AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diwali 2021: ದೀಪಾವಳಿ ಸಮಯದಲ್ಲಿ ಆರೋಗ್ಯವಾಗಿರಲು ಮತ್ತು ವಾಯು ಮಾಲಿನ್ಯ ತಡೆಗಟ್ಟಲು ಇಲ್ಲಿವೆ ಕೆಲವು ಸರಳ ಸಲಹೆಗಳು

ಸುರಕ್ಷಿತ ಮತ್ತು ಆರೋಗ್ಯಕರ ದೀಪಾವಳಿಯನ್ನು ಆಚರಿಸಲು ಇಲ್ಲಿದೆ ಕೆಲವು ಸರಳ ಸಲಹೆಗಳು. ಇವುಗಳನ್ನು ಅನುಸರಿಸುವ ಮೂಲಕ ಹಬ್ಬವನ್ನು ಸಂತೋಷದಿಂದ ಆಚರಿಸಿ.

Diwali 2021: ದೀಪಾವಳಿ ಸಮಯದಲ್ಲಿ ಆರೋಗ್ಯವಾಗಿರಲು ಮತ್ತು ವಾಯು ಮಾಲಿನ್ಯ ತಡೆಗಟ್ಟಲು ಇಲ್ಲಿವೆ ಕೆಲವು ಸರಳ ಸಲಹೆಗಳು
ಸಂಗ್ರಹ ಚಿತ್ರ
TV9 Web
| Updated By: shruti hegde|

Updated on: Nov 04, 2021 | 11:07 AM

Share

ದೀಪಾವಳಿ ಹಬ್ಬವನ್ನು ಎಲ್ಲಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಬ್ಬದ ಉತ್ಸಾಹದಲ್ಲಿ ನಮ್ಮ ಆರೋಗ್ಯದ ಬಗೆಯ ಕಾಳಜಿಯನ್ನು ಮರೆಯುವಂತಿಲ್ಲ. ಜೊತೆಗೆ ಪರಿಸರ ಮಾಲಿನ್ಯದ ಬಗ್ಗೆಯೂ ಹೆಚ್ಚು ಗಮನವಹಿಸಬೇಕು. ಹೀಗಿರುವಾಗ ಪಟಾಕಿ ಸಿಡಿಸುವುದು ಜೊತೆಗೆ ಅತಿಯಾದ ಸಿಹಿ ತಿಂಡಿಗಳನ್ನು ಸೇವಿಸುವುದರೊಂದಿಗೆ ಪರಿಸರ ಮಾಲಿನ್ಯವನ್ನು ಮತ್ತು ಆರೋಗ್ಯವನ್ನು ಹಾನಿಗೊಳಿಸಬೇಡಿ. ಈ ಕುರಿತಾಗಿ ಕೆಲವೊಂದಿಷ್ಟು ಸಲಹೆಗಳು ಈ ಕೆಳಗಿನಂತಿದೆ ನೆನಪಿನಲ್ಲಿರಲ್ಲಿ.

ವಾಯು ಮಾಲಿನ್ಯವು ಆರೋಗ್ಯ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಶ್ವಾಸನಾಳ ಸಂಬಂಧಿ ಕಾಯಿಲೆ, ಆಸ್ತಮಾ, ಆಯಾಸ, ಆತಂಕ, ತಲೆ ನೋವು, ಕಣ್ಣು, ಗಂಟಲು ಮತ್ತು ಮೂಗಿನಲ್ಲಿ ಉಸಿರಾಟ ತೊಂದರೆಗೆ ಕಾರಣವಾಗುತ್ತದೆ. ಜೊತೆಗೆ ನರ ಮತ್ತು ಹೃದಯನಾಳದ ಆರೋಗ್ಯಕ್ಕೆ ತೊಂದರೆಯುಂಟು ಮಾಡುತ್ತದೆ. ಕೊರೊನಾ ವೈರಸ್ ಸಾಂಕ್ರಾಮಿಕದಿಂದಾಗಿ ಶ್ವಾಸಕೋಶದ ಆರೋಗ್ಯ ಕೆಲವರಿಗೆ ಹದಗೆಟ್ಟಿರಬಹುದು. ಇಂತಹ ಸಮಯದಲ್ಲಿ ಮಾಲಿನ್ಯವಾದ ಗಾಳಿಯನ್ನು ಉಸಿರಾಟ ಮಾಡುವುದರಿಂದ ಸಮಸ್ಯೆ ಇನ್ನಷ್ಟು ಉಲ್ಬಣಗೊಳ್ಳುವ ಸಾಧ್ಯತೆಗಳಿರುತ್ತವೆ.

ಸಂತೋಷದಿಂದ ಸುರಕ್ಷಿತ ಮತ್ತು ಆರೋಗ್ಯಕರ ದೀಪಾವಳಿಯನ್ನು ಆಚರಿಸಲು ಇಲ್ಲಿದೆ ಕೆಲವು ಸರಳ ಸಲಹೆಗಳು ಪರಿಸರ ಮಾಲಿನ್ಯವನ್ನು ಕಡಿಮೆ ಮಾಡಲು ಅಗರಬತ್ತಿ, ಮೇಣದ ಬತ್ತಿ ಮತ್ತು ಪಟಾಕಿಯನ್ನು ತಪ್ಪಿಸಿ. ನೀವು ಎಲ್ಇಡಿ ದೀಪಗಳನ್ನು ಬಳಸಬಹುದು. ಇದು ಬೆಳಕಿನ ಕಣಗಳನ್ನು ಹೊರಸೂಸುವುದಿಲ್ಲ.

ನಿಮ್ಮ ಮನೆಯ ಬಾಗಿಲು ಕಿಟಕಿಗಳನ್ನು ತೆರೆದಿಡಿ. ಒಳ್ಳೆಯ ಗಾಳಿ ಮನೆಯೊಳಗೆ ಪ್ರವೇಶಿಸಲು ಸಹಾಯ ಮಾಡುತ್ತದೆ. ಆದರೆ ಪಟಾಕಿ ಸಿಡಿಸುವ ಸಂದರ್ಭದಲ್ಲಿ ಮನೆಯ ಬಾಗಿಲು ಕಿಟಕಿಗಳನ್ನು ತೆರೆದಿಡಬೇಡಿ. ಶ್ವಾಸಕೋಶ ತೊಂದರೆ ಇರುವವರಿಗೆ ಅಪಾಯವನ್ನು ಇನ್ನೂ ಹೆಚ್ಚಿಸುತ್ತದೆ.

ಪಟಾಕಿಗಳಿಂದ ಉಳಿದ ಅವಶೇಷಗಳನ್ನು ಮರುದಿನ ಮತ್ತೆ ಸುಡಬೇಡಿ. ಏಕೆಂದರೆ ನೈಟ್ರೋಜನ್ ಆಕ್ಸೈಡ್ ಮತ್ತು ಸಲ್ಫರ್ ಡೈ ಆಕ್ಸೈಡ್ ಕಣಗಳು ಕಣ್ಣಿನ ಆರೋಗ್ಯ ಮತ್ತು ಶ್ವಾಸಕೋಶದ ಆರೋಗ್ಯವನ್ನು ಹದಗೆಡಿಸುತ್ತದೆ.

ಕೊರೊನಾ ವೈರಸ್ ಸಾಂಕ್ರಾಮಿಕ ಇರುವುದರಿಂದ ಮು ಗವಸು ಧರಿಸಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಇದು ಕೇವಲ ಕೊರೊನಾ ವೈರಸ್ ರೋಗ ಹರಡದಂತೆ ಮುನ್ನಚ್ಚರಿಕೆ ವಹಿಸಲು ಮಾತ್ರವಲ್ಲದೇ ಮಾಲಿನ್ಯವಾದ ಗಾಳಿ ನಮ್ಮ ದೇಹಕ್ಕೆ ನೇರವಾಗಿ ಹೋಗದಂತೆ ನೋಡಿಕೊಳ್ಳುತ್ತದೆ.

ಈಗಾಗಲೇ ಶ್ವಾಸಕೋಶದ ತೊಂದರೆ, ಅಲರ್ಜಿಯಿಂದ ಬಳಲುತ್ತಿರುವವರು ಔಷಧಗಳನ್ನು ಸರಿಯಾಗಿ ತೆಗೆದುಕೊಳ್ಳಿ. ಜೊತೆಗೆ ಮಧುಮೇಹ, ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರು ಹಬ್ಬದ ದಿನ ಆಹಾರ ಸೇವಿಸುವ ಬಗ್ಗೆ ಲಕ್ಷ್ಯವಿರಲಿ.

ನಿಯಮಿತವಾದ ವ್ಯಾಯಾಮ ಅತಿ ಅವಶ್ಯಕ. ನಿಮ್ಮ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ವ್ಯಾಯಾಮ ಸಹಾಯಕವಾಗಿದೆ. ಹಾಗಾಗಿ ವ್ಯಾಯಾಮ ಅಭ್ಯಾಸವನ್ನು ಇಂದಿನಿಂದಲೇ ಪ್ರಾರಂಭಿಸಿ. ಶ್ವಾಸಕೋಶ ಸಂಬಂಧಿ ಕಾಯಿಲೆಗಳಿರುವವರಿಗೆ ಮತ್ತು ಶೀತ, ಕೆಮ್ಮಿನ ಸಮಸ್ಯೆ ಇರುವವರು ಪ್ರಾಣಾಯಾಮ ಮಾಡಬಹುದು. ಇದರಿಂದ ಆರೋಗ್ಯ ಸುಧಾರಿಸುತ್ತದೆ.

ಇದನ್ನೂ ಓದಿ:

Lungs: ಶ್ವಾಸಕೋಶ ಕಾಯಿಲೆಗಳ ಲಕ್ಷಣಗಳೇನು? ಇಲ್ಲಿವೆ ನೋಡಿ

Deepavali 2021: ದೀಪಾವಳಿ ಹಬ್ಬದ ಸಮಯದಲ್ಲಿ ಸಿಡಿಸುವ ಪಟಾಕಿ ಹೊಗೆಯಿಂದ ಶ್ವಾಸಕೋಶ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಲ್ಲಿದೆ 10 ಮಾರ್ಗಗಳು

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್