AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಮಳಯುಕ್ತ ಈ ಸೋಂಪು ಕಾಳಿನಲ್ಲಿದೆ ಹತ್ತಾರು ಆರೋಗ್ಯ ಪ್ರಯೋಜನಗಳು

ಅಡುಗೆ ಮನೆಯಲ್ಲಿ ಸದಾ ಲಭ್ಯವಿರುವ ಮಸಾಲೆ ಪದಾರ್ಥಗಳಲ್ಲಿ ಸೋಂಪು ಕಾಳು ಕೂಡ ಒಂದು. ಅಡುಗೆಯ ರುಚಿ, ಘಮ ಹೆಚ್ಚಿಸುವುದರೊಂದಿಗೆ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ಮೌತ್ ಫ್ರೆಶರ್ ಆಗಿ ಕೆಲಸ ಮಾಡುವ ಈ ಸೋಂಪು ಕಾಳಿನಲ್ಲಿ ಹಲವಾರು ರೋಗವನ್ನು ದೂರ ಮಾಡುವ ಗುಣವಿದೆ. ಮನೆಯಲ್ಲಿ ಸೋಂಪುಗಳಿದ್ದರೆ ಮನೆ ಮದ್ದಾಗಿ ಬಳಸಿ ಆರೋಗ್ಯ ಸಮಸ್ಯೆಗಳನ್ನು ದೂರವಾಗಿಸಿಕೊಳ್ಳಬಹುದು.

ಪರಿಮಳಯುಕ್ತ ಈ ಸೋಂಪು ಕಾಳಿನಲ್ಲಿದೆ ಹತ್ತಾರು ಆರೋಗ್ಯ ಪ್ರಯೋಜನಗಳು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Feb 15, 2024 | 2:20 PM

Share

ನೀವೇನಾದರೂ ಹೋಟೆಲ್ ಹೋದರೆ ಟೇಬಲ್ ಮೇಲೆ ಒಂದು ಬಟ್ಟಲಿನಲ್ಲಿ ಇಟ್ಟಿರುವ ಸೋಂಪು ಕಾಳು ನಿಮ್ಮ ಕಣ್ಣಿಗೆ ಬಿದ್ದಿರುತ್ತದೆ. ಊಟ ಅಥವಾ ತಿಂಡಿ ತಿಂದ ಬಳಿಕ ಒಂದು ಚಮಚದಷ್ಟು ಸೋಂಪು ಕಾಳನ್ನು ಬಾಯಿಗೆ ಹಾಕಿಕೊಂಡು ಬರುತ್ತೀರಿ. ಘಮ್ ಎನ್ನುವ ಈ ಸೋಂಪು ಕಾಳುನ್ನು ಎಲ್ಲರೂ ಇಷ್ಟ ಪಡುತ್ತಾರೆ. ಆದರೆ ಈ ಸೋಂಪು ಕಾಳಿನ ಪ್ರಯೋಜನಗಳ ಬಗ್ಗೆ ಅಷ್ಟಾಗಿ ಯಾರಿಗೂ ಕೂಡ ಮಾಹಿತಿಯಿರುವುದಿಲ್ಲ. ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ವಿಟಮಿನ್ ಸಿ ಅಂಶಗಳು ಹೇರಳವಾಗಿದ್ದು, ಔಷಧಿಯ ಗುಣವನ್ನು ಹೊಂದಿರುವ ಆಹಾರದ ಜೊತೆಗೆ ಆಯುರ್ವೇದದಲ್ಲಿ ಬಳಕೆ ಮಾಡಲಾಗುತ್ತದೆ.

* ಸೋಂಪು ಕಾಳನ್ನು ನೀರಿನೊಂದಿಗೆ ನುಣ್ಣಗೆ ಅರೆದು ಹೊಟ್ಟೆಯ ಮೇಲೆ ಪಟ್ಟು ಹಾಕಿದರೆ ಹೊಟ್ಟೆ ಉಬ್ಬರ ಸಮಸ್ಯೆಯು ದೂರವಾಗುತ್ತದೆ.

* ಊಟದ ನಂತರ ಸ್ವಲ್ಪ ಸೋಂಪು ಕಾಳನ್ನು ಬಾಯಲ್ಲಿ ಹಾಕಿಕೊಂಡು ಅಗಿದರೆ ಆಹಾರ ಚೆನ್ನಾಗಿ ಜೀರ್ಣವಾಗುವುದು.

* ಸೋಂಪು ಕಾಳಿನ ನೀರನ್ನು ಕೂದಲಿನ ಬುಡಕ್ಕೆ ಹಚ್ಚುವುದರಿಂದ ಕೂದಲು ಉದುರುವ ಸಮಸ್ಯೆಯು ದೂರವಾಗಿ, ಸೊಂಪಾಗಿ ಬೆಳೆಯುತ್ತದೆ.

* ಆಹಾರದಲ್ಲಿ ಸೋಂಪನ್ನು ಬಳಸುವುದರಿಂದ ವಾಕರಿಕೆ, ಅಜೀರ್ಣ, ಮಲಬದ್ಧತೆ ಸಮಸ್ಯೆಯು ದೂರವಾಗುತ್ತದೆ.

* ಸೋಂಪು ಕಾಳಿನ ಕಷಾಯಕ್ಕೆ ಜೇನುತುಪ್ಪ ಸೇರಿಸಿ ಕುಡಿದರೆ ಮುಟ್ಟಿನ ಸಮಸ್ಯೆಯಿಂದ ಪಾರಾಗಬಹುದು.

* ಸೋಂಪು ಕಾಳನ್ನು ತಿನ್ನುವುದರಿಂದ ಪುರುಷರ ಕಾಮಾಸಕ್ತಿ ಹೆಚ್ಚುವುದು.

* ಸೋಂಪು ಕಾಳಿನ ಕಷಾಯಕ್ಕೆ ಹಾಲು ಬೆರೆಸಿ ಮಕ್ಕಳಿಗೆ ಕುಡಿಸಿದರೆ ಜೀರ್ಣಕ್ರಿಯೆಯು ಸುಧಾರಿಸುತ್ತದೆ.

* ಸೋಂಪು ಕಾಳನ್ನು ದಿನಕ್ಕೆ ಮೂರರಿಂದ ನಾಲ್ಕು ಬಾರಿ ಅಗಿಯುವುದರಿಂದ ಬಾಯಿಯಿಂದ ಬರುವ ಕೆಟ್ಟ ವಾಸನೆಯು ನಿಲ್ಲುತ್ತದೆ.

* ಮುಟ್ಟಿನ ಸಮಯದಲ್ಲಿ ಸೋಂಪು ಕಾಳನ್ನು ಬೆಲ್ಲದೊಂದಿಗೆ ಸೇವಿಸುವುದರಿಂದ ಮುಟ್ಟಿನ ಸಮಸ್ಯೆಗಳು ದೂರವಾಗುತ್ತದೆ.

* ಸೋಂಪು ಕಾಳಿನಲ್ಲಿ ಮಾಡಿದ ಟೀ ಕುಡಿಯುವುದರಿಂದ ಕೆಮ್ಮು ಇದ್ದರೆ ಗುಣಮುಖವಾಗುತ್ತದೆ.

ಇದನ್ನೂ ಓದಿ: ಮೊಬೈಲ್ ಬಳಕೆಯನ್ನು ಇತಿಮಿತಿಯಲ್ಲಿರಿಸಿದರೆ ಈ ಆರೋಗ್ಯ ಲಾಭಗಳು ಖಂಡಿತ

* ಪ್ರತಿದಿನ ಸೋಂಪು ಕಾಳನ್ನು ಸೇವನೆ ಮಾಡುವುದರಿಂದ ಎದೆ ಉರಿಯಂತಹ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.

* ನಿದ್ರೆಯ ಸಮಸ್ಯೆಯು ಕಾಡುತ್ತಿದ್ದರೆ ರಾತ್ರಿ ಮಲಗುವ ಮುನ್ನ ಸೋಂಪು ಕಾಳು ಸೇವಿಸಿದರೆ ಚೆನ್ನಾಗಿ ನಿದ್ರೆ ಬರುತ್ತದೆ.

* ಬಾಣಂತಿಯರು ಸೋಂಪು ಕಾಳಿನ ಚಹಾ ಕುಡಿಯುವುದರಿಂದ ಎದೆ ಹಾಲು ಉತ್ಪತ್ನಿಯಾಗುತ್ತದೆ.

* ಬಿಸಿ ನೀರಿನಲ್ಲಿ ಸೋಂಪು ಕಾಳು ಕುದಿಸಿ, ಹಬೆಯನ್ನು ಮುಖಕ್ಕೆ ತೆಗೆದುಕೊಳ್ಳುವುದರಿಂದ ಚರ್ಮದ ಆರೋಗ್ಯಕ್ಕೆ ಸಹಕಾರಿಯಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ