AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dark Underarms: ನಿಮ್ಮ ಡಾರ್ಕ್​ ಅಂಡರ್​ಆರ್ಮ್ಸ್​​ ಹೋಗಲಾಡಿಸಲು ಇಲ್ಲಿವೆ ಮನೆಮದ್ದು

Dark Underarms: ನಿಮ್ಮ ಡಾರ್ಕ್ ಅಂಡರ್ ಆರ್ಮ್( Dark Underarms) ಮರೆ ಮಾಚಲು ನೀವು ತೋಳಿಲ್ಲದ ಬಟ್ಟೆಗಳನ್ನು ಧರಿಸುವುದಕ್ಕೆ ಹಿಂಜರಿಯುತ್ತಿದ್ದೀರಾ?. ನಿಮ್ಮ ಡಾರ್ಕ್ ಅಂಡರ್ ಆರ್ಮ್ ಅನ್ನು ಲೈಟನ್ ಗೊಳಿಸಲು ಸಾಕಷ್ಟು ಪರಿಹಾರಗಳಿವೆ, ಅದೂ ನಿಮ್ಮ ಮನೆಯಲ್ಲಿ ಸಾಮಾನ್ಯವಾಗಿ ಇರುವ ಪದಾರ್ಥಗಳಿಂದ, ಅಂತಹ ವಿಶ್ವಾಸಾರ್ಹ ಅಂಡರ್ ಆರ್ಮ್ ಸ್ಕಿನ್ ಲೈಟನಿಂಗ್ ಪರಿಹಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

Dark Underarms: ನಿಮ್ಮ ಡಾರ್ಕ್​ ಅಂಡರ್​ಆರ್ಮ್ಸ್​​ ಹೋಗಲಾಡಿಸಲು ಇಲ್ಲಿವೆ ಮನೆಮದ್ದು
Dark Underarms
TV9 Web
| Edited By: |

Updated on: May 13, 2022 | 3:07 PM

Share

ನಿಮ್ಮ ಡಾರ್ಕ್ ಅಂಡರ್ ಆರ್ಮ್( Dark Underarms) ಮರೆ ಮಾಚಲು ನೀವು ತೋಳಿಲ್ಲದ ಬಟ್ಟೆಗಳನ್ನು ಧರಿಸುವುದಕ್ಕೆ ಹಿಂಜರಿಯುತ್ತಿದ್ದೀರಾ?. ನಿಮ್ಮ ಡಾರ್ಕ್ ಅಂಡರ್ ಆರ್ಮ್ ಅನ್ನು ಲೈಟನ್ ಗೊಳಿಸಲು ಸಾಕಷ್ಟು ಪರಿಹಾರಗಳಿವೆ, ಅದೂ ನಿಮ್ಮ ಮನೆಯಲ್ಲಿ ಸಾಮಾನ್ಯವಾಗಿ ಇರುವ ಪದಾರ್ಥಗಳಿಂದ, ಅಂತಹ ವಿಶ್ವಾಸಾರ್ಹ ಅಂಡರ್ ಆರ್ಮ್ ಸ್ಕಿನ್ ಲೈಟನಿಂಗ್ ಪರಿಹಾರಗಳ ಬಗ್ಗೆ ಮಾಹಿತಿ ಇಲ್ಲಿದೆ. ಎಲ್ಲರಿಗೂ ತಮ್ಮ ಉಡುಗೆತೊಡುಗೆಗಳ ಬಗ್ಗೆ ತಮ್ಮದೇ ಆದ ಅಭಿರುಚಿ ಇರುವುದು ಸಾಮಾನ್ಯ, ಹಾಗೆಯೇ ಸ್ಲೀವ್​ಲೆಸ್ ಬಟ್ಟೆಗಳನ್ನು ಧರಿಸುವುದೆಂದರೆ ಸಾಮಾನ್ಯವಾಗಿ ಎಲ್ಲಾ ಹೆಣ್ಣುಮಕ್ಕಳಿಗೂ ಇಷ್ಟ ಆದರೆ ಈ ಡಾರ್ಕ್ ಅಂಡರ್​ಆರ್ಮ್ಸ್​ನಿಂದಾಗಿ ಸ್ಲೀವ್​ಲೆಸ್ ಬಟ್ಟೆ ತೊಡುವುದಕ್ಕೆ ಹಿಂಜರಿಯುವ ಪರಿಸ್ಥಿತಿ ಎದುರಾಗಿದೆ.

ಪಾಲರ್ರ್​ಗಳಿಗೆ ತೆರಳಿ ಸಾವಿರಾರು ರೂಪಾಯಿ ಹಣವನ್ನು ಖರ್ಚು ಮಾಡಿ ಕಪ್ಪು ಅಂಡರ್​ಆರ್ಮ್ಸ್​ ಕಡಿಮೆ ಮಾಡಿಕೊಳ್ಳುವ ಬದಲು ನೀವು ಕೆಲವು ನೈಸರ್ಗಿಕ ವಿಧಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಇದರಿಂದ ಪರಿಹಾರ ಪಡೆಯಬಹುದು.

ಬೇಸಿಗೆಯಲ್ಲಿ ಬೆವರುವುದರಿಂದ ಕಂಕುಳಲ್ಲಿ ಧೂಳು ಸಂಗ್ರಹವಾಗುವುದರಿಂದ ಕಂಕುಳಲ್ಲಿ ಕಪ್ಪಾಗಲು ಕಾರಣವಾಗುತ್ತದೆ, ಈ ಸಮಸ್ಯೆಯನ್ನು ಹೋಗಲಾಡಿಸಲು ನೀವು ಕೆಲವು ಮನೆಮದ್ದುಗಳನ್ನು ಅನುಸರಿಸಬಹುದು.

  1. ಆಪಲ್ ಸೈಡರ್ ವಿನೆಗರ್: ಆಪಲ್ ಸೈಡರ್ ವಿನೆಗರ್ ಅನ್ನು ಅಡಿಗೆ ಸೋಡಾದೊಂದಿಗೆ ಬೆರೆಸಿ ಮತ್ತು ಅದನ್ನು ನಿಮ್ಮ ಕಂಕುಳಿಗೆ ಹಚ್ಚಿ. ಅದು ಒಣಗಿದ ನಂತರ ನೀರಿನಿಂದ ತೊಳೆಯಿರಿ. ಆಪಲ್ ಸೈಡರ್ ವಿನೆಗರ್ ಅಂಡರ್ ಆರ್ಮ್ಸ್ ಸತ್ತ ಜೀವಕೋಶಗಳನ್ನು ತೆಗೆದುಹಾಕುವ ಕೆಲಸ ಮಾಡುತ್ತದೆ. ಏಕೆಂದರೆ ಇದು ನೈಸರ್ಗಿಕ ಕ್ಲೀನರ್ ಆಗಿ ಕಾರ್ಯನಿರ್ವಹಿಸುವ ಸೌಮ್ಯ ಆಮ್ಲಗಳನ್ನು ಹೊಂದಿರುತ್ತದೆ.
  2. ನಿಂಬೆ ರಸ: ನಿಂಬೆಯನ್ನು ಬಳಸುವುದರಿಂದ ಕಂಕುಳಿನ ಕಪ್ಪುತನವನ್ನು ಹೋಗಲಾಡಿಸಬಹುದು ಎಂಬುದು ಕೆಲವೇ ಕೆಲವು ಮಂದಿಗೆ ತಿಳಿದಿದೆ. ಕೆಲವು ದಿನಗಳವರೆಗೆ ಸ್ನಾನ ಮಾಡುವ ಮೊದಲು, ನಿಂಬೆಹಣ್ಣನ್ನು ಅರ್ಧದಷ್ಟು ಕತ್ತರಿಸಿ ಮತ್ತು ಪೀಡಿತ ಪ್ರದೇಶದಲ್ಲಿ ಉಜ್ಜಿದರೆ, ಇದು ನೈಸರ್ಗಿಕವಾಗಿ ಅಂಡರ್​ಆರ್ಮ್​ ಅನ್ನು ಬ್ಲೀಚ್ ಮಾಡುತ್ತದೆ.
  3. ಆಲಿವ್ ಎಣ್ಣೆ: ಮೊದಲನೆಯದಾಗಿ, ಒಂದು ಚಮಚ ಆಲಿವ್ ಎಣ್ಣೆ ಮತ್ತು ಒಂದು ಚಮಚ ಕಂದು ಸಕ್ಕರೆ ಮಿಶ್ರಣ ಮಾಡಿ ಮತ್ತು ಪೇಸ್ಟ್ ತಯಾರಿಸಿ. ಆಲಿವ್ ಎಣ್ಣೆಯನ್ನು ಚರ್ಮಕ್ಕೆ ಅತ್ಯುತ್ತಮ ಔಷಧವೆಂದು ಪರಿಗಣಿಸಲಾಗಿದೆ. ಈಗ ಈ ಪೇಸ್ಟ್ ಅನ್ನು ಕಪ್ಪು ಜಾಗಕ್ಕೆ ಹಚ್ಚಿ ಸ್ವಲ್ಪ ಸಮಯ ಬಿಡಿ, ನಂತರ ಶುದ್ಧ ನೀರಿನಿಂದ ಶುದ್ಧವಾಗಿ ತೊಳೆಯಿರಿ.
  4. ತೆಂಗಿನ ಎಣ್ಣೆ: ಇದು ವಿಟಮಿನ್ ಇ ನಲ್ಲಿ ಸಮೃದ್ಧವಾಗಿದೆ. ಈ ಎಣ್ಣೆಯನ್ನು ಪ್ರತಿನಿತ್ಯ ನಿಮ್ಮ ಕಂಕುಳಿಗೆ ಹಚ್ಚಿ ಸ್ವಲ್ಪ ಸಮಯ ಬಿಟ್ಟು ನಂತರ ನೀರಿನಿಂದ ಸ್ವಚ್ಛಗೊಳಿಸಿ, ಕೆಲವೇ ದಿನಗಳಲ್ಲಿ ಇದರ ಪರಿಣಾಮ ಗೋಚರಿಸುತ್ತದೆ. ತೆಂಗಿನ ಎಣ್ಣೆಯು ಅನೇಕ ಪ್ರಯೋಜನಗಳನ್ನು ಹೊಂದಿದೆ,
  5. ಸೌತೆಕಾಯಿ ಬಳಸಿ ಸೌತೆಕಾಯಿಯಲ್ಲಿರುವ ಅಂಶ ಚರ್ಮದ ಡಾರ್ಕ್‌ನೆಸ್ ದೂರಮಾಡುತ್ತದೆ. ಜೊತೆಗೆ ಸಾಫ್ಟ್ ಕೂಡ ಮಾಡುತ್ತದೆ. ಅಲ್ಲದೇ ಸ್ಕಿನ್‌ಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನೂ ದೂರ ಮಾಡುತ್ತದೆ. ಸೌತೆಕಾಯಿ ರಸ ಮತ್ತು ನಿಂಬೆ ರಸ ಜೊತೆಯಾಗಿ ಬೆರೆಸಿ ಅಂಡರ್ ಆರ್ಮ್‌ಗೆ ಹಚ್ಚಿ.
  6. ಆಲೂಗಡ್ಡೆಯಲ್ಲಿ ಬ್ಲೀಚ್​ ಗುಣವಿರುತ್ತದೆ ಸೆನ್ಸಿಟಿವ್ ಸ್ಕಿನ್ ಮೇಲೆ ನಿಂಬೆ ರಸ ಹಚ್ಚಿದರೆ ತುರಿಕೆ ಉಂಟಾಗಬಹುದು. ಅದರ ಬದಲಾಗಿ ಆಲೂ ಬಳಸಬಹುದು. ಆಲೂಗಡ್ಡೆಯಲ್ಲಿ ಬ್ಲೀಚ್ ಗುಣ ಇರುತ್ತದೆ, ಇದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಅದಕ್ಕಾಗಿ ಆಲೂಗಡ್ಡೆಯನ್ನು ತೆಳುವಾಗಿ ಕತ್ತರಿಸಿ ಅಂಡರ್ ಆರ್ಮ್‌ಗೆ ಚೆನ್ನಾಗಿ ರಬ್ ಮಾಡಿ. ಹತ್ತು ನಿಮಿಷ ಅದನ್ನೇ ಮಾಡಿ. ನಂತರ ಉಗುರು ಬಿಸಿ ನೀರಿನಿಂದ ತೊಳೆಯಿರಿ

ಜೀವನಶೈಲಿಗೆ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ