AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ವರೋಗವನ್ನು ನಿವಾರಿಸುತ್ತೆ ಈ ಬಾರ್ಲಿ, ಆರೋಗ್ಯಕ್ಕೂ ಬಲು ಉಪಯುಕ್ತ

ಅಡುಗೆ ಮನೆಯಲ್ಲಿರುವ ಇರುವ ಎಲ್ಲಾ ಪದಾರ್ಥಗಳು ಆರೋಗ್ಯಕ್ಕೆ ಬಹಳ ಉಪಯೋಗಕಾರಿಯಾಗಿದೆ. ಅಂತಹ ಪ್ರಮುಖ ಆಹಾರವಾಗಿ ಬಳಸುತ್ತಿದ್ದ ಏಕದಳ ಧಾನ್ಯವೆಂದರೆ ಅದುವೇ ಬಾರ್ಲಿ. ಈ ಬಾರ್ಲಿಯನ್ನು ಶತಮಾನಗಳಿಂದಲೂ ಆಹಾರವಾಗಿ ಬಳಕೆ ಮಾಡಲಾಗುತ್ತಿದ್ದು, ಇದರಲ್ಲಿ ಔಷಧೀಯ ಗುಣವು ಹೇರಳವಾಗಿದೆ. ನೋಡಲು ಗೋಧಿಯಂತೆ ಕಾಣುವ ಈ ಬಾರ್ಲಿ ಸೇವನೆ ಮಾಡುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಸರ್ವರೋಗವನ್ನು ನಿವಾರಿಸುತ್ತೆ ಈ ಬಾರ್ಲಿ, ಆರೋಗ್ಯಕ್ಕೂ ಬಲು ಉಪಯುಕ್ತ
ಸಾಯಿನಂದಾ
| Edited By: |

Updated on: Feb 14, 2024 | 5:43 PM

Share

ಆರೋಗ್ಯವು ಚೆನ್ನಾಗಿರಬೇಕಾದರೆ ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವಿಸುವುದು ಮುಖ್ಯ. ನಮ್ಮ ಹಿರಿಯರು ಸೇವಿಸುವ ಆಹಾರಗಳ ಬಗ್ಗೆ ಹೆಚ್ಚು ಗಮನ ಕೊಡುತ್ತಿದ್ದರು. ಹಿರಿಯರ ಆಹಾರಗಳಲ್ಲಿ ಬಾರ್ಲಿ ಕೂಡ ಒಂದಾಗಿತ್ತು. ಈ ಬಾರ್ಲಿಯಲ್ಲಿ ವಿಟಮಿನ್ ಬಿ, ಕಬ್ಬಿಣ, ಕ್ಯಾಲ್ಸಿಯಂ ಮತ್ತು ಅಮೈನೋ ಆಮ್ಲ ಹಾಗೂ ಇತರೆ ಪೋಷಕಾಂಶಗಳಿಂದ ಹೇರಳವಾಗಿದೆ. ದಿನನಿತ್ಯ ಸೇವನೆ ಮಾಡುವುದರಿಂದ ನಾನಾ ರೀತಿಯ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದು

* ಬಾರ್ಲಿಯನ್ನು ಬೇಯಿಸಿದ ನೀರನ್ನು ಕುಡಿದರೆ ಆಮಶಂಕೆ, ಅಜೀರ್ಣ, ಅತಿಸಾರ, ಮಲಬದ್ಧತೆ ನಿವಾರಣೆಯಾಗುತ್ತದೆ.

* ಬಾರ್ಲಿ ಪುಡಿಯನ್ನು ಬಿಸಿ ನೀರಿನಲ್ಲಿ ಬೆರೆಸಿ ಕುಡಿದರೆ ಮೂತ್ರ ಸರಾಗವಾಗಿ ವಿಸರ್ಜನೆಯಾಗುತ್ತದೆ.

* ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವವರು ಬಾರ್ಲಿಯನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ, ಶೋಧಿಸಿ ಸೇವಿಸುವುದರಿಂದ ಈ ಸಮಸ್ಯೆಯಿಂದ ಮುಕ್ತರಾಗಬಹುದು.

* ಬಾರ್ಲಿ ನೀರನ್ನು ಸೇವಿಸುವುದರಿಂದ ರಕ್ತದ ಒತ್ತಡ, ಹೊಟ್ಟೆ ಹುಣ್ಣು, ಕರುಳಿನ ಬೇನೆ ಸಮಸ್ಯೆಯು ದೂರವಾಗುತ್ತದೆ.

* ಗರ್ಭಿಣಿಯರು ಬಾರ್ಲಿ ಗಂಜಿಗೆ ನಿಂಬೆರಸ, ಮಜ್ಜಿಗೆ ಮತ್ತು ಉಪ್ಪು ಸೇರಿಸಿ ಕುಡಿದರೆ ಪ್ರಯೋಜನಕಾರಿಯಾಗಿದೆ.

* ಬಾರ್ಲಿ ನೀರನ್ನು ಕುಡಿಯುವುದರಿಂದ ಸುಲಭವಾಗಿ ತೂಕವನ್ನು ಇಳಿಸಿ ಕೊಳ್ಳಬಹುದು.

* ಗಾಯದ ಕಲೆಗಳಿದ್ದರೆ ಒಂದು ಚಮಚದಷ್ಟು ಚಾರ್ಲಿ ಪುಡಿ, ಮೊಸರು, ಒಂದು ಚಿಟಿಕೆಯಷ್ಟು ಅರಶಿನ ಹಾಗೂ ನಿಂಬೆರಸ ಬೆರೆಸಿ ಹಚ್ಚುವುದರಿಂದ ಕಲೆ ಮಾಸುತ್ತದೆ.

* ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಬಾರ್ಲಿ ನೀರನ್ನು ಕುಡಿಯುವುದರಿಂದ ನಿಯಂತ್ರಣಕ್ಕೆ ಬರುತ್ತದೆ.

* ಬಾರ್ಲಿಯ ನೀರು ಕುಡಿಯುವುದರಿಂದ ಎಲ್ಡಿಎಲ್ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.

* ಬಾರ್ಲಿಯ ನೀರನ್ನು ಸೋಸಿ ಮುಖವನ್ನು ತೊಳೆಯುವುದರಿಂದ ಮುಖದ ಚರ್ಮದ ಕಾಂತಿ ಹೆಚ್ಚಿಸಿ, ವೃದ್ಧಾಪ್ಯದ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.

* ಬಾರ್ಲಿಯನ್ನು ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಗಂಟಲು ನೋವು, ಟಾನ್ಸಿಲ್ ಸೇರಿದಂತೆ ಇನ್ನಿತ್ತರ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಇದನ್ನೂ ಓದಿ: ಮಕ್ಕಳು ಓದಿದ್ದೆಲ್ಲವೂ ಬೇಗನೇ ಮರೆತು ಬಿಡುತ್ತಾರಾ? ಈ ಆಹಾರಗಳನ್ನು ನೀಡಿ

* ಬಾರ್ಲಿ ಗಂಜಿಯನ್ನು ಮಜ್ಜಿಗೆ ಮತ್ತು ನಿಂಬೆರಸದೊಂದಿಗೆ ಸೇವಿಸಿದರೆ ತಲೆನೋವು ಕಡಿಮೆಯಾಗುತ್ತದೆ.

* ಬಾರ್ಲಿ ನೀರು ಕುಡಿಯುವುದರಿಂದ ದೇಹದಿಂದ ಬೇಡವಾದ ಕಶ್ಮಲಗಳನ್ನು ಹೊರಕ್ಕೆ ಹಾಕುತ್ತದೆ.

* ಬಾರ್ಲಿ ನೀರನ್ನು ದಿನನಿತ್ಯ ಸೇವಿಸುತ್ತಿದ್ದರೆ ಕೂದಲಿನ ಆರೋಗ್ಯಕ್ಕೆ ಒಳ್ಳೆಯದು.

* ಬಾರ್ಲಿ ನೀರು ಹಸಿವನ್ನು ನಿಯಂತ್ರಿಸುವುದರೊಂದಿಗೆ ಚಯಾಪಚಯ ಹೆಚ್ಚಿಸುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು