AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಕ್​ ಫ್ರಂ ಹೋಮ್​ನಿಂದ ಮನಸ್ಸು ಭಾರವೆನಿಸಿರಬಹುದು! ಅನಗತ್ಯ ಚಿಂತೆ ಹೋಗಲಾಡಿಸಲು ಇಲ್ಲಿದೆ ಸಲಹೆಗಳು

ಕೆಲಸದಲ್ಲಿ ಕಾನ್ಫರೆನ್ಸ್​ ಕರೆಗಳು, ಮೀಟಿಂಗ್​ಗಳು ಇರಬಹುದು. ಹೀಗಿರುವಾಗ ಕುಳಿತಲ್ಲಿಯೇ ದೂರವಾಣಿ ಕರೆಯಲ್ಲಿ ಮಾತನಾಡುವುದರ ಬದಲಾಗಿ ಓಡಾಡುತ್ತಾ ಮಾತನಾಡುವ ಅಭ್ಯಾಸ ಮಾಡಿಕೊಳ್ಳಿ.

ವರ್ಕ್​ ಫ್ರಂ ಹೋಮ್​ನಿಂದ ಮನಸ್ಸು ಭಾರವೆನಿಸಿರಬಹುದು! ಅನಗತ್ಯ ಚಿಂತೆ ಹೋಗಲಾಡಿಸಲು ಇಲ್ಲಿದೆ ಸಲಹೆಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 19, 2021 | 7:28 AM

Share

ಕೊವಿಡ್​-19 ಸಾಂಕ್ರಾಮಿಕ ಖಾಯಿಲೆಯ ನಿಯಂತ್ರಣಕ್ಕಾಗಿ ಅದೆಷ್ಟೋ ಕ್ರಮಗಳನ್ನು ಜಾರಿಗೆ ತರಲಾಯಿತು. ಜನರೆಲ್ಲಾ ಮನೆಯಲ್ಲಿಯೇ ಕುಳಿತು ಕೆಲಸ ಮಾಡಬೇಕಾಯಿತು. ಹೀಗಿರುವಾಗ ಮನೆಯಿಂದ ಹೊರಬೀಳದೇ ಮನೆಯಲ್ಲಿ ಕೆಲಸ ಮಾಡುವುದು ಆರಾಮದಾಯಕ ಅನಿಸುತ್ತಿದೆಯೇ? ಅಧ್ಯಯನದ ಪ್ರಕಾರ ಮನೆಯಲ್ಲಿ ಕೆಲಸ ಮಾಡುವುದು ಮಾನಸಿಕ ಮತ್ತು ದೈಹಿಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಕಳೆದ ಒಂದು ವರ್ಷದಲ್ಲಿ ಮನೆಯಲ್ಲಿಯೇ ಕುಳಿತು ಕೆಲಸ ಮಾಡುವುದು ಒತ್ತಡ ಮತ್ತು ಆತಂಕವನ್ನು ಹೆಚ್ಚಿಸಿದೆ. 

ಸಾರ್ವಜನಿಕ ಸ್ಥಳಗಳಾದ ಕಡಲ ತೀರಗಳು, ಜಿಮ್​ಗಳು, ಉದ್ಯಾನವನಗಳನ್ನು ಮುಚ್ಚಿರುವುದು ಹಾಗೆಯೇ ವಾಕಿಂಗ್​ ಅಥವಾ ಸೈಕ್ಲಿಂಗ್​ ಇತರ ಹೊರಾಂಗಣ ಚಟುವಟಿಕೆಳು ಇಲ್ಲದಿರುವುದು ಜನರ ಆರೋಗ್ಯ ಸಮಸ್ಯೆಯನ್ನು ಇನ್ನಷ್ಟು ಹೆಚ್ಚಿಸಿದೆ. ಹಾಗಿರುವಾಗ ಮನೆಯಲ್ಲಿಯೇ ಇರುವ ಸಮಯವನ್ನು ವ್ಯರ್ಥ ಮಾಡದೇ ನಿಮ್ಮ ಆರೋಗ್ಯದ ಸುಧಾರಣೆಗೆ ಮಾಡುವ ಯೋಗ ಅಭ್ಯಾಸಗಳನ್ನು ರೂಢಿಯಲ್ಲಿಟ್ಟುಕೊಳ್ಳಿ.

ನಿಮ್ಮ ದಿನನಿತ್ಯದ ಕೆಲಸವನ್ನು ಪ್ರಾರಂಭಿಸುವ ಮೊದಲು ಪ್ರಾಣಾಯಾಮ, ಯೋಗಗಳನ್ನು ಅಭ್ಯಾಸದಲ್ಲಿಟ್ಟುಕೊಳ್ಳಿ. ಅನುಲೋಮ ವಿಲೋಮ ಪ್ರಾಣಾಯಾಮವನ್ನು ಮಾಡಿ. ಇದರಿಂದ ದೇಹವು ಸಡಿಲಗೊಳ್ಳುತ್ತದೆ.

ಕೆಲಸದಲ್ಲಿ ಕಾನ್ಫರೆನ್ಸ್​ ಕರೆಗಳು, ಮೀಟಿಂಗ್​ಗಳು ಇರಬಹುದು. ಹೀಗಿರುವಾಗ ಕುಳಿತಲ್ಲಿಯೇ ದೂರವಾಣಿ ಕರೆಯಲ್ಲಿ ಮಾತನಾಡುವುದರ ಬದಲಾಗಿ ಓಡಾಡುತ್ತಾ ಮಾತನಾಡುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ನಿಮ್ಮ ದೇಹಕ್ಕೆ ವ್ಯಾಯಾಮ ಸಿಗುತ್ತದೆ. ಸ್ನಾಯುಗಳು ಸಡಿಗೊಳ್ಳುವುದರಿಂದ ನಿಮ್ಮ ಆರೋಗ್ಯ ಸುಧಾರಿಸುತ್ತದೆ.

ದಿನಪೂರ್ತಿ ಲ್ಯಾಪ್​ಟಾಪ್ ಅಥವಾ ಕಂಪ್ಯೂಟರ್​ ನೋಡುತ್ತಿರುವದರಿಂದ ಕಣ್ಣು ಉರಿ ಬರಬಹುದು. ಕಣ್ಣಿಗೆ ಚೂರಾದರೂ ವಿಶ್ರಾಂತಿ ನೀಡಲೇ ಬೇಕು. ಕನಿಷ್ಟ 20 ನಿಮಿಷಗಳ ಕಾಲ ಕಂಪ್ಯೂಟರ್​ ಪರದೆಯನ್ನು ನೋಡದೇ ದೂರವಿರಲು ಪ್ರಯತ್ನಿಸಿ. ಇದರಿಂದ ಕೊಂಚವಾದರೂ ಕಣ್ಣಿಗೆ ವಿಶ್ರಾಂತಿ ಸಿಗುತ್ತದೆ.

ಕುಳಿತಲ್ಲಿಯೇ ಕುಳಿತು ತೂಕ ಹೆಚ್ಚಾಗಬಹುದು. ಹೆಚ್ಚಿನ ತೂಕ ಹೊಂದುವುದು ಇತರ ರೋಗ ಲಕ್ಷಣಗಳಿಗೆ ಕಾರಣವಾಗುತ್ತದೆ. ಹಾಗಾಗಿ ದಿನನಿತ್ಯ ಯೋಗ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದರಿಂದ ಮಾನಸಿಕ ಆರೋಗ್ಯ ಸುಧಾರಿಸುವುದಲ್ಲದೇ ದೈಹಿಕವಾಗಿಯೂ ಸದೃಢವಾಗಿರಲು ಸಹಾಯವಾಗುತ್ತದೆ.

ಇದನ್ನೂ ಓದಿ:

Health Tips: ತುಟಿ ಕಪ್ಪಾಗಿದೆಯೇ? ಇಲ್ಲಿದೆ ಪರಿಹಾರ

Health Tips: ದಾಳಿಂಬೆ ಸಿಪ್ಪೆಯಲ್ಲಿದೆ ನಿಮಗೆ ಗೊತ್ತಿಲ್ಲದ ಪ್ರಯೋಜನಗಳು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ