AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಮಸ್ಯೆಗಳಿಗೆ ಅಮೃತ ಈ ಅಮೃತ ಬಳ್ಳಿ!

ಪ್ರಕೃತಿಯು ನಮಗೆ ನೈಸರ್ಗಿಕವಾಗಿ ರೋಗವನ್ನು ಶಮನ ಮಾಡುವ ಗುಣ ಹೊಂದಿರುವ ಸಸ್ಯಗಳನ್ನು ನೀಡಿವೆ. ಹೀಗಾಗಿ ನಮ್ಮ ಸುತ್ತಮುತ್ತಲಿನಲ್ಲಿರುವ ಮರ, ಗಿಡ, ಸಸ್ಯಗಳು ರೋಗ ನಿರೋಧಕಗುಣವನ್ನು ಹೊಂದಿದ್ದು, ಅಂತಹ ಸಸ್ಯದ ಸಾಲಿಗೆ ಅಮೃತ ಬಳ್ಳಿ ಕೂಡ ಸೇರುತ್ತವೆ. ಅಮೃತಬಳ್ಳಿಯ ಎಲೆ, ಕಾಂಡ, ಬೇರು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಈ ಅಮೃತ ಬಳ್ಳಿಯಿಂದ ತಯಾರಿಸಿದ ಮನೆ ಮದ್ದು ನಾನಾ ರೋಗಗಳಿಗೆ ಔಷಧವಾಗಿ ಕೆಲಸ ಮಾಡುತ್ತದೆ.

ಆರೋಗ್ಯ ಸಮಸ್ಯೆಗಳಿಗೆ ಅಮೃತ ಈ ಅಮೃತ ಬಳ್ಳಿ!
ಸಾಯಿನಂದಾ
| Edited By: |

Updated on: Jan 31, 2024 | 1:57 PM

Share

ಮನೆಯಂಗಳದಲ್ಲಿ ಬೆಳೆಯಬಹುದಾದ ಔಷಧೀಯ ಬಳ್ಳಿಗಳಲ್ಲಿ ಅಮೃತ ಬಳ್ಳಿ ಕೂಡ ಒಂದು. ಆಯುರ್ವೇದದಲ್ಲಿ ಈ ಅಮೃತ ಬಳ್ಳಿಗೆ ಬಹಳ ಪ್ರಾಮುಖ್ಯತೆಯನ್ನು ನೀಡಲಾಗಿದ್ದು, ಇದರಲ್ಲಿ ಎಲೆ, ಕಾಂಡ, ಬೇರು ಎಲ್ಲವೂ ಔಷಧೀಯ ಗುಣ ಹೊಂದಿದೆ. ಈ ಬಳ್ಳಿಯು ಕಹಿ ಹಾಗೂ ಒಗರು ರಸವನ್ನು ಹೊಂದಿದ್ದು, ಆರೋಗ್ಯ ಸಮಸ್ಯೆಗಳಿಗೆ ಸಂಜೀವಿನಿಯಂತೆ ಕೆಲಸ ಮಾಡುತ್ತದೆ. ಹೀಗಾಗಿ ಹಳ್ಳಿಗಳಲ್ಲಿ ಆರೋಗ್ಯ ಸಮಸ್ಯೆಗಳಿಗೆ ಅಮೃತ ಬಳ್ಳಿಯಿಂದ ಮನೆ ಮದ್ದನ್ನು ತಯಾರಿಸಿ ಬಳಸಲಾಗುತ್ತದೆ.

ಅಮೃತ ಬಳ್ಳಿಯ ವಿವಿಧ ಮನೆ ಮದ್ದುಗಳು

* ಒಂದು ಹಿಡಿ ಅಮೃತಬಳ್ಳಿಯನ್ನು ಜಜ್ಜಿ ರಸ ತೆಗೆದು, ನಾಲ್ಕು ಲೋಟ ನೀರಿನಲ್ಲಿ ಹಾಕಿ ಕುದಿಸಬೇಕು. ಈ ನೀರು ಕುದಿದು ಒಂದು ಲೋಟಕ್ಕೆ ಇಳಿದ ಮೇಲೆ ಅದನ್ನು ಶೋಧಿಸಿ ದಿನಕ್ಕೆ ಮೂರು ಬಾರಿ ಸ್ವಲ್ಪ ಪ್ರಮಾಣದಲ್ಲಿ ಕುಡಿದರೆ ಜ್ವರ ನಿವಾರಣೆಯಾಗುತ್ತದೆ.

* ಅಮೃತ ಬಳ್ಳಿಯ ಪುಡಿ ಮತ್ತು ಕಾಳು ಮೆಣಸಿನ ಪುಡಿಯನ್ನು ಹಾಕಿ ಕಷಾಯ ಮಾಡಿ ದಿನಕ್ಕೆರಡು ಬಾರಿ ಕುಡಿದರೆ ಬೆನ್ನುನೋವು ಕಡಿಮೆಯಾಗುತ್ತದೆ.

* ಎರಡು ಚಮಚ ಅಮೃತಬಳ್ಳಿಯ ಚೂರ್ಣಕ್ಕೆ, ಅರ್ಧ ಚಮಚ ಕಾಳು ಮೆಣಸಿನ ಪುಡಿ ಸೇರಿಸಿ ಕಷಾಯ ತಯಾರಿಸಿ, ಪ್ರತಿದಿನ ಎರಡು ಹೊತ್ತು ಕುಡಿದರೆ ಕೀಲು ನೋವು ಗುಣಮುಖವಾಗುತ್ತದೆ.

* ಒಂದು ಹಿಡಿ ಅಮೃತ ಬಳ್ಳಿಯನ್ನು 2 ಲೋಟ ನೀರಿನಲ್ಲಿ ಹಾಕಿ ಕುದಿಸಿ, ಅದಕ್ಕೆ ಅರ್ಧ ಚಮಚ ಗುಗ್ಗುಳವನ್ನು ಸೇರಿಸಿ ದಿನಕ್ಕೆರಡು ಬಾರಿ ಸೇವಿಸಿದರೆ ಸಂಧಿವಾತ ನಿವಾರಣೆಯಾಗುತ್ತದೆ.

* ಅಮೃತಬಳ್ಳಿಯನ್ನು ಜಜ್ಜಿ ಎರಡು ಲೋಟ ನೀರಿನಲ್ಲಿ ಹಾಕಿ ಕುದಿಸಿ ಅದು ಅರ್ಧ ಲೋಟಕ್ಕೆ ಇಳಿದ ಮೇಲೆ ಅದಕ್ಕೆ ಅರ್ಧಚಮಚ ಹರಳೆಣ್ಣೆಯನ್ನು ಬೆರೆಸಿ ದಿನಕ್ಕೆರಡು ಬಾರಿ ಕುಡಿದರೆ ಸಂಧಿವಾತ, ಕಾಲು ನೋವು ನಿವಾರಣೆಯಾಗುತ್ತದೆ.

* ಮೂರು ಚಮಚದಷ್ಟು ಅಮೃತಬಳ್ಳಿ ರಸಕ್ಕೆ ಒಂದು ಚಮಚ ತುಪ್ಪ ಸೇರಿಸಿ ಸೇವಿಸಿದರೆ ಸಂಧಿವಾತ ದೂರವಾಗುತ್ತದೆ.

* ಅಮೃತ ಬಳ್ಳಿಯ ಪುಡಿ ಒಣಶುಂಠಿಯ ಪುಡಿ ಮತ್ತು ಹಿಪ್ಪಲಿಯ ಪುಡಿಯನ್ನು ಬೆರೆಸಿ ಕುದಿಸಬೇಕು. ಆ ಬಳಿಕ ಅದಕ್ಕೆ ಜೇನುತುಪ್ಪ ಸೇರಿಸಿ ದಿನಕ್ಕೆ ಎರಡು ಬಾರಿ ಕುಡಿದರೆ ಅಗ್ನಿಮಾಂದ್ಯ ಸಮಸ್ಯೆಯು ನಿವಾರಣೆಯಾಗುತ್ತದೆ.

* ಒಂದು ಹೊತ್ತಿಗೆ ಮೂರು ಚಮಚ ಅಮೃತಬಳ್ಳಿ ರಸವನ್ನು ದಿನವೂ ಸೇವಿಸುತ್ತಾ ಇದ್ದರೆ ಕುಷ್ಠ ರೋಗವು ನಿವಾರಣೆಯಾಗುತ್ತದೆ.

* ಅಮೃತಬಳ್ಳಿಯ ರಸಕ್ಕೆ ಜೇನುತುಪ್ಪ ಸೇರಿಸಿ ಸೇವಿಸಿದರೆ ತಲೆ ನೋವಿನ ಸಮಸ್ಯೆಯು ದೂರವಾಗುತ್ತದೆ.

* ಅಮೃತ ಬಳ್ಳಿ ಚೂರ್ಣ ಮತ್ತು ಒಂದೆಲಗದ ಚೂರ್ಣಗಳನ್ನು ಎರಡು ಲೋಟ ನೀರಿಗೆ ಹಾಕಿ ಕುದಿಸಬೇಕು. ಈ ನೀರನ್ನು ದಿನಕ್ಕೆರಡು ಬಾರಿ ಒಂದು ತಿಂಗಳ ಕಾಲ ಕುಡಿದರೆ ಮಾನಸಿಕ ಉದ್ವೇಗವು ಕಡಿಮೆಯಾಗುತ್ತದೆ.

* ಅಮೃತಬಳ್ಳಿಯ ರಸ, ಗೋಧಿ ಹುಲ್ಲಿನ ಜ್ಯೂಸ್, ತುಳಸಿ ಎಲೆಯ ರಸ, ಬೇವಿನ ಎಲೆ ರಸ ಇವುಗಳನ್ನು ಸೇರಿಸಿ ದಿನಕ್ಕೆ ಮೂರು ಸಲದಂತೆ ಒಂದು ತಿಂಗಳ ಕಾಲ ಸೇವಿಸಿದರೆ ಕ್ಯಾನ್ಸರ್ ರೋಗ ವಾಸಿಯಾಗುತ್ತದೆ.

ಇದನ್ನೂ ಓದಿ: ತಲೆ ಹೊಟ್ಟಿನಿಂದಾಗಿ ಕಿರಿಕಿರಿ ಅನುಭವಿಸುತ್ತಿದ್ದೀರಾ? ಇಲ್ಲಿದೆ ಸಿಂಪಲ್ ಟಿಪ್ಸ್

* ಅರ್ಧ ಬಟ್ಟಲು ಹಾಲಿಗೆ ಅರ್ಧ ಚಮಚ ಅಮೃತಬಳ್ಳಿ, ಸ್ವಲ್ಪ ಜೇನುತುಪ್ಪ ಸೇರಿಸಿ ಸೇವಿಸಿದರೆ ಕಣ್ಣು ಹುರಿ ಸಮಸ್ಯೆಯು ಶಮನವಾಗುತ್ತದೆ.

* ಎರಡು ಚಮಚ ಅಮೃತಬಳ್ಳಿ ರಸಕ್ಕೆ ಅರ್ಧ ಚಮಚ ತ್ರಿಫಲಾ ಚೂರ್ಣವನ್ನು ಸೇರಿಸಿ ದಿನಕ್ಕೆರಡು ಬಾರಿ ಸೇವಿಸಿದರೆ ಕಣ್ಣಿನ ಆರೋಗ್ಯ ಸುಧಾರಿಸುತ್ತದೆ.

* ಒಂದು ಚಮಚ ಅಮೃತಬಳ್ಳಿ ರಸಕ್ಕೆ ಅರ್ಧ ಚಮಚ ಹಸುವಿನ ತುಪ್ಪ ಬೆರೆಸಿ ದಿನಕ್ಕೆರಡು ಬಾರಿ ಕುಡಿದರೆ ಅತಿ ಮೂತ್ರ ಸಮಸ್ಯೆ ನಿವಾರಣೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!