AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಮಳಯುಕ್ತ ಈ ಸೋಂಪು ಕಾಳಿನಲ್ಲಿದೆ ಹತ್ತಾರು ಆರೋಗ್ಯ ಪ್ರಯೋಜನಗಳು

ಅಡುಗೆ ಮನೆಯಲ್ಲಿ ಸದಾ ಲಭ್ಯವಿರುವ ಮಸಾಲೆ ಪದಾರ್ಥಗಳಲ್ಲಿ ಸೋಂಪು ಕಾಳು ಕೂಡ ಒಂದು. ಅಡುಗೆಯ ರುಚಿ, ಘಮ ಹೆಚ್ಚಿಸುವುದರೊಂದಿಗೆ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ಮೌತ್ ಫ್ರೆಶರ್ ಆಗಿ ಕೆಲಸ ಮಾಡುವ ಈ ಸೋಂಪು ಕಾಳಿನಲ್ಲಿ ಹಲವಾರು ರೋಗವನ್ನು ದೂರ ಮಾಡುವ ಗುಣವಿದೆ. ಮನೆಯಲ್ಲಿ ಸೋಂಪುಗಳಿದ್ದರೆ ಮನೆ ಮದ್ದಾಗಿ ಬಳಸಿ ಆರೋಗ್ಯ ಸಮಸ್ಯೆಗಳನ್ನು ದೂರವಾಗಿಸಿಕೊಳ್ಳಬಹುದು.

ಪರಿಮಳಯುಕ್ತ ಈ ಸೋಂಪು ಕಾಳಿನಲ್ಲಿದೆ ಹತ್ತಾರು ಆರೋಗ್ಯ ಪ್ರಯೋಜನಗಳು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Feb 15, 2024 | 2:20 PM

Share

ನೀವೇನಾದರೂ ಹೋಟೆಲ್ ಹೋದರೆ ಟೇಬಲ್ ಮೇಲೆ ಒಂದು ಬಟ್ಟಲಿನಲ್ಲಿ ಇಟ್ಟಿರುವ ಸೋಂಪು ಕಾಳು ನಿಮ್ಮ ಕಣ್ಣಿಗೆ ಬಿದ್ದಿರುತ್ತದೆ. ಊಟ ಅಥವಾ ತಿಂಡಿ ತಿಂದ ಬಳಿಕ ಒಂದು ಚಮಚದಷ್ಟು ಸೋಂಪು ಕಾಳನ್ನು ಬಾಯಿಗೆ ಹಾಕಿಕೊಂಡು ಬರುತ್ತೀರಿ. ಘಮ್ ಎನ್ನುವ ಈ ಸೋಂಪು ಕಾಳುನ್ನು ಎಲ್ಲರೂ ಇಷ್ಟ ಪಡುತ್ತಾರೆ. ಆದರೆ ಈ ಸೋಂಪು ಕಾಳಿನ ಪ್ರಯೋಜನಗಳ ಬಗ್ಗೆ ಅಷ್ಟಾಗಿ ಯಾರಿಗೂ ಕೂಡ ಮಾಹಿತಿಯಿರುವುದಿಲ್ಲ. ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ವಿಟಮಿನ್ ಸಿ ಅಂಶಗಳು ಹೇರಳವಾಗಿದ್ದು, ಔಷಧಿಯ ಗುಣವನ್ನು ಹೊಂದಿರುವ ಆಹಾರದ ಜೊತೆಗೆ ಆಯುರ್ವೇದದಲ್ಲಿ ಬಳಕೆ ಮಾಡಲಾಗುತ್ತದೆ.

* ಸೋಂಪು ಕಾಳನ್ನು ನೀರಿನೊಂದಿಗೆ ನುಣ್ಣಗೆ ಅರೆದು ಹೊಟ್ಟೆಯ ಮೇಲೆ ಪಟ್ಟು ಹಾಕಿದರೆ ಹೊಟ್ಟೆ ಉಬ್ಬರ ಸಮಸ್ಯೆಯು ದೂರವಾಗುತ್ತದೆ.

* ಊಟದ ನಂತರ ಸ್ವಲ್ಪ ಸೋಂಪು ಕಾಳನ್ನು ಬಾಯಲ್ಲಿ ಹಾಕಿಕೊಂಡು ಅಗಿದರೆ ಆಹಾರ ಚೆನ್ನಾಗಿ ಜೀರ್ಣವಾಗುವುದು.

* ಸೋಂಪು ಕಾಳಿನ ನೀರನ್ನು ಕೂದಲಿನ ಬುಡಕ್ಕೆ ಹಚ್ಚುವುದರಿಂದ ಕೂದಲು ಉದುರುವ ಸಮಸ್ಯೆಯು ದೂರವಾಗಿ, ಸೊಂಪಾಗಿ ಬೆಳೆಯುತ್ತದೆ.

* ಆಹಾರದಲ್ಲಿ ಸೋಂಪನ್ನು ಬಳಸುವುದರಿಂದ ವಾಕರಿಕೆ, ಅಜೀರ್ಣ, ಮಲಬದ್ಧತೆ ಸಮಸ್ಯೆಯು ದೂರವಾಗುತ್ತದೆ.

* ಸೋಂಪು ಕಾಳಿನ ಕಷಾಯಕ್ಕೆ ಜೇನುತುಪ್ಪ ಸೇರಿಸಿ ಕುಡಿದರೆ ಮುಟ್ಟಿನ ಸಮಸ್ಯೆಯಿಂದ ಪಾರಾಗಬಹುದು.

* ಸೋಂಪು ಕಾಳನ್ನು ತಿನ್ನುವುದರಿಂದ ಪುರುಷರ ಕಾಮಾಸಕ್ತಿ ಹೆಚ್ಚುವುದು.

* ಸೋಂಪು ಕಾಳಿನ ಕಷಾಯಕ್ಕೆ ಹಾಲು ಬೆರೆಸಿ ಮಕ್ಕಳಿಗೆ ಕುಡಿಸಿದರೆ ಜೀರ್ಣಕ್ರಿಯೆಯು ಸುಧಾರಿಸುತ್ತದೆ.

* ಸೋಂಪು ಕಾಳನ್ನು ದಿನಕ್ಕೆ ಮೂರರಿಂದ ನಾಲ್ಕು ಬಾರಿ ಅಗಿಯುವುದರಿಂದ ಬಾಯಿಯಿಂದ ಬರುವ ಕೆಟ್ಟ ವಾಸನೆಯು ನಿಲ್ಲುತ್ತದೆ.

* ಮುಟ್ಟಿನ ಸಮಯದಲ್ಲಿ ಸೋಂಪು ಕಾಳನ್ನು ಬೆಲ್ಲದೊಂದಿಗೆ ಸೇವಿಸುವುದರಿಂದ ಮುಟ್ಟಿನ ಸಮಸ್ಯೆಗಳು ದೂರವಾಗುತ್ತದೆ.

* ಸೋಂಪು ಕಾಳಿನಲ್ಲಿ ಮಾಡಿದ ಟೀ ಕುಡಿಯುವುದರಿಂದ ಕೆಮ್ಮು ಇದ್ದರೆ ಗುಣಮುಖವಾಗುತ್ತದೆ.

ಇದನ್ನೂ ಓದಿ: ಮೊಬೈಲ್ ಬಳಕೆಯನ್ನು ಇತಿಮಿತಿಯಲ್ಲಿರಿಸಿದರೆ ಈ ಆರೋಗ್ಯ ಲಾಭಗಳು ಖಂಡಿತ

* ಪ್ರತಿದಿನ ಸೋಂಪು ಕಾಳನ್ನು ಸೇವನೆ ಮಾಡುವುದರಿಂದ ಎದೆ ಉರಿಯಂತಹ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.

* ನಿದ್ರೆಯ ಸಮಸ್ಯೆಯು ಕಾಡುತ್ತಿದ್ದರೆ ರಾತ್ರಿ ಮಲಗುವ ಮುನ್ನ ಸೋಂಪು ಕಾಳು ಸೇವಿಸಿದರೆ ಚೆನ್ನಾಗಿ ನಿದ್ರೆ ಬರುತ್ತದೆ.

* ಬಾಣಂತಿಯರು ಸೋಂಪು ಕಾಳಿನ ಚಹಾ ಕುಡಿಯುವುದರಿಂದ ಎದೆ ಹಾಲು ಉತ್ಪತ್ನಿಯಾಗುತ್ತದೆ.

* ಬಿಸಿ ನೀರಿನಲ್ಲಿ ಸೋಂಪು ಕಾಳು ಕುದಿಸಿ, ಹಬೆಯನ್ನು ಮುಖಕ್ಕೆ ತೆಗೆದುಕೊಳ್ಳುವುದರಿಂದ ಚರ್ಮದ ಆರೋಗ್ಯಕ್ಕೆ ಸಹಕಾರಿಯಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ