AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ವರೋಗವನ್ನು ನಿವಾರಿಸುತ್ತೆ ಈ ಬಾರ್ಲಿ, ಆರೋಗ್ಯಕ್ಕೂ ಬಲು ಉಪಯುಕ್ತ

ಅಡುಗೆ ಮನೆಯಲ್ಲಿರುವ ಇರುವ ಎಲ್ಲಾ ಪದಾರ್ಥಗಳು ಆರೋಗ್ಯಕ್ಕೆ ಬಹಳ ಉಪಯೋಗಕಾರಿಯಾಗಿದೆ. ಅಂತಹ ಪ್ರಮುಖ ಆಹಾರವಾಗಿ ಬಳಸುತ್ತಿದ್ದ ಏಕದಳ ಧಾನ್ಯವೆಂದರೆ ಅದುವೇ ಬಾರ್ಲಿ. ಈ ಬಾರ್ಲಿಯನ್ನು ಶತಮಾನಗಳಿಂದಲೂ ಆಹಾರವಾಗಿ ಬಳಕೆ ಮಾಡಲಾಗುತ್ತಿದ್ದು, ಇದರಲ್ಲಿ ಔಷಧೀಯ ಗುಣವು ಹೇರಳವಾಗಿದೆ. ನೋಡಲು ಗೋಧಿಯಂತೆ ಕಾಣುವ ಈ ಬಾರ್ಲಿ ಸೇವನೆ ಮಾಡುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಸರ್ವರೋಗವನ್ನು ನಿವಾರಿಸುತ್ತೆ ಈ ಬಾರ್ಲಿ, ಆರೋಗ್ಯಕ್ಕೂ ಬಲು ಉಪಯುಕ್ತ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Feb 14, 2024 | 5:43 PM

Share

ಆರೋಗ್ಯವು ಚೆನ್ನಾಗಿರಬೇಕಾದರೆ ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವಿಸುವುದು ಮುಖ್ಯ. ನಮ್ಮ ಹಿರಿಯರು ಸೇವಿಸುವ ಆಹಾರಗಳ ಬಗ್ಗೆ ಹೆಚ್ಚು ಗಮನ ಕೊಡುತ್ತಿದ್ದರು. ಹಿರಿಯರ ಆಹಾರಗಳಲ್ಲಿ ಬಾರ್ಲಿ ಕೂಡ ಒಂದಾಗಿತ್ತು. ಈ ಬಾರ್ಲಿಯಲ್ಲಿ ವಿಟಮಿನ್ ಬಿ, ಕಬ್ಬಿಣ, ಕ್ಯಾಲ್ಸಿಯಂ ಮತ್ತು ಅಮೈನೋ ಆಮ್ಲ ಹಾಗೂ ಇತರೆ ಪೋಷಕಾಂಶಗಳಿಂದ ಹೇರಳವಾಗಿದೆ. ದಿನನಿತ್ಯ ಸೇವನೆ ಮಾಡುವುದರಿಂದ ನಾನಾ ರೀತಿಯ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದು

* ಬಾರ್ಲಿಯನ್ನು ಬೇಯಿಸಿದ ನೀರನ್ನು ಕುಡಿದರೆ ಆಮಶಂಕೆ, ಅಜೀರ್ಣ, ಅತಿಸಾರ, ಮಲಬದ್ಧತೆ ನಿವಾರಣೆಯಾಗುತ್ತದೆ.

* ಬಾರ್ಲಿ ಪುಡಿಯನ್ನು ಬಿಸಿ ನೀರಿನಲ್ಲಿ ಬೆರೆಸಿ ಕುಡಿದರೆ ಮೂತ್ರ ಸರಾಗವಾಗಿ ವಿಸರ್ಜನೆಯಾಗುತ್ತದೆ.

* ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವವರು ಬಾರ್ಲಿಯನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ, ಶೋಧಿಸಿ ಸೇವಿಸುವುದರಿಂದ ಈ ಸಮಸ್ಯೆಯಿಂದ ಮುಕ್ತರಾಗಬಹುದು.

* ಬಾರ್ಲಿ ನೀರನ್ನು ಸೇವಿಸುವುದರಿಂದ ರಕ್ತದ ಒತ್ತಡ, ಹೊಟ್ಟೆ ಹುಣ್ಣು, ಕರುಳಿನ ಬೇನೆ ಸಮಸ್ಯೆಯು ದೂರವಾಗುತ್ತದೆ.

* ಗರ್ಭಿಣಿಯರು ಬಾರ್ಲಿ ಗಂಜಿಗೆ ನಿಂಬೆರಸ, ಮಜ್ಜಿಗೆ ಮತ್ತು ಉಪ್ಪು ಸೇರಿಸಿ ಕುಡಿದರೆ ಪ್ರಯೋಜನಕಾರಿಯಾಗಿದೆ.

* ಬಾರ್ಲಿ ನೀರನ್ನು ಕುಡಿಯುವುದರಿಂದ ಸುಲಭವಾಗಿ ತೂಕವನ್ನು ಇಳಿಸಿ ಕೊಳ್ಳಬಹುದು.

* ಗಾಯದ ಕಲೆಗಳಿದ್ದರೆ ಒಂದು ಚಮಚದಷ್ಟು ಚಾರ್ಲಿ ಪುಡಿ, ಮೊಸರು, ಒಂದು ಚಿಟಿಕೆಯಷ್ಟು ಅರಶಿನ ಹಾಗೂ ನಿಂಬೆರಸ ಬೆರೆಸಿ ಹಚ್ಚುವುದರಿಂದ ಕಲೆ ಮಾಸುತ್ತದೆ.

* ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಬಾರ್ಲಿ ನೀರನ್ನು ಕುಡಿಯುವುದರಿಂದ ನಿಯಂತ್ರಣಕ್ಕೆ ಬರುತ್ತದೆ.

* ಬಾರ್ಲಿಯ ನೀರು ಕುಡಿಯುವುದರಿಂದ ಎಲ್ಡಿಎಲ್ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.

* ಬಾರ್ಲಿಯ ನೀರನ್ನು ಸೋಸಿ ಮುಖವನ್ನು ತೊಳೆಯುವುದರಿಂದ ಮುಖದ ಚರ್ಮದ ಕಾಂತಿ ಹೆಚ್ಚಿಸಿ, ವೃದ್ಧಾಪ್ಯದ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.

* ಬಾರ್ಲಿಯನ್ನು ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಗಂಟಲು ನೋವು, ಟಾನ್ಸಿಲ್ ಸೇರಿದಂತೆ ಇನ್ನಿತ್ತರ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಇದನ್ನೂ ಓದಿ: ಮಕ್ಕಳು ಓದಿದ್ದೆಲ್ಲವೂ ಬೇಗನೇ ಮರೆತು ಬಿಡುತ್ತಾರಾ? ಈ ಆಹಾರಗಳನ್ನು ನೀಡಿ

* ಬಾರ್ಲಿ ಗಂಜಿಯನ್ನು ಮಜ್ಜಿಗೆ ಮತ್ತು ನಿಂಬೆರಸದೊಂದಿಗೆ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ.

* ಬಾರ್ಲಿ ನೀರು ಕುಡಿಯುವುದರಿಂದ ದೇಹದಿಂದ ಬೇಡವಾದ ಕಶ್ಮಲಗಳನ್ನು ಹೊರಕ್ಕೆ ಹಾಕುತ್ತದೆ.

* ಬಾರ್ಲಿ ನೀರನ್ನು ದಿನನಿತ್ಯ ಸೇವಿಸುತ್ತಿದ್ದರೆ ಕೂದಲಿನ ಆರೋಗ್ಯಕ್ಕೆ ಒಳ್ಳೆಯದು.

* ಬಾರ್ಲಿ ನೀರು ಹಸಿವನ್ನು ನಿಯಂತ್ರಿಸುವುದರೊಂದಿಗೆ ಚಯಾಪಚಯ ಹೆಚ್ಚಿಸುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ