AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship: ಬೆಂಗಳೂರಲ್ಲಿ ಗಂಟೆಗಳ ಆಧಾರದಲ್ಲಿ ಬಾಡಿಗೆಗೆ ಸಿಗ್ತಾರಂತೆ ಬಾಯ್​ಫ್ರೆಂಡ್ಸ್​

ಪ್ರೀತಿ ಕೈಕೊಟ್ಟಿದೆ, ಪ್ರೇಮಿ ದೂರಾಗಿದ್ದಾನೆ, ಆತ ನಿಜವಾಗಿಯೂ ನಿಮ್ಮನ್ನು ಪ್ರೀತಿಸಿಯೇ ಇರಲಿಲ್ಲ ಎನ್ನುವ ಫೀಲಿಂಗ್​ನಲ್ಲಿರಬೇಡಿ. ಇವೆಲ್ಲವನ್ನು ಹಿಮ್ಮೆಟ್ಟಿ ಒಂದು ಹೆಜ್ಜೆ ಮುಂದಿಡಿ.

Relationship: ಬೆಂಗಳೂರಲ್ಲಿ ಗಂಟೆಗಳ ಆಧಾರದಲ್ಲಿ ಬಾಡಿಗೆಗೆ ಸಿಗ್ತಾರಂತೆ ಬಾಯ್​ಫ್ರೆಂಡ್ಸ್​
Friend
TV9 Web
| Edited By: |

Updated on: Sep 26, 2022 | 2:32 PM

Share

ಪ್ರೀತಿ ಕೈಕೊಟ್ಟಿದೆ, ಪ್ರೇಮಿ ದೂರಾಗಿದ್ದಾನೆ, ಆತ ನಿಜವಾಗಿಯೂ ಪ್ರೀತಿಸಿಯೇ ಇರಲಿಲ್ಲ ಎನ್ನುವ ಫೀಲಿಂಗ್​ನಲ್ಲಿರಬೇಡಿ. ಇವೆಲ್ಲವನ್ನು ಹಿಮ್ಮೆಟ್ಟಿ ಒಂದು ಹೆಜ್ಜೆ ಮುಂದಿಡಿ. ಜೀವನವೆಂದ ಮೇಲೆ ಪ್ರೀತಿ, ಅಟ್ರ್ಯಾಕ್ಷನ್, ಮೋಸ ಇವೆಲ್ಲವನ್ನೂ ಇದ್ದೇ ಇರುತ್ತದೆ. ಅದಕ್ಕೂ ಮೀರಿದ್ದು ಕೂಡ ಜೀವನದಲ್ಲಿದೆ ಎಂಬುದನ್ನು ಮರೆಯಬೇಡಿ. ಅದೆಲ್ಲಾ ಹಾಗಿರಲಿ, ಈಗ ವಿಷಯಕ್ಕೆ ಬರೋಣ, ಬೆಂಗಳೂರಿನ ಟೆಕ್ಕಿಗಳು ವೆಬ್​ಸೈಟ್​ ಒಂದನ್ನು ಸಿದ್ಧಪಡಿಸಿದ್ದು, ಗಂಟೆಗಳ ಆಧಾರದಲ್ಲಿ ಬಾಯ್​ಫ್ರೆಂಡ್​ನ್ನು ಬಾಡಿಗೆ ನೀಡುತ್ತಂತೆ.

ಹೌದು, ಅನೇಕರು ಜೀವನದಲ್ಲಿ ಒಂಟಿಯಾಗಿರುತ್ತಾರೆ, ಅವರು ತಮಗಾಗಿ ಗೆಳೆಯ, ಗೆಳತಿಯರನ್ನು ಹುಡುಕುತ್ತಾರೆ. ಅವರು ಗೆಳೆಯ, ಗೆಳತಿಯರನ್ನು ಬಾಡಿಗೆಗೆ ಪಡೆಯಬಹುದು.

ಏಕಾಂಗಿಯಾಗಿರುವವರು, ಜೀವನದಲ್ಲಿ ತುಂಬಾ ನೊಂದವರು, ಪ್ರೀತಿಯ ವಂಚನೆಗೊಳಗಾದವರಿಗೆ ಈ ಪೋರ್ಟಲ್ ಸಹಾಯಕವಾಗಿದೆ. ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲಾಗುತ್ತದೆ, ಏಕೆಂದರೆ ಈ ನಗರವು ಇತ್ತೀಚಿನ ಸ್ಟಾರ್ಟ್-ಅಪ್‌ಗಳಿಗೆ ಹೆಸರುವಾಸಿಯಾಗಿದೆ. ಇಲ್ಲಿನ ಟೆಕ್ಕಿಗಳು ToYBoY ಹೆಸರಿನ ಪೋರ್ಟಲ್ ಅನ್ನು ಪ್ರಾರಂಭಿಸಿದ್ದಾರೆ, ಇದು ನಗರದ ಜನರಿಗೆ ಮಾನಸಿಕ ಸಮಸ್ಯೆಗಳಿಂದ ಹೊರಬರಲು ಸಹಾಯ ಮಾಡುತ್ತದೆ.

tribuneindia.com ನ ಸುದ್ದಿಯ ಪ್ರಕಾರ, ಬಾಡಿಗೆಗೆ ಬಾಯ್‌ಫ್ರೆಂಡ್ ಪಡೆಯುವ ಮೂಲಕ ತಮ್ಮ ಒಂಟಿತನವನ್ನು ಹೋಗಲಾಡಿಸಬಹುದು. ನೀವು ಗಂಟೆಗೆ ಹಣ ಪಾವತಿಸಿ ಸೇವೆಯಲ್ಲಿ ಗೆಳೆಯನನ್ನು ನೇಮಿಸಿಕೊಳ್ಳಬಹುದು. ಅದೇ ರೀತಿ ಮುಂಬೈ ಮೂಲದ ಯುವಕ ಕೌಶಲ್ ಪ್ರಕಾಶ್ ‘ RABF ಎಂಬ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಖಿನ್ನತೆಯಂತಹ ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ಜನರಿಗೆ ಸಹಾಯ ಮಾಡಲು ಅಪ್ಲಿಕೇಶನ್ ಆರಂಭಿಸಲಾಗಿದೆ.

ಈ ಅಪ್ಲಿಕೇಶನ್‌ಗಳು ಇತರ ಡೇಟಿಂಗ್ ಅಪ್ಲಿಕೇಶನ್‌ಗಳಿಗಿಂತ ಭಿನ್ನವಾಗಿವೆ. ನೀವು ಗೆಳೆಯನನ್ನು ನೇಮಿಸಿಕೊಳ್ಳಲು ಬಯಸಿದರೆ, ನಂತರ ಹೋಗಿ ಖಾತೆಯನ್ನು ರಚಿಸಿ ಮತ್ತು ನಿಮ್ಮ ಆಯ್ಕೆಯ ವ್ಯಕ್ತಿಯನ್ನು ಆರಿಸಿ. ನಂತರ, ನೀವು ನಿಮ್ಮ ಸ್ಥಳವನ್ನು ಸೇರಿಸಬಹುದು ಮತ್ತು ನಿಮ್ಮ ಆದ್ಯತೆಯ ವ್ಯಕ್ತಿಯನ್ನು ಭೇಟಿ ಮಾಡಬಹುದು. ಈ ಅಪ್ಲಿಕೇಷನ್ ಪ್ಲೇಸ್ಟೋರ್​ನಲ್ಲಿ ಲಭ್ಯವಿಲ್ಲ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ