AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣ ಕಾಳಿನಂತಿರುವ ಈ ಜೀರಿಗೆ ಆರೋಗ್ಯಕ್ಕೆ ಉತ್ತಮ, ಇಲ್ಲಿದೆ ಸರಳ ಮನೆಮದ್ದು

ಭಾರತೀಯ ಅಡುಗೆ ಮನೆಯಲ್ಲಿರುವ ಕೆಲವು ಮಸಾಲೆ ಪದಾರ್ಥಗಳು ಅಡುಗೆಯನ್ನು ರುಚಿಯನ್ನು ಹೆಚ್ಚಿಸುವುದರೊಂದಿಗೆ ರೋಗರುಜಿನಗಳನ್ನು ದೂರ ಮಾಡುವ ಗುಣವನ್ನು ಹೊಂದಿದೆ. ಈ ವಿಚಾರದಲ್ಲಿ ದಿನನಿತ್ಯ ಆಹಾರ ಪದಾರ್ಥಗಳಲ್ಲಿ ಬಳಸುವ ಈ ಜೀರಿಗೆ ಕೂಡ ಹೊರತಾಗಿಲ್ಲ. ನಿತ್ಯ ಅಡುಗೆಯಲ್ಲಿ ಬಳಕೆ ಮಾಡುವ ಮಸಾಲೆ ಪದಾರ್ಥಗಳಲ್ಲಿ ಜೀರಿಗೆಯು ಒಂದು. ಆರೋಗ್ಯವು ಕೈ ಕೊಟ್ಟಾಗ ಈ ಜೀರಿಗೆಯಿಂದ ಔಷಧಿಯನ್ನು ತಯಾರಿಸಿ ಸೇವಿಸುವುದರಿಂದ ಪರಿಣಾಮಕಾರಿಯಾಗಿದೆ.

ಸಣ್ಣ ಕಾಳಿನಂತಿರುವ ಈ ಜೀರಿಗೆ ಆರೋಗ್ಯಕ್ಕೆ ಉತ್ತಮ, ಇಲ್ಲಿದೆ ಸರಳ ಮನೆಮದ್ದು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Feb 07, 2024 | 5:25 PM

Share

ಪ್ರತಿದಿನ ಅಡುಗೆಯಲ್ಲಿ ಈ ಜೀರಿಗೆ ಇದ್ದರೇನೇ ಅಡುಗೆಯು ರುಚಿಕರವಾಗುತ್ತದೆ. ಸಣ್ಣಗೆ ಕಾಳಿನಂತಿರುವ ಈ ಜೀರಿಗೆಯಲ್ಲಿ ಕಬ್ಬಿಣ, ತಾಮ್ರ, ಕ್ಯಾಲ್ಸಿಯಂ, ಪೊಟ್ಯಾಸಿಯಂ, ಮ್ಯಾಂಗನೀಸ್, ಸತು ಮತ್ತು ಮೆಗ್ನೀಸಿಯಂ, ಫೈಬರ್‍ನಂತಹ ಅನೇಕ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದ್ದು, ಇದರ ಆರೋಗ್ಯ ಪ್ರಯೋಜನಗಳನ್ನು ತಿಳಿದವರೇ ಬಲ್ಲರು. ಸದಾ ಲಭ್ಯವಿರುವ ಈ ಜೀರಿಗೆಯಿಂದ ಸಣ್ಣ ಪುಟ್ಟ ಆರೋಗ್ಯ ತೊಂದರೆಗಳನ್ನು ದೂರಮಾಡಿಕೊಳ್ಳಬಹುದಾಗಿದೆ.

ನಾನಾ ರೀತಿಯ ಆರೋಗ್ಯ ಸಮಸ್ಯೆಗೆ ಜೀರಿಗೆಯಿಂದ ತಯಾರಿಸಬಹುದಾದ ಮನೆಮದ್ದುಗಳು

* ಜೀರಿಗೆ ಕಷಾಯಕ್ಕೆ ಹಾಲು, ಜೇನು ತುಪ್ಪ ಸೇರಿಸಿ ಪ್ರತಿದಿನ ಸೇವಿಸಿದರೆ ಎದೆ ಹಾಲು ಉತ್ಪತ್ನಿಯಾಗುತ್ತದೆ.

* ಮಜ್ಜಿಗೆಗೆ ಜೀರಿಗೆ ಪುಡಿ ಮತ್ತು ಉಪ್ಪು ಹಾಕಿ ಬೆರೆಸಿ ಕುಡಿಯುವುದರಿಂದ ಪಿತ್ತಶಮನವಾಗುತ್ತದೆ.

* ಜೀರಿಗೆ ಮತ್ತು ಶುಂಠಿಯನ್ನು ಕುಟ್ಟಿ ಪುಡಿ ಮಾಡಿ ಒಂದು ಲೋಟದಷ್ಟು ನೀರಿನಲ್ಲಿ ಹಾಕಿ ಕುದಿಸಿ, ಆ ಬಳಿಕ ಲಿಂಬೆರಸ, ಬೆಲ್ಲ ಸೇರಿಸಿ ದಿನಕ್ಕೆ ಮೂರು ಬಾರಿ ಊಟಕ್ಕೆ ಮೊದಲು ಕುಡಿದರೆ ಹೊಟ್ಟೆ ನೋವು ದೂರವಾಗುತ್ತದೆ.

* ಪರಂಗಿ ಕಾಯಿಯ ಹೋಳುಗಳಿಗೆ ಜೀರಿಗೆಪುಡಿ, ಕಾಳು ಮೆಣಸಿನ ಪುಡಿ, ಉಪ್ಪು, ನಿಂಬೆರಸ ಸೇರಿಸಿ ತಿನ್ನುವುದರಿಂದ ಮಲಬದ್ಧತೆ ಸಮಸ್ಯೆಯು ನಿವಾರಣೆಯಾಗುವುದಲ್ಲದೆ, ಜಂತುಹುಳುಗಳು ನಾಶವಾಗುತ್ತದೆ.

* ಜೀರಿಗೆ, ಸಕ್ಕರೆ, ಒಣಶುಂಠಿ ಹಾಗೂ ಅಡಿಗೆ ಉಪ್ಪು ಇವು ಮೂರನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಪುಡಿ ಮಾಡಿ ಒಂದು ಲೋಟ ಬಿಸಿ ನೀರಿಗೆ ಹಾಕಬೇಕಿ, ನಿಂಬೆ ರಸವನ್ನು ಸೇರಿಸಿ ಕುಡಿಯುವುದರಿಂದ ಹೊಟ್ಟೆಗೆ ಸಂಬಂಧ ಪಟ್ಟ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ.

* ಜೀರಿಗೆಯನ್ನು ನುಣ್ಣಗೆ ಅರೆದು ತಲೆಗೆ ಹಚ್ಚಿ ಸ್ನಾನ ಮಾಡುವುದರಿಂದ ತಲೆಹೊಟ್ಟು ಸಮಸ್ಯೆಯು ಕಡಿಮೆಯಾಗುತ್ತದೆ.

* ಜೀರಿಗೆಯನ್ನು ಪುಡಿ ಮಾಡಿ ತೆಂಗಿನ ಕಾಯಿ ಹಾಲಿನಲ್ಲಿ ಬೆರೆಸಿ ಮೈಗೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ಬಿಸಿ ನೀರಿನಿಂದ ಸ್ನಾನ ಮಾಡಿದರೆ ಬೆವರು ಗುಳ್ಳೆಗಳು ನಿಮ್ಮ ಹತ್ತಿರವು ಸುಳಿವುದಿಲ್ಲ.

* ಜೀರಿಗೆಯನ್ನು ಬಾಯಿಯಲ್ಲಿ ಹಾಕಿಕೊಂಡು ಚೆನ್ನಾಗಿ ಅಗಿದು ತಿನ್ನುವುದರಿಂದ ಹಲ್ಲುನೋವಿನ ಸಮಸ್ಯೆಗೆ ರಾಮಬಾಣವಾಗಿದೆ. ಈ ಜೀರ್ಣಶಕ್ತಿಯು ಸುಧಾರಿಸುತ್ತದೆ.

ಇದನ್ನೂ ಓದಿ: ಗಾಢ ನಿದ್ದೆಯಲ್ಲಿರುವವರನ್ನು ತಕ್ಷಣ ಎಬ್ಬಿಸುವುದು ಎಷ್ಟು ಅಪಾಯಕಾರಿ ಗೊತ್ತಾ?

* ಜೀರಿಗೆಯನ್ನು ಪುಡಿ ಮಾಡಿ ಎರಡು ಲೋಟ ನೀರಿಗೆ ಹಾಕಿ ಕುದಿಸಿ ಅರ್ಧ ಲೋಟಕ್ಕಿಳಿದ ಬಳಿಕ ಹಾಲು ಸಕ್ಕರೆ ಸೇರಿಸಿ ಪ್ರತಿದಿನ ಬೆಳಗ್ಗೆ ಕುಡಿದರೆ ಬಾಯಿಹುಣ್ಣು ಶಮನವಾಗುತ್ತದೆ.

* ನೇರಳೆ ಹಣ್ಣನ್ನು ಎರಡು ಹೋಳು ಮಾಡಿ ಅದಕ್ಕೆ ಜೀರಿಗೆ ಪುಡಿ ತುಂಬಿ, ಒಂದು ರಾತ್ರಿ ಇಬ್ಬನಿ ಬೀಳುವ ಜಾಗದಲ್ಲಿಡಬೇಕು. ಮರುದಿನ ಖಾಲಿ ಹೊಟ್ಟೆಯಲ್ಲಿ ಅದರ ರಸವನ್ನು ಸೇವಿಸಿದರೆ ಹೊಟ್ಟೆನೋವು ಕಡಿಮೆಯಾಗುತ್ತದೆ.

* ಜೀರಿಗೆ ನೀರನ್ನು ನಿತ್ಯ ಸೇವಿಸುವುದರಿಂದ ದೇಹವನ್ನು ತಂಪಾಗಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ