AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖದ ಅಂದಕ್ಕಷ್ಟೇ ಅಲ್ಲ ಆರೋಗ್ಯಕ್ಕೂ ಒಳ್ಳೆಯದು ಅರಶಿನ, ಇಲ್ಲಿದೆ ಸಿಂಪಲ್ ಮನೆ ಮದ್ದು

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿರುವ ಮಸಾಲ ಪದಾರ್ಥಗಳಲ್ಲಿ ಅರಶಿನ ಕೂಡ ಒಂದು. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಇ, ಕಬ್ಬಿಣ, ಸತು ಸೇರಿದಂತೆ ಹಲವು ಪೋಷಕಾಂಶಗಳು ಹೇರಳವಾಗಿದ್ದು, ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ಮತ್ತು ನಂಜುನಿರೋಧಕ ಗುಣವನ್ನು ಹೊಂದಿದೆ. ಹೀಗಾಗಿ ಹೆಚ್ಚಿನವರು ಮನೆ ಮದ್ದುಗಳಲ್ಲಿ ಅಡುಗೆ ಮನೆಯಲ್ಲಿ ಸಿಗುವ ಈ ಅರಶಿನವನ್ನು ಬಳಸಿ ಆರೋಗ್ಯ ಸಮಸ್ಯೆಯನ್ನು ನಿವಾರಿಸಿಕೊಳ್ಳುತ್ತಾರೆ.

ಮುಖದ ಅಂದಕ್ಕಷ್ಟೇ ಅಲ್ಲ ಆರೋಗ್ಯಕ್ಕೂ ಒಳ್ಳೆಯದು ಅರಶಿನ, ಇಲ್ಲಿದೆ ಸಿಂಪಲ್ ಮನೆ ಮದ್ದು
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 30, 2024 | 11:18 AM

ನಮ್ಮ ಹಿರಿಯರು ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಬಂದರೆ ಅಡುಗೆ ಮನೆಯಲ್ಲಿರುವ ಸಾಂಬಾರು ಪದಾರ್ಥಗಳಿಂದ ಮನೆ ಮದ್ದನ್ನು ತಯಾರಿಸಿ ಗುಣ ಪಡಿಸಿಕೊಳ್ಳುತ್ತಿದ್ದರು. ಇವತ್ತಿಗೂ ಹಳ್ಳಿಗಳಲ್ಲಿ ಅಜ್ಜ ಅಜ್ಜಿಯಂದಿರು ಇದ್ದರೆ, ಆರೋಗ್ಯ ಸಮಸ್ಯೆಗೆ ಕೆಲವು ಮನೆ ಮದ್ದುಗಳನ್ನು ಹೇಳುವುದನ್ನು ನೋಡಿರಬಹುದು. ಅದರಲ್ಲಿಯು ಮನೆ ಮದ್ದುಗಳಲ್ಲಿ ಹೆಚ್ಚು ಬಳಸಲ್ಪಡುವ ಸಾಂಬಾರ್ ಪದಾರ್ಥಗಳಲ್ಲಿ ಅರಶಿನ ಕೂಡ ಒಂದು. ಮುಖದ ಕಾಂತಿಯ ಜೊತೆಗೆ ಆರೋಗ್ಯ ಸಮಸ್ಯೆಯನ್ನು ಹೋಗಲಾಡಿಸುವ ತಾಕತ್ತು ಈ ಅರಶಿನಕ್ಕಿದೆ.

ಅರಶಿನವನ್ನು ಬಳಸಿ ತಯಾರಿಸುವ ಮನೆ ಮದ್ದುಗಳು ಇಲ್ಲಿವೆ

* ಅರಶಿನದ ಕೋಡನ್ನು ಸುಟ್ಟು ಪುಡಿ ಮಾಡಿಕೊಂಡು, ಉಪ್ಪು ಬೆರೆಸಿ ಹಲ್ಲು ಉಜ್ಜುವುದರಿಂದ ಹಲ್ಲಿನ ಸಮಸ್ಯೆಯು ಕಡಿಮೆಯಾಗುತ್ತದೆ.

* ಬಿಸಿಯಾದ ಹಸುವಿನ ಹಾಲಿಗೆ ಸ್ವಲ್ಪ ಅಪ್ಪಟವಾದ ಅರಶಿನ ಪುಡಿ ಮತ್ತು ಕಾಳು ಮೆಣಸಿನ ಪುಡಿಯನ್ನು ಹಾಕಿ ಚೆನ್ನಾಗಿ ಕಲಸಿ ಕುಡಿಯುವುದರಿಂದ ನೆಗಡಿ ಮತ್ತು ಗಂಟಲು ನೋವಿಗೆ ಪರಿಣಾಮಕಾರಿಯಾಗಿದೆ.

* ಮಹಿಳೆಯರು ಸ್ನಾನ ಮಾಡುವಾಗ ಕೆನ್ನೆಗೆ ಅರಶಿನದ ಪುಡಿಯನ್ನು ಹಚ್ಚಿ ಕೊಂಡು ಸ್ನಾನ ಮಾಡುವ ಅಭ್ಯಾಸವನ್ನು ಬೆಳೆಸಿಕೊಂಡರೆ ಮುಖದಲ್ಲಿ ಬೇಡದ ಕೂದಲು ಬೆಳೆಯುವುದಿಲ್ಲ ಹಾಗೂ ಮುಖವು ಕಾಂತಿಯುತವಾಗಿರುತ್ತದೆ.

* ಅರಶಿನದ ಪುಡಿಯನ್ನು ಹರಳೆಣ್ಣೆಯೊಂದಿಗೆ ಮಿಶ್ರಮಾಡಿ ಶರೀರಕ್ಕೆ ಹಚ್ಚಿಕೊಂಡು ಸ್ನಾನ ಮಾಡುತ್ತಿದ್ದರೆ ಚರ್ಮದ ಕಾಂತಿ ಹೆಚ್ಚಾಗಿ, ಚರ್ಮರೋಗ ನಿವಾರಣೆಯಾಗುತ್ತದೆ.

ಇದನ್ನೂ ಓದಿ: ಪರಿಸರ ಸಮತೋಲನಕ್ಕೆ ಸಾಧುಜೀವಿ ಜೀಬ್ರಾಗಳ ಸಂರಕ್ಷಣೆ ಅಗತ್ಯ

* ಅರಶಿನದ ಪುಡಿಯನ್ನು ಮೊಸರಿನಲ್ಲಿ ಕದಡಿ ಬೆಳಗಿನ ಹೊತ್ತಿನಲ್ಲಿ ಒಂದು ವಾರಗಳ ಕಾಲ ಸೇವಿಸಿದರೆ ಕಾಮಾಲೆ ರೋಗವು ಕಡಿಮೆಯಾಗುತ್ತದೆ.

* ಅರಶಿನ, ಮರದನ, ಮಂಜಿಷವನ್ನು ಹಾಲು, ತುಪ್ಪ ಬೆರೆಸಿ ಅರೆದು ಮೊಡವೆಗಳಿಗೆ ಹಚ್ಚಿಕೊಂಡರೆ ಮೊಡವೆಗಳು ಮಾಯಾವಾಗುತ್ತದೆ.

* ಅರಿಶಿನದ ಕೋಡನ್ನು ನಿಂಬೆರಸದಲ್ಲಿ ತೇಯ್ದು ದಿನಕ್ಕೆ ನಾಲ್ಕರಿಂದ ಐದು ಬಾರಿ ಕಾಲಿನಲ್ಲಿರುವ ಆಣಿಗೆ ಲೇಪಿಸಿದರೆ ಉದುರಿ ಹೋಗುತ್ತದೆ.

* ಅರಶಿನವನ್ನು ಅಡುಗೆಯಲ್ಲಿ ಬಳಸುವುದರಿಂದ ಆಹಾರವು ಬೇಗನೇ ಜೀರ್ಣವಾಗುತ್ತದೆ.

* ಒಣ ಅರಶಿನದ ಕೋಡನ್ನು ಪುಡಿ ಮಾಡಿ ಕೆಂಡದ ಮೇಲೆ ಹಾಕಿ ಅದರ ಹೊಗೆಯನ್ನು ತೆಗೆದುಕೊಳ್ಳುವುದರಿಂದ ನೆಗಡಿ ಯು ಗುಣಮುಖವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ