AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಮಳಯುಕ್ತ ಈ ಸೋಂಪು ಕಾಳಿನಲ್ಲಿದೆ ಹತ್ತಾರು ಆರೋಗ್ಯ ಪ್ರಯೋಜನಗಳು

ಅಡುಗೆ ಮನೆಯಲ್ಲಿ ಸದಾ ಲಭ್ಯವಿರುವ ಮಸಾಲೆ ಪದಾರ್ಥಗಳಲ್ಲಿ ಸೋಂಪು ಕಾಳು ಕೂಡ ಒಂದು. ಅಡುಗೆಯ ರುಚಿ, ಘಮ ಹೆಚ್ಚಿಸುವುದರೊಂದಿಗೆ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ಮೌತ್ ಫ್ರೆಶರ್ ಆಗಿ ಕೆಲಸ ಮಾಡುವ ಈ ಸೋಂಪು ಕಾಳಿನಲ್ಲಿ ಹಲವಾರು ರೋಗವನ್ನು ದೂರ ಮಾಡುವ ಗುಣವಿದೆ. ಮನೆಯಲ್ಲಿ ಸೋಂಪುಗಳಿದ್ದರೆ ಮನೆ ಮದ್ದಾಗಿ ಬಳಸಿ ಆರೋಗ್ಯ ಸಮಸ್ಯೆಗಳನ್ನು ದೂರವಾಗಿಸಿಕೊಳ್ಳಬಹುದು.

ಪರಿಮಳಯುಕ್ತ ಈ ಸೋಂಪು ಕಾಳಿನಲ್ಲಿದೆ ಹತ್ತಾರು ಆರೋಗ್ಯ ಪ್ರಯೋಜನಗಳು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Feb 15, 2024 | 2:20 PM

Share

ನೀವೇನಾದರೂ ಹೋಟೆಲ್ ಹೋದರೆ ಟೇಬಲ್ ಮೇಲೆ ಒಂದು ಬಟ್ಟಲಿನಲ್ಲಿ ಇಟ್ಟಿರುವ ಸೋಂಪು ಕಾಳು ನಿಮ್ಮ ಕಣ್ಣಿಗೆ ಬಿದ್ದಿರುತ್ತದೆ. ಊಟ ಅಥವಾ ತಿಂಡಿ ತಿಂದ ಬಳಿಕ ಒಂದು ಚಮಚದಷ್ಟು ಸೋಂಪು ಕಾಳನ್ನು ಬಾಯಿಗೆ ಹಾಕಿಕೊಂಡು ಬರುತ್ತೀರಿ. ಘಮ್ ಎನ್ನುವ ಈ ಸೋಂಪು ಕಾಳುನ್ನು ಎಲ್ಲರೂ ಇಷ್ಟ ಪಡುತ್ತಾರೆ. ಆದರೆ ಈ ಸೋಂಪು ಕಾಳಿನ ಪ್ರಯೋಜನಗಳ ಬಗ್ಗೆ ಅಷ್ಟಾಗಿ ಯಾರಿಗೂ ಕೂಡ ಮಾಹಿತಿಯಿರುವುದಿಲ್ಲ. ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ವಿಟಮಿನ್ ಸಿ ಅಂಶಗಳು ಹೇರಳವಾಗಿದ್ದು, ಔಷಧಿಯ ಗುಣವನ್ನು ಹೊಂದಿರುವ ಆಹಾರದ ಜೊತೆಗೆ ಆಯುರ್ವೇದದಲ್ಲಿ ಬಳಕೆ ಮಾಡಲಾಗುತ್ತದೆ.

* ಸೋಂಪು ಕಾಳನ್ನು ನೀರಿನೊಂದಿಗೆ ನುಣ್ಣಗೆ ಅರೆದು ಹೊಟ್ಟೆಯ ಮೇಲೆ ಪಟ್ಟು ಹಾಕಿದರೆ ಹೊಟ್ಟೆ ಉಬ್ಬರ ಸಮಸ್ಯೆಯು ದೂರವಾಗುತ್ತದೆ.

* ಊಟದ ನಂತರ ಸ್ವಲ್ಪ ಸೋಂಪು ಕಾಳನ್ನು ಬಾಯಲ್ಲಿ ಹಾಕಿಕೊಂಡು ಅಗಿದರೆ ಆಹಾರ ಚೆನ್ನಾಗಿ ಜೀರ್ಣವಾಗುವುದು.

* ಸೋಂಪು ಕಾಳಿನ ನೀರನ್ನು ಕೂದಲಿನ ಬುಡಕ್ಕೆ ಹಚ್ಚುವುದರಿಂದ ಕೂದಲು ಉದುರುವ ಸಮಸ್ಯೆಯು ದೂರವಾಗಿ, ಸೊಂಪಾಗಿ ಬೆಳೆಯುತ್ತದೆ.

* ಆಹಾರದಲ್ಲಿ ಸೋಂಪನ್ನು ಬಳಸುವುದರಿಂದ ವಾಕರಿಕೆ, ಅಜೀರ್ಣ, ಮಲಬದ್ಧತೆ ಸಮಸ್ಯೆಯು ದೂರವಾಗುತ್ತದೆ.

* ಸೋಂಪು ಕಾಳಿನ ಕಷಾಯಕ್ಕೆ ಜೇನುತುಪ್ಪ ಸೇರಿಸಿ ಕುಡಿದರೆ ಮುಟ್ಟಿನ ಸಮಸ್ಯೆಯಿಂದ ಪಾರಾಗಬಹುದು.

* ಸೋಂಪು ಕಾಳನ್ನು ತಿನ್ನುವುದರಿಂದ ಪುರುಷರ ಕಾಮಾಸಕ್ತಿ ಹೆಚ್ಚುವುದು.

* ಸೋಂಪು ಕಾಳಿನ ಕಷಾಯಕ್ಕೆ ಹಾಲು ಬೆರೆಸಿ ಮಕ್ಕಳಿಗೆ ಕುಡಿಸಿದರೆ ಜೀರ್ಣಕ್ರಿಯೆಯು ಸುಧಾರಿಸುತ್ತದೆ.

* ಸೋಂಪು ಕಾಳನ್ನು ದಿನಕ್ಕೆ ಮೂರರಿಂದ ನಾಲ್ಕು ಬಾರಿ ಅಗಿಯುವುದರಿಂದ ಬಾಯಿಯಿಂದ ಬರುವ ಕೆಟ್ಟ ವಾಸನೆಯು ನಿಲ್ಲುತ್ತದೆ.

* ಮುಟ್ಟಿನ ಸಮಯದಲ್ಲಿ ಸೋಂಪು ಕಾಳನ್ನು ಬೆಲ್ಲದೊಂದಿಗೆ ಸೇವಿಸುವುದರಿಂದ ಮುಟ್ಟಿನ ಸಮಸ್ಯೆಗಳು ದೂರವಾಗುತ್ತದೆ.

* ಸೋಂಪು ಕಾಳಿನಲ್ಲಿ ಮಾಡಿದ ಟೀ ಕುಡಿಯುವುದರಿಂದ ಕೆಮ್ಮು ಇದ್ದರೆ ಗುಣಮುಖವಾಗುತ್ತದೆ.

ಇದನ್ನೂ ಓದಿ: ಮೊಬೈಲ್ ಬಳಕೆಯನ್ನು ಇತಿಮಿತಿಯಲ್ಲಿರಿಸಿದರೆ ಈ ಆರೋಗ್ಯ ಲಾಭಗಳು ಖಂಡಿತ

* ಪ್ರತಿದಿನ ಸೋಂಪು ಕಾಳನ್ನು ಸೇವನೆ ಮಾಡುವುದರಿಂದ ಎದೆ ಉರಿಯಂತಹ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.

* ನಿದ್ರೆಯ ಸಮಸ್ಯೆಯು ಕಾಡುತ್ತಿದ್ದರೆ ರಾತ್ರಿ ಮಲಗುವ ಮುನ್ನ ಸೋಂಪು ಕಾಳು ಸೇವಿಸಿದರೆ ಚೆನ್ನಾಗಿ ನಿದ್ರೆ ಬರುತ್ತದೆ.

* ಬಾಣಂತಿಯರು ಸೋಂಪು ಕಾಳಿನ ಚಹಾ ಕುಡಿಯುವುದರಿಂದ ಎದೆ ಹಾಲು ಉತ್ಪತ್ನಿಯಾಗುತ್ತದೆ.

* ಬಿಸಿ ನೀರಿನಲ್ಲಿ ಸೋಂಪು ಕಾಳು ಕುದಿಸಿ, ಹಬೆಯನ್ನು ಮುಖಕ್ಕೆ ತೆಗೆದುಕೊಳ್ಳುವುದರಿಂದ ಚರ್ಮದ ಆರೋಗ್ಯಕ್ಕೆ ಸಹಕಾರಿಯಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್