕೆ ಹಾನಿ ಮಾಡುವ ಧೂಮಪಾನ ಮದ್ಯಪಾನದಿಂದ ದೂರವಿರುವುದು ಒಳ್ಳೆಯದು. ಇದರ ಜತೆಗೆ ದೈಹಿಕವಾದ ವ್ಯಾಯಾಮ ಕೂಡಾ ಅಷ್ಟೇ ಮುಖ್ಯ. ಈಗೆಲ್ಲಾ ಎಲ್ಲಾ ಸಾಮಗ್ರಿಗಳನ್ನು ಅಂಗಡಿಗೆ ಹೋಗಿ ತರುವ ಅವಶ್ಯಕತೆಯೇ ಇಲ್ಲ. ಆನ್ಲೈನ್ ಮೂಲಕ ಆರ್ಡರ್ ಮಾಡುವುದರಿಂದ ನಡೆಯುವ ಅಭ್ಯಾಸವೇ ತಪ್ಪಿಹೋಗಿದೆ. ಕೂತಲ್ಲಿಯೇ ಎಲ್ಲವೂ ಬಂದಿರುತ್ತದೆ. ಹೀಗಿರುವಾಗ ನಿಮ್ಮ ಆರೋಗ್ಯದ ಕುರಿತಾಗಿ ಕಾಳಜಿ ಮಾಡಬೇಕಾದರೆ ವ್ಯಾಯಾಮ ಅತ್ಯವಶ್ಯಕ. ನಿಯಮಿತವಾದ ವ್ಯಾಯಾಮ ಮಾಡುವ ಅಭ್ಯಾಸವನ್ನು ಪ್ರತಿನಿತ್ಯ ರೂಢಿಯಲ್ಲಿಕೊಳ್ಳಿ.

ನೀವು ನಿಯಮಿತವಾಗಿ ವ್ಯಾಯಾಮ ಮಾಡದಿದ್ದರೆ ಉಂಟಾಗಬಹುದಾದ ಸಮಸ್ಯೆಗಳು ಹೃದಯ ಆರೋಗ್ಯ ಸುಧಾರಿಸುವುದಿಲ್ಲ ನಿಯಮಿತ ವ್ಯಾಯಾಮದಿಂದ ಹೃದಯದ ಆರೋಗ್ಯವು ಸುಧಾರಿಸುತ್ತದೆ. ಜತೆಗೆ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ನೀವು ದೀರ್ಘಕಾಲದವರೆಗೆ ವ್ಯಾಯಾಮ ಮಾಡದಿದ್ದರೆ ಹೃದಯದ ಆರೋಗ್ಯವು ಕುಂಠಿತಗೊಳ್ಳಬಹುದು. ಹಾಗಿರುವಾಗ ಪ್ರತಿನಿತ್ಯ ವ್ಯಾಯಾಮ ಮಾಡುವ ಅಭ್ಯಾಸವನ್ನು ರೂಢಿಯಿರಲಿ.

ಸ್ನಾಯುಗಳಲ್ಲಿ ದುರ್ಬಲತೆ ಸಾಕಷ್ಟು ದೈಹಿಕ ವ್ಯಾಯಾಮ ಮಾಡದಿದ್ದಾಗ ಸ್ನಾಯುವಿನ ಬಲವು ಕಡಿಮೆಯಾಗುತ್ತದೆ. ಜತೆಗೆ ಸ್ನಾಯು ಸೆಳೆತ, ನೋವುಗಳು ಕಂಡು ಬರುತ್ತವೆ. ಹೀಗಿರುವಾಗ ಪ್ರತಿನಿತ್ಯವೂ ನಿಯಮಿತವಾಗಿ ವ್ಯಾಯಾಮ ಮಾಡುವ ಅಭ್ಯಾಸ ರೂಢಿಯಲ್ಲಿರಲಿ.

ನಿದ್ರೆಯ ತೊಂದರೆ ಉತ್ತಮ ವ್ಯಾಯಾಮವು ನಿಮ್ಮ ಆರೋಗ್ಯವನ್ನು ಸುಧಾರಿಸಲು ನೆರವಾಗುತ್ತದೆ. ನಿದ್ರೆ ಕೊರತೆಯು ದೇಹಕ್ಕೆ ಸುಸ್ತು, ಆಯಾಸವನ್ನು ಉಂಟು ಮಾಡುತ್ತದೆ. ನಿದ್ರೆಯ ಕೊರತೆಯು ಹಾರ್ಮೋನುಗಳ ಸಮಸ್ಯೆಗಳೊಂದಿಗೆ ಸಂಭವಿಸುತ್ತದೆ. ಇದರಿಂದ ಮಧುಮೇಹದ ಅಪಾಯ, ತೂಕ ಹೆಚ್ಚಾಗುವುದು ಮತ್ತು ಮಾನಸಿಕ ಆರೋಗ್ಯ ಹದಗೆಡುವ ತೊಂದರೆಗಳು ಉಂಟಾಗಬಹುದು.

ಇದನ್ನೂ ಓದಿ:

Health Tips: ಸಾತ್ವಿಕ ಆಹಾರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು

Health Tips: ಬಿಸಿ ನೀರು ಕುಡಿಯುವಾಗ ಈ 3 ಪದಾರ್ಥಗಳನ್ನು ಸೇರಿಸಿ; ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ