ಅಬ್ಬಾಬ್ಬ.. 24 ವರ್ಷಗಳಿಂದ ಎಳನೀರು ಕುಡಿದು ಜೀವಿಸುತ್ತಿರುವ ವ್ಯಕ್ತಿ, ಇದರಿಂದ ದೂರವಾಯಿತು ಈ ಕಾಯಿಲೆ

ದೀರ್ಘಕಾಲದ ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆ (GERD)ಯಿಂದ ಬಳಲುತ್ತಿದ್ದ ಶ್ರೀ ಬಾಲಕೃಷ್ಣನ್ ಕಳೆದ 24 ವರ್ಷಗಳಿಂದ ಎಳನೀರು  ಹೊರತು ಪಡಿಸಿ ಬೇರೇನೂ ತಿಂದಿಲ್ಲ ಎಂದು ಹೇಳಿಕೊಂಡಿರುವ ವಿಡಿಯೋವನ್ನು ನಟಿ ಶೆನಾಜ್ ಟ್ರೆಜರಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅಬ್ಬಾಬ್ಬ.. 24 ವರ್ಷಗಳಿಂದ ಎಳನೀರು ಕುಡಿದು ಜೀವಿಸುತ್ತಿರುವ ವ್ಯಕ್ತಿ, ಇದರಿಂದ ದೂರವಾಯಿತು ಈ ಕಾಯಿಲೆ
ಎಳನೀರು ಮಾತ್ರ ಸೇವಿಸಿ ಜೀವನ ನಡೆಸುತ್ತಿದ್ದ ಬಾಲಕೃಷ್ಣನ್ Image Credit source: Instagram
Follow us
|

Updated on:Feb 18, 2023 | 12:58 PM

ಸಾಮಾನ್ಯವಾಗಿ ಎಳನೀರು ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ ? ಇದು ನಿಮ್ಮ ದೇಹವನ್ನು ತಂಪಾಗಿಡುತ್ತದೆ. ಇದಲ್ಲದೇ ಪ್ರತಿದಿನ ಎಳನೀರು ಕುಡಿಯುವುದರಿಂದ ಅಧಿಕ ರಕ್ತದೊತ್ತಡದ ಪ್ರಮಾಣವನ್ನು ಕಡಿಮೆ ಮಾಡಬಹುದು. ಇದಲ್ಲದೇ , ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡಬಹುದು ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಇದಕ್ಕೆ ಉದಾಹರಣೆ ಎಂಬಂತೆ ಇಲ್ಲೊಬ್ಬರು ವ್ಯಕ್ತಿ ಕಳೆದ 24 ವರ್ಷಗಳಿಂದ ಎಳನೀರು ಹೊರತು ಪಡಿಸಿ ಬೇರೇನೂ ತಿಂದಿಲ್ಲ. ಜೊತೆಗೆ ತನ್ನ ಕಾಯಿಲೆಯನ್ನು ಎಳನೀರು ವಾಸಿ ಮಾಡಿದೆ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ದೀರ್ಘಕಾಲದ ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆ (GERD)ಯಿಂದ ಬಳಲುತ್ತಿದ್ದ ಶ್ರೀ ಬಾಲಕೃಷ್ಣನ್ ಕಳೆದ 24 ವರ್ಷಗಳಿಂದ ಎಳನೀರು  ಹೊರತು ಪಡಿಸಿ ಬೇರೇನೂ ತಿಂದಿಲ್ಲ ಎಂದು ಹೇಳಿಕೊಂಡಿರುವ ವಿಡಿಯೋವನ್ನು ನಟಿ ಶೆನಾಜ್ ಟ್ರೆಜರಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆ ಎಂದರೇನು?

ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆಯು ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಯಾಗಿದೆ. ನೀವು ಎದೆಯುರಿ ಹೊಂದಿದ್ದರೆ, ನಿಮ್ಮ ಎದೆಯ ಹಿಂಭಾಗದಲ್ಲಿ ಸುಡುವ ಸಂವೇದನೆ, ನೀವು ಮಲಗಿರುವಾಗ ಅಥವಾ ಊಟವನ್ನು ಸೇವಿಸಿದಾಗ ಇಂತಹ ಲಕ್ಷಣಗಳು ಕಾಣಿಸಿಕೊಂಡರೆ, ಇದು ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಡಿಸೀಸ್ (GERD) ನ ಲಕ್ಷಣಗಳಾಗಿವೆ.

ಇದನ್ನೂ ಓದಿ: ಆರೋಗ್ಯಕರ ಜೀರ್ಣಕ್ರಿಯೆಗಾಗಿ ಈ ಗಿಡಮೂಲಿಕೆಗಳನ್ನು ನಿಮ್ಮ ಆಹಾರ ಕ್ರಮದಲ್ಲಿ ರೂಢಿಸಿಕೊಳ್ಳಿ

ನಟಿ ಶೆನಾಜ್ ಟ್ರೆಜರಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋ ಇಲ್ಲಿದೆ:

ನನಗೆ ಜಿಇಆರ್‌ಡಿ ಇರುವುದು ತಿಳಿದ ನಂತರ, ನನ್ನ ದೇಹವು ಕ್ಷೀಣಿಸಲು ಪ್ರಾರಂಭವಾಯಿತು. ನಂತರ, ಚಿಕಿತ್ಸೆಯ ಭಾಗವಾಗಿ ತೆಂಗಿನಕಾಯಿಯನ್ನು ತಿನ್ನಲು ಪ್ರಾರಂಭಿಸಿದೆ. ಈಗ ನನ್ನ ದೇಹದಲ್ಲಿ ಸಾಕಷ್ಟು ಬದಲಾವಣೆಯನ್ನುಂಟು ಮಾಡಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ತೆಂಗಿನಕಾಯಿಯಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್, ಸೋಡಿಯಂ ಮತ್ತು ಪೊಟ್ಯಾಸಿಯಮ್‌ನಂತಹ ಖನಿಜಗಳು ಹೇರಳವಾಗಿದ್ದು, ಇದು ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆ ವಿರುದ್ಧ ಹೋರಾಡಲು ಸಹಾಯಮಾಡಿದೆ. ಜೊತೆಗೆ ಈಗ ಫಿಟ್ ಆಂಡ್​​ ಫೈನ್ ಆಗಿದ್ದೇನೆ ಎಂದು ಹೇಳಿದ್ದಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:47 pm, Sat, 18 February 23

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ